1
|
ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು. |
2
|
ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು. |
3
|
ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು. |
4
|
ಇದ ಲ್ಲದೆ ಐಗುಪ್ತವನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು; ಭಯಂಕರನಾದ ರಾಜನು ಅವರ ನ್ನಾಳುವನು ಎಂದು ಸೈನ್ಯಗಳ ಕರ್ತನಾದ ಕರ್ತನು ಹೇಳುತ್ತಾನೆ. |
5
|
ಇದಲ್ಲದೆ ಸಮುದ್ರದ ಕಡೆಯಿಂದ ನೀರು ಬತ್ತಿ ಹೋಗುವದು; ನದಿಗಳು ಇಂಗಿ ಒಣಗುವವು. |
6
|
ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು. |
7
|
ನದಿಯ ಹತ್ತಿರ, ನದಿತೀರದಲ್ಲಿಯೇ ಇರುವ ಬಯಲುಗಳು, ನದಿಯ ಬಳಿಯಲ್ಲಿ ಬಿತ್ತಿದ ಹೊಲಗಳೆಲ್ಲವೂ ಒಣಗಿ ಬಡಿಯಲ್ಪಟ್ಟು ಇಲ್ಲದೆ ಹೋಗುವವು. |
8
|
ವಿಾನು ಗಾರರು ಕೂಡಾ ದುಃಖಿಸುವರು ಮತ್ತು ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು, ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿಹೋಗುವರು. |
9
|
ನಯವಾದ ನಾರಿನ ಕೆಲಸದವರು, ಬಟ್ಟೆ ನೇಯುವವರು ನಾಚಿಕೊ ಳ್ಳುವರು. |
10
|
ಅವರ ಉದ್ದೇಶಗಳು ಮುರಿದು ಹೋಗು ವವು. ತೂಬಿನ ನೀರುಗಳನ್ನು ಕೊಳದ ನೀರುಗಳನ್ನು ವಿಾನಿಗೋಸ್ಕರ ಮಾಡಿದ್ದ ಉದ್ದೇಶಗಳೆಲ್ಲ ಮುರಿದು ಹೋಗುವವು. |
11
|
ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ? |
12
|
ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ. |
13
|
ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ. |
14
|
ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ. |
15
|
ಇಲ್ಲವೆ ಐಗುಪ್ತದಲ್ಲಿ ತಲೆಯಾಗಲಿ ಬಾಲವಾಗಲಿ ಕೊಂಬೆಯಾಗಲಿ ಒಂದು ಕಡ್ಡಿಯಾಗಲಿ ಸಾಧಿಸಲು ಮಾಡತಕ್ಕ ಕೆಲಸವು ಒಂದಾದರೂ ಐಗುಪ್ತದ ಲ್ಲಿರುವದಿಲ್ಲ. |
16
|
ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು. |
17
|
ಐಗುಪ್ತವು ಬೆಚ್ಚಿ ಬೀಳುವದಕ್ಕೆ ಯೆಹೂದ ದೇಶವು ಕಾರಣವಾಗುವದು; ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೈನ್ಯಗಳ ಕರ್ತನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಆಲೋಚನೆ ಯನ್ನು ತಿಳಿದು ಬೆರಗಾಗುವನು. |
18
|
ಆ ದಿವಸದಲ್ಲಿ ಕಾನಾನಿನ ಭಾಷೆಯನ್ನಾಡುವ ಐಗುಪ್ತದ ಐದು ಪಟ್ಟಣಗಳು ಸೈನ್ಯಗಳ ಕರ್ತನಿಗೆ ಆಣೆ ಇಟ್ಟುಕೊಳ್ಳುವವು. ಅವುಗಳಲ್ಲಿ ಒಂದರ ಹೆಸರು ನಾಶಪುರ. |
19
|
ಆ ದಿನದಲ್ಲಿ ಐಗುಪ್ತದೇಶದ ಮಧ್ಯೆ ಕರ್ತನಿಗೆ ಬಲಿಪೀಠವೂ ದೇಶದ ಎಲ್ಲೆಯಲ್ಲಿ ಕರ್ತನಿಗೆ ಒಂದು ಸ್ತಂಭವೂ ಇರುವವು. |
20
|
ಅದು ಸೈನ್ಯಗಳ ಕರ್ತನಿಗೆ ಐಗುಪ್ತ ದೇಶದಲ್ಲಿ ಗುರುತಾಗಿಯೂ ಸಾಕ್ಷಿ ಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಕರ್ತನನ್ನು ಕೂಗಿ ಕೊಳ್ಳಲು ಆತನು ಅವರಿಗೆ ಒಬ್ಬ ಶೂರನಾದ ರಕ್ಷಕ ನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು. |
21
|
ಕರ್ತನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಕರ್ತನನ್ನು ತಿಳಿದುಕೊಳ್ಳುವರು, ಬಲಿ ಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಕರ್ತನಿಗೆ ಪ್ರಮಾಣ ಮಾಡಿಕೊಂಡು ನೆರ ವೇರಿಸುವರು. |
22
|
ಇದಲ್ಲದೆ ಕರ್ತನು ಐಗುಪ್ತ್ಯರನ್ನು ಹೊಡೆಯುವನು, ಹೊಡೆದು ಸ್ವಸ್ಥಮಾಡುವನು. ಅವರು ಕರ್ತನ ಕಡೆಗೆ ತಿರುಗಿಕೊಳ್ಳುವರು, ಆತನು ಅವರನ್ನು ಆಲೈಸಿ ಸ್ವಸ್ಥಮಾಡುವನು. |
23
|
ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು. |
24
|
ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು. |
25
|
ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು. |
Isaiah 19:23 Kannada Language Bible Words basic statistical display
COMING SOON ...