1
|
ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ. |
2
|
ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ. |
3
|
ಆದದರಿಂದ ನೀವು ಕತ್ತಲೆಯಲ್ಲಿ ಯಾವದನ್ನು ಮಾತನಾಡಿದ್ದೀರೋ ಅದು ಬೆಳಕಿನಲ್ಲಿ ಕೇಳಲ್ಪಡುವದು; ಕೋಣೆಗಳೊಳಗೆ ನೀವು ಕಿವಿಯಲ್ಲಿ ಮಾತನಾಡಿದ್ದು ಮಾಳಿಗೆಗಳ ಮೇಲೆ ಪ್ರಕಟಿಸ ಲ್ಪಡುವದು ಎಂದು ಹೇಳಲಾರಂಭಿಸಿದನು. |
4
|
ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ. |
5
|
ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. |
6
|
ಎರಡು ಕಾಸುಗಳಿಗೆ ಐದು ಗುಬ್ಬಿಗಳು ಮಾರಲ್ಪಡುತ್ತವಲ್ಲಾ? ಅವುಗಳಲ್ಲಿ ಒಂದಾದರೂ ದೇವರ ಮುಂದೆ ಮರೆತುಹೋಗುವದಿಲ್ಲ. |
7
|
ನಿಮ್ಮ ತಲೆಯ ಕೂದಲುಗಳು ಸಹ ಲೆಕ್ಕಿಸಲ್ಪಟ್ಟಿವೆ. ಆದದರಿಂದ ಭಯಪಡಬೇಡಿರಿ; ನೀವು ಬಹಳ ಗುಬ್ಬಿಗಳಿಗಿಂತಲೂ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ. |
8
|
ಇದಲ್ಲದೆ ನಾನೂ ನಿಮಗೆ ಹೇಳುವದೇನಂದರೆ--ಯಾವನಾದರೂ ಮನು ಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ಮನುಷ್ಯ ಕುಮಾರನು ಸಹ ದೇವದೂತರ ಮುಂದೆ ಅವನನ್ನು ಒಪ್ಪಿಕೊಳ್ಳುವನು. |
9
|
ಆದರೆ ಯಾವನು ಮನುಷ್ಯರ ಮುಂದೆ ನನ್ನನ್ನು ಅಲ್ಲಗಳೆಯುವನೋ ಅವನು ದೇವದೂತರ ಮುಂದೆ ಅಲ್ಲಗಳೆಯಲ್ಪಡುವನು. |
10
|
ಯಾವನಾದರೂ ಮನುಷ್ಯಕುಮಾರನಿಗೆ ವಿರೋಧ ವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸ ಲ್ಪಡುವದು; ಆದರೆ ಪರಿಶುದ್ಧಾತ್ಮನಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದು ಅವನಿಗೆ ಕ್ಷಮಿಸಲ್ಪ ಡುವದಿಲ್ಲ. |
11
|
ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ. |
12
|
ಯಾಕಂದರೆ ಅದೇ ಗಳಿಗೆಯಲ್ಲಿ ನೀವು ಹೇಳಬೇಕಾದದ್ದನ್ನು ಪರಿಶುದ್ಧಾತ್ಮನು ನಿಮಗೆ ಕಲಿಸುವನು ಅಂದನು. |
13
|
ಆಗ ಗುಂಪಿನಲ್ಲಿದ್ದ ಒಬ್ಬನು ಆತನಿಗೆ--ಬೋಧ ಕನೇ, ಆಸ್ತಿಯನ್ನು ಪಾಲುಮಾಡಿ ನನಗೆ ಕೊಡುವಂತೆ ನನ್ನ ಸಹೋದರನಿಗೆ ಹೇಳು ಅಂದನು. |
14
|
ಅದಕ್ಕೆ ಆತನು ಅವನಿಗೆ--ಮನುಷ್ಯನೇ, ನಿಮ್ಮ ಮೇಲೆ ನ್ಯಾಯಾಧಿಪತಿಯನ್ನಾಗಿ ಇಲ್ಲವೆ ಪಾಲುಮಾಡುವ ವನನ್ನಾಗಿ ನನ್ನನ್ನು ಯಾರು ಮಾಡಿದರು ಎಂದು ಕೇಳಿದನು. |
15
|
ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು. |
16
|
ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು. |
17
|
ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು-- |
18
|
ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು |
19
|
ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. |
20
|
ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು. |
21
|
ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು. |
22
|
ಆತನು ತನ್ನ ಶಿಷ್ಯರಿಗೆ--ನೀವು ನಿಮ್ಮ ಪ್ರಾಣಕ್ಕೆ ಏನು ತಿನ್ನಬೇಕು ಇಲ್ಲವೆ ನಿಮ್ಮ ದೇಹಕ್ಕೆ ಏನು ಹೊದ್ದು ಕೊಳ್ಳಬೇಕು ಎಂದು ಚಿಂತೆ ಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. |
23
|
ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು. |
24
|
ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ; ಅವುಗಳಿಗೆ ಉಗ್ರಾಣವಾಗಲೀ ಕಣಜವಾಗಲೀ ಇಲ್ಲ; ಆದಾಗ್ಯೂ ದೇವರು ಅವುಗಳಿಗೆ ಆಹಾರ ಕೊಡುತ್ತಾನೆ; ನೀವು ಪಕ್ಷಿಗಳಿಗಿಂತ ಎಷ್ಟೋ ಹೆಚ್ಚಿನವರಾಗಿದ್ದೀರಲ್ಲಾ. |
25
|
ನಿಮ್ಮಲ್ಲಿ ಯಾವನು ಚಿಂತೆ ಮಾಡಿ ತನ್ನ ನೀಳಕ್ಕೆ ಒಂದು ಮೊಳವನ್ನು ಕೂಡಿಸಿ ಯಾನು? |
26
|
ಹಾಗಾದರೆ ಅತ್ಯಲ್ಪವಾಗಿರುವದನ್ನು ನೀವು ಮಾಡಲಾರದವರಾಗಿದ್ದರೆ ಉಳಿದವುಗಳಿಗೋಸ್ಕರ ನೀವು ಚಿಂತೆಮಾಡುವದೇನು? |
27
|
ಹೂವುಗಳು ಹೇಗೆ ಬೆಳೆಯುತ್ತವೆ ಯೋಚಿಸಿರಿ; ಅವು ಕಷ್ಟಪಡು ವದಿಲ್ಲ, ನೂಲುವದಿಲ್ಲ; ಆದಾಗ್ಯೂ ಸೊಲೊಮೋ ನನು ತನ್ನ ಎಲ್ಲಾ ವೈಭವದಲ್ಲಿ ಸಹ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ. |
28
|
ಓ ಅಲ್ಪ ವಿಶ್ವಾಸಿಗಳೇ, ಹಾಗಾದರೆ ಈಹೊತ್ತು ಹೊಲದಲ್ಲಿದ್ದು ನಾಳೆ ಒಲೆಯಲ್ಲಿ ಹಾಕಲ್ಪಡುವ ಹುಲ್ಲಿಗೆ ದೇವರು ಈ ಪ್ರಕಾರ ಉಡಿಸಿದರೆ ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವನಲ್ಲವೇ? |
29
|
ನೀವು ಏನು ತಿನ್ನಬೇಕು ಇಲ್ಲವೆ ನೀವು ಏನು ಕುಡಿಯಬೇಕು ಎಂದು ತವಕಪಡಬೇಡಿರಿ; ನೀವು ಅನುಮಾನದ ಮನಸ್ಸಿನವ ರಾಗಿರಬೇಡಿರಿ. |
30
|
ಯಾಕಂದರೆ ಇವೆಲ್ಲವುಗಳಿಗಾಗಿ ಲೋಕದ ಜನಾಂಗಗಳು ಬಹಳವಾಗಿ ತವಕಪಡುತ್ತಾರೆ; ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ಬಲ್ಲನು. |
31
|
ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ. ಆಗ ಇವೆಲ್ಲವುಗಳು ನಿಮಗೆ ಕೂಡಿಸಲ್ಪಡುವವು. |
32
|
ಚಿಕ್ಕ ಹಿಂಡೇ, ಭಯಪಡಬೇಡ; ಯಾಕಂದರೆ ನಿಮಗೆ ರಾಜ್ಯವನ್ನು ಕೊಡುವದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ. |
33
|
ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ. |
34
|
ಯಾಕಂದರೆ ನಿಮ್ಮ ಸಂಪತ್ತು ಇರುವಲ್ಲಿಯೇ ನಿಮ್ಮ ಹೃದಯವು ಸಹ ಇರುವದು. |
35
|
ನಿಮ್ಮ ನಡುಗಳು ಕಟ್ಟಿರಲಿ; ನಿಮ್ಮ ದೀಪಗಳು ಉರಿಯುತ್ತಿರಲಿ. |
36
|
ನೀವಂತೂ ತಮ್ಮ ಒಡೆಯನು ಮದುವೆಯಿಂದ ಯಾವಾಗ ಹಿಂದಿರುಗುವನೋ ಎಂದು ಕಾಯುವ ಮತ್ತು ಅವನು ಬಂದು ತಟ್ಟಿದಾಗ ತಕ್ಷಣವೇ ಅವನಿಗೆ ತೆರೆಯುವ ಮನುಷ್ಯರಂತೆ ಇರ್ರಿ. |
37
|
ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು. |
38
|
ಅವನು ಎರಡನೇ ಜಾವದಲ್ಲಿ ಇಲ್ಲವೇ ಮೂರನೇ ಜಾವದಲ್ಲಿ ಬಂದು ಅವರನ್ನು ಹಾಗೆಯೇ ಕಂಡರೆ ಆ ಸೇವಕರು ಧನ್ಯರು. |
39
|
ಕಳ್ಳನು ಯಾವಗಳಿಗೆಯಲ್ಲಿ ಬರುವ ನೆಂಬದು ಮನೇ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಕನ್ನಾಕೊರೆಯ ಗೊಡಿಸುತ್ತಿರಲಿಲ್ಲವೆಂಬದನ್ನು ತಿಳುಕೊಳ್ಳಿರಿ. |
40
|
ಆದ ಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ ಎಂದು ಹೇಳಿದನು. |
41
|
ಆಗ ಪೇತ್ರನು ಆತನಿಗೆ--ಕರ್ತನೇ, ನೀನು ಈ ಸಾಮ್ಯವನ್ನು ನಮಗೆ ಹೇಳುತ್ತೀಯೋ ಇಲ್ಲವೆ ಎಲ್ಲರಿಗೂ ಹೇಳುತ್ತೀಯೋ ಎಂದು ಕೇಳಿದ್ದಕ್ಕೆ |
42
|
ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು? |
43
|
ತನ್ನ ಒಡೆಯನು ಬಂದಾಗ ಯಾವನು ಹೀಗೆ ಮಾಡುವದನ್ನು ಕಾಣುವನೋ ಆ ಸೇವಕನು ಧನ್ಯನು; |
44
|
ಅವನು ತನಗಿರುವ ಎಲ್ಲಾದರ ಮೇಲೆ ಅವನನ್ನು ಅಧಿಕಾರಿಯನ್ನಾಗಿ ನೇಮಿಸುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. |
45
|
ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ |
46
|
ಅವನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಸೇವಕನ ಒಡೆಯನು ಬಂದು ಅವನನ್ನು ಕಠಿಣವಾಗಿ ಛೇದಿಸಿ ಅವನಿಗೆ ನಂಬಿಕೆಯಿಲ್ಲದವರ ಕೂಡ ಪಾಲನ್ನು ನೇಮಕ ಮಾಡುವನು. |
47
|
ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು. |
48
|
ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ |
49
|
ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವದಕ್ಕಾಗಿ ಬಂದೆನು; ಅದು ಈಗಾಗಲೇ ಹೊತ್ತಿಕೊಂಡಿದ್ದರೆ ಮತ್ತೇನು ನನಗೆ ಬೇಕು? |
50
|
ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ! |
51
|
ನಾನು ಭೂಮಿಯ ಮೇಲೆ ಸಮಾಧಾನವನ್ನು ಕೊಡುವದಕ್ಕಾಗಿ ಬಂದಿದ್ದೇ ನೆಂದು ನೀವು ಭಾವಿಸುತ್ತೀರೋ? ಇಲ್ಲ, ಭೇದವನ್ನು ಉಂಟುಮಾಡುವದಕ್ಕೆ ಬಂದಿದ್ದೇನೆಂದು ನಾನು ನಿಮಗೆ ಹೇಳುತ್ತೇನೆ. |
52
|
ಇಂದಿನಿಂದ ಒಂದು ಮನೆಯಲ್ಲಿ ಐದುಮಂದಿ ಭೇದವಾಗಿ ಇಬ್ಬರಿಗೆ ವಿರೋಧವಾಗಿ ಮೂವರು ಮೂವರಿಗೆ ವಿರೋಧವಾಗಿ ಇಬ್ಬರು ಇರುವರು. |
53
|
ಮಗನಿಗೆ ವಿರೋಧವಾಗಿ ತಂದೆಯೂ ತಂದೆಗೆ ವಿರೋಧವಾಗಿ ಮಗನೂ ಮಗಳಿಗೆ ವಿರೋಧವಾಗಿ ತಾಯಿಯೂ ತಾಯಿಗೆ ವಿರೋಧವಾಗಿ ಮಗಳೂ ತನ್ನ ಸೊಸೆಗೆ ವಿರೋಧವಾಗಿ ಅತ್ತೆಯೂ ತನ್ನ ಅತ್ತೆಗೆ ವಿರೋಧವಾಗಿ ಸೊಸೆಯೂ ವಿಭಾಗಿಸ ಲ್ಪಡುವರು. |
54
|
ಆತನು ಇನ್ನು ಜನರಿಗೆ--ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡು ವಾಗ--ಮಳೆ ಬರುವದೆಂದು ತಕ್ಷಣವೇ ಅನ್ನುತ್ತೀರಿ; ಹಾಗೆಯೇ ಆಗುವದು. |
55
|
ದಕ್ಷಿಣಗಾಳಿ ಬೀಸುವದನ್ನು ನೀವು ನೋಡುವಾಗ--ಸೆಕೆಯಾಗುವದು ಎಂದು ನೀವು ಅನ್ನುತ್ತೀರಿ, ಅದು ಹಾಗೆಯೇ ಆಗುತ್ತದೆ. |
56
|
ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಈ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ? |
57
|
ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಯಾಕೆ ನಿರ್ಣಯಿಸಿಕೊಳ್ಳುವದಿಲ್ಲ? |
58
|
ನೀನು ನಿನ್ನ ಎದುರಾಳಿಯ ಸಂಗಡ ನ್ಯಾಯಾ ಧಿಪತಿಯ ಎದುರಿಗೆ ಹೋಗುವಾಗ ಮಾರ್ಗದಲ್ಲಿಯೇ ಅವನಿಂದ ಬಿಡಿಸಿಕೊಳ್ಳುವದಕ್ಕೆ ಪ್ರಯತ್ನಮಾಡು; ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆದಾನು; ಆಗ ನ್ಯಾಯಾಧಿ ಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು ಮತ್ತು ಅಧಿಕಾರಿಯು ನಿನ್ನನ್ನು ಸೆ |
59
|
ನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು. |
Luke 12:1 Kannada Language Bible Words basic statistical display
COMING SOON ...