1
|
ಅರಾಮ್ಯರ ಅರಸನ ಸೈನ್ಯಾಧಿಪತಿಯಾದ ನಾಮಾನನು ತನ್ನ ಯಜಮಾನನ ಮುಂದೆ ದೊಡ್ಡವನಾಗಿಯೂ ಘನವುಳ್ಳವನಾಗಿಯೂ ಇದ್ದನು. ಕರ್ತನು ಅವನಿಂದ ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದನು; ಇದಲ್ಲದೆ ಅವನು ಪರಾಕ್ರಮ ಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾ ಗಿದ್ದನು. |
2
|
ಅರಾಮ್ಯರು ಗುಂಪುಗುಂಪಾಗಿ ಹೊರಟು ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡುಕೊಂಡು ಬಂದರು. ಅವಳು ನಾಮಾ ನನ ಹೆಂಡತಿಗೆ ಸೇವಕಳಾಗಿದ್ದಳು. |
3
|
ಅವಳು ತನ್ನ ಯಜಮಾನಿಗೆ--ನನ್ನ ದಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ ಅವನು ಇವನ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು ಅಂದಳು. |
4
|
ಆಗ ಒಬ್ಬನು ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು. |
5
|
ಆದದರಿಂದ ಅರಾಮ್ಯರ ಅರಸನು--ನೀನು ಹೋಗಿ ಬಾ; ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು ಅಂದನು. ಹಾಗೆಯೇ ಅವನು ಹತ್ತು ತಲಾಂತು ಬೆಳ್ಳಿಯನ್ನೂ ಆರು ಸಾವಿರ ಬಂಗಾರದ ನಾಣ್ಯಗಳನ್ನೂ ಹತ್ತು ದುಸ್ತು ಬಟ್ಟೆ ಗಳನ್ನೂ ತೆಗೆದುಕೊಂಡು ಹೋದನು. |
6
|
ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದು ಕೊಂಡು ಬಂದನು. ಅದರಲ್ಲಿ--ಈ ಪತ್ರ ನಿನಗೆ ಸೇರುವಾಗ ಇಗೋ, ನೀನು ನನ್ನ ಸೇವಕನಾದ ನಾಮಾ ನನಿಗಿರುವ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ ಎಂಬದು. |
7
|
ಇಸ್ರಾಯೇಲ್ಯರ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು--ಕೊಲ್ಲು ವದಕ್ಕೂ ಬದುಕಿಸುವದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ತಪ್ಪಿಸಿ ವಾಸಿಮಾಡುವದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧ ವಾಗಿ ಜಗಳಕ್ಕೆ ಕಾರಣ ಹುಡುಕುವದನ್ನು ನೀವು ನೋಡಿ ತಿಳುಕೊಳ್ಳಿರಿ ಅಂದನು. |
8
|
ಇಸ್ರಾಯೇಲ್ಯರ ಅರಸನು ತನ್ನ ವಸ್ತ್ರಗಳನ್ನು ಹರಿದು ಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ--ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡ ದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ಅವನು ತಿಳುಕೊಳ್ಳುವ ಹಾಗೆ ಅವನು ನನ್ನ ಬಳಿಗೆ ಬರಲಿ ಎಂದು ಅರಸನಿಗೆ ಹೇಳಿ ಕಳುಹಿಸಿದನು. |
9
|
ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗ ಡಲೂ ರಥದ ಸಂಗಡಲೂ ಬಂದು ಎಲೀಷನ ಮನೆಯ ಬಾಗಲ ಬಳಿಯಲ್ಲಿ ನಿಂತನು. |
10
|
ಆಗ ಎಲೀಷನುನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನ ಮಾಡು; ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪ ಡುವದು; ನೀನು ಶುದ್ಧನಾಗುವಿ ಎಂದು ಹೇಳಿ ಅವನ ಬಳಿಗೆ ಸೇವಕನನ್ನು ಕಳುಹಿಸಿದನು. |
11
|
ಆಗ ನಾಮಾ ನನು ರೌದ್ರಗೊಂಡು ಹೊರಟು ಹೋಗಿ--ಇಗೋ, ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು ತನ್ನ ದೇವರಾದ ಕರ್ತನ ಹೆಸರನ್ನು ಕರೆದು ಆ ಸ್ಥಳದ ಮೇಲೆ ತನ್ನ ಕೈಯಾಡಿಸಿ ಕುಷ್ಠರೋಗವನ್ನು ವಾಸಿ ಮಾಡುವನೆಂದು ನಾನು ಯೋಚಿಸಿಕೊಂಡೆನು. |
12
|
ನಾನು ಹೊಳೆಗಳಲ್ಲಿ ಸ್ನಾನ ಮಾಡಿ ಶುದ್ಧನಾಗುವ ಹಾಗೆ ದಮಸ್ಕದ ನದಿಗಳಾದ ಅಬಾನಾ ಪರ್ಪರ್ ಇಸ್ರಾಯೇಲಿನ ಎಲ್ಲಾ ನೀರಿಗಿಂತ ಉತ್ತಮವಲ್ಲವೋ ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು. |
13
|
ಆದರೆ ಅವನ ಸೇವಕರು ನಾಮಾನನ ಬಳಿಗೆ ಬಂದು ಅವನ ಸಂಗಡ ಮಾತನಾಡಿ--ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ ನೀನು ಮಾಡುತ್ತಿದ್ದಿಯಲ್ಲವೋ? ಅವನು ನಿನಗೆ ಸ್ನಾನಮಾಡಿ ಶುದ್ಧನಾಗೆಂದು ಹೇಳಿದರೆ ಅಡ್ಡಿ ಏನು ಅಂದರು. |
14
|
ಆಗ ಅವನು ಇಳಿದುಹೋಗಿ ದೇವರ ಮನುಷ್ಯನ ವಾಕ್ಯದ ಪ್ರಕಾರ ಯೊರ್ದನಿನಲ್ಲಿ ಏಳುಸಾರಿ ಮುಣುಗಿದನು; ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು; ಅವನು ಶುದ್ಧನಾದನು. |
15
|
ಆಗ ಅವನೂ ಅವನ ಎಲ್ಲಾ ಪರಿವಾರದವರೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ನಿಂತು--ಇಗೋ, ಇಸ್ರಾಯೇ ಲಿನಲ್ಲಿರುವ ದೇವರ ಹೊರತಾಗಿ ಭೂಮಿಯಲ್ಲೆ ಲ್ಲಿಯೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು; ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತಕ್ಕೋ ಅಂದನು. |
16
|
ಆದರೆ ಅವನುನಾನು ಯಾವಾತನ ಮುಂದೆ ನಿಲ್ಲುತ್ತೇನೋ ಆ ಕರ್ತನ ಜೀವದಾಣೆ, ನಾನು ಏನೂ ತಕ್ಕೊಳ್ಳುವದಿಲ್ಲ ಅಂದ ನು. ಅವನು ತಕ್ಕೊಳ್ಳಬೇಕೆಂದು ನಾಮಾನನು ಬಲವಂತ ಮಾಡಿದರೂ ಬೇಡ ಅಂದನು. |
17
|
ಆಗ ನಾಮಾನನುಹಾಗಾದರೆ ಎರಡು ಹೇಸರ ಕತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ದಯಮಾಡಬೇಕಲ್ಲಾ. ನಿನ್ನ ಸೇವಕನು ಇನ್ನು ಮೇಲೆ ಕರ್ತನಿಗೆ ಹೊರತಾಗಿ ಅನ್ಯದೇವರುಗಳಿಗೆ ದಹನಬಲಿಯನ್ನಾದರೂ ಬಲಿ ಯನ್ನಾದರೂ ಅರ್ಪಿಸನು. |
18
|
ಈ ಕಾರ್ಯವನ್ನು ಕರ್ತನು ನಿನ್ನ ಸೇವಕನಿಗೆ ಮನ್ನಿಸಲಿ; ಏನಂದರೆ, ನನ್ನ ಯಜಮಾನನು ಆರಾಧನೆಗೋಸ್ಕರ ರಿಮ್ಮೋನನ ಮನೆಯಲ್ಲಿ ಪ್ರವೇಶಿಸಿ ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ ರಿಮ್ಮೋನನ ಮನೆಯಲ್ಲಿ ನಾನು ಅಡ್ಡಬಿದ್ದರೆ ಕರ್ತನು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ ಅಂದನು. |
19
|
ಎಲೀಷನು ಅವನಿಗೆ--ಸಮಾ ಧಾನದಿಂದ ಹೋಗು ಅಂದನು. ಆಗ ಅವನನ್ನು ಬಿಟ್ಟು ಸ್ವಲ್ಪ ದೂರವಾಗಿ ಹೋದನು. |
20
|
ಆದರೆ ದೇವರ ಮನುಷ್ಯನಾದ ಎಲೀಷನ ಸೇವಕ ನಾಗಿರುವ ಗೇಹಜಿಯು--ಇಗೋ, ನನ್ನ ಯಜಮಾ ನನು ಈ ಅರಾಮ್ಯನಾದ ನಾಮಾನನು ತಕ್ಕೊಂಡು ಬಂದದ್ದನ್ನು ಅವನ ಕೈಯಿಂದ ತಕ್ಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಕರ್ತನ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ ಅವನ ಕೈಯಿಂದ ಏನಾ ದರೂ ತಕ್ಕೊಳ್ಳುವೆನು ಅಂದುಕೊಂಡನು. |
21
|
ಹಾಗೆಯೇ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ನೋಡಿ ದಾಗ ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ--ಎಲ್ಲಾ ಕ್ಷೇಮವೋ ಅಂದನು. |
22
|
ಅವನುಕ್ಷೇಮ; ಇಗೋ, ಪ್ರವಾದಿಗಳ ಮಕ್ಕಳಲ್ಲಿ ಇಬ್ಬರು ಯೌವನಸ್ಥರು ಎಫ್ರಾಯಾಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ; ನೀನು ದಯಮಾಡಿ ಅವರಿಗೆ ಒಂದು ತಲಾಂತು ಬೆಳ್ಳಿಯನ್ನೂ ಎರಡು ದುಸ್ತು ಬಟ್ಟೆ ಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ ಅಂದನು. |
23
|
ಆಗ ನಾಮಾನನು--ನೀನು ದಯಮಾಡಿ ಎರಡು ತಲಾಂತು ಗಳನ್ನು ತಕ್ಕೋ ಎಂದು ಹೇಳಿ ಅವನನ್ನು ಬಲವಂತ ಮಾಡಿದನು. ಹಾಗೆಯೇ ಎರಡು ತಲಾಂತು ಬೆಳ್ಳಿಯನ್ನು ಎರಡು ಚೀಲಗಳಲ್ಲಿ ಕಟ್ಟಿಸಿ ಅದರ ಸಂಗಡ ಎರಡು ದುಸ್ತು ಬಟ್ಟೆಗಳನ್ನು ಕೊಟ್ಟು ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು; ಅವರು ಇವನ ಮುಂದೆ ಹೊತ್ತುಕೊಂಡು ಹೋದರು. |
24
|
ಅವನು ದುರ್ಗಕ್ಕೆ ಬಂದು ಅವುಗಳನ್ನು ಅವರ ಕೈಯಿಂದ ತಕ್ಕೊಂಡು ಮನೆಯಲ್ಲಿಟ್ಟು ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೋದರು. |
25
|
ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು. |
26
|
ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ? |
27
|
ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು. |
2-Kings 5:1 Kannada Language Bible Words basic statistical display
COMING SOON ...