1
|
ಸೌಲನು ಒಂದು ವರುಷ ಆಳಿದನು;ಇಸ್ರಾಯೇಲ್ಯರನ್ನು ಎರಡು ವರುಷ ಆಳಿ ದಾಗ ಸೌಲನು ಇಸ್ರಾಯೇಲ್ಯರಲ್ಲಿ ಮೂರು ಸಾವಿರ ಜನರನ್ನು ಆದುಕೊಂಡನು. |
2
|
ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು. |
3
|
ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ಕೇಳಿಬಂತು. ಆದದರಿಂದ ಸೌಲನು ದೇಶದಲ್ಲೆಲ್ಲಾ ಇಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು. |
4
|
ಫಿಲಿಷ್ಟಿಯರ ಠಾಣ ವನ್ನು ಸೌಲನು ಹೊಡೆದನೆಂದೂ ಫಿಲಿಷ್ಟಿಯರಿಗೆ ಇಸ್ರಾಯೇಲ್ಯರು ಅಸಹ್ಯವಾದವರಾದರೆಂದೂ ಸಮಸ್ತ ಇಸ್ರಾಯೇಲ್ಯರು ಕೇಳಿದಾಗ ಸೌಲನ ಹಿಂದೆ ಹೋಗಲು ಗಿಲ್ಗಾಲಿಗೆ ಕರೆಸಿಕೊಳ್ಳಲ್ಪಟ್ಟರು. |
5
|
ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು. |
6
|
ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು. |
7
|
ಇದಲ್ಲದೆ ಇಬ್ರಿಯರಲ್ಲಿರುವ ಕೆಲವರು ಯೊರ್ದನನ್ನು ದಾಟಿ ಗಾದ್ ದೇಶಕ್ಕೂ ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು; ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು. |
8
|
ಸೌಲನು ತನಗೆ ಸಮುವೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುವೇಲನು ಗಿಲ್ಗಾಲಿಗೆ ಬಾರದೆ ಇದ್ದದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು. |
9
|
ಆಗ ಸೌಲನು--ದಹನ ಬಲಿಯನ್ನೂ ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು. |
10
|
ಅವನು ದಹನಬಲಿಯನ್ನು ಅರ್ಪಿಸಿ ತೀರಿಸುವಷ್ಟರೊಳಗೆ ಇಗೋ, ಸಮುವೇಲನು ಬಂದನು. ಆಗ ಸೌಲನು ಅವನನ್ನು ವಂದಿಸುವದಕ್ಕಾಗಿ ಎದುರುಗೊಳ್ಳಲು ಹೋದನು. |
11
|
ಸಮುವೇಲನುನೀನೇನು ಮಾಡಿದಿ ಎಂದು ಸೌಲನನ್ನು ಕೇಳಿದಾಗ ಅವನು--ಜನರು ನನ್ನನ್ನು ಬಿಟ್ಟು ಚದರಿಹೋದದ್ದನ್ನೂ ನೇಮಿಸಿದ ದಿವಸಗಳ ಪ್ರಕಾರಕ್ಕೆ ನೀನು ಬಾರದ್ದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವದನ್ನೂ |
12
|
ನಾನು ಕಂಡಿದ್ದರಿಂದ ಫಿಲಿಷ್ಟಿಯರು ಗಿಲ್ಗಾಲಿನಲ್ಲಿ ರುವ ನನ್ನ ಬಳಿಗೆ ಬರುವರು ಎಂದೂ ನಾನು ಕರ್ತನ ದಯೆ ಬೇಡಿಕೊಳ್ಳಲಿಲ್ಲವೆಂದೂ ಹೇಳಿ ಮುಂದಾಗಿ ದಹನಬಲಿಯನ್ನು ಅರ್ಪಿಸಿದೆನು ಅಂದನು. |
13
|
ಸಮು ವೇಲನು ಸೌಲನಿಗೆ--ನೀನು ಬುದ್ಧಿಹೀನವಾದ ಕೆಲಸ ಮಾಡಿದ್ದೀ; ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಕೊಳ್ಳಲಿಲ್ಲ. ಕರ್ತನು ಇಸ್ರಾಯೇಲ್ಯರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವದಕ್ಕೆ ಇದ್ದನು. |
14
|
ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಕರ್ತನು ನಿನಗೆ ಆಜ್ಞಾಪಿಸಿ ದ್ದನ್ನು ನೀನು ಕೈಕೊಳ್ಳದೆ ಹೋದದರಿಂದ ಆತನು ತನ್ನ ಹೃದಯಕ್ಕೆ ಅನುಸರಣೆಯಾದ ಒಬ್ಬ ಮನುಷ್ಯ ನನ್ನು ಹುಡುಕಿ ಅವನನ್ನು ತನ್ನ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾನೆ ಅಂದನು. |
15
|
ಸಮು ವೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾವಿಾನ್ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ ಅವರು ಸುಮಾರು ಆರು ನೂರು ಜನರಿದ್ದರು. |
16
|
ಸೌಲನೂ ಅವನ ಮಗನಾದ ಯೋನಾತಾನನೂ ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾ ವಿಾನ್ ದೇಶದ ಗಿಬೆಯಲ್ಲಿದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು. |
17
|
ಆಗ ಫಿಲಿಷ್ಟಿ ಯರ ಪಾಳೆಯದಿಂದ ಸುಲುಕೊಳ್ಳುವವರು ಮೂರು ಗುಂಪಾಗಿ ಹೊರಟರು; ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ದೇಶದ ಕಡೆಗೆ ಹೋಯಿತು; |
18
|
ಮತ್ತೊಂದು ಗುಂಪು ಬೇತ್ಹೋರೋನಿನ ಮಾರ್ಗ ವಾಗಿ ಹೋಯಿತು; ಬೇರೊಂದು ಗುಂಪು ಅರಣ್ಯಕ್ಕೆ ಎದುರಾಗಿರುವ ಜೆಬೋಯಾಮ್ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು. |
19
|
ಆದರೆ ಇಬ್ರಿಯರು ತಮಗೆ ಕತ್ತಿಯನ್ನಾದರೂ ಈಟಿಯನ್ನಾ ದರೂ ಮಾಡಿಕೊಳ್ಳಬಾರದು ಎಂದು ಫಿಲಿಷ್ಟಿಯರು ಹೇಳಿಕೊಂಡದ್ದರಿಂದ ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ. |
20
|
ಆದದರಿಂದ ಇಸ್ರಾಯೇಲ್ಲೆಲ್ಲಾ ತಮ್ಮ ತಮ್ಮ ನೇಗಲಿನ ಗುಳಗಳನ್ನೂ ಸಲಿಕೆಗಳನ್ನೂ ಕೊಡಲಿಗಳನ್ನೂ ಗುದ್ದಲಿಗಳನ್ನೂ ಮೊನೆ ಮಾಡುವದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾ ಗಿತ್ತು. |
21
|
ಆದರೆ ಗುದ್ದಲಿಗಳನ್ನೂ ಗುಂಟಿಗೆಗಳನ್ನೂ ಗುಶಿಮೊಳೆಗಳನ್ನೂ ಕೊಡಲಿಗಳನ್ನೂ ಅಂಕುಶಗಳನ್ನೂ ಹದಮಾಡುವದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು. |
22
|
ಯುದ್ಧದ ದಿವಸದಲ್ಲಿ ಸೌಲನ ಸಂಗಡ ಯೋನಾ ತಾನನ ಸಂಗಡ ಇರುವ ಸಮಸ್ತ ಜನರ ಕೈಯಲ್ಲಿ ಕತ್ತಿಯಾದರೂ ಈಟಿಯಾದರೂ ಇಲ್ಲದೆ ಇತ್ತು. ಆದರೆ ಸೌಲನಿಗೂ ಅವನ ಕುಮಾರನಾದ ಯೋನಾತಾನ ನಿಗೂ ಮಾತ್ರವೇ ಇತ್ತು. |
23
|
ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು. |
1-Samuel 13:9 Kannada Language Bible Words basic statistical display
COMING SOON ...