1
|
ಕರ್ತನ ವಾಕ್ಯವು ಎರಡನೇ ಸಾರಿ ಯೋನನಿಗೆ ಉಂಟಾಯಿತು, |
2
|
ಏನಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಹೇಳಿದ ಪ್ರಕಟನೆಯನ್ನು ಅದಕ್ಕೆ ಸಾರು ಎಂದು ಹೇಳಿದನು. |
3
|
ಹೀಗೆ ಯೋನನು ಎದ್ದು ಕರ್ತನ ವಾಕ್ಯದ ಪ್ರಕಾರ ನಿನೆವೆಗೆ ಹೋದನು; ಆ ನಿನೆವೆಯು ಮೂರು ದಿವಸದ ಪ್ರಯಾಣವಾದ ಮಹಾದೊಡ್ಡ ಪಟ್ಟಣ ವಾಗಿತ್ತು. |
4
|
ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು. |
5
|
ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು. |
6
|
ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು. |
7
|
ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ; |
8
|
ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ. |
9
|
ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು. |
10
|
ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ. |
Jonah 3:1 Kannada Language Bible Words basic statistical display
COMING SOON ...