1
|
ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು. |
2
|
ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು. |
3
|
ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು. |
4
|
ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು. |
5
|
ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು. |
6
|
ಅಪೊಸ್ತಲರೂ ಹಿರಿಯರೂ ಈ ವಿಷಯವಾಗಿ ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ |
7
|
ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ. |
8
|
ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು. |
9
|
ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು. |
10
|
ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ? |
11
|
ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು. |
12
|
ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು. |
13
|
ಅವರು ಮೌನವಾಗಿದ್ದಾಗ ಯಾಕೋ ಬನು ಹೇಳಿದ್ದೇನಂದರೆ--ಜನರೇ, ಸಹೋದರರೇ, ನಾನು ಹೇಳುವದನ್ನು ಕೇಳಿರಿ; |
14
|
ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ. |
15
|
ಇದಕ್ಕೆ ಪ್ರವಾದಿ ಗಳ ಮಾತುಗಳು ಒಪ್ಪುತ್ತವೆ, ಹೇಗಂದರೆ-- |
16
|
ಇದಾದ ಮೇಲೆ ನಾನು ಹಿಂತಿರುಗಿ ಬಂದು ಬಿದ್ದು ಹೋಗಿರುವ ದಾವೀದನ ಗುಡಾರವನ್ನು ತಿರಿಗಿ ಕಟ್ಟುವೆನು. ಅದರಲ್ಲಿ ಹಾಳಾದದ್ದನ್ನು ನಾನು ತಿರಿಗಿ ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು. |
17
|
ಅವೆಲ್ಲವುಗಳನ್ನು ಮಾಡುವ ಕರ್ತನು--ನನ್ನ ಹೆಸರಿನಿಂದ ಕರೆಯಲ್ಪಟ್ಟ ಮನುಷ್ಯರಲ್ಲಿ ಉಳಿದವರೆಲ್ಲರೂ ಅನ್ಯಜನರೆಲ್ಲರೂ ಕರ್ತನನ್ನು ಹುಡುಕುವವರಾಗಿರಬೇಕು ಎಂದು ಹೇಳುತ್ತಾನೆ. |
18
|
ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ. |
19
|
ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ. |
20
|
ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು. |
21
|
ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು. |
22
|
ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ |
23
|
ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ; |
24
|
ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ |
25
|
ನಾವು ಒಮ್ಮನ ಸ್ಸಾಗಿ ಸೇರಿಬಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾಗಿರುವ |
26
|
ನಮ್ಮ ಪ್ರಿಯ ಬಾರ್ನಬ ಸೌಲರ ಜೊತೆಯಲ್ಲಿ ನಾವು ಆರಿಸಿಕೊಂಡವರನ್ನು ನಿಮ್ಮ ಬಳಿಗೆ ಕಳುಹಿ ಸುವದು ಯುಕ್ತವೆಂದು ನಮಗೆ ತೋಚಿತು. |
27
|
ಆದಕಾರಣ ಈ ಮಾತುಗಳನ್ನು ಬಾಯಿಂದ ಸಹ ತಿಳಿಸುವಂತೆ ನಾವು ಯೂದನನ್ನೂ ಸೀಲನನ್ನೂ ಕಳುಹಿಸಿಕೊಟ್ಟಿದ್ದೇವೆ. |
28
|
ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು. |
29
|
ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ. |
30
|
ಹೀಗೆ ಅವರು ಕಳುಹಿಸಲ್ಪಟ್ಟು ಅಂತಿಯೋಕ್ಯಕ್ಕೆ ಬಂದರು; ಅವರು ಸಮೂಹವನ್ನು ಕೂಡಿಸಿ ಆ ಪತ್ರಿಕೆಯನ್ನು ಒಪ್ಪಿಸಿದರು. |
31
|
ಅವರು ಅದನ್ನು ಓದಿ ಆದರಣೆ ಹೊಂದಿ ಸಂತೋಷಪಟ್ಟರು. |
32
|
ಯೂದನೂ ಸೀಲನೂ ತಾವೇ ಪ್ರವಾದಿಗಳಾಗಿದ್ದದರಿಂದ ಸಹೋ ದರರನ್ನು ಅನೇಕ ಮಾತುಗಳಿಂದ ಪ್ರಭೋದಿಸಿ ದೃಢ ಪಡಿಸಿದರು. |
33
|
ಅಲ್ಲಿ ಕೆಲವು ಕಾಲ ಕಳೆದ ನಂತರ ಸಮಾಧಾನದಿಂದ ಅಪೊಸ್ತಲರ ಬಳಿಗೆ ತಿರಿಗಿ ಹೋಗುವದಕ್ಕೆ ಸಹೋದರರಿಂದ ಅಪ್ಪಣೆ ತೆಗೆದು ಕೊಂಡರು. |
34
|
ಹೀಗಿದ್ದರೂ ಸೀಲನಿಗೆ ಅಲ್ಲಿಯೇ ಇನ್ನೂ ಇರುವದು ಉಚಿತವೆಂದು ತೋಚಿತು. |
35
|
ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು. |
36
|
ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು. |
37
|
ಬಾರ್ನಬನು ಮಾರ್ಕನೆನಿಸಿ ಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದು ಕೊಂಡು ಹೋಗಬೇಕೆಂದು ನಿರ್ಧರಿಸಿದನು. |
38
|
ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು. |
39
|
ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿ ದರು. ಹೀಗೆ ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರ ಮಾರ್ಗವಾಗಿ ಕುಪ್ರಕ್ಕೆ ಹೋದನು. |
40
|
ಆದರೆ ಪೌಲನು ಸಹೋದರರಿಂದ ದೇವರ ಕೃಪೆಗೆ ಒಪ್ಪಿಸಲ್ಪಟ್ಟು ಸೀಲನನ್ನು ಆರಿಸಿಕೊಂಡು ಹೊರಟನು. |
41
|
ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು. |
Acts 15:40 Kannada Language Bible Words basic statistical display
COMING SOON ...