1
|
ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟು ಹೇಳಿದ್ದೇನಂದರೆ-- |
2
|
ಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ? |
3
|
ನೀನು ನೀತಿವಂತನಾಗಿದ್ದರೆ ಸರ್ವಶಕ್ತನು ಮೆಚ್ಚಬೇಕೋ? ನೀನು ನಿನ್ನ ಮಾರ್ಗಗಳನ್ನು ಸಂಪೂರ್ಣ ಮಾಡಿಕೊಂಡರೆ ಆತನಿಗೆ ಲಾಭ ಉಂಟೋ? |
4
|
ನಿನ್ನ ಭಯದ ನಿಮಿತ್ತ ನಿನ್ನನ್ನು ಗದರಿಸಿ ನಿನ್ನ ಸಂಗಡ ನ್ಯಾಯಕ್ಕೆ ಬರುವನೋ? |
5
|
ನಿನ್ನ ಕೆಟ್ಟ ತನವು ಬಹಳವಲ್ಲವೋ? ನಿನ್ನ ಅಕ್ರಮಗಳಿಗೆ ಅಂತ್ಯ ವಿಲ್ಲವಷ್ಟೇ. |
6
|
ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ. |
7
|
ದಣಿದವನಿಗೆ ನೀರನ್ನು ಕುಡಿಯ ಕೊಡಲಿಲ್ಲ; ಹಸಿದವನಿಂದ ರೊಟ್ಟಿಯನ್ನು ಹಿಂದೆ ಗೆದಿದ್ದಿ. |
8
|
ಬಲಿಷ್ಠನಿಗಾದರೋ ದೇಶವು ಅವನದೇ; ಗೌರವದ ಮನುಷ್ಯನು ಅದರಲ್ಲಿ ವಾಸಿಸಿದನು. |
9
|
ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ. |
10
|
ಆದದರಿಂದ ನಿನ್ನ ಸುತ್ತಲೂ ಉರುಲುಗಳು ಉಂಟು; ಭಯವು ನಿನ್ನನ್ನು ಫಕ್ಕನೆ ತಲ್ಲಣಪಡಿಸುತ್ತದೆ. |
11
|
ಇಲ್ಲವೆ ನೀನು ನೋಡದ ಹಾಗೆ ಕತ್ತಲುಂಟು; ಜಲ ಪ್ರವಾಹವು ನಿನ್ನನ್ನು ಮುಚ್ಚುತ್ತದೆ. |
12
|
ದೇವರು ಆಕಾಶದ ಎತ್ತರದಲ್ಲಿದ್ದಾನಲ್ಲವೋ? ನಕ್ಷತ್ರಗಳ ಎತ್ತರ ನೋಡು, ಅವು ಎಷ್ಟು ಉನ್ನತ! |
13
|
ಆದರೆ ನೀನು ಹೇಳುತ್ತೀ--ದೇವರು ಏನು ಬಲ್ಲನು? ಆತನು ಕಾರ್ಗತ್ತಲಿಂದ ನ್ಯಾಯತೀರಿಸುವನೋ? |
14
|
ಮಂದವಾದ ಮೇಘಗಳು ಆತನ ಮರೆ; ಆತನು ನೋಡುವದಿಲ್ಲ; ಆತನು ಆಕಾಶ ಮಂಡಲದ ಮೇಲೆ ನಡೆಯುತ್ತಾನೆ. |
15
|
ದುಷ್ಟ ಜನರು ನಡೆದ ಪೂರ್ವಕಾಲದ ದಾರಿ ಯನ್ನು ನೋಡಿಕೊಂಡಿಯೋ? |
16
|
ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು. |
17
|
ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ. |
18
|
ಆದರೆ ಆತನು ಅವರ ಮನೆಗಳನ್ನು ಒಳ್ಳೇದರಿಂದ ತುಂಬಿದ್ದಾನೆ; ಆದರೂ ದುಷ್ಟರ ಆಲೋಚನೆಯು ನನಗೆ ದೂರವಾಗಿದೆ. |
19
|
ನೀತಿವಂತರು ನೋಡಿ ಸಂತೋಷಪಡುವರು. ನಿರಪರಾಧಿಯು ಅವರಿಗೆ ಗೇಲಿ ಮಾಡುವನು. |
20
|
ನಿಶ್ಚಯವಾಗಿ ನಮ್ಮ ಆಸ್ತಿಯು ತೆಗೆ ಯಲ್ಪಡಲಿಲ್ಲ; ಅವರಲ್ಲಿ ಉಳಿದವರನ್ನು ಬೆಂಕಿ ದಹಿಸಿಬಿಡುತ್ತದೆ. |
21
|
ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು. |
22
|
ಆತನ ಬಾಯಿಂದ ನ್ಯಾಯಪ್ರಮಾಣವನ್ನು ತಕ್ಕೋ; ಆತನ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ. |
23
|
ಸರ್ವಶಕ್ತನ ಕಡೆಗೆ ನೀನು ತಿರುಗಿ ಕೊಂಡರೆ ಕಟ್ಟಲ್ಪಡುವಿ; ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರ ಮಾಡುವಿ. |
24
|
ಧೂಳಿನಂತೆ ಬಂಗಾರವನ್ನು, ಹಳ್ಳಗಳ ಕಲ್ಲುಗಳಂತೆ ಓಫಿರ್ ಬಂಗಾರವನ್ನು ತೆಗೆದು ಹಾಕುವಿ. |
25
|
ಆಗ ಸರ್ವಶಕ್ತನು ನಿನಗೆ ರಕ್ಷಣೆಯೂ ಸಮೃದ್ಧಿಯಾದ ಬೆಳ್ಳಿಯೂ ಆಗಿರುವನು. |
26
|
ಆಗ ಸರ್ವಶಕ್ತನಲ್ಲಿ ನೀನು ಆನಂದಗೊಂಡು ನಿನ್ನ ಮುಖ ವನ್ನು ದೇವರ ಕಡೆಗೆ ಎತ್ತುವಿ. |
27
|
ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ. |
28
|
ನೀನು ಏನಾದರೂ ನಿರ್ಣಯಿಸಿದರೆ ಅದು ನಿನಗೆ ಸ್ಥಿರವಾಗುವದು ಮತ್ತು ನಿನ್ನ ಮಾರ್ಗಗಳಲ್ಲಿ ಬೆಳಕು ಮೂಡುವದು. |
29
|
ಒಬ್ಬನು ತಗ್ಗುವಲ್ಲಿ ಎತ್ತುವದುಂಟು ಅನ್ನುವಿ; ದೀನ ನನ್ನು ಆತನು ರಕ್ಷಿಸುವನು. |
30
|
ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು. |
Job 22:5 Kannada Language Bible Words basic statistical display
COMING SOON ...