1
|
ಅದಕ್ಕೆ ಯೋಬನು ಉತ್ತರಿಸಿ ಇಂತೆಂದನು |
2
|
ಸತ್ಯವು ಹೀಗೆ ಇರುವದೆಂದು ಬಲ್ಲೆನು. ಆದರೆ ಮನುಷ್ಯನು ದೇವರ ಮುಂದೆ ನೀತಿವಂತ ನಾಗುವದು ಹೇಗೆ? |
3
|
ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು. |
4
|
ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು? |
5
|
ಪರ್ವತಗಳನ್ನು ಅವು ಗಳಿಗೆ ತಿಳಿಯದ ಹಾಗೆ ನೂಕುತ್ತಾನೆ; ತನ್ನ ಸಿಟ್ಟಿನಲ್ಲಿ ಅವುಗಳನ್ನು ತಿರುಗಿಸುತ್ತಾನೆ. |
6
|
ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುತ್ತಾನೆ; ಅದರ ಸ್ತಂಭಗಳು ನಡುಗುತ್ತವೆ. |
7
|
ಉದಯಿಸದ ಹಾಗೆ ಸೂರ್ಯನಿಗೆ ಅಪ್ಪಣೆಕೊಡುತ್ತಾನೆ; ನಕ್ಷತ್ರಗಳಿಗೆ ಮುದ್ರೆಹಾಕುತ್ತಾನೆ; |
8
|
ಆತನೊಬ್ಬನೇ ಆಕಾಶಗಳನ್ನು ಹರಡಿಸುತ್ತಾನೆ; ಸಮುದ್ರದ ತೆರೆಗಳ ಮೇಲೆ ನಡೆಯುತ್ತಾನೆ. |
9
|
ಸಪ್ತ ತಾರೆಗಳನ್ನೂ ಮೃಗಶಿರವನ್ನೂ ವೃಷಭ ರಾಶಿಯನ್ನೂ ದಕ್ಷಿಣದ ಕೋಣೆಗಳನ್ನೂ ಮಾಡಿದಾತನು ಆತನೇ. |
10
|
ಆತನು ಕಂಡುಹಿಡಿಯಲಾರದಂಥ ಮಹತ್ಕಾರ್ಯ ಗಳನ್ನೂ ಲೆಕ್ಕವಿಲ್ಲದಷ್ಟು ಅದ್ಭುತಗಳನ್ನೂ ಮಾಡುತ್ತಾನೆ. |
11
|
ಇಗೋ, ಆತನು ನನ್ನ ಮುಂದೆ ಹಾದುಹೋಗು ತ್ತಾನೆ. ನನಗೆ ಆತನು ಕಾಣುವದಿಲ್ಲ. ಆತನು ದಾಟಿ ಹೋಗುತ್ತಾನೆ, ಆದರೆ ನಾನು ಆತನನ್ನು ಗ್ರಹಿಸಿ ಕೊಳ್ಳುವದಿಲ್ಲ. |
12
|
ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು? |
13
|
ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ. |
14
|
ಆತನಿಗೆ ಉತ್ತರ ಕೊಡುವದಕ್ಕೂ ಆತನೊಂದಿಗೆ ತರ್ಕಿಸುವದಕ್ಕೆ ನನ್ನ ಮಾತುಗಳನ್ನು ಆದುಕೊಳ್ಳು ವದಕ್ಕೂ ನಾನು ಎಷ್ಟು ಮಾತ್ರದವನು; |
15
|
ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು. |
16
|
ನಾನು ಕರೆ ಯಲು ಆತನು ನನಗೆ ಉತ್ತರಕೊಟ್ಟರೂ ಆತನು ನನ್ನ ಶಬ್ಧಕ್ಕೆ ಕಿವಿಗೊಡುತ್ತಾನೆಂದು ನಂಬಲಾರೆನು. |
17
|
ಆತನು ಬಿರುಗಾಳಿಯಿಂದ ನನ್ನನ್ನು ಚೂರು ಮಾಡು ತ್ತಾನೆ. ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸು ತ್ತಾನೆ. |
18
|
ನನ್ನ ಉಸಿರು ತಕ್ಕೊಳ್ಳದಂತೆ ಮಾಡಿ ಕಹಿ ಯಾದವುಗಳಿಂದ ನನ್ನನ್ನು ತುಂಬಿಸುತ್ತಾನೆ. |
19
|
ಶಕ್ತಿಯ ವಿಷಯದಲ್ಲಿ ಮಾತನಾಡಲೋ? ಇಗೋ, ಆತನು ಬಲವುಳ್ಳವನಾಗಿದ್ದಾನೆ. ನ್ಯಾಯದ ವಿಷಯವೋ ವಾದಿ ಸುವದಕ್ಕೆ ನನಗೆ ಕಾಲವನ್ನು ನಿಯಮಿಸುವವನು ಯಾರು? |
20
|
ನನ್ನನ್ನು ನಾನು ನೀತಿವಂತನನ್ನಾಗಿ ಮಾಡಿ ಕೊಂಡರೆ ನನ್ನ ಸ್ವಂತ ಬಾಯಿ ನನ್ನನ್ನು ಖಂಡಿಸುತ್ತದೆ. ನಾನು ಸಂಪೂರ್ಣನಾಗಿದ್ದೇನೆಂದು ಹೇಳಿದರೆ ನಾನು ವಕ್ರನಾಗಿದ್ದೇನೆಂದು ಅದು ಸಿದ್ಧಾಂತಮಾಡುವದು. |
21
|
ನಾನು ಸಂಪೂರ್ಣವಾಗಿದ್ದರೂ ನನ್ನ ಪ್ರಾಣವನ್ನು ನಾನೇ ಅರಿಯದಿರುವೆನು; ನನ್ನ ಜೀವವನ್ನು ತಿರಸ್ಕಾರ ಮಾಡುವೆನು. |
22
|
ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ. |
23
|
ಕೊರಡೆಯು ಫಕ್ಕನೆ ಕೊಂದರೆ, ನಿರಪರಾಧಿಗಳ ಪರೀಕ್ಷೆಗೆ ಅವನು ಗೇಲಿ ಮಾಡುತ್ತಾನೆ. |
24
|
ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ? |
25
|
ಆದರೆ ನನ್ನ ದಿವಸಗಳು ಅಂಚೆಯವನಿಗಿಂತಲೂ ತ್ವರೆಯಾಗಿ. ಮೇಲನ್ನು ನೋಡದೆ ಅವು ಓಡಿಹೋಗು ತ್ತವೆ. |
26
|
ಹದ್ದು ಆಹಾರದ ಮೇಲೆ ಎರಗುವ ಪ್ರಕಾರವೂ ತೀವ್ರವಾದ ಹಡಗುಗಳ ಹಾಗೆಯೇ ಅವು ದಾಟಿ ಹೋಗುತ್ತವೆ. |
27
|
ನನ್ನ ದೂರುಗಳನ್ನು ಮರೆತು, ನನ್ನ ಭಾರವನ್ನು ಬಿಟ್ಟು, ಆದರಣೆಹೊಂದುವೆನು ಎಂದು ಹೇಳಿಕೊಂಡರೆ |
28
|
ನನ್ನ ವ್ಯಥೆಗಳಿಗೆಲ್ಲಾ ದಿಗಿಲು ಪಡು ತ್ತೇನೆ; ನೀನು ನನ್ನನ್ನು ನಿರಪರಾಧಿ ಎಂದು ಎಣಿಸು ವದಿಲ್ಲವೆಂದು ತಿಳಿದಿದ್ದೇನೆ. |
29
|
ನಾನು ಕೆಟ್ಟವನಾಗಿದ್ದರೆ ಯಾಕೆ ಈ ವ್ಯರ್ಥವಾದ ಪ್ರಯಾಸ? |
30
|
ನಾನು ಹಿಮದ ನೀರಿನಲ್ಲಿ ತೊಳಕೊಂಡು ನನ್ನ ಕೈಗಳನ್ನು ಶುಚಿ ಮಾಡೇ ಮಾಡಿದಾಗ್ಯೂ |
31
|
ನನ್ನನ್ನು ಕುಣಿಯಲ್ಲಿ ಮುಣುಗಿಸಿ ಬಿಡುವಿ; ನನ್ನ ಸ್ವಂತ ವಸ್ತ್ರಗಳು ನನ್ನನ್ನು ಹೇಸಿಕೊಳ್ಳು ವವು. |
32
|
ನಾನು ಆತನಿಗೆ ಉತ್ತರ ಕೊಡುವ ಹಾಗೆಯೂ ನಾವು ಕೂಡ ನ್ಯಾಯದಲ್ಲಿ ಸೇರುವ ಹಾಗೆಯೂ ಆತನು ನನ್ನಂಥ ಮನುಷ್ಯನಲ್ಲ. |
33
|
ನಮ್ಮಿಬ್ಬರ ಮೇಲೆ ಕೈ ಇಡತಕ್ಕ ಮಧ್ಯಸ್ಥಗಾರನು ನಮ್ಮ ಮಧ್ಯದಲ್ಲಿಲ್ಲ. |
34
|
ಆತನು ತನ್ನ ಕೋಲನ್ನು ನನ್ನ ಮೇಲಿನಿಂದ ತೊಲ ಗಿಸಲಿ, ಆತನ ಭೀತಿ ನನ್ನನ್ನು ಹೆದರಿಸದಿರಲಿ. |
35
|
ಆಗ ಆತನಿಗೆ ಭಯಪಡದೆ ಮಾತನಾಡುವೆನು; ಆದರೆ ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ. |
Job 9:1 Kannada Language Bible Words basic statistical display
COMING SOON ...