1
|
ಐಗುಪ್ತದಲ್ಲಿ ಧಾನ್ಯ ಉಂಟೆಂದುಯಾಕೋಬನು ತಿಳಿದಾಗ ಅವನು ತನ್ನ ಕುಮಾರರಿಗೆನೀವು ಒಬ್ಬರನ್ನೊಬ್ಬರು ನೋಡಿಕೊಳ್ಳು ವದೇನು ಅಂದನು. |
2
|
ಅವನು--ಇಗೋ, ಐಗುಪ್ತದಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡು ಕೊಳ್ಳಿರಿ ಅಂದನು. |
3
|
ಆಗ ಯೋಸೇಫನ ಹತ್ತು ಮಂದಿ ಸಹೋದರರು ಐಗುಪ್ತದಲ್ಲಿ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಇಳಿದು ಹೋದರು. |
4
|
ಆದರೆ ಯಾಕೋಬನು ಯೋಸೆಫನ ತಮ್ಮನಾದ ಬೆನ್ಯಾವಿಾನ ನಿಗೆ ಕೇಡುಬಂದೀತು ಎಂದು ಹೇಳಿ ಅಣ್ಣಂದಿರ ಸಂಗಡ ಅವನನ್ನು ಕಳುಹಿಸಲಿಲ್ಲ. |
5
|
ಕಾನಾನ್ ದೇಶದಲ್ಲಿ ಬರವಿದ್ದದರಿಂದ ಧಾನ್ಯ ವನ್ನು ಕೊಂಡುಕೊಳ್ಳುವದಕ್ಕಾಗಿ ಬರುವವರೊಂದಿಗೆ ಇಸ್ರಾಯೇಲನ ಕುಮಾರರು ಬಂದರು. |
6
|
ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾ ಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರು ವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು. |
7
|
ಯೋಸೇ ಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದಾಗ್ಯೂ ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ ಅವರಿಗೆ--ಎಲ್ಲಿಂದ ಬಂದಿರಿ ಅಂದನು. ಅದಕ್ಕೆ ಅವರು--ಆಹಾರ ಕೊಂಡುಕೊಳ್ಳುವದಕ್ಕೆ ಕಾನಾನ್ ದೇಶದಿಂದ ಬಂದೆವು ಅಂದರು. |
8
|
ಯೋಸೇಫನು ತನ್ನ ಸಹೋದರರನ್ನು ಗುರುತಿಸಿದಾಗ್ಯೂ ಅವರು ಅವನನ್ನು ಗುರುತಿಸಲಿಲ್ಲ. |
9
|
ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವ ರಿಗೆ--ನೀವು ಗೂಢಚಾರರು; ದೇಶದ ಒಳಗುಟ್ಟನ್ನು ನೋಡುವದಕ್ಕಾಗಿ ಬಂದಿದ್ದೀರಿ ಅಂದನು. |
10
|
ಅದ ಕ್ಕವರು--ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಬಂದಿದ್ದೇವೆ. |
11
|
ನಾವೆಲ್ಲರೂ ಒಬ್ಬ ಮನುಷ್ಯನ ಕುಮಾರರಾಗಿದ್ದು ಸತ್ಯವಂತರಾಗಿದ್ದೇವೆ. ಆದದರಿಂದ ನಿನ್ನ ದಾಸರು ಗೂಢಚಾರರಲ್ಲ ಅಂದರು. |
12
|
ಆದರೆ ಅವನು ಅವರಿಗೆ--ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳುಕೊಳ್ಳುವದಕ್ಕೋಸ್ಕರವೇ ಬಂದಿದ್ದೀರಿ ಅಂದನು. |
13
|
ಅದಕ್ಕವರು--ನಿನ್ನ ದಾಸರಾದ ನಾವು ಹನ್ನೆರಡು ಮಂದಿ ಸಹೋದರರು; ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಇಗೋ, ಈಗ ಚಿಕ್ಕವನು ನಮ್ಮ ತಂದೆಯೊಂದಿಗೆ ಇದ್ದಾನೆ. ಮತ್ತೊಬ್ಬನು ಇಲ್ಲ ಎಂದು ಹೇಳಿದರು. |
14
|
ಆಗ ಯೋಸೇಫನು ಅವರಿಗೆ--ನೀವು ಗೂಢಚಾರರೆಂದು ನಾನು ನಿಮಗೆ ಹೇಳಿದ ಮಾತು ನಿಜವೇ. |
15
|
ನೀವು ಪರೀಕ್ಷಿಸಲ್ಪಡುವದು ಹೇಗಂದರೆ--ನಿಮ್ಮ ತಮ್ಮನನ್ನು ಇಲ್ಲಿಗೆ ತಾರದ ಹೊರತು ಫರೋಹನ ಜೀವದಾಣೆ ನೀವು ಇಲ್ಲಿಂದ ಹೊರಗೆ ಹೋಗಬಾರದು. |
16
|
ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ನಿಮ್ಮ ಸಹೋದರ ನನ್ನು ಕರಕೊಂಡು ಬರಲಿ. ಆದರೆ ನೀವು ಸೆರೆಮನೆ ಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ ಇಲ್ಲವೋ ಎಂದು ನಿಮ್ಮ ಮಾತುಗಳು ಪರೀಕ್ಷಿಸಲ್ಪಡು ವವು. ಇಲ್ಲದಿದ್ದರೆ ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು ಎಂದು ಹೇಳಿದನು. |
17
|
ಯೋಸೇಫನು ಎಲ್ಲರನ್ನು ಒಟ್ಟಿಗೆ ಮೂರು ದಿನಗಳು ಸೆರೆಯಲ್ಲಿಟ್ಟನು. |
18
|
ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ--ಇದನ್ನು ಮಾಡಿ ಬದುಕಿರಿ, ಯಾಕಂದರೆ ನಾನು ದೇವರಿಗೆ ಭಯಪಡುವವನಾ ಗಿದ್ದೇನೆ. |
19
|
ನೀವು ಸತ್ಯವಂತರಾಗಿದ್ದರೆ ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿಸಲ್ಪಡಲಿ. ಆದರೆ ನೀವು ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯವನ್ನು ತಕ್ಕೊಂಡು ಹೋಗಿರಿ. |
20
|
ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು, ನೀವು ಸಾಯದೆ ಇರುವಿರಿ ಅಂದನು. ಅವರು ಹಾಗೆಯೇ ಮಾಡಿದರು. |
21
|
ಆಗ ಅವರು--ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ ಅವನ ಪ್ರಾಣ ಸಂಕಟವನ್ನು ನೋಡಿಯೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು ಎಂದು ಅಂದುಕೊಂಡರು. |
22
|
ಆಗ ರೂಬೇನನು ಅವರಿಗೆ ಪ್ರತ್ಯುತ್ತರವಾಗಿ--ಆ ಹುಡುಗನಿಗೆ ಏನೂ ಕೇಡುಮಾಡಬೇಡಿರಿ ಎಂದು ನಾನು ನಿಮಗೆ ಹೇಳಿ ದಾಗ್ಯೂ ನೀವು ಕೇಳಲಿಲ್ಲ. ಆದದರಿಂದ ಈಗ ಇಗೋ, ಅವನ ರಕ್ತವು ನಮ್ಮ ಮೇಲೆ ಇದೆ ಅಂದನು. |
23
|
ಆದರೆ ಅವನು ಅವರು ಆಡಿದ್ದನ್ನು ತಿಳಿದುಕೊಳ್ಳುತ್ತಾನೆಂದು ಅವರಿಗೆ ಗೊತ್ತಾಗಲಿಲ್ಲ; ದ್ವಿಭಾಷೆಯಿಂದ ಅವರ ಸಂಗಡ ಮಾತನಾಡಿದನು. |
24
|
ಆಗ ಅವನು ಅವರ ಕಡೆಯಿಂದ ಹೊರಟುಹೋಗಿ ಅತ್ತು ಮತ್ತೆ ಅವರ ಬಳಿಗೆ ಬಂದು ಅವರ ಸಂಗಡ ಮಾತನಾಡಿ ಅವರಲ್ಲಿ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿಸಿದನು.. |
25
|
ತರುವಾಯ ಯೋಸೇಫನು ಧಾನ್ಯವನ್ನು ತುಂಬಿಸ ಬೇಕೆಂದೂ ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರಿಗಿ ಇಡಬೇಕೆಂದೂ ಹಾದಿಗೋಸ್ಕರ ಅವರಿಗೆ ಆಹಾರ ಸರಬರಾಜು ಮಾಡಬೇಕೆಂದೂ ಆಜ್ಞಾಪಿಸಿದನು. ಹೀಗೆಯೇ ಅವನು ಅವರಿಗೆ ಮಾಡಿ ದನು. |
26
|
ಆಗ ಅವರು ತಮ್ಮ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಅಲ್ಲಿಂದ ಹೋಗಿಬಿಟ್ಟರು. |
27
|
ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವದಕ್ಕಾಗಿ ವಸತಿ ಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ ಇಗೋ, ಚೀಲದ ಬಾಯಿಯಲ್ಲಿಟ್ಟಿದ ತನ್ನ ಹಣವನ್ನು ಕಂಡನು. |
28
|
ಅವನು ತನ್ನ ಸಹೋದರರಿಗೆ--ನನ್ನ ಹಣವು ಹಿಂದಕ್ಕೆ ಕೊಡಲ್ಪಟ್ಟಿದೆ. ಇಗೋ, ಅದು ನನ್ನ ಚೀಲದಲ್ಲಿದೆ ಅಂದಾಗ ಅವರಿಗೆ ಹೃದಯ ಕುಗ್ಗಿ ದಂತಾಗಿ ಹೆದರಿ ಒಬ್ಬರಿಗೊಬ್ಬರು--ದೇವರು ನಮಗೆ ಮಾಡಿದ್ದೇನು ಅಂದರು. |
29
|
ಅವರು ಕಾನಾನ್ ದೇಶಕ್ಕೆ ತಮ್ಮ ತಂದೆಯಾದ ಯಾಕೋಬನ ಬಳಿಗೆ ಬಂದು ತಮಗೆ ಸಂಭವಿಸಿದ್ದೆಲ್ಲ ವನ್ನು ಅವನಿಗೆ ತಿಳಿಸಿದರು. ಅದೇನಂದರೆ-- |
30
|
ಆ ದೇಶದ ಪ್ರಭುವಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ ಗೂಢಚಾರ ರನ್ನಾಗಿ ನಮ್ಮನ್ನು ಎಣಿಸಿದನು. |
31
|
ನಾವು ಅವ ನಿಗೆ--ನಾವು ಗೂಢಚಾರರಲ್ಲ, ಸತ್ಯವಂತರೇ. |
32
|
ನಾವು ಒಬ್ಬನೇ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಸಹೋದರರಾಗಿದ್ದೇವೆ; ಒಬ್ಬನು ಇಲ್ಲ; ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್ ದೇಶದಲ್ಲಿ ಇದ್ದಾನೆ ಅಂದೆವು. |
33
|
ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು--ನೀವು ಯಥಾರ್ಥರೆಂದು ನಾನು ಇದರ ಮೂಲಕ ತಿಳುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತಕ್ಕೊಂಡುಹೋಗಿರಿ. |
34
|
ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ, ಆಗ ನೀವು ಗೂಢಚಾರರಲ್ಲವೆಂದೂ ಯಥಾರ್ಥ ರೆಂದೂ ತಿಳುಕೊಂಡು ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು ಎಂದು ಹೇಳಿದನು ಅಂದರು. |
35
|
ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು. |
36
|
ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು. |
37
|
ರೂಬೇನನು ತನ್ನ ತಂದೆಗೆ--ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ನನ್ನ ಇಬ್ಬರು ಕುಮಾರರನ್ನು ಕೊಂದುಬಿಡು. ನೀನು ಅವನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರಿಗಿ ತರುವೆನು ಅಂದನು. |
38
|
ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು. |
Genesis 42:32 Kannada Language Bible Words basic statistical display
COMING SOON ...