1
|
ಇವುಗಳಾದ ಮೇಲೆ ಯೇಸು ಗಲಿಲಾ ಯದಲ್ಲಿ ಸಂಚಾರ ಮಾಡಿದನು; ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಹುಡುಕುತ್ತಿ ದ್ದದರಿಂದ ಯೂದಾಯದಲ್ಲಿ ಸಂಚರಿಸಲು ಆತನಿಗೆ ಮನಸ್ಸಿರಲಿಲ್ಲ. |
2
|
ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು. |
3
|
ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು; |
4
|
ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು. |
5
|
ಯಾಕಂದರೆ ಆತನ ಸಹೋದರರು ಸಹ ಆತನ ಮೇಲೆ ನಂಬಿಕೆ ಇಟ್ಟಿರಲಿಲ್ಲ. |
6
|
ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ. |
7
|
ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ಅದರ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯ ದಲ್ಲಿ ನಾನು ಸಾಕ್ಷಿ ಹೇಳುವದರಿಂದ ಅದು ನನ್ನನ್ನು ಹಗೆಮಾಡುತ್ತದೆ. |
8
|
ನೀವು ಈ ಹಬ್ಬಕ್ಕೆ ಹೋಗಿರಿ; ನಾನು ಈ ಹಬ್ಬಕ್ಕೆ ಈಗಲೇ ಹೋಗುವದಿಲ್ಲ, ಯಾಕಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ ಅಂದನು. |
9
|
ಆತನು ಈ ಮಾತುಗಳನ್ನು ಅವರಿಗೆ ಹೇಳಿದ್ದಾದ ಮೇಲೆ ಇನ್ನೂ ಗಲಿಲಾಯ ದಲ್ಲಿಯೇ ಉಳಿದನು. |
10
|
ಆದರೆ ಆತನ ಸಹೋದರರು ಹೋದಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ ಗುಪ್ತವಾಗಿ ಹೋದನು. |
11
|
ಆಗ ಯೆಹೂದ್ಯರು ಆ ಹಬ್ಬದಲ್ಲಿ ಆತನನ್ನು ಹುಡುಕಿ--ಆತನು ಎಲ್ಲಿದ್ದಾನೆ ಅಂದರು. |
12
|
ಆ ಜನಗಳಲ್ಲಿ ಆತನ ವಿಷಯವಾಗಿ ಬಹಳ ಗುಣುಗುಟ್ಟುವಿಕೆ ಇತ್ತು; ಯಾಕಂದರೆ ಕೆಲವರು--ಆತನು ಒಬ್ಬ ಒಳ್ಳೇ ಮನುಷ್ಯನಾಗಿದ್ದಾನೆ ಅಂದರು; ಬೇರೆ ಕೆಲವರು--ಅಲ್ಲ; ಆತನು ಜನರನ್ನು ಮೋಸ ಗೊಳಿಸುತ್ತಾನೆ ಎಂದು ಅನ್ನುತ್ತಿದ್ದರು. |
13
|
ಆದಾಗ್ಯೂ ಯೆಹೂದ್ಯರ ಭಯದ ನಿಮಿತ್ತ ಆತನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ. |
14
|
ಆಗ ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾ ಲಯದೊಳಗೆ ಹೋಗಿ ಬೋಧಿಸಿದನು. |
15
|
ಯೆಹೂ ದ್ಯರು ಆಶ್ಚರ್ಯಪಟ್ಟು--ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಂಥ ಜ್ಞಾನವು ಬಂದಿರುವದು ಹೇಗೆ ಅಂದರು. |
16
|
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ನನ್ನ ಬೋಧನೆಯು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದಾತನದೇ. |
17
|
ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು. |
18
|
ತನ್ನ ವಿಷಯವಾಗಿ ತಾನೇ ಮಾತನಾಡುವವನು ತನ್ನ ಸ್ವಂತ ಮಹಿಮೆಯನ್ನು ಹುಡುಕುತ್ತಾನೆ; ಆದರೆ ತನ್ನನ್ನು ಕಳುಹಿಸಿದಾತನ ಮಹಿಮೆಯನ್ನು ಹುಡುಕುವಾತನೇ ಸತ್ಯವಂತನು; ಆತ ನಲ್ಲಿ ಅನೀತಿಯಿಲ್ಲ. |
19
|
ಮೋಶೆಯು ನಿಮಗೆ ನ್ಯಾಯ ಪ್ರಮಾಣವನ್ನು ಕೊಟ್ಟಾಗ್ಯೂ ನಿಮ್ಮಲ್ಲಿ ಒಬ್ಬನೂ ಆ ನ್ಯಾಯಪ್ರಮಾಣವನ್ನು ಕೈಕೊಳ್ಳಲಿಲ್ಲವಲ್ಲಾ; ನೀವು ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ ಎಂದು ಹೇಳಿದನು. |
20
|
ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು. |
21
|
ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಾನು ಒಂದು ಕ್ರಿಯೆಯನ್ನು ಮಾಡಿ ದೆನು; ಅದಕ್ಕೆ ನೀವೆಲ್ಲರು ಆಶ್ಚರ್ಯಪಡುತ್ತೀ |
22
|
ಹಾಗಿದ್ದರೆ ಮೋಶೆಯು ನಿಮಗೆ ಸುನ್ನತಿಯನ್ನು ಕೊಟ್ಟನು; (ಅದು ಮೋಶೆಯದಲ್ಲ, ಆದರೆ ಅದು ಪಿತೃಗಳದೇ). ನೀವು ಸಬ್ಬತ್ ದಿನದಲ್ಲಿ ಮನುಷ್ಯನಿಗೆ ಸುನ್ನತಿ ಮಾಡುತ್ತೀರಿ. |
23
|
ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ? |
24
|
ತೋರಿಕೆಗೆ ಅನುಸಾರವಾಗಿ ನ್ಯಾಯತೀರಿ ಸಬೇಡಿರಿ. ಆದರೆ ನೀತಿಯ ನ್ಯಾಯತೀರ್ಪನ್ನು ಮಾಡಿರಿ ಅಂದನು. |
25
|
ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು-- ಅವರು ಕೊಲ್ಲಬೇಕೆಂದು ಹುಡುಕುತ್ತಿರುವದು ಈತನನ್ನೇ ಅಲ್ಲವೇ? |
26
|
ಆದಾಗ್ಯೂ ಇಗೋ, ಈತನು ಧೈರ್ಯ ವಾಗಿ ಮಾತನಾಡುತ್ತಾನೆ; ಆದರೆ ಅವರು ಈತನಿಗೆ ಏನೂ ಹೇಳುವದಿಲ್ಲ. ಈತನೇ ನಿಜವಾದ ಆ ಕ್ರಿಸ್ತನೆಂದು ಅಧಿಕಾರಿಗಳು ತಿಳುಕೊಂಡಿದ್ದಾರೋ? |
27
|
ಹೇಗೂ ಈ ಮನುಷ್ಯನು ಎಲ್ಲಿಯವನೆಂದು ನಾವು ಬಲ್ಲೆವು; ಆದರೆ ಕ್ರಿಸ್ತನು ಬರುವಾಗ ಆತನು ಎಲ್ಲಿಯವ ನೆಂದು ಯಾರಿಗೂ ತಿಳಿಯದು ಅಂದರು. |
28
|
ತರು ವಾಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿ ದ್ದಾಗ--ನೀವು ನನ್ನನ್ನು ಬಲ್ಲಿರಿ ಮತ್ತು ನಾನು ಎಲ್ಲಿಯವನೆಂದೂ ನೀವು ಬಲ್ಲಿರಿ; ಆದರೆ ನನ್ನಷ್ಟಕ್ಕೆ ನಾನೇ ಬರಲಿಲ್ಲ; ನನ್ನನ್ನು ಕಳುಹಿಸಿದಾತನು ಸತ್ಯ ವಂತನೇ; ಆತನನ್ನು ನೀವು ಅರಿತವರಲ್ಲ. |
29
|
ಆದರೆ ನಾನು ಆತನನ್ನು ಬಲ್ಲೆನು; ಯಾಕಂದರೆ ನಾನು ಆತನ ಕಡೆಯಿಂದ ಬಂದವನು; ಆತನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಕೂಗಿ ಹೇಳಿದನು. |
30
|
ಆಗ ಅವರು ಆತನನ್ನು ಹಿಡಿಯಲು ಹವಣಿಸಿದರು; ಆದರೆ ಆತನ ಗಳಿಗೆ ಇನ್ನೂ ಬಾರದೆ ಇದ್ದದರಿಂದ ಆತನ ಮೇಲೆ ಯಾರೂ ಕೈ ಹಾಕಲಿಲ್ಲ. |
31
|
ಜನರಲ್ಲಿ ಅನೇಕರು ಆತನನ್ನು ನಂಬಿ--ಕ್ರಿಸ್ತನು ಬಂದಾಗ ಈ ಮನುಷ್ಯನು ಮಾಡಿದ್ದಕ್ಕಿಂತ ಹೆಚ್ಚು ಅದ್ಭುತಕಾರ್ಯಗಳನ್ನು ಮಾಡು ವನೋ ಅಂದರು. |
32
|
ಆತನ ವಿಷಯವಾಗಿ ಜನರು ಗುಣುಗುಟ್ಟಿದ ರೆಂದು ಫರಿಸಾಯರು ಕೇಳಿದರು; ಫರಿಸಾಯರೂ ಪ್ರಧಾನಯಾಜಕರೂ ಆತನನ್ನು ಹಿಡಿಯುವದಕ್ಕೆ ಅಧಿ ಕಾರಿಗಳನ್ನು ಕಳುಹಿಸಿದರು. |
33
|
ತರುವಾಯ ಯೇಸು ಅವರಿಗೆ--ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೋಗು ತ್ತೇನೆ. |
34
|
ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ ಅಂದನು. |
35
|
ಆಗ ಯೆಹೂದ್ಯರು--ನಾವು ಅವನನ್ನು ಕಾಣದ ಹಾಗೆ ಅವನು ಎಲ್ಲಿಗೆ ಹೋಗುವನು? ಅನ್ಯಜನರ ಮಧ್ಯದಲ್ಲಿ ಚದರಿಹೋದವರ ಬಳಿಗೆ ಹೋಗಿ ಅನ್ಯಜನರಿಗೆ ಬೋಧಿಸುವನೋ? |
36
|
ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣಲಾರಿರಿ; ನಾನಿರುವಲ್ಲಿಗೆ ನೀವು ಬರಲಾರಿರಿ ಎಂದು ಇವನು ಹೇಳಿರುವದು ಎಂಥಾ ಮಾತಾಗಿರಬಹುದು ಎಂದು ತಮ್ಮಲ್ಲಿ ಅಂದುಕೊಂಡರು. |
37
|
ಹಬ್ಬದ ಆ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು--ಯಾವನಿಗಾದರೂ ನೀರಡಿಕೆ ಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ. |
38
|
ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು. |
39
|
(ಆದರೆ ಆತನು ತನ್ನಲ್ಲಿ ವಿಶ್ವಾಸವಿಡುವವರು ಹೊಂದಲಿರುವ ಆತ್ಮನನ್ನು ಕುರಿತು ಇದನ್ನು ಹೇಳಿದನು; ಯಾಕಂದರೆ ಯೇಸು ಇನ್ನೂ ಮಹಿಮೆಯನ್ನು ಹೊಂದಿರಲಿಲ್ಲವಾದ್ದರಿಂದ ಪವಿತ್ರಾ ತ್ಮನು ಇನ್ನೂ ಕೊಡಲ್ಪಟ್ಟಿರಲಿಲ್ಲ.) |
40
|
ಆದದರಿಂದ ಜನರಲ್ಲಿ ಅನೇಕರು ಈ ಮಾತನ್ನು ಕೇಳಿದಾಗ--ಈತನು ನಿಜವಾಗಿಯೂ ಆ ಪ್ರವಾದಿ ಯಾಗಿದ್ದಾನೆ ಅಂದರು. |
41
|
ಬೇರೆಯವರು--ಈತನೇ ಆ ಕ್ರಿಸ್ತನು ಅಂದರು. ಆದರೆ ಕೆಲವರು--ಕ್ರಿಸ್ತನು ಗಲಿಲಾಯದಿಂದ ಬರುವನೋ? |
42
|
ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು. |
43
|
ಹೀಗೆ ಆತನ ನಿಮಿತ್ತ ವಾಗಿ ಜನರಲ್ಲಿ ಭೇದ ಉಂಟಾಯಿತು; |
44
|
ಅವರಲ್ಲಿ ಕೆಲವರು ಆತನನ್ನು ಹಿಡಿಯಬೇಕೆಂದಿದ್ದರು; ಆದರೆ ಯಾರೂ ಆತನ ಮೇಲೆ ಕೈ ಹಾಕಲಿಲ್ಲ. |
45
|
ಬಳಿಕ ಪ್ರಧಾನಯಾಜಕರ ಮತ್ತು ಫರಿಸಾಯರ ಬಳಿಗೆ ಅಧಿಕಾರಿಗಳು ಬಂದಾಗ ಅವರಿಗೆ--ನೀವು ಯಾಕೆ ಆತನನ್ನು ಕರತರಲಿಲ್ಲ ಎಂದು ಕೇಳಿದರು. |
46
|
ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು. |
47
|
ಆಗ ಫರಿಸಾಯರೂ ಅವರಿಗೆ--ನೀವು ಸಹ ಮೋಸ ಹೋದಿರೋ? |
48
|
ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಅವನ ಮೇಲೆ ವಿಶ್ವಾಸವಿಟ್ಟಿದ್ದಾರೋ? |
49
|
ಆದರೆ ನ್ಯಾಯಪ್ರಮಾಣ ವನ್ನರಿಯದ ಈ ಜನರು ಶಾಪಗ್ರಸ್ತರೇ ಎಂದು ಹೇಳಿದರು. |
50
|
ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.) |
51
|
ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು. |
52
|
ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು. |
53
|
ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು. |
John 7:1 Kannada Language Bible Words basic statistical display
COMING SOON ...