1
|
ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ |
2
|
ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು. |
3
|
ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಪರಲೋಕದೊಳ ಗಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು. |
4
|
ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು. |
5
|
ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು. |
6
|
ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು. |
7
|
ಅವನ ಜೊತೆಯಲ್ಲಿ ಪ್ರಯಾಣ ಮಾಡುತ್ತಿದ್ದವರು ಧ್ವನಿಯನ್ನು ಮಾತ್ರ ಕೇಳಿ ಯಾರನ್ನೂ ಕಾಣದೆ ಮೂಕರಂತೆ ನಿಂತರು. |
8
|
ಸೌಲನು ನೆಲದಿಂದ ಎದ್ದು ಕಣ್ಣು ತೆರೆದಾಗ ಯಾರನ್ನೂ ಕಾಣಲಿಲ್ಲ. ಆಗ ಅವರು ಅವನನ್ನು ಕೈಹಿಡಿದು ದಮಸ್ಕದೊಳಕ್ಕೆ ಕರೆದು ಕೊಂಡು ಹೋದರು; |
9
|
ಅವನು ಮೂರು ದಿವಸ ಕಣ್ಣು ಕಾಣದೆ ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. |
10
|
ದಮಸ್ಕದಲ್ಲಿ ಅನನೀಯನೆಂಬ ಒಬ್ಬ ಶಿಷ್ಯನಿದ್ದನು; ಕರ್ತನು ದರ್ಶನದಲ್ಲಿ--ಅನನೀಯನೇ ಎಂದು ಅವನನ್ನು ಕರೆಯಲು ಅವನು--ಕರ್ತನೇ, ಇಗೋ, ಇದ್ದೇನೆ ಅಂದನು. |
11
|
ಕರ್ತನು ಅವನಿಗೆ--ನೀನೆದ್ದು ನೆಟ್ಟನೇಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ವಿಚಾರಿಸು; ಇಗೋ, ಅವನು ಪ್ರಾರ್ಥನೆ ಮಾಡುತ್ತಾನೆ. |
12
|
ಅನನೀಯನೆಂಬ ಒಬ್ಬ ಮನುಷ್ಯನು ಒಳಗೆ ಬಂದು ತನಗೆ ತಿರಿಗಿ ಕಣ್ಣು ಕಾಣುವಂತೆ ತನ್ನ ಮೇಲೆ ಕೈಯಿಡುವದನ್ನು ದರ್ಶನದಲ್ಲಿ ನೋಡಿದ್ದಾನೆ ಎಂದು ಹೇಳಿದನು. |
13
|
ಅದಕ್ಕೆ ಅನನೀಯನು--ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನ ಪರಿಶುದ್ಧರಿಗೆ ಎಷ್ಟೋ ಕೇಡನ್ನುಂಟು ಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ನಾನು ಕೇಳಿದ್ದೇನೆ; |
14
|
ಇಲ್ಲಿಯೂ ನಿನ್ನ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಪ್ರಧಾನಯಾಜಕರಿಂದ ಹೊಂದಿದ್ದಾನೆ ಅಂದನು. |
15
|
ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ. |
16
|
ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು. |
17
|
ಆಗ ಅನನೀಯನು ಹೊರಟು ಆ ಮನೆಯೊಳಗೆ ಹೋಗಿ ಅವನ ಮೇಲೆ ತನ್ನ ಕೈಗಳನ್ನಿಟ್ಟು--ಸಹೋದರನಾದ ಸೌಲನೇ, ನೀನು ಬಂದ ದಾರಿಯಲ್ಲಿ ನಿನಗೆ ಕಾಣಿಸಿಕೊಂಡ ಕರ್ತನಾದ ಯೇಸು ನಿನಗೆ ಕಣ್ಣುಕಾಣುವಂತೆಯೂ ನೀನು ಪವಿತ್ರಾತ್ಮಭರಿತನಾಗು ವಂತೆಯೂ ನನ್ನನ್ನು ಕಳುಹಿಸಿದ್ದಾನೆ ಎಂದು ಹೇಳಿದನು. |
18
|
ಆಗ ಅವನ ಕಣ್ಣುಗಳಿಂದ ಪರೆಗಳಂತಿದ್ದವುಗಳು ಬಿದ್ದ ಕೂಡಲೆ ಅವನು ದೃಷ್ಟಿ ಹೊಂದಿದವನಾಗಿ ಎದ್ದು ಬಾಪ್ತಿಸ್ಮ ಮಾಡಿಸಿಕೊಂಡನು. |
19
|
ತರುವಾಯ ಊಟ ಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿವಸ ಇದ್ದನು. |
20
|
ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು. |
21
|
ಆದರೆ ಕೇಳಿದವರೆಲ್ಲರೂ ಬೆರಗಾಗಿ--ಈ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ಹಾಳು ಮಾಡಿದವನು ಇವನೇ ಅಲ್ಲವೇ, ಅಂಥವರನ್ನು ಬಂಧಿಸಿ ಪ್ರಧಾನಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂಬ ಉದ್ದೇಶದಿಂದ ಇಲ್ಲಿಗೆ ಬಂದನಲ್ಲವೇ ಎಂದು ಮಾತನಾಡಿಕೊಂಡರು. |
22
|
ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಈತನೇ ಕ್ರಿಸ್ತ ನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ದಿಗ್ಭ್ರಮೆಗೊಳಿಸಿದನು. |
23
|
ಅನೇಕ ದಿವಸಗಳು ಹೋದಮೇಲೆ ಯೆಹೂ ದ್ಯರು ಅವನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿ ಕೊಂಡರು. |
24
|
ಆದರೆ ಅವರು ಹೊಂಚುಹಾಕಿ ಕೊಂಡಿರುವದು ಸೌಲನಿಗೆ ತಿಳಿಯಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ದ್ವಾರಗಳನ್ನು ಕಾಯುತ್ತಿದ್ದರು; |
25
|
ಆಗ ಶಿಷ್ಯರು ರಾತ್ರಿ ಕಾಲದಲ್ಲಿ ಅವನನ್ನು ಕರೆದುಕೊಂಡು ಹೋಗಿ ಒಂದು ಹೆಡಿಗೆ ಯಲ್ಲಿ ಕೂಡ್ರಿಸಿ ಗೋಡೆಯಿಂದ ಇಳಿಸಿದರು. |
26
|
ಸೌಲನು ಯೆರೂಸಲೇಮಿಗೆ ಬಂದು ಶಿಷ್ಯ ರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಮಾಡಿದಾಗ ಎಲ್ಲರೂ ಅವನಿಗೆ ಭಯಪಟ್ಟು ಅವನನ್ನು ಶಿಷ್ಯನೆಂದು ನಂಬದೆ ಹೋದರು. |
27
|
ಆದರೆ ಬಾರ್ನಬನು ಅವನನ್ನು ಅಪೊಸ್ತಲರ ಬಳಿಗೆ ಕರೆದುಕೊಂಡು ಹೋಗಿ ಅವನು ಹೇಗೆ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಆತನು ಅವನ ಸಂಗಡ ಮಾತನಾಡಿ ದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದ್ದನ್ನೂ ಅವರಿಗೆ ವಿವರವಾಗಿ ತಿಳಿಯಪಡಿಸಿದನು. |
28
|
ಆಮೇಲೆ ಅವನು ಯೆರೂಸ ಲೇಮಿನಲ್ಲಿ ಅವರ ಕೂಡ ಬರುತ್ತಾ ಹೋಗುತ್ತಾ ಇದ್ದನು. |
29
|
ಕರ್ತನಾದ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿ ಗ್ರೀಕರೊಂದಿಗೆ ತರ್ಕಿಸುತ್ತಿ ದ್ದನು. ಆದರೆ ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನ ಮಾಡಿದರು. |
30
|
ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು. |
31
|
ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು. |
32
|
ಇದಾದಮೇಲೆ ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸವಾಗಿದ್ದ ಪರಿಶುದ್ಧರ ಬಳಿಗೂ ಬಂದನು. |
33
|
ಅಲ್ಲಿ ಪಾರ್ಶ್ವ ವಾಯು ರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು. |
34
|
ಪೇತ್ರನು ಅವನಿಗೆ--ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡು ತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ಹಾಸಿಕೋ ಎಂದು ಹೇಳಿದನು; ಕೂಡಲೆ ಅವನು ಎದ್ದನು. |
35
|
ಲುದ್ದ ದಲ್ಲಿಯೂ ಸಾರೋನದಲ್ಲಿಯೂ ವಾಸವಾಗಿದ್ದವ ರೆಲ್ಲರೂ ಅವನನ್ನು ನೋಡಿ ಕರ್ತನ ಕಡೆಗೆ ತಿರುಗಿ ಕೊಂಡರು. |
36
|
ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು. |
37
|
ಆ ಕಾಲದಲ್ಲಿ ಆಕೆಯು ರೋಗದಲ್ಲಿ ಬಿದ್ದು ಸತ್ತಳು. ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು. |
38
|
ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ ತಡಮಾಡದೆ ತಮ್ಮ ಬಳಿಗೆ ಬರಬೇಕೆಂದು ಬೇಡಿಕೊಂಡರು. |
39
|
ಪೇತ್ರನು ಎದು ಅವರ ಜೊತೆಯಲ್ಲಿ ಹೋದನು. ಅವನು ಬಂದಾಗ ಅವರು ಅವನನ್ನು ಮೇಲಂತಸ್ತಿನ ಕೊಠಡಿಗೆ ಕರೆದು ಕೊಂಡುಹೋದರು. ಅಲ್ಲಿ ವಿಧವೆಯರೆಲ್ಲರೂ ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಮೇಲಂಗಿಗಳನ್ನೂ ಒಳಂಗಿಗಳನ್ನೂ ತೋರಿಸಿ |
40
|
ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡು--ತಬಿಥಾ, ಏಳು ಅಂದನು; ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು. |
41
|
ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು. |
42
|
ಈ ಸಂಗತಿಯೂ ಯೊಪ್ಪದಲ್ಲೆಲ್ಲಾ ತಿಳಿದುಬಂದು ಅನೇಕರು ಕರ್ತನ ಮೇಲೆ ನಂಬಿಕೆ ಇಟ್ಟರು. |
43
|
ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು. |
Acts 9:15 Kannada Language Bible Words basic statistical display
COMING SOON ...