1
|
ತೂರಿನ ಅರಸನಾದ ಹೀರಾಮನು ದಾವೀದನಿಗೆ ಮನೆಯನ್ನು ಕಟ್ಟುವ ನಿಮಿತ್ತ ದೇವದಾರು ಮರಗಳನ್ನೂ ಕಲ್ಲು ಕುಟಿಗರನ್ನೂ ಬಡಗಿ ಯರನ್ನೂ ಅವನ ಬಳಿಗೆ ಕಳುಹಿಸಿದನು. |
2
|
ಆಗ ಕರ್ತನು ಇಸ್ರಾಯೇಲಿನ ಮೇಲೆ ಅರಸನಾಗಿರಲು ತನ್ನನ್ನು ಸ್ಥಿರಪಡಿಸಿದನೆಂದು ದಾವೀದನು ತಿಳುಕೊಂಡನು. ಯಾಕಂದರೆ ಆತನ ಜನರಾದ ಇಸ್ರಾಯೇಲಿನ ನಿಮಿತ್ತ ತನ್ನ ರಾಜ್ಯವು ಮೇಲಕ್ಕೆ ಎತ್ತಲ್ಪಟ್ಟಿತ್ತು. |
3
|
ದಾವೀದನು ಯೆರೂಸಲೇಮಿನಲ್ಲಿ ಇನ್ನೂ ಹೆಂಡತಿಯರನ್ನು ತೆಗೆದು ಕೊಂಡು ಹೆಚ್ಚು ಕುಮಾರರನ್ನೂ ಕುಮಾರ್ತೆಯರನ್ನೂ ಪಡೆದನು. |
4
|
ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳೇನಂದರೆ--ಶಮ್ಮೂವನು, ಶೋಬಾ ಬನು, ನಾತಾನನು, |
5
|
ಸೊಲೊಮೋನನು, ಇಬ್ಹಾರನು, ಎಲೀಷೂವನು, ಎಲ್ಪೆಲೆಟನು, |
7
|
ಯಾಫೀಯನು, ಎಲೀಷಾಮನು, ಬೆಲ್ಯಾದನು, ಎಲೀಫೆಲೆಟನು. |
8
|
ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕಿಸಲ್ಪಟ್ಟಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ ಫಿಲಿಷ್ಟಿಯರೆಲ್ಲರು ದಾವೀದನನ್ನು ಹುಡು ಕಲು ಹೋದರು. ದಾವೀದನು ಅದನ್ನು ಕೇಳಿ ಅವರಿಗೆ ದುರಾಗಿ ಹೊರಟನು. |
9
|
ಆಗ ಫಿಲಿಷ್ಟಿಯರು ಬಂದು ರೆಫಾಯಾಮ್ ತಗ್ಗಿನಲ್ಲಿ ಇಳಿದುಕೊಂಡರು. |
10
|
ದಾವೀ ದನು--ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗ ಬೇಕೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿ ಕೊಡು ವಿಯೋ ಎಂದು ದೇವರನ್ನು ವಿಚಾರಿಸಿದನು. ಕರ್ತನು ಅವನಿಗೆ--ಹೋಗು; ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು ಅಂದನು. |
11
|
ಹಾಗೆಯೇ ಅವರು ಬಾಳ್ಪೆರಾಚೀಮಿಗೆ ಬಂದ ಮೇಲೆ ದಾವೀದನು ಅಲ್ಲಿ ಅವರನ್ನು ಸಂಹರಿಸಿದನು. ಆಗ ದಾವೀದನು--ನೀರು ಕೊಚ್ಚಿಕೊಂಡು ಹೋಗುವ ಹಾಗೆ ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾನೆ ಅಂದನು. ಆದಕಾರಣ ಆ ಸ್ಥಳಕ್ಕೆ ಬಾಳ್ಪೆರಾಚೀಮು ಎಂದು ಹೆಸರಿಟ್ಟನು. |
12
|
ಫಿಲಿಷ್ಟಿಯರು ತಮ್ಮ ದೇವರು ಗಳನ್ನು ಅಲ್ಲಿ ಬಿಟ್ಟುಬಿಟ್ಟದ್ದರಿಂದ ದಾವೀದನು ಅಪ್ಪಣೆ ಕೊಟ್ಟಾಗ ಬೆಂಕಿಯಿಂದ ಅವು ಸುಡಲ್ಪಟ್ಟವು. |
13
|
ಆದರೆ ಫಿಲಿಷ್ಟಿಯರು ಮತ್ತೆ ಬಂದು ತಗ್ಗಿನಲ್ಲಿ ವಿಸ್ತಾರವಾಗಿ ಇಳುಕೊಂಡರು. |
14
|
ಆದದರಿಂದ ದಾವೀ ದನು ತಿರಿಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ--ನೀನು ಅವರ ಹಿಂದೆ ಹೋಗದೆ ಅವರನ್ನು ಬಿಟ್ಟು ತಿರುಗಿ ಹಿಪ್ಪಲಿ ಮರಗಳಿಗೆದುರಾಗಿ ಅವರ ಮೇಲೆ ಬಂದು ಬೀಳು. |
15
|
ಹಿಪ್ಪಲಿ ಮರಗಳ ತುದಿಗಳಲ್ಲಿ ನಡೆದು ಬರುವ ಶಬ್ದವನ್ನು ನೀನು ಕೇಳಿದಾಗಲೇ ಯುದ್ಧಕ್ಕೆ ಹೊರಟುಹೋಗು; ಯಾಕಂದರೆ ಫಿಲಿಷ್ಟಿಯರ ದಂಡನ್ನು ಹೊಡೆಯಲು ದೇವರು ನಿನ್ನ ಮುಂದಾಗಿ ಹೊರಟಿದ್ದಾನೆ ಅಂದನು. |
16
|
ದೇವರು ತನಗೆ ಆಜ್ಞಾ ಪಿಸಿದ ಹಾಗೆ ದಾವೀದನು ಮಾಡಿದ್ದರಿಂದ ಅವರು ಗಿಬ್ಯೋನು ಮೊದಲುಗೊಂಡು ಗೆಜೆರಿನ ವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದನು. |
17
|
ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು; ಕರ್ತನು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದನು. |
1-Chronicles 14:6 Kannada Language Bible Words basic statistical display
COMING SOON ...