1
|
ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾಗಿರುವ ಸುವಾರ್ತೆಯ ಪ್ರಾರಂಭವು. |
2
|
ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ. |
3
|
ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು. |
4
|
ಯೋಹಾನನು ಅಡವಿಯಲ್ಲಿ ಬಾಪ್ತಿಸ್ಮ ಮಾಡಿಸುತ್ತಾ ಪಾಪಗಳ ಪರಿ ಹಾರಕ್ಕಾಗಿ ಮಾನಸಾಂತರದ ಬಾಪ್ತಿಸ್ಮವನ್ನು ಸಾರಿದನು. |
5
|
ಆಗ ಯೂದಾಯ ದೇಶವೆಲ್ಲವೂ ಯೆರೂಸಲೇಮಿ ನವರೂ ಅವನ ಬಳಿಗೆ ಹೊರಟು ಹೋಗಿ ತಮ್ಮ ಪಾಪಗಳನ್ನು ಅರಿಕೆ ಮಾಡುತ್ತಾ ಯೊರ್ದನ್ ನದಿಯಲ್ಲಿ ಎಲ್ಲರೂ ಅವನಿಂದ ಬಾಪ್ತಿಸ್ಮ ಮಾಡಿಸಿ ಕೊಂಡರು. |
6
|
ಯೋಹಾನನು ಒಂಟೇ ಕೂದಲಿನ ಉಡುಪನ್ನು ಧರಿಸಿಕೊಂಡು ತನ್ನ ನಡುವಿಗೆ ಚರ್ಮದ ನಡುಕಟ್ಟನ್ನು ಕಟ್ಟಿಕೊಂಡವನಾಗಿದ್ದು ಮಿಡಿತೆಗಳನ್ನೂ ಕಾಡುಜೇನನ್ನೂ ತಿನ್ನುತ್ತಿದ್ದನು. |
7
|
ಮತ್ತು ಅವನು--ನನಗಿಂತ ಶಕ್ತನಾಗಿರುವಾತನು ನನ್ನ ಹಿಂದೆ ಬರುತ್ತಾನೆ; ನಾನು ಬೊಗ್ಗಿಕೊಂಡು ಆತನ ಕೆರಗಳ ಬಾರನ್ನು ಬಿಚ್ಚುವದಕ್ಕೂ ಯೋಗ್ಯನಲ್ಲ; |
8
|
ನಾನು ನಿಮಗೆ ನೀರಿನಿಂದ ಬಾಪ್ತಿಸ್ಮ ಮಾಡಿಸಿದ್ದು ನಿಜವೇ. ಆತನಾ ದರೋ ನಿಮಗೆ ಪವಿತ್ರಾತ್ಮನಿಂದ ಬಾಪ್ತಿಸ್ಮ ಮಾಡಿಸು ವನು ಎಂದು ಸಾರಿ ಹೇಳುತ್ತಿದ್ದನು. |
9
|
ಆ ದಿವಸಗಳಲ್ಲಿ ಆದದ್ದೇನಂದರೆ, ಯೇಸು ಗಲಿಲಾಯದ ನಜರೇತಿನಿಂದ ಬಂದು ಯೊರ್ದನಿನಲ್ಲಿ ಯೋಹಾನನಿಂದ ಬಾಪ್ತಿಸ್ಮಮಾಡಿಸಿಕೊಂಡನು. |
10
|
ಆತನು ನೀರಿನೊಳಗಿಂದ ಮೇಲಕ್ಕೆ ಬಂದ ಕೂಡಲೆ ಆಕಾಶಗಳು ತೆರೆದಿರುವದನ್ನೂ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದು ಬರುವದನ್ನೂ ಯೋಹಾನನು ಕಂಡನು. |
11
|
ಆಗ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ನೀನೇ ಎಂಬ ಧ್ವನಿಯು ಪರಲೋಕ ದಿಂದ ಬಂದಿತು. |
12
|
ತಕ್ಷಣವೇ ಆತ್ಮನು ಆತನನ್ನು ಅಡವಿಯೊಳಕ್ಕೆ ನಡಿಸಿದನು. |
13
|
ಆತನು ನಾಲ್ವತ್ತು ದಿವಸ ಅಡವಿ ಯಲ್ಲಿ ಸೈತಾನನಿಂದ ಶೋಧಿಸಲ್ಪಡುತ್ತಾ ಕಾಡು ಮೃಗ ಗಳೊಂದಿಗೆ ಇದ್ದನು; ಮತ್ತು ದೂತರು ಆತನನ್ನು ಉಪಚರಿಸಿದರು. |
14
|
ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ-- |
15
|
ಕಾಲವು ಪರಿಪೂರ್ಣವಾಯಿತು. ದೇವರ ರಾಜ್ಯವು ಸವಿಾಪ ವಾಗಿದೆ; ನೀವು ಮಾನಸಾಂತರಪಟ್ಟು ಸುವಾರ್ತೆ ಯನ್ನು ನಂಬಿರಿ ಅಂದನು. |
16
|
ಆತನು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಸೀಮೋನನೂ ಅವನ ಸಹೋ ದರನಾದ ಅಂದ್ರೆಯನೂ ಸಮುದ್ರದಲ್ಲಿ ಬಲೆ ಬೀಸುತ್ತಿರುವದನ್ನು ಆತನು ಕಂಡನು; ಯಾಕಂದರೆ ಅವರು ಬೆಸ್ತರಾಗಿದ್ದರು. |
17
|
ಯೇಸು ಅವರಿಗೆ--ನೀವು ನನ್ನ ಹಿಂದೆ ಬನ್ನಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರಾಗುವಂತೆ ನಾನು ನಿಮ್ಮನ್ನು ಮಾಡುವೆನು ಅಂದನು. |
18
|
ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದ್ದರು. |
19
|
ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು. |
20
|
ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು. |
21
|
ಆಗ ಅವರು ಕಪೆರ್ನೌಮಿಗೆ ಹೋದರು; ಕೂಡಲೆ ಆತನು ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಗೆ ಪ್ರವೇಶಿಸಿ ಬೋಧಿಸಿದನು. |
22
|
ಅವರು ಆತನ ಬೋಧನೆಗೆ ಆಶ್ಚರ್ಯಪಟ್ಟರು; ಯಾಕಂದರೆ ಆತನು ಶಾಸ್ತ್ರಿಗಳಂತೆ ಅಲ್ಲ, ಅಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು. |
23
|
ಆಗ ಅವರ ಸಭಾಮಂದಿ ರದಲ್ಲಿ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು. |
24
|
ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು. |
25
|
ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳ ಗಿಂದ ಹೊರಗೆ ಬಾ ಅಂದನು. |
26
|
ಆಗ ಅಶುದ್ಧಾತ್ಮವು ಅವನನ್ನು ಒದ್ದಾಡಿಸಿದ ಮೇಲೆ ಮಹಾಶಬ್ದದಿಂದ ಕೂಗಿ ಅವನೊಳಗಿಂದ ಹೊರಗೆ ಬಂದಿತು. |
27
|
ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು. |
28
|
ಕೂಡಲೆ ಆತನ ಕೀರ್ತಿಯು ಗಲಿಲಾಯದ ಸುತ್ತಮುತ್ತಲಿನ ಎಲ್ಲಾ ಪ್ರದೇಶದಲ್ಲಿ ಹಬ್ಬಿತು. |
29
|
ಅವನು ಸಭಾಮಂದಿರದಿಂದ ಹೊರಗೆ ಬಂದ ಕೂಡಲೆ ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಯೊಳಕ್ಕೆ ಅವರು ಪ್ರವೇಶಿಸಿದರು. |
30
|
ಆದರೆ ಸೀಮೋನನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿಕೊಂಡಿದ್ದಳು; ಕೂಡಲೆ ಅವರು ಆಕೆಯ ವಿಷಯವಾಗಿ ಆತನಿಗೆ ತಿಳಿಸಿದರು. |
31
|
ಆತನು ಬಂದು ಆಕೆಯ ಕೈಯನ್ನು ಹಿಡಿದು ಅವಳನ್ನು ಮೇಲಕ್ಕೆ ಎತ್ತಿದನು; ಕೂಡಲೆ ಜ್ವರವು ಆಕೆಯನ್ನು ಬಿಟ್ಟು ಹೋಯಿತು; ಆಕೆಯು ಅವರಿಗೆ ಉಪಚಾರ ಮಾಡಿದಳು. |
32
|
ಸಂಜೆಯಲ್ಲಿ ಸೂರ್ಯನು ಮುಣುಗಿದ್ದಾಗ ಅವರು ಅಸ್ವಸ್ಥತೆಯುಳ್ಳವರೆಲ್ಲರನ್ನೂ ದೆವ್ವ ಹಿಡಿದವರನ್ನೂ ಆತನ ಬಳಿಗೆ ತಂದರು. |
33
|
ಆಗ ಪಟ್ಟಣವೆಲ್ಲಾ ಬಾಗಲ ಬಳಿಯಲ್ಲಿ ಒಟ್ಟಾಗಿ ಕೂಡಿಬಂದಿತು. |
34
|
ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ. |
35
|
ಮುಂಜಾನೆ ಹೊತ್ತು ಮೂಡುವದಕ್ಕಿಂತ ಬಹಳ ಮುಂಚಿತವಾಗಿ ಆತನು ಎದ್ದು ಹೊರಗೆ ನಿರ್ಜನ ವಾದ ಸ್ಥಳಕ್ಕೆ ಹೊರಟುಹೋಗಿ ಅಲ್ಲಿ ಪ್ರಾರ್ಥನೆ ಮಾಡಿದನು. |
36
|
ಸೀಮೋನನೂ ಅವನ ಸಂಗಡ ಇದ್ದವರೂ ಆತನ ಹಿಂದೆ ಹೋದರು. |
37
|
ಅವರು ಆತನನ್ನು ಕಂಡುಕೊಂಡಾಗ ಆತನಿಗೆ--ಎಲ್ಲರೂ ನಿನ್ನನ್ನು ಹುಡುಕುತ್ತಾರೆ ಅಂದದ್ದಕ್ಕೆ |
38
|
ಆತನು ಅವರಿಗೆ--ನಾವು ಮುಂದಿನ ಊರುಗಳಿಗೆ ಹೋಗೋಣ; ಯಾಕಂದರೆ ನಾನು ಅಲ್ಲಿಯೂ ಸಾರಬೇಕಾಗಿದೆ; ಇದಕ್ಕಾಗಿಯೇ ನಾನು ಹೊರಟು ಬಂದಿದ್ದೇನೆ ಎಂದು ಹೇಳಿದನು. |
39
|
ಮತ್ತು ಆತನು ಗಲಿಲಾಯದಲ್ಲೆಲ್ಲಾ ಅವರ ಸಭಾಮಂದಿರಗಳಲ್ಲಿ ಸಾರಿ ದೆವ್ವಗಳನ್ನು ಬಿಡಿಸಿದನು. |
40
|
ಆಗ ಒಬ್ಬ ಕುಷ್ಠರೋಗಿಯು ಆತನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿ ಆತನಿಗೆ -- ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಬೇಡಿಕೊಂಡನು. |
41
|
ಆಗ ಯೇಸು ಕನಿಕರಪಟ್ಟು ತನ್ನ ಕೈನೀಡಿ ಅವನನ್ನು ಮುಟ್ಟಿ ಅವನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. |
42
|
ಹೀಗೆ ಆತನು ಹೇಳಿದ ಕೂಡಲೆ ಆ ಕುಷ್ಠವು ತಕ್ಷಣವೇ ಅವನಿಂದ ಹೊರಟುಹೋಗಿ ಅವನು ಶುದ್ಧನಾದನು. |
43
|
ಆತನು ಅವನಿಗೆ ನೇರವಾಗಿ ಆಜ್ಞಾಪಿಸಿ ಕೂಡಲೆ ಕಳುಹಿಸಿದನು; |
44
|
ಅವನಿಗೆ ಹೇಳಿದ್ದೇನಂದರೆ--ಯಾವ ಮನುಷ್ಯನಿಗೂ ಏನೂ ಹೇಳಬೇಡ ನೋಡು; ಆದರೆ ನೀನು ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ನಿನ್ನ ಶುದ್ಧಿಗಾಗಿ ಮೋಶೆಯು ಆಜ್ಞಾಪಿಸಿದವುಗಳನ್ನು ಅರ್ಪಿಸು ಅಂದನು. |
45
|
ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ |
Mark 1:14 Kannada Language Bible Words basic statistical display
COMING SOON ...