1
|
ರಚನೆಗಾರ : ಆಸಾಫ. ದೇವಾದಿದೇವನು ತನ್ನ ಸಭೆಯಲ್ಲಿ ನಿಂತುಕೊಂಡು ದೇವರುಗಳಿಗೆ ನ್ಯಾಯತೀರ್ಪು ನೀಡುವನು. |
2
|
ದೇವರು ಇಂತೆನ್ನುತ್ತಾನೆ: ಇನ್ನೆಷ್ಟರವರೆಗೆ ಅನ್ಯಾಯವಾಗಿ ತೀರ್ಪು ಕೊಡುತ್ತೀರಿ? ಇನ್ನೆಷ್ಟರವರೆಗೆ ದುಷ್ಟರನ್ನು ದಂಡಿಸದೆ ಬಿಡುಗಡೆ ಮಾಡುತ್ತೀರಿ?” |
3
|
“ಅನಾಥರ ಮತ್ತು ಬಡಜನರ ಪರವಾಗಿ ವಾದಿಸಿರಿ. ಅನ್ಯಾಯಕ್ಕೆ ಒಳಗಾಗಿರುವ ಬಡವರ ಹಕ್ಕುಗಳನ್ನು ಸಂರಕ್ಷಿಸಿರಿ. |
4
|
ಬಡವರಿಗೆ ಮತ್ತು ಅಸಹಾಯಕರಿಗೆ ಸಹಾಯ ಮಾಡಿರಿ. ಅವರನ್ನು ದುಷ್ಟರಿಂದ ರಕ್ಷಿಸಿರಿ. |
5
|
“ಅವರಿಗೆ ಏನೂ ಗೊತ್ತಿಲ್ಲ. ಅವರಿಗೆ ಏನೂ ಅರ್ಥವಾಗುವುದಿಲ್ಲ! ತಾವು ಮಾಡುತ್ತಿರುವುದೂ ಅವರಿಗೆ ತಿಳಿಯದು. ಅವರ ಪ್ರಪಂಚವು ಅವರ ಸುತ್ತಲೂ ಕುಸಿದು ಬೀಳುತ್ತಿದೆ!” |
6
|
ನಾಯಕರಾದ ನಿಮಗೆ ನಾನು ಹೇಳುವುದೇನೆಂದರೆ: “ನೀವು ದೇವರುಗಳು. ನೀವು ಮಹೋನ್ನತನಾದ ದೇವರ ಪುತ್ರರು. |
7
|
ಆದರೆ ಎಲ್ಲಾ ಜನರಂತೆ ನೀವೂ ಸಾಯುವಿರಿ. ಬೇರೆಲ್ಲಾ ನಾಯಕರುಗಳಂತೆಯೇ ನೀವು ಸಾಯುವಿರಿ.” |
8
|
ದೇವರೇ ಎದ್ದೇಳು! ನೀನೇ ನ್ಯಾಯಧೀಶನಾಗಿರು! ಎಲ್ಲಾ ಜನಾಂಗಗಳಿಗೆ ನೀನೇ ನಾಯಕನಾಗಿರು! |
Psalms 82:1 Kannada Language Bible Words basic statistical display
COMING SOON ...