1
|
ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು. |
2
|
ಭೂಮಿಯ ಧೂಳಿನೊಳಗೆ ನಿದ್ರೆಮಾಡುವವ ರಲ್ಲಿ ಅನೇಕರು ಎಚ್ಚತ್ತು ಕೆಲವರು ನಿತ್ಯಜೀವವನ್ನೂ ಕೆಲವರು ನಿತ್ಯ ನಾಚಿಕೆಗಳನ್ನೂ ಅನುಭವಿಸುವರು. |
3
|
ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು; |
4
|
ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು. |
5
|
ಆಗ ದಾನಿಯೇಲನೆಂಬ ನಾನು ನೋಡಿದೆನು; ಇಗೋ, ಬೇರೆ ಇಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ ಮತ್ತೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು. |
6
|
ಅವರು ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು ಹೇಳಿದ್ದೇನಂದರೆ--ಈ ಆಶ್ಚರ್ಯದ ಅಂತ್ಯವು ಎಷ್ಟರ ವರೆಗೆ ಇರುವದು ಎಂದು ಅಂದಾಗ |
7
|
ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು. |
8
|
ಆದರೆ ಗ್ರಹಿಸಲಿಲ್ಲ; ಆಗ ನಾನು--ಓ ನನ್ನ ಕರ್ತನೇ, ಈ ಸಂಗತಿಗಳ ಅಂತ್ಯವೇನು ಎಂದು ಕೇಳಿದೆನು. |
9
|
ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ. |
10
|
ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು. |
11
|
ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು. |
12
|
ಸಾವಿರದ ಮುನ್ನೂರ ಮೂವತ್ತೈದು ದಿನಗಳು ಬರುವ ವರೆಗೆ ಕಾದಿರುವವನೇ ಭಾಗ್ಯವಂತನು. |
13
|
ಆದರೆ ನೀನು ಅಂತ್ಯದ ವರೆಗೂ ಹೋಗು; ಯಾಕಂದರೆ ನೀನು ವಿಶ್ರಮಿಸಿಕೊಳ್ಳುವಿ ಮತ್ತು ದಿನಗಳ ಅಂತ್ಯದಲ್ಲಿ ನಿನ್ನ ಭಾಗದಲ್ಲಿ ನಿಲ್ಲುವಿ (ಎಂದು ಹೇಳಿದನು.) |
Daniel 12:13 Kannada Language Bible Words basic statistical display
COMING SOON ...