1
|
ಫರಿಸಾಯರಲ್ಲಿ ಯೆಹೂದ್ಯರ ಅಧಿಕಾರಿ ಯಾದ ನಿಕೊದೇಮನೆಂಬ ಒಬ್ಬ ಮನುಷ್ಯ ನಿದ್ದನು. |
2
|
ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು. |
3
|
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು. |
4
|
ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು. |
5
|
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು. |
6
|
ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ. |
7
|
ನೀವು ತಿರಿಗಿ ಹುಟ್ಟತಕ್ಕದ್ದು ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ. |
8
|
ಗಾಳಿಯು ತನ್ನ ಮನಸ್ಸು ಬಂದ ಕಡೆಗೆ ಬೀಸುತ್ತದೆ; ನೀನು ಅದರ ಶಬ್ದವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗು ತ್ತದೋ ಹೇಳಲಾರಿ; ಅದರಂತೆಯೇ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನು ಇದ್ದಾನೆ ಅಂದನು. |
9
|
ಅದಕ್ಕೆ ನಿಕೊ ದೇಮನು ಪ್ರತ್ಯುತ್ತರವಾಗಿ ಆತನಿಗೆ--ಇವುಗಳು ಹೇಗಾದಾವು ಎಂದು ಕೇಳಿದ್ದಕ್ಕೆ |
10
|
ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಇಸ್ರಾಯೇಲ್ಯರಿಗೆ ಬೋಧಕನಾಗಿ ರುವ ನಿನಗೆ ಈ ವಿಷಯಗಳು ತಿಳಿಯುವದಿಲ್ಲವೋ? |
11
|
ನಾನು ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ನಾವು ಅರಿತಿರುವದನ್ನು ಮಾತನಾಡುತ್ತೇವೆ ಮತ್ತು ನೋಡಿ ದ್ದಕ್ಕೆ ಸಾಕ್ಷೀಕರಿಸುತ್ತೇವೆ; ಆದರೆ ನೀವು ನಮ್ಮ ಸಾಕ್ಷಿ ಯನ್ನು ಅಂಗೀಕರಿಸುವದಿಲ್ಲ. |
12
|
ನಾನು ಭೂಲೋಕ ದವುಗಳನ್ನು ನಿಮಗೆ ಹೇಳಿದರೆ ನೀವು ನಂಬುವದಿಲ್ಲ; ಆದರೆ ಪರಲೋಕದವುಗಳನ್ನು ನಿಮಗೆ ಹೇಳಿದರೆ ಹೇಗೆ ನಂಬೀರಿ? |
13
|
ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ. |
14
|
ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಎತ್ತಿದ ಹಾಗೆಯೇ ಮನುಷ್ಯ ಕುಮಾರನು ಸಹ ಎತ್ತಲ್ಪಡತಕ್ಕದ್ದು. |
15
|
ಹೀಗೆ ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದಿರುವನು. |
16
|
ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು. |
17
|
ದೇವರು ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ; ಆದರೆ ತನ್ನ ಮಗನ ಮುಖಾಂತರ ಲೋಕವನ್ನು ರಕ್ಷಿಸುವದಕ್ಕಾಗಿ ಆತನನ್ನು ಕಳುಹಿಸಿದನು. |
18
|
ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ. |
19
|
ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. |
20
|
ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ. |
21
|
ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು. |
22
|
ಇವುಗಳಾದ ಮೇಲೆ ಯೇಸುವೂ ಆತನ ಶಿಷ್ಯರೂ ಯೂದಾಯ ದೇಶಕ್ಕೆ ಬಂದರು; ಅಲ್ಲಿ ಆತನು ಅವರೊಂದಿಗೆ ಇದ್ದು ಬಾಪ್ತಿಸ್ಮ ಮಾಡಿಸುತ್ತಿದ್ದನು. |
23
|
ಇದಲ್ಲದೆ ಯೋಹಾನನು ಸಹ ಸಲೀಮಿನ ಸವಿಾಪ ದಲ್ಲಿದ್ದ ಐನೋನಿನಲ್ಲಿ ಬಾಪ್ತಿಸ್ಮ ಮಾಡಿಸುತ್ತಿದ್ದನು; ಯಾಕಂದರೆ ಅಲ್ಲಿ ಬಹಳ ನೀರು ಇತ್ತು; ಅವರು (ಜನರು) ಬಂದು ಬಾಪ್ತಿಸ್ಮ ಮಾಡಿಸಿಕೊಳ್ಳುತ್ತಿದ್ದರು. |
24
|
ಯಾಕಂದರೆ ಯೋಹಾನನು ಅದುವರೆಗೆ ಸೆರೆಯಲ್ಲಿ ಹಾಕಲ್ಪಟ್ಟಿರಲಿಲ್ಲ. |
25
|
ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು. |
26
|
ಅವರು ಯೋಹಾನನ ಬಳಿಗೆ ಬಂದು ಅವ ನಿಗೆ--ಗುರುವೇ, ಇಗೋ, ಯೊರ್ದನಿನ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬಾತನ ವಿಷಯದಲ್ಲಿ ನೀನು ಸಾಕ್ಷಿಕೊಟ್ಟಿಯಲ್ಲಾ; ಆತನೂ ಬಾಪ್ತಿಸ್ಮ ಮಾಡಿಸುತ್ತಾನೆ, ಎಲ್ಲರೂ ಆತನ ಬಳಿಗೆ ಹೋಗುತ್ತಾರೆ ಅಂದರು. |
27
|
ಯೋಹಾನನು ಪ್ರತ್ಯುತ್ತರವಾಗಿ--ಪರಲೋಕ ದಿಂದ ಒಬ್ಬ ಮನುಷ್ಯನಿಗೆ ಕೊಡಲ್ಪಡದ ಹೊರತು ಅವನು ಯಾವದನ್ನೂ ಹೊಂದಲಾರನು. |
28
|
ನಾನು ಕ್ರಿಸ್ತನಲ್ಲ, ಆದರೆ ಆತನ ಮುಂದಾಗಿ ಕಳುಹಿಸಲ್ಪಟ್ಟ ವನೆಂದು ನಾನು ಹೇಳಿದ್ದಕ್ಕೆ ನೀವೇ ನನಗೆ ಸಾಕ್ಷಿಗಳಾ ಗಿದ್ದೀರಿ. |
29
|
ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು. |
30
|
ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು. |
31
|
ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ. |
32
|
ಆತನು ಯಾವದನ್ನು ಕಂಡು ಕೇಳಿದನೋ ಅದಕ್ಕೆ ಸಾಕ್ಷಿ ಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾವನೂ ಅಂಗೀಕರಿಸುವದಿಲ್ಲ. |
33
|
ಆತನ ಸಾಕ್ಷಿಯನ್ನು ಅಂಗೀಕರಿಸಿದವನು ದೇವರು ಸತ್ಯವಂತನೆಂಬದಕ್ಕೆ ತನ್ನ ಮುದ್ರೆಯನ್ನು ಹಾಕಿದ್ದಾನೆ. |
34
|
ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ; ದೇವರು ಆತನಿಗೆ ಆತ್ಮನನ್ನು ಅಳತೆ ಮಾಡದೆ ಕೊಡುತ್ತಾನೆ. |
35
|
ತಂದೆಯು ಮಗನನ್ನು ಪ್ರೀತಿಸಿ ಎಲ್ಲವುಗಳನ್ನು ಆತನ ಕೈಯಲ್ಲಿ ಕೊಟ್ಟಿದ್ದಾನೆ. |
36
|
ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು. |
John 3:1 Kannada Language Bible Words basic statistical display
COMING SOON ...