1
|
ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಅವನು ಐವತ್ತೈದು ವರುಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ. |
2
|
ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಅನ್ಯ ಜನಾಂಗಗಳ ಅಸಹ್ಯವಾದವುಗಳ ಹಾಗೆಯೇ ಅವನು ಕರ್ತನ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದನು. |
3
|
ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು. |
4
|
ಇದಲ್ಲದೆ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಇರಿಸುವೆನೆಂದು ಕರ್ತನು ಯಾವದನ್ನು ಕುರಿತು ಹೇಳಿದ್ದನೋ ಆ ಕರ್ತನ ಮನೆಯಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು. |
5
|
ಕರ್ತನ ಮನೆಯ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು. |
6
|
ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು. |
7
|
ಈ ಮನೆಯಲ್ಲಿಯೂ ಇಸ್ರಾಯೇಲಿನ ಸಕಲ ಗೋತ್ರಗಳ ಲ್ಲಿಯೂ ನಾನು ಆದುಕೊಂಡ ಯೆರೂಸಲೇಮಿನ ಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನೆಂದು ಕರ್ತನು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಯಾವದನ್ನು ಕುರಿತು ಹೇಳಿದ್ದನೋ ಆ ಮನೆಯಲ್ಲಿ ತಾನು ಮಾಡಿದ ತೋಪಿನ ಕೆತ್ತಿದ ವಿಗ್ರಹವನ್ನು ಇಟ್ಟನು. |
8
|
ಕರ್ತನು --ನಾನು ಅವರಿಗೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರವೂ ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಎಲ್ಲಾ ನ್ಯಾಯಪ್ರಮಾಣದ ಪ್ರಕಾರವೂ ಮಾಡಿ ಅವುಗಳನ್ನು ಅವರು ಕೈಕೊಂಡರೆ ನಾನು ಅವರ ತಂದೆಗಳಿಗೆ ಕೊಟ್ಟ ದೇಶದೊಳಗಿಂದ ಅವರ ಪಾದಗಳು ಇನ್ನು ಕದಲುವಂತೆ ಮಾಡುವದಿಲ್ಲವೆಂದು ಹೇಳಿದನು. |
9
|
ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು. |
10
|
ಆದದರಿಂದ ಕರ್ತನು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ್ದೇನಂದರೆ-- |
11
|
ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಎಲ್ಲಕ್ಕಿಂತ ಕೆಟ್ಟದ್ದಾದ ಈ ಅಸಹ್ಯಗಳನ್ನು ಮಾಡಿದನು. ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಮಾಡಿಸಿದನು. ಈ ಕಾರಣ ದಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳು ವದೇನಂದರೆ-- |
12
|
ಇಗೋ, ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವನ ಎರಡೂ ಕಿವಿಗಳು ಕಿರಗುಟ್ಟುವವು. |
13
|
ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು. |
14
|
ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವವರನ್ನು ಬಿಟ್ಟು ಬಿಟ್ಟು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ ಸೂರೆಯೂ ಆಗಿ ಹೋಗುವರು. |
15
|
ಅವರ ತಂದೆಗಳು ಐಗುಪ್ತ ದಿಂದ ಹೊರಟ ದಿವಸ ಮೊದಲುಗೊಂಡು ಇಂದಿನ ವರೆಗೂ ಅವರು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ನನಗೆ ಕೋಪವನ್ನು ಎಬ್ಬಿಸಿದ್ದಾರೆ. |
16
|
ಇದಲ್ಲದೆ ಮನಸ್ಸೆಯು ಕರ್ತನ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯ ವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಾಪರಾಧದ ರಕ್ತದಿಂದ ತುಂಬಿಸಿದನು. |
17
|
ಮನಸ್ಸೆಯ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನು ಮಾಡಿದ ಪಾಪವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? |
18
|
ಮನಸ್ಸೆಯು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ಅವನ ಮನೆಯ ತೋಟವಾದ ಉಜ್ಜನ ತೋಟದಲ್ಲಿ ಹೂಣಿ ಟ್ಟರು. ಅವನ ಮಗನಾದ ಆಮೋನನು ಅವನಿಗೆ ಬದಲಾಗಿ ಅರಸನಾದನು. |
19
|
ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು. ಅವನ ತಾಯಿಯೂ ಯೊಟ್ಬಾ ಊರಿನವನಾದ ಹಾರೂಚನ ಮಗಳಾದ ಮೆಷುಲ್ಲೆ ಮೆತ್ ಎಂಬ ಹೆಸರುಳ್ಳವಳು. |
20
|
ಅವನು ತನ್ನ ತಂದೆ ಯಾದ ಮನಸ್ಸೆಯು ಮಾಡಿದ ಹಾಗೆ ಕರ್ತನ ದೃಷ್ಟಿ ಯಲ್ಲಿ ಕೆಟ್ಟದ್ದನ್ನು ಮಾಡಿದನು. |
21
|
ಅವನು ತನ್ನ ಪಿತೃಗಳ ದೇವರಾದ ಕರ್ತನ ಮಾರ್ಗವನ್ನು ಬಿಟ್ಟು |
22
|
ತನ್ನ ತಂದೆಯು ನಡೆದ ಎಲ್ಲಾ ಮಾರ್ಗದಲ್ಲಿ ನಡೆದು ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ತಾನೂ ಸೇವಿಸಿ ಅವುಗಳನ್ನು ಆರಾಧಿಸಿದನು. |
23
|
ಆದರೆ ಆಮೋನನ ಸೇವಕರು ಅವನ ಮೇಲೆ ಒಳಸಂಚು ಮಾಡಿ ಅರಸ ನನ್ನು ಅವನ ಮನೆಯಲ್ಲಿಯೇ ಕೊಂದುಹಾಕಿದರು. |
24
|
ದೇಶದ ಜನರು ಅರಸನಾದ ಆಮೋನನ ಮೇಲೆ ಒಳಸಂಚು ಮಾಡಿದ ಎಲ್ಲರನ್ನು ಸಂಹರಿಸಿ ಅವನ ಮಗನಾದ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು. |
25
|
ಆಮೋನನು ಮಾಡಿದ ಅವನ ಇತರ ಕ್ರಿಯೆಗಳು ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ? |
26
|
ಅವನ ಶವವನ್ನು ಉಜ್ಜನ ತೋಟದಲ್ಲಿದ್ದ ಸಮಾಧಿ ಯಲ್ಲಿ ಹೂಣಿಟ್ಟರು. ಅವನ ಮಗನಾದ ಯೋಷೀ ಯನು ಅವನಿಗೆ ಬದಲಾಗಿ ಅರಸನಾದನು. |
2-Kings 21:1 Kannada Language Bible Words basic statistical display
COMING SOON ...