1
|
ಆಗ ದೇವರ ಆತ್ಮನು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು ಅವನಿಗೆ-- |
2
|
ಆಸನೇ, ಯೆಹೂದ ಬೆನ್ಯಾವಿಾನನ ಸಮಸ್ತರೇ, ನನ್ನ ಮಾತನ್ನು ಕೇಳಿರಿ. ನೀವು ಕರ್ತನ ಸಂಗಡ ಇರುವ ವರೆಗೂ ಆತನು ನಿಮ್ಮ ಸಂಗಡ ಇರುವನು; ನೀವು ಆತನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು; |
3
|
ಆತನನ್ನು ಬಿಟ್ಟುಬಿಟ್ಟರೆ ಆತನು ನಿಮ್ಮನ್ನು ಬಿಟ್ಟುಬಿಡುವನು ಅಂದನು. ಬಹುಕಾಲ ಇಸ್ರಾಯೇಲ್ಯರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ ನ್ಯಾಯಪ್ರಮಾಣವಿಲ್ಲದೆ ಇದ್ದರು. |
4
|
ಆದರೆ ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಕರ್ತನ ಕಡೆಗೆ ತಿರಿಗಿ ಆತನನ್ನು ಹುಡುಕಿ ದಾಗ ಆತನು ಅವರಿಗೆ ಸಿಕ್ಕಿದನು. |
5
|
ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು. |
6
|
ಜನಾಂಗವು ಜನಾಂಗದಿಂದಲೂ ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ಯಾಕಂದರೆ ದೇವರು ಸಕಲ ಇಕ್ಕಟ್ಟುಗಳಿಂದ ಅವ ರನ್ನು ತೊಂದರೆಪಡಿಸಿದನು. |
7
|
ಆದದರಿಂದ ನೀವು ಬಲವಾಗಿರ್ರಿ; ನಿಮ್ಮ ಕೈಗಳು ಬಲಹೀನವಾಗದೆ ಇರಲಿ;ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವದು ಅಂದನು. |
8
|
ಆಸನು ಈ ಮಾತುಗಳನ್ನೂ ಪ್ರವಾದಿಯಾದ ಓದೇದನ ಪ್ರವಾದನೆಯನ್ನೂ ಕೇಳಿದಾಗ ಅವನು ಬಲಗೊಂಡು ಯೆಹೂದ ಬೆನ್ಯಾವಿಾನನ ಸಮಸ್ತ ದೇಶದೊಳಗಿಂದಲೂ ಎಫ್ರಾಯಾಮಿನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ ಕರ್ತನ ದ್ವಾರಾಂಗಳದ ಮುಂದೆ ಇದ್ದ ಕರ್ತನ ಬಲಿಪೀಠವನ್ನು ನೂತನ ಪಡಿಸಿದನು. |
9
|
ಇದಲ್ಲದೆ ಅವನು ಯೆಹೂದದ ಬೆನ್ಯಾ ವಿಾನನ ಸಮಸ್ತರನ್ನೂ ಎಫ್ರಾಯಾಮಿನಿಂದಲೂ ಮನಸ್ಸೆಯಿಂದಲೂ ಸಿಮೆಯೋನಿನಿಂದಲೂ ಅವರ ಕಡೆಗೆ ಬಂದ ಅನ್ಯರನ್ನೂ ಕೂಡಿಸಿದನು. ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆಂದು ಇವರು ಕಂಡು ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಹೋದರು. |
10
|
ಹೀಗೆಯೇ ಆಸನ ಆಳಿಕೆಯ ಹದಿನೈದನೇ ವರುಷದ ಮೂರನೇ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿ ಕೂಡಿ ಕೊಂಡರು. |
11
|
ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳುನೂರು ಎತ್ತುಗಳನ್ನೂ ಏಳು ಸಾವಿರ ಕುರಿಗಳನ್ನೂ ಕರ್ತನಿಗೆ ಬಲಿಅರ್ಪಿಸಿದರು. |
12
|
ತಮ್ಮ ಪಿತೃಗಳ ದೇವರಾದ ಕರ್ತನನ್ನು ತಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದ ಲೂ ಹುಡುಕಬೇಕೆಂದೂ |
13
|
ಯಾವನಾದರೂ ಇಸ್ರಾ ಯೇಲಿನ ದೇವರಾದ ಕರ್ತನನ್ನು ಹುಡುಕದೆ ಹೋದರೆ ಹಿರಿಯನಾದರೂ ಕಿರಿಯನಾದರೂ ಪುರುಷನಾದರೂ ಸ್ತ್ರೀಯಾದರೂ ಸಾಯಬೇಕೆಂದೂ ಒಡಂಬಡಿಕೆಯನ್ನು ಮಾಡಿಕೊಂಡರು. |
14
|
ಮಹಾಶಬ್ದದಿಂದಲೂ ಆರ್ಭಟ ದಿಂದಲೂ ತುತೂರಿಗಳ ಶಬ್ದದಿಂದಲೂ ಕೊಂಬು ಗಳ ಶಬ್ದದಿಂದಲೂ ಕರ್ತನ ಮುಂದೆ ಆಣೆಯಿಟ್ಟರು. |
15
|
ಇದಲ್ಲದೆ ಯೆಹೂದದವರೆಲ್ಲರೂ ಪ್ರಮಾಣಕ್ಕೆ ಸಂತೋಷಪಟ್ಟರು. ಅವರು ತಮ್ಮ ಪೂರ್ಣಹೃದಯ ದಿಂದ ಆಣೆ ಇಟ್ಟು ತಮ್ಮ ಪೂರ್ಣ ಇಷ್ಟದಿಂದ ಆತನನ್ನು ಹುಡುಕಲು ಆತನು ಅವರಿಗೆ ಸಿಕ್ಕಿದನು. ಕರ್ತನು ಸುತ್ತಲೂ ಅವರಿಗೆ ವಿಶ್ರಾಂತಿ ಕೊಟ್ಟನು. |
16
|
ಇದಲ್ಲದೆ ಅರಸನಾಗಿರುವ ಆಸನ ತಾಯಿಯಾದ ಮಾಕಳನ್ನು ಕುರಿತು ಏನಂದರೆ, ಅವಳು ಒಂದು ವಿಗ್ರಹವನ್ನು ಮಾಡಿಸಿ ತೋಪಿನಲ್ಲಿ ಇರಿಸಿದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿದನು. ಇದಲ್ಲದೆ ಆಸನು ಅವಳ ವಿಗ್ರಹವನ್ನು ಕಡಿದುಹಾಕಿ ಅದನ್ನು ತುಳಿದು ಕಿದ್ರೋನ್ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು. |
17
|
ಇಸ್ರಾಯೇಲಿನೊಳಗಿಂದ ಉನ್ನತ ಸ್ಥಳಗಳು ತೆಗೆದುಹಾಕಲ್ಪಡಲಿಲ್ಲ. ಆದರೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ದೋಷ ವಿಲ್ಲದ್ದಾಗಿತ್ತು. |
18
|
ಅವನು ದೇವರ ಆಲಯದಲ್ಲಿ ತನ್ನ ತಂದೆಯೂ ತಾನೂ ಪರಿಶುದ್ಧ ಮಾಡಿದ ಬೆಳ್ಳಿಯನ್ನೂ ಬಂಗಾರವನ್ನೂ ಪಾತ್ರೆಗಳನ್ನೂ ಸೇರಿಸಿದನು. |
19
|
ಆಸನ ಆಳ್ವಿಕೆಯಲ್ಲಿ ಮೂವತ್ತೈದನೇ ವರುಷದ ಪರಿಯಂತರ ಯುದ್ಧವಿಲ್ಲದೆ ಇತ್ತು. |
2-Chronicles 15:1 Kannada Language Bible Words basic statistical display
COMING SOON ...