1
|
ಇದಾದ ಮೇಲೆ ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆ ಮಾಡಿ ಮುಗಿಸಿದ ಮೇಲೆ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಕರ್ತನೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆ ಮಾಡುವದಕ್ಕೆ ಕಲಿಸು ಎಂದು ಕೇಳಲು |
2
|
ಆತನು ಅವರಿಗೆ--ನೀವು ಪ್ರಾರ್ಥನೆ ಮಾಡುವಾಗ--ಪರಲೋಕದಲ್ಲಿರುವ ನಮ್ಮ ತಂದೆ ಯೇ, ನಿನ್ನ ನಾಮವು ಪರಿಶುದ್ಧವಾಗಲಿ, ನಿನ್ನ ರಾಜ್ಯವು ಬರಲಿ, ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವಂತೆ ಭೂಮಿಯಲ್ಲಿಯೂ ನೆರವೇರಲಿ. |
3
|
ನಮ್ಮ ರೊಟ್ಟಿಯನ್ನು ಪ್ರತಿದಿನವೂ ನಮಗೆ ಕೊಡು. |
4
|
ನಮಗೆ ಸಾಲಗಾರ ರಾಗಿರುವ ಪ್ರತಿಯೊಬ್ಬನನ್ನು ಕ್ಷಮಿಸುವಂತೆಯೇ ನಮ್ಮ ಪಾಪಗಳನ್ನು ನಮಗೆ ಕ್ಷಮಿಸು; ನಮ್ಮನ್ನು ಶೋಧನೆ ಯೊಳಗೆ ಸೇರಿಸಬೇಡ; ಆದರೆ ಕೇಡಿನಿಂದ ನಮ್ಮನ್ನು ತಪ್ಪಿಸು ಎಂದು ಹೇಳಿರಿ ಅಂದನು. |
5
|
ಆತನು ಅವರಿಗೆ--ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ--ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಕಡವಾಗಿ ಕೊಡು; |
6
|
ನನ್ನ ಸ್ನೇಹಿ ತನು ಪ್ರಯಾಣವಾಗಿ ನನ್ನ ಬಳಿಗೆ ಬಂದಿದ್ದಾನೆ; ಅವನಿಗೆ ಬಡಿಸುವದಕ್ಕೆ ನನ್ನಲ್ಲಿ ಏನೂ ಇಲ್ಲ ಅನ್ನಲು |
7
|
ಅವನು ಒಳಗಿನಿಂದಲೇ ಅವನಿಗೆ ಉತ್ತರವಾಗಿ--ನನ್ನನ್ನು ತೊಂದರೆಪಡಿಸಬೇಡ; ಬಾಗಲು ಈಗ ಮುಚ್ಚಿ ಯದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆಯಲ್ಲಿ ದ್ದಾರೆ; ನಾನೆದ್ದು ಕೊಡಲಾರೆನು ಎಂದು ಹೇಳುವನು. |
8
|
ಆದರೆ ನಾನು ನಿಮಗೆ ಹೇಳುವದೇನಂದರೆ--ಅವನು ತನ್ನ ಸ್ನೇಹಿತನಾಗಿರುವದರಿಂದ ಎದ್ದು ಅವನಿಗೆ ಕೊಡದೆ ಹೋದರೂ ಅವನು ಮೇಲಿಂದ ಮೇಲೆ ಪೀಡಿಸಿ ಬೇಡುವದರಿಂದ ಎದ್ದು ಅವನಿಗೆ ಬೇಕಾದಷ್ಟು ಕೊಡುವನು. |
9
|
ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು. |
10
|
ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು; ಹುಡುಕುವವನು ಕಂಡುಕೊಳ್ಳುವನು; ತಟ್ಟುವವನಿಗೆ ತೆರೆಯಲ್ಪಡುವದು. |
11
|
ನಿಮ್ಮಲ್ಲಿ ತಂದೆ ಯಾಗಿರುವ ಯಾವನಾದರೂ ತನ್ನ ಮಗನು ರೊಟ್ಟಿ ಕೇಳಿದರೆ ಅವನಿಗೆ ಕಲ್ಲನ್ನು ಕೊಡುವನೇ? ಇಲ್ಲವೆ ವಿಾನನ್ನು ಕೇಳಿದರೆ ವಿಾನಿಗೆ ಬದಲಾಗಿ ಅವನಿಗೆ ಹಾವನ್ನು ಕೊಡುವನೇ? |
12
|
ಇಲ್ಲವೆ ಅವನು ಮೊಟ್ಟೆ ಯನ್ನು ಕೇಳಿದರೆ ಅವನಿಗೆ ಚೇಳನ್ನು ಕೊಡುವನೇ? |
13
|
ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ? |
14
|
ತರುವಾಯ ಆತನು ಒಂದು ಮೂಕದೆವ್ವವನ್ನು ಹೊರಡಿಸುತ್ತಿರುವಾಗ ಆದದ್ದೇನಂದರೆ, ಆ ದೆವ್ವವು ಹೊರಟು ಹೋದ ಮೇಲೆ ಆ ಮೂಕನು ಮಾತನಾಡಿ ದನು; ಅದಕ್ಕೆ ಜನರು ಆಶ್ಚರ್ಯಪಟ್ಟರು. |
15
|
ಆದರೆ ಅವರಲ್ಲಿ ಕೆಲವರು--ದೆವ್ವಗಳ ಅಧಿಪತಿಯಾದ ಬೆಲ್ಜೆ ಬೂಲನಿಂದ ಅವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು. |
16
|
ಬೇರೆಯವರು ಆತನನ್ನು ಶೋಧಿಸುವವ ರಾಗಿ ಆಕಾಶದಿಂದ ಒಂದು ಸೂಚಕ ಕಾರ್ಯವನ್ನು ತೋರಿಸುವಂತೆ ಆತನನ್ನು ಕೇಳಿದರು. |
17
|
ಆದರೆ ಆತನು ಅವರ ಅಲೋಚನೆಗಳನ್ನು ತಿಳಿದವನಾಗಿ ಅವರಿಗೆ--ತನ್ನಲ್ಲಿ ವಿರೋಧವಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುವದು; ಒಂದು ಮನೆಯು ತನಗೆ ವಿರೋಧವಾಗಿ ವಿಭಾಗಿಸಲ್ಪಟ್ಟರೆ ಅದು ಬಿದ್ದು ಹೋಗುವದು. |
18
|
ಸೈತಾನನು ಸಹ ತನಗೆ ವಿರೋಧವಾಗಿ ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನ ರಾಜ್ಯವು ನಿಲ್ಲುವದು ಹೇಗೆ? ಯಾಕಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಹೊರಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ. |
19
|
ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯ ತೀರಿಸುವವರಾಗಿರುವರು. |
20
|
ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ. |
21
|
ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು. |
22
|
ಆದರೆ ಅವನಿಗಿಂತ ಬಲಿ ಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ ಅವನು ನಂಬಿಕೊಂಡಿದ್ದ ಆಯುಧಗಳನ್ನು ಅವನಿಂದ ತಕ್ಕೊಂಡು ತನ್ನ ಸುಲಿಗೆಗಳನ್ನು ಹಂಚುವನು. |
23
|
ನನ್ನ ಜೊತೆಯಲ್ಲಿ ಇಲ್ಲದಿರುವವನು ನನಗೆ ವಿರೋಧವಾಗಿ ದ್ದಾನೆ; ನನ್ನೊಂದಿಗೆ ಕೂಡಿಸದೆ ಇರುವವನು ಚದರಿ ಸುತ್ತಾನೆ. |
24
|
ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದಮೇಲೆ ನೀರಿಲ್ಲದ ಸ್ಥಳಗಳಲ್ಲಿ ತಿರು ಗುತ್ತಾ ವಿಶ್ರಾಂತಿಯನ್ನು ಹುಡುಕಿ ಏನೂ ಕಾಣದೆ ಅದು--ನಾನು ಹೊರಟು ಬಂದ ನನ್ನ ಮನೆಗೆ ಹಿಂದಿ ರುಗುವೆನು ಎಂದು ಅಂದುಕೊಳ್ಳುತ್ತದೆ. |
25
|
ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿದ್ದನ್ನು ಕಂಡಿತು. |
26
|
ಆಗ ಅದು ಹೋಗಿ ತನಗಿಂತಲೂ ಕೆಟ್ಟವು ಗಳಾದ ಬೇರೆ ಏಳು ದುರಾತ್ಮಗಳನ್ನು ತನ್ನೊಂದಿಗೆ ಕರಕೊಂಡು ಒಳಗೆ ಸೇರಿ ಅಲ್ಲಿ ವಾಸಮಾಡುವವು; ಮತ್ತು ಆ ಮನುಷ್ಯನ ಕಡೇ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವದು ಅಂದನು. |
27
|
ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು. |
28
|
ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು. |
29
|
ಜನರು ಗುಂಪುಗುಂಪಾಗಿ ಕೂಡಿ ಬಂದಿದ್ದಾಗ ಆತನು--ಇದು ದುಷ್ಟಸಂತತಿಯು; ಇದು ಸೂಚಕ ಕಾರ್ಯವನ್ನು ಹುಡುಕುತ್ತದೆ. ಪ್ರವಾದಿಯಾದ ಯೋನ ನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡ ಲಾರದು. |
30
|
ಯೋನನು ನಿನೆವೆಯವರಿಗೆ ಸೂಚನೆ ಯಾಗಿದ್ದಂತೆಯೇ ಮನುಷ್ಯಕುಮಾರನು ಸಹ ಈ ಸಂತತಿಗೆ ಸೂಚನೆಯಾಗಿರುವನು. |
31
|
ನ್ಯಾಯ ತೀರ್ಪಿ ನಲ್ಲಿ ದಕ್ಷಿಣದ ರಾಣಿಯು ಈ ಸಂತತಿ ಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು; ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕೆ ಭೂಮಿಯ ಕಟ್ಟಕಡೆಯ ಭಾಗಗಳಿಂದ ಬಂದಳು; ಮತ್ತು ಇಗೋ, ಸೊಲೊಮೋನನಿಗಿಂತಲೂ ಹೆಚ್ಚಿನವನು ಇಲ್ಲಿದ್ದಾನೆ. |
32
|
ನಿನೆವೆಯವರು ನ್ಯಾಯತೀರ್ಪಿನಲ್ಲಿ ಈ ಸಂತತಿಯವ ರೊಂದಿಗೆ ಎದ್ದು ಇದನ್ನು ಖಂಡಿಸುವರು. ಯಾಕಂದರೆ ಯೋನನು ಸಾರಿದ್ದನ್ನು ಕೇಳಿ ಅವರು ಮಾನಸಾಂತರ ಪಟ್ಟರು; ಮತ್ತು ಇಗೋ, ಯೋನನಿಗಿಂತಲೂ ಹೆಚ್ಚಿನ ವನು ಇಲ್ಲಿದ್ದಾನೆ. |
33
|
ಯಾರೂ ದೀಪವನ್ನು ಹಚ್ಚಿ ಗುಪ್ತ ಸ್ಥಳದಲ್ಲಾಗಲಿ ಇಲ್ಲವೆ ಕೊಳಗದೊಳಗಾಗಲಿ ಇಡುವದಿಲ್ಲ; ಆದರೆ ಒಳಗೆ ಬರುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡು ತ್ತಾರಷ್ಟೆ. |
34
|
ಕಣ್ಣು ಶರೀರದ ಬೆಳಕಾಗಿದೆ; ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ; ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು. |
35
|
ಆದದರಿಂದ ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ; |
36
|
ಆದಕಾರಣ ಯಾವ ಭಾಗದಲ್ಲಿಯೂ ಕತ್ತಲೆಯಾಗಿ ರದೆ ನಿನ್ನ ಶರೀರವೆಲ್ಲವೂ ಪೂರ್ಣವಾಗಿ ಬೆಳಕಾಗಿರುವ ದಾದರೆ ಪ್ರಕಾಶಮಾನವಾದ ದೀಪವು ನಿನಗೆ ಬೆಳಕು ಕೊಡುವ ಪ್ರಕಾರ ಸಮಸ್ತವೂ ಬೆಳಕಾಗಿರುವದು ಎಂದು ಹೇಳಿದನು. |
37
|
ಆತನು ಮಾತನಾಡುತ್ತಿದ್ದಾಗ ಒಬ್ಬಾನೊಬ್ಬ ಫರಿಸಾಯನು ತನ್ನೊಂದಿಗೆ ಊಟಮಾಡಬೇಕೆಂದು ಆತನನ್ನು ಬೇಡಿಕೊಂಡನು. ಆಗ ಆತನು ಒಳಗೆ ಹೋಗಿ ಊಟಕ್ಕೆ ಕೂತುಕೊಂಡನು. |
38
|
ಆದರೆ ಊಟಕ್ಕೆ ಮೊದಲು ಆತನು ಕೈತೊಳಕೊಳ್ಳದೆ ಇರುವದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು. |
39
|
ಆಗ ಕರ್ತನು ಅವನಿಗೆ-- ಫರಿಸಾಯರಾದ ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನ ದಿಂದಲೂ ತುಂಬಿರುತ್ತದೆ |
40
|
ಮೂರ್ಖರೇ, ಹೊರ ಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ? |
41
|
ಆದರೆ ನಿಮಗೆ ಇರುವವುಗಳಲ್ಲಿ ನೀವು ದಾನಾಕೊಡಿರಿ; ಆಗ ಇಗೋ, ನಿಮಗೆ ಎಲ್ಲವು ಗಳು ಶುದ್ಧವಾಗಿರುವವು. |
42
|
ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು. |
43
|
ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸಭಾಮಂದಿರ ಗಳಲ್ಲಿ ಅತ್ಯುನ್ನತ ಸ್ಥಾನಗಳನ್ನೂ ಸಂತೆಗಳಲ್ಲಿ ವಂದನೆಗಳನ್ನೂ ಪ್ರೀತಿಸುತ್ತೀರಿ. |
44
|
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೊ! ಯಾಕಂದರೆ ನೀವು ಕಾಣಿಸದ ಸಮಾಧಿಗಳಂತೆ ಇದ್ದೀರಿ; ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು ಎಂದು ಹೇಳಿದನು. |
45
|
ಆಗ ನ್ಯಾಯಶಾಸ್ತ್ರಿಗಳಲ್ಲಿ ಒಬ್ಬನು ಆತನಿಗೆ-- ಬೋಧಕನೇ, ನೀನು ಇವುಗಳನ್ನು ಹೇಳುವದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀ ಅಂದನು. |
46
|
ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ. |
47
|
ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ. |
48
|
ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ. |
49
|
ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು. |
50
|
ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು. |
51
|
ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. |
52
|
ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು. |
53
|
ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು. |
54
|
ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು. |
Luke 11:18 Kannada Language Bible Words basic statistical display
COMING SOON ...