1
|
ಓ ಇಸ್ರಾಯೇಲಿನ ಮನೆತನದವರೇ, ನಾನು ನಿಮಗೆ ವಿರೋಧವಾಗಿ ಗೋಳಾ ಟದ ವಿಷಯವನ್ನೆತ್ತುವ ಈ ವಾಕ್ಯವನ್ನು ಕೇಳಿರಿ. |
2
|
ಇಸ್ರಾಯೇಲಿನ ಕನ್ಯೆಯು ಬಿದ್ದಿದ್ದಾಳೆ, ಇನ್ನು ಮೇಲೆ ಎದ್ದೇಳುವದೇ ಇಲ್ಲ. ಅವಳು ತನ್ನ ಭೂಮಿಯ ಮೇಲೆ ತೊರೆದು ಬಿಡಲ್ಪಟ್ಟವಳಾಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ. |
3
|
ಕರ್ತನಾದ ದೇವರು ಹೀಗೆ ಹೇಳುತ್ತಾನೆ; ಪಟ್ಟಣದಿಂದ ಸಾವಿರ ಮಂದಿ ಯಾಗಿ ಹೊರಟವರು ನೂರು ಮಂದಿಯಾಗಿ ಉಳಿದು ಇಸ್ರಾಯೇಲಿನ ಮನೆ ಸೇರಲು ನೂರು ಮಂದಿಯಾಗಿ ಹೊರಟವರು ಹತ್ತು ಮಂದಿಯಾಗಿ ಉಳಿಯುವರು. |
4
|
ಕರ್ತನು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾನೆ--ನೀವು ನನ್ನನ್ನು ಹುಡುಕಿ ಜೀವಿಸಿರಿ. |
5
|
ಆದರೆ ಬೇತೇಲನ್ನು ಆಶ್ರಯಿಸಬೇಡಿರಿ, ಗಿಲ್ಗಾಲಿಗೆ ಹೋಗಬೇಡಿರಿ, ಬೇರ್ಷೆಬಕ್ಕೆ ಹಾದು ಹೋಗ ಬೇಡಿರಿ, ಯಾಕಂದರೆ ಗಿಲ್ಗಾಲು ಸೆರೆಗೆ ನಿಶ್ಚಯವಾಗಿ ಹೋಗುವದು. ಬೇತೇಲು ಏನಿಲ್ಲದೆ ಹೋಗುವದು. |
6
|
ನೀವು ಕರ್ತನನ್ನು ಹುಡುಕಿ ಬದುಕಿರಿ, ಇಲ್ಲದಿದ್ದರೆ ಆತನು ಬೆಂಕಿಯಂತೆ ಯೋಸೇಫನ ಮನೆತನದಲ್ಲಿ ಪ್ರವೇಶಿಸುವನು; ಅದು ನುಂಗಿಬಿಡುವದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವದಿಲ್ಲ. |
7
|
ನ್ಯಾಯವನ್ನು ಮಾಚಿಪತ್ರೆಗೆ ತಿರಿಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ, |
8
|
ಏಳು ನಕ್ಷತ್ರಗಳನ್ನೂ ಮೃಗಶಿರವನ್ನೂ ಉಂಟು ಮಾಡಿ ಮರಣದ ನೆರಳನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲು ಮಾಡಿ ಸಮುದ್ರದ ನೀರನ್ನು ಬರಮಾಡಿ ಅವುಗಳನ್ನು ಭೂಮಿಯ ಮೇಲೆ ಸುರಿಸುವ ಕರ್ತನೆಂಬ ಹೆಸರುಳ್ಳಾತನನ್ನೇ ಹುಡು ಕಿರಿ. |
9
|
ಕೋಟೆಯ ಮೇಲೆ ಸೂರೆಮಾಡುವ ಹಾಗೆ ಸೂರೆಯನ್ನು ಬಲಿಷ್ಠರ ಮೇಲೆ ತಟ್ಟನೆ ತಂದೊಡ್ಡು ವಾತನು ಆತನೇ. |
10
|
ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ. |
11
|
ಆದಕಾರಣ ನೀವು ಬಡವನನ್ನು ತುಳಿದವರಾಗಿ ಗೋಧಿಯ ಹೊರೆಗಳನ್ನು ಅವನಿಂದ ಕಸಿದುಕೊಂಡು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಲ್ಲಾ; ನೀವು ಅವುಗಳಲ್ಲಿ ವಾಸಮಾಡದೆ ಇರುವಿರಿ; ರಮ್ಯವಾದ ದ್ರಾಕ್ಷೆಯತೋಟ ಗಳನ್ನು ನೆಟ್ಟಿರಲ್ಲಾ; ಅವುಗಳ ದ್ರಾಕ್ಷಾರಸವನ್ನು ಕುಡಿ ಯಲಾರಿರಿ. |
12
|
ನಿಮ್ಮ ಅನೇಕ ಅಪರಾಧಗಳನ್ನೂ ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು; ಅವರು ನೀತಿವಂತರನ್ನು ಬಾಧೆಪಡಿಸಿ ಲಂಚವನ್ನು ತೆಗೆದು ಕೊಂಡರು; ಬಾಗಲ ಬಳಿಯಲ್ಲಿರುವ ಬಡವರ ನ್ಯಾಯ ವನ್ನು ತೀರಿಸದೆ ಅವರು ಕಳುಹಿಸಿಬಿಟ್ಟರು. |
13
|
ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ. |
14
|
ನೀವು ಬದುಕುವ ಹಾಗೆಯೂ ನೀವು ಹೇಳುವ ಪ್ರಕಾರ ಸೈನ್ಯಾಧಿಪತಿಯಾದ ಕರ್ತನು, ನಿಮ್ಮ ಸಂಗಡ ಇರುವ ಹಾಗೆಯೂ ಕೆಟ್ಟದ್ದನ್ನು ಬಿಟ್ಟು ಒಳ್ಳೆಯ ದನ್ನು ಹುಡುಕಿರಿ. |
15
|
ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು. |
16
|
ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು. |
17
|
ಎಲ್ಲಾ ದ್ರಾಕ್ಷೇತೋಟಗಳಲ್ಲೂ ಗೋಳಾಟವಿರು ವದು; ಯಾಕಂದರೆ ನಾನು ನಿನ್ನ ಮಧ್ಯೆ ಹಾದುಹೋಗು ವೆನೆಂದು ಕರ್ತನು ಹೇಳುತ್ತಾನೆ. |
18
|
ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ. |
19
|
ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು. |
20
|
ಹೀಗೆ ಕರ್ತನ ದಿನವು ಬೆಳಕಲ್ಲ ಕತ್ತಲಲ್ಲವೇ? ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲಲ್ಲವೋ? ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ. |
21
|
ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ. |
22
|
ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ. |
23
|
ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವದಿಲ್ಲ. |
24
|
ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ. |
25
|
ಓ ಇಸ್ರಾಯೇಲಿನ ಮನೆತನದವರೇ, ನೀವು ನನಗೆ ಅರಣ್ಯ ದಲ್ಲಿ ನಲವತ್ತು ವರುಷಗಳು ಬಲಿಗಳನ್ನೂ ಕಾಣಿಕೆ ಗಳನ್ನೂ ಅರ್ಪಿಸಿದಿರೋ? |
26
|
ಆದರೆ ನೀವು ನಿಮ ಗೋಸ್ಕರ ಮಾಡಿಕೊಂಡ ಮೋಲೇಕನ ಗುಡಾರವನ್ನು, ನಿಮ್ಮ ಕಿಯೂನ್ ಎಂಬ ವಿಗ್ರಹವನ್ನು, ನಿಮ್ಮ ಮೋಲೇ ಕನ ದೇವತೆಯ ನಕ್ಷತ್ರವನ್ನು ಹೊತ್ತುಕೊಂಡು ಹೋಗ ಬೇಕಾಗುವದು. |
27
|
ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ. |
Amos 5:15 Kannada Language Bible Words basic statistical display
COMING SOON ...