1
|
ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯನ್ನು ನಿಮ್ಮ ಸಮುದಾಯಕ್ಕೆ ಸೇರಿಸಿಕೊಳ್ಳಿರಿ. ಅವನ ವೈಯಕ್ತಿಕ ಅಭಿಪ್ರಾಯಗಳ ಬಗ್ಗೆ ಅವನೊಂದಿಗೆ ವಾಗ್ವಾದ ಮಾಡಬೇಡಿ. |
2
|
ಒಬ್ಬನು ಯಾವ ಬಗೆಯ ಆಹಾರವನ್ನಾದರೂ ತಿನ್ನಬಹುದೆಂದು ಭಾವಿಸುತ್ತಾನೆ. ಆದರೆ ನಂಬಿಕೆಯಲ್ಲಿ ಬಲಹೀನನಾಗಿರುವ ವ್ಯಕ್ತಿಯು ತಾನು ತರಕಾರಿಗಳನ್ನು ಮಾತ್ರ ತಿನ್ನಬಹುದೆಂದು ಭಾವಿಸುತ್ತಾನೆ. |
3
|
ಯಾವ ಬಗೆಯ ಆಹಾರವನ್ನಾದರೂ ತಿನ್ನಬಹುದೆಂದು ನಂಬುವ ವ್ಯಕ್ತಿಯು ತರಕಾರಿಯನ್ನು ಮಾತ್ರ ತಿನ್ನುವ ವ್ಯಕ್ತಿಗಿಂತ ತನ್ನನ್ನು ಉತ್ತಮನೆಂದು ಭಾವಿಸಿಕೊಳ್ಳಕೂಡದು. ಅಂತೆಯೇ, ತರಕಾರಿಗಳನ್ನು ಮಾತ್ರ ತಿನ್ನುವ ವ್ಯಕ್ತಿಯು ಎಲ್ಲಾ ಆಹಾರ ಪದಾರ್ಥಗಳನ್ನು ತಿನ್ನುವ ವ್ಯಕ್ತಿಯನ್ನು ತಪ್ಪಿತಸ್ಥನೆಂದು ನಿರ್ಣಯಿಸಕೂಡದು. ದೇವರು ಆ ವ್ಯಕ್ತಿಯನ್ನೂ ಸ್ವೀಕರಿಸಿಕೊಂಡಿದ್ದಾನೆ. |
4
|
ನೀನು ಮತ್ತೊಬ್ಬ ವ್ಯಕ್ತಿಯ ಸೇವಕನಿಗೆ ತೀರ್ಪು ಮಾಡಕೂಡದು. ಅವನು ಮಾಡುತ್ತಿರುವುದು ಸರಿಯೋ ತಪ್ಪೋ ಎಂಬುದನ್ನು ಅವನ ಸ್ವಂತ ಯಜಮಾನನೇ ನಿರ್ಣಯಿಸುವನು. ಪ್ರಭುವಿನ ಸೇವಕನು ನಿರ್ದೋಷಿಯಾಗಿರುತ್ತಾನೆ, ಏಕೆಂದರೆ ಪ್ರಭುವು ಅವನನ್ನು ನಿರ್ದೋಷಿಯನ್ನಾಗಿ ಮಾಡಲು ಶಕ್ತನಾಗಿದ್ದಾನೆ. |
5
|
ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಹೆಚ್ಚು ಮುಖ್ಯವೆಂದು ನಂಬಬಹುದು. ಆದರೆ ಇನ್ನೊಬ್ಬನು ಎಲ್ಲಾ ದಿನಗಳು ಒಂದೇ ಎಂದು ನಂಬಬಹುದು. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಸ್ವಂತ ಮನಸ್ಸಿನಲ್ಲಿರುವ ತನ್ನ ಸ್ವಂತ ನಂಬಿಕೆಯ ಬಗ್ಗೆ ನಿಶ್ಚಯದಿಂದಿರಬೇಕು. |
6
|
ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಮುಖ್ಯವೆಂದು ಯೋಚಿಸುವ ವ್ಯಕ್ತಿಯು ಪ್ರಭುವಿಗೋಸ್ಕರವಾಗಿಯೇ ಹಾಗೆ ಯೋಚಿಸುವವನಾಗಿದ್ದಾನೆ. ಅಂತೆಯೇ ಎಲ್ಲಾ ಬಗೆಯ ಆಹಾರ ಪದಾರ್ಥಗಳನ್ನು ತಿನ್ನುವ ವ್ಯಕ್ತಿಯು ಪ್ರಭುವಿಗೋಸ್ಕರವೇ ಅವುಗಳನ್ನು ತಿನ್ನುತ್ತಾನೆ. ಹೌದು, ಅವನು ಆ ಆಹಾರಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ. |
7
|
ಹೌದು, ನಾವೆಲ್ಲರೂ ಪ್ರಭುವಿಗೋಸ್ಕರವೇ ಜೀವಿಸುವವರಾಗಿದ್ದೇವೆ. ನಾವು ಜೀವಿಸುವುದಾಗಲಿ ಸಾಯುವುದಾಗಲಿ ನಮಗೋಸ್ಕರವಲ್ಲ. |
8
|
ನಾವು ಬದುಕುವುದಾಗಿದ್ದರೆ, ಪ್ರಭುವಿಗೋಸ್ಕರ ಬದುಕುತ್ತೇವೆ; ಸಾಯುವುದಾಗಿದ್ದರೆ, ಪ್ರಭುವಿಗೋಸ್ಕರ ಸಾಯುತ್ತೇವೆ. ಆದ್ದರಿಂದ ಬದುಕಿದರೂ ಸತ್ತರೂ ನಾವು ಪ್ರಭುವಿಗೆ ಸೇರಿದವರಾಗಿದ್ದೇವೆ. |
9
|
ಆದಕಾರಣ, ಮತ್ತೆ ಜೀವಿಸುವುದಕ್ಕಾಗಿಯೇ ಕ್ರಿಸ್ತನು ಸತ್ತು ಸಮಾಧಿಯೊಳಗಿಂದ ಜೀವಂತವಾಗಿ ಎದ್ದು ಬಂದನು. ಸತ್ತುಹೋದ ಜನರಿಗೂ ಬದುಕಿರುವ ಜನರಿಗೂ ತಾನು ಪ್ರಭುವಾಗಿರಬೇಕೆಂದು ಆತನು ಹೀಗೆ ಮಾಡಿದನು. |
10
|
ಹೀಗಿರಲು, ಕ್ರಿಸ್ತನಲ್ಲಿ ನಿನ್ನ ಸಹೋದರನಾಗಿರುವವನನ್ನು ನೀನು ಟೀಕಿಸುವುದೇಕೆ? ನೀನು ನಿನ್ನ ಸಹೋದರಿನಿಗಿಂತಲೂ ಉತ್ತಮನೆಂದು ಯೋಚಿಸುವುದೇಕೆ? ನಾವೆಲ್ಲರೂ ದೇವರ ಮುಂದೆ ನಿಂತುಕೊಳ್ಳುವೆವು, ಆಗ ಆತನು ನಮ್ಮೆಲ್ಲರಿಗೂ ತೀರ್ಪು ಕೊಡುವನು. |
11
|
ಹೌದು, ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ: “ಪ್ರತಿಯೊಬ್ಬನೂ ನನಗೆ ಅಡ್ಡಬೀಳುವನು. ಪ್ರತಿಯೊಬ್ಬನೂ ನನ್ನನ್ನು ದೇವರೆಂದು ಹೇಳುವನು. ನನ್ನ ಜೀವದಾಣೆಯಾಗಿಯೂ ಈ ಸಂಗತಿಗಳು ನೆರವೇರುತ್ತವೆ ಎನ್ನುತ್ತಾನೆ ಪ್ರಭುವು.” ಯೆಶಾಯ 45:23 |
12
|
ಆದ್ದರಿಂದ ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮನಮ್ಮ ಜೀವಿತದ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು. |
13
|
ಆದ್ದರಿಂದ, ನಾವು ಒಬ್ಬರಿಗೊಬ್ಬರು ತೀರ್ಪುಕೊಡುವುದನ್ನು ಬಿಟ್ಟುಬಿಡಬೇಕು. ನಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಬಲಹೀನಗೊಳಿಸುವಂಥ ಅಥವಾ ಪಾಪಕ್ಕೆ ಬೀಳಿಸುವಂಥ ಯಾವುದನ್ನೇ ಆಗಲಿ ಮಾಡದಂತೆ ನಾವು ನಿರ್ಧರಿಸಬೇಕು. |
14
|
ನಾನು ಪ್ರಭುವಾದ ಯೇಸುವಿನಲ್ಲಿದ್ದೇನೆ. ಯಾವ ಆಹಾರ ಪದಾರ್ಥವನ್ನೇ ಆಗಲಿ ತಿನ್ನುವುದು ತಪ್ಪಲ್ಲವೆಂದು ನನಗೆ ಗೊತ್ತಿದೆ. ಒಬ್ಬನು ಯಾವುದಾದರೂ ಆಹಾರ ಪದಾರ್ಥವನ್ನು ತಿನ್ನುವುದು ತಪ್ಪೆಂದು ನಂಬಿದರೆ, ಆ ಆಹಾರ ಪದಾರ್ಥವು ಅವನಿಗೆ ಅಶುದ್ಧವಾಗುತ್ತದೆ. |
15
|
ನೀನು ತಿನ್ನುವ ಒಂದು ಆಹಾರ ಪದಾರ್ಥದಿಂದ ನಿನ್ನ ಸಹೋದರನ ನಂಬಿಕೆಗೆ ನೀನು ತೊಂದರೆಯನ್ನು ಮಾಡಿದರೆ, ನೀನು ಪ್ರೀತಿಯ ಮಾರ್ಗವನ್ನು ನಿಜವಾಗಿಯೂ ಅನುಸರಿಸುತ್ತಿಲ್ಲ. ಒಬ್ಬನು ಯಾವುದಾದರೂ ಆಹಾರ ಪದಾರ್ಥವನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವಾಗ, ನೀನು ಆ ಪದಾರ್ಥವನ್ನು ತಿಂದರೆ ಅವನ ನಂಬಿಕೆ ಹಾಳಾಗುವುದು. ಆದ್ದರಿಂದ ನೀನು ಹಾಗೆ ಮಾಡಕೂಡದು. ಕ್ರಿಸ್ತನು ಆ ವ್ಯಕ್ತಿಗಾಗಿಯೂ ಸತ್ತನು. |
16
|
ನೀನು ಯಾವುದನ್ನು ಒಳ್ಳೆಯದೆಂದು ಆಲೋಚಿಸುವಿಯೋ ಅದು ಬೇರೆಯವರಿಂದ ಕೆಟ್ಟದ್ದು ಎಂಬ ಟೀಕೆಗೆ ಒಳಗಾಗದಂತೆ ಎಚ್ಚರವಹಿಸು. |
17
|
ದೇವರ ರಾಜ್ಯದಲ್ಲಿ ತಿನ್ನುವುದಾಗಲಿ ಕುಡಿಯುವುದಾಗಲಿ ಮುಖ್ಯವಲ್ಲ. ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಅಲ್ಲಿ ಮುಖ್ಯವಾಗಿವೆ. |
18
|
ಈ ರೀತಿಯಲ್ಲಿ ಕ್ರಿಸ್ತನ ಸೇವೆಮಾಡುವವನು ದೇವರನ್ನು ಮೆಚ್ಚಿಸುವವನಾಗಿದ್ದಾನೆ. ಜನರೂ ಅವನನ್ನು ಸ್ವೀಕರಿಸಿಕೊಳ್ಳುವರು. |
19
|
ಆದ್ದರಿಂದ ಸಮಾಧಾನವನ್ನು ಉಂಟುಮಾಡುವ ಕಾರ್ಯಗಳನ್ನು ನಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಮಾಡಲು ನಾವು ಪ್ರಯತ್ನಿಸೋಣ. ಪರಸ್ಪರ ಸಹಾಯಕವಾದ ಕಾರ್ಯಗಳನ್ನೇ ಮಾಡಲು ನಾವು ಪ್ರಯತ್ನಿಸೋಣ. ದೇವರ ಕಾರ್ಯವನ್ನು ನಾಶಪಡಿಸಲು ಆಹಾರಕ್ಕೆ ಅವಕಾಶ ಕೊಡಬೇಡಿ. |
20
|
ಎಲ್ಲಾ ಆಹಾರ ಪದಾರ್ಥಗಳು ಶುದ್ಧವಾಗಿವೆ ಮತ್ತು ತಿನ್ನಲು ಯೋಗ್ಯವಾಗಿವೆ. ಆದರೆ ಒಬ್ಬನು ತಾನು ತಿನ್ನುವ ಆಹಾರ ಪದಾರ್ಥದ ಮೂಲಕ ಮತ್ತೊಬ್ಬ ವ್ಯಕ್ತಿಯನ್ನು ಪಾಪಕ್ಕೆ ಬೀಳಿಸುವುದಾಗಿದ್ದರೆ, ಅವನು ಆ ಪದಾರ್ಥವನ್ನು ತಿನ್ನುವುದೇ ತಪ್ಪು. |
21
|
ನೀನು ಮಾಂಸ ತಿನ್ನುವುದು ಅಥವಾ ದ್ರಾಕ್ಷಾರಸ ಕುಡಿಯುವುದು, ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವುದಾಗಿದ್ದರೆ ಮಾಂಸವನ್ನು ತಿನ್ನದೆ, ದ್ರಾಕ್ಷಾರಸವನ್ನು ಕುಡಿಯದೇ ಇರುವುದು ಉತ್ತಮ. ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವಂಥದ್ದನ್ನು ಮಾಡದಿರುವುದೇ ಉತ್ತಮ. |
22
|
ಈ ಸಂಗತಿಗಳ ಬಗ್ಗೆ ನಿನಗಿರುವ ವಿಶ್ವಾಸವು ನಿನಗೂ ದೇವರಿಗೂ ಮಾತ್ರ ತಿಳಿದಿರಲಿ. ತನಗೆ ಸರಿಯೆನಿಸಿದ ಕಾರ್ಯಗಳನ್ನು ತಾನು ದೋಷಿಯಾಗುತ್ತೇನೆಂಬ ಸಂಶಯವಿಲ್ಲದೆ ಮಾಡುವವನೇ ಭಾಗ್ಯವಂತನು. |
23
|
ಆದರೆ ಒಬ್ಬನು ತಾನು ತಿನ್ನುವ ಪದಾರ್ಥದಲ್ಲಿ ದೋಷವಿಲ್ಲ ಎಂಬ ದೃಢನಂಭಿಕೆಯಿಲ್ಲದೆ ತಿಂದರೆ, ಅವನು ತನ್ನನ್ನೇ ತಪ್ಪಿತಸ್ಥನನಾಗಿ ಮಾಡಿಕೊಳ್ಳುತ್ತಾನೆ. ಏಕೆಂದರೆ ಅದು ದೋಷರಹಿತವಾದದ್ದು ಎಂಬ ನಂಬಿಕೆ ಅವನಲ್ಲಿಲ್ಲ. ನಂಬಿಕೆಯ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ. |
Romans 14:17 Kannada Language Bible Words basic statistical display
COMING SOON ...