1
|
ಸಬ್ಬತ್ತು ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಯಾದ ಮರಿಯಳೂ ಮತ್ತು ಸಲೋಮೆಯೂ ಆತನಿಗೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡು ಕೊಂಡು ಬಂದರು. |
2
|
ವಾರದ ಮೊದಲನೆಯ ದಿನ ನಸುಕಿನಲ್ಲಿ ಸೂರ್ಯನು ಉದಯಿಸುವಾಗ ಅವರು ಸಮಾಧಿಯ ಬಳಿಗೆ ಬಂದರು, |
3
|
ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು. |
4
|
ಯಾಕಂದರೆ ಅದು ಬಹಳ ದೊಡ್ಡದಾ ಗಿತ್ತು. ಆದರೆ ಅವರು ನೋಡಿ ಆ ಕಲ್ಲು ಉರುಳಿಸ ಲ್ಪಟ್ಟದ್ದನ್ನು ಕಂಡರು. |
5
|
ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು. |
6
|
ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ; |
7
|
ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು. |
8
|
ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ. |
9
|
ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು. |
10
|
ಆತನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಹೇಳಿದಳು. |
11
|
ಆದರೆ ಆತನು ಬದುಕಿದ್ದಾನೆಂದೂ ಆಕೆಯು ಆತನನ್ನು ನೋಡಿದ್ದಾಳೆಂದೂ ಅವರು ಕೇಳಿದರು; ಆದರೂ ನಂಬಲಿಲ್ಲ. |
12
|
ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಆತನು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು. |
13
|
ಅವರು ಹೋಗಿ ಉಳಿದವರಿಗೆ ತಿಳಿಸಿದರು; ಆದರೆ ಅವರನ್ನೂ ಅವರು ನಂಬಲಿಲ್ಲ. |
14
|
ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು. |
15
|
ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ. |
16
|
ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು. |
17
|
ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು; |
18
|
ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು. |
19
|
ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು. |
20
|
ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್. |
Mark 16:3 Kannada Language Bible Words basic statistical display
COMING SOON ...