1
|
ಹೀಗಿರಲಾಗಿ ಆತನ ವಿಶ್ರಾಂತಿಯಲ್ಲಿ ಸೇರುವೆವೆಂಬ ವಾಗ್ದಾನವು ಇನ್ನೂ ಇರು ವಲ್ಲಿ ನಿಮ್ಮೊಳಗೆ ಯಾವನಾದರೂ ಆದರಿಂದ ತಪ್ಪುವವನಾದಾನೋ ಎಂದು ನಾವು ಭಯಪಡೋಣ. |
2
|
ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ. |
3
|
ಲೋಕದ ಅಸ್ತಿ ವಾರದೊಡನೆ (ಆತನ) ಕೆಲಸಗಳು ಮುಗಿದಿದ್ದರೂ ಆತನು--ಅವರು ನನ್ನ ವಿಶ್ರಾಂತಿಯಲ್ಲಿ ಸೇರುವದೇ ಇಲ್ಲವೆಂದು ನಾನು ಕೋಪದಿಂದ ಪ್ರಮಾಣಮಾಡಿ ದೆನು ಎಂದು ಹೇಳಿದನು. ನಂಬಿರುವ ನಾವೇ ಆ ವಿಶ್ರಾಂತಿಯಲ್ಲಿ ಪ್ರವೇಶಿಸುತ್ತೇವೆ. |
4
|
ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು--ದೇವರು ತನ್ನ ಕಾರ್ಯಗಳನ್ನೆಲ್ಲಾ ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನೆಂತಲೂ |
5
|
ಈ ಸ್ಥಳದಲ್ಲಿ--ಇವರು ನನ್ನ ವಿಶ್ರಾಂತಿಯಲ್ಲಿ ಸೇರುವದಿಲ್ಲ ಎಂತಲೂ ಆತನು ಹೇಳಿದ್ದಾನೆ. |
6
|
ಆದದರಿಂದ ಕೆಲವರು ಅದರಲ್ಲಿ ಪ್ರವೇಶಿ ಸಲೇಬೇಕೆಂಬದು ಇನ್ನೂ ಇರುವದರಿಂದ ಯಾರಿಗೆ ಮೊದಲು ಅದು ಸಾರಲ್ಪಟ್ಟಿತೋ ಅವರು ಅಪ ನಂಬಿಕೆಯ ನಿಮಿತ್ತ ಒಳಗೆ ಪ್ರವೇಶಿಸಲಿಲ್ಲ. |
7
|
ತಿರಿಗಿ ಬಹುಕಾಲ ಹೋದನಂತರ ಆತನು ದಾವೀದನ ಬಾಯಿಂದ ಮಾತನಾಡಿ--ಈ ಹೊತ್ತೇ ಎಂದು ಒಂದಾ ನೊಂದು ದಿವಸವನ್ನು ಗೊತ್ತುಮಾಡುತ್ತಾನೆ; ಹೇಗೆಂದರೆ--ನೀವು ಈ ಹೊತ್ತು ಆತನ ಧ್ವನಿಗೆ ಕಿವಿಗೊಟ್ಟರೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ ಎಂದು ಹೇಳುತ್ತಾನಷ್ಟೆ. |
8
|
ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ ತರುವಾಯ ಮತ್ತೊಂದು ದಿವಸವನ್ನು ಕುರಿತು ಹೇಳೋಣವಾಗುತ್ತಿರಲಿಲ್ಲ. |
9
|
ಆದದರಿಂದ ದೇವಜನರಿಗೆ ವಿಶ್ರಾಂತಿಯು ಇನ್ನೂ ಉಂಟು. |
10
|
ಹೇಗಂದರೆ ದೇವರು ತನ್ನ ಕೆಲಸಗಳನ್ನು ಮುಗಿಸಿ ಹೇಗೆ ವಿಶ್ರಮಿಸಿಕೊಂಡನೊ ಹಾಗೆಯೇ ಆತನ ವಿಶ್ರಾಂತಿಯಲ್ಲಿ ಸೇರಿರುವವನು ಸಹ ತನ್ನ ಕೆಲಸಗಳನು ಮುಗಿಸಿ ವಿಶ್ರಮಿಸಿಕೊಂಡಿದ್ದಾನೆ. |
11
|
ಆದದರಿಂದ ನಾವು ಅವರ ಅಪನಂಬಿಕೆಯನ್ನು ಅನುಸರಿಸುವವ ರಾಗದಂತೆ ಆ ವಿಶ್ರಾಂತಿಯಲ್ಲಿ ಸೇರುವದಕ್ಕೆ ಪ್ರಯಾಸ ಪಡೋಣ. |
12
|
ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ. |
13
|
ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ. |
14
|
ಆಕಾಶಗಳನ್ನು ದಾಟಿಹೋದ ದೇವಕುಮಾರ ನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಅರಿಕೆಯನ್ನು ಬಿಗಿಯಾಗಿ ಹಿಡಿಯೋಣ. |
15
|
ಯಾಕಂದರೆ ನಮಗಿ ರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿ ಯಾದರೂ ಪಾಪರಹಿತನಾಗಿದ್ದನು. |
16
|
ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ. |
Hebrews 4:1 Kannada Language Bible Words basic statistical display
COMING SOON ...