1
|
ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು. |
2
|
ಆಗ ಜನರ ದೊಡ್ಡ ಸಮೂಹಗಳು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ದೋಣಿ ಯನ್ನು ಹತ್ತಿ ಕೂತುಕೊಂಡನು. ಮತ್ತು ಆ ಸಮೂಹ ದವರೆಲ್ಲಾ ದಡದ ಮೇಲೆ ನಿಂತಿದ್ದರು. |
3
|
ಆಗ ಆತನು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದೇನಂದರೆ--ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟನು. |
4
|
ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು; ಆಗ ಪಕ್ಷಿಗಳು ಬಂದು ಅವು ಗಳನ್ನು ನುಂಗಿಬಿಟ್ಟವು. |
5
|
ಕೆಲವು ಬಹಳ ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು; ಅಲ್ಲಿ ಆಳವಾದ ಮಣ್ಣು ಇಲ್ಲದ್ದರಿಂದ ತಕ್ಷಣವೇ ಅವು ಮೊಳೆತವು; |
6
|
ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು. |
7
|
ಮತ್ತು ಕೆಲವು ಮುಳ್ಳುಗಳಲ್ಲಿ ಬಿದ್ದವು; ಆಗ ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು. |
8
|
ಆದರೆ ಬೇರೆಯವುಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಕೆಲವು ನೂರರಷ್ಟು ಕೆಲವು ಅರವತ್ತರಷ್ಟು ಕೆಲವು ಮೂವತ್ತರಷ್ಟು ಫಲಕೊಟ್ಟವು. |
9
|
ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು. |
10
|
ತರುವಾಯ ಶಿಷ್ಯರು ಬಂದು ಆತನಿಗೆ--ನೀನು ಸಾಮ್ಯಗಳಲ್ಲಿ ಅವರೊಂದಿಗೆ ಯಾಕೆ ಮಾತನಾಡುತ್ತೀ ಎಂದು ಕೇಳಲು |
11
|
ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ. |
12
|
ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಮತ್ತು ಅವನಿಗೆ ಹೆಚ್ಚು ಸಮೃದ್ಧಿಯಾಗುವದು; ಆದರೆ ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು. |
13
|
ಆದದರಿಂದ ನಾನು ಅವರಿಗೆ ಸಾಮ್ಯಗಳಲ್ಲಿ ಮಾತ ನಾಡುತ್ತೇನೆ; ಯಾಕಂದರೆ ಅವರು ನೋಡಿದರೂ ಕಾಣುವದಿಲ್ಲ ಮತ್ತು ಕೇಳಿದರೂ ತಿಳುಕೊಳ್ಳುವದಿಲ್ಲ; ಇಲ್ಲವೆ ಅವರು ಗ್ರಹಿಸುವದು ಇಲ್ಲ |
14
|
ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ. |
15
|
ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ |
16
|
ಆದರೆ ನಿಮ್ಮ ಕಣ್ಣುಗಳು ನೋಡುವದ ರಿಂದಲೂ ನಿಮ್ಮ ಕಿವಿಗಳು ಕೇಳುವದರಿಂದಲೂ ಅವು ಧನ್ಯವಾದವುಗಳೇ. |
17
|
ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ನೀವು ನೋಡುವಂಥವುಗಳನ್ನು ಮತ್ತು ಕೇಳುವಂಥವುಗಳನ್ನು ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೋಡುವದಕ್ಕೂ ಕೇಳುವದಕ್ಕೂ ಅಪೇಕ್ಷಿಸಿದರು; ಆದರೆ ಅವರು ನೋಡಲಿಲ್ಲ ಮತ್ತು ಕೇಳಲಿಲ್ಲ. |
18
|
ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ: |
19
|
ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ. |
20
|
ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ; |
21
|
ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು. |
22
|
ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು. |
23
|
ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ. |
24
|
ಆತನು ಮತ್ತೊಂದು ಸಾಮ್ಯವನ್ನು ಹೇಳಿದ್ದೇ ನಂದರೆ--ಪರಲೋಕ ರಾಜ್ಯವು ಒಳ್ಳೇ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ್ದ ಒಬ್ಬ ಮನುಷ್ಯನಿಗೆ ಹೋಲಿಕೆ ಯಾಗಿದೆ. |
25
|
ಹೇಗಂದರೆ ಜನರು ನಿದ್ರೆ ಮಾಡುತ್ತಿದ್ದಾಗ ಅವನ ವೈರಿಯು ಬಂದು ಗೋದಿಯ ನಡುವೆ ಹಣಜಿ ಯನ್ನು ಬಿತ್ತಿ ಹೊರಟು ಹೋದನು. |
26
|
ಅದು ಮೊಳೆತು ಫಲಕೊಟ್ಟಾಗ ಹಣಜಿ ಸಹ ಕಾಣಿಸಿ ಕೊಂಡಿತು. |
27
|
ಆದದರಿಂದ ಮನೇಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ--ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೇ ಬೀಜವನ್ನು ಬಿತ್ತಿದಿ ಯಲ್ಲಾ? ಹಾಗಾದರೆ ಈ ಹಣಜಿಯು ಎಲ್ಲಿಂದ ಬಂತು ಎಂದು ಕೇಳಿದರು. |
28
|
ಅವನು ಅವರಿಗೆ--ಒಬ್ಬ ವೈರಿ ಯು ಇದನ್ನು ಮಾಡಿದ್ದಾನೆ ಅಂದನು. ಆದರೆ ಸೇವಕರು ಅವನಿಗೆ--ಹಾಗಾದರೆ ನಾವು ಹೋಗಿ ಅವುಗಳನ್ನು ಕೂಡಿಸುವಂತೆ ನೀನು ಇಷ್ಟಪಡುತ್ತೀಯೋ ಎಂದು ಕೇಳಿದರು. |
29
|
ಆದರೆ ಅವನು--ಬೇಡ, ನೀವು ಹಣಜಿಯನ್ನು ಕೂಡಿಸುವಾಗ ಅವುಗಳೊಂದಿಗೆ ಗೋದಿಯನ್ನೂ ಕಿತ್ತೀರಿ. |
30
|
ಸುಗ್ಗೀಕಾಲದ ವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ; ಸುಗ್ಗೀಕಾಲದಲ್ಲಿ ನಾನು ಕೊಯ್ಯುವವರಿಗೆ--ಮೊದಲು ಹಣಜಿಯನ್ನು ಕೂಡಿಸಿ ಅದನ್ನು ಸುಡುವದಕ್ಕೆ ಹೊರೆ ಕಟ್ಟಿರಿ; ಆದರೆ ಗೋದಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು ಅಂದನು. |
31
|
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ. |
32
|
ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ. |
33
|
ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ. |
34
|
ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ. |
35
|
ಹೀಗೆ--ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು; ಲೋಕದ ಅಸ್ತಿವಾರದಿಂದ ಮರೆಯಾಗಿ ಇಡಲ್ಪಟ್ಟವುಗಳನ್ನು ನಾನು ಹೊರಪಡಿಸುವೆನು ಎಂದು ಪ್ರವಾದಿಯಿಂದ ಹೇಳಲ್ಪಟ್ಟದ್ದು ನೆರವೇರಿತು. |
36
|
ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು. |
37
|
ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು; |
38
|
ಹೊಲವು ಈ ಲೋಕ; ಒಳ್ಳೇ ಬೀಜವು ರಾಜ್ಯದ ಮಕ್ಕಳಾಗಿದ್ದಾರೆ; ಆದರೆ ಹಣಜಿಯು ಕೆಡುಕನ ಮಕ್ಕಳಾಗಿದ್ದಾರೆ. |
39
|
ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ. |
40
|
ಹೇಗೆ ಹಣಜಿಯನ್ನು ಕೂಡಿಸಿ ಬೆಂಕಿಯಲ್ಲಿ ಸುಡು ವರೋ ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವದು. |
41
|
ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; |
42
|
ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು. |
43
|
ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ. |
44
|
ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ. |
45
|
ಪರಲೋಕರಾಜ್ಯವು ಒಳ್ಳೇ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ. |
46
|
ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಂಡನು. |
47
|
ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ. |
48
|
ಅದು ತುಂಬಿದಾಗ ಅವರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಪಾತ್ರೆಗಳಲ್ಲಿ ತುಂಬಿಸಿ ಕೆಟ್ಟವುಗಳನ್ನು ಹೊರಗೆ ಬಿಸಾಡಿದರು. |
49
|
ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು; ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು. |
50
|
ಮತ್ತು ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು ಎಂದು ಹೇಳಿದನು. |
51
|
ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು. |
52
|
ಆತನು ಅವರಿಗೆ--ಆದಕಾರಣ ಪರಲೋಕ ರಾಜ್ಯದ ವಿಷಯವಾಗಿ ಶಿಕ್ಷಣಹೊಂದಿದ ಪ್ರತಿಯೊಬ್ಬ ಶಾಸ್ತ್ರಿಯು ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೇ ಯಜಮಾನನಿಗೆ ಹೋಲಿಕೆಯಾಗಿದ್ದಾನೆ ಅಂದನು. |
53
|
ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟುಹೋದನು. |
54
|
ಆತನು ತನ್ನ ಸ್ವಂತ ದೇಶಕ್ಕೆ ಬಂದು ಅವರ ಸಭಾಮಂದಿರ ದಲ್ಲಿ ಅವರಿಗೆ ಬೋಧಿಸಿದ್ದರಿಂದ ಅವರು ವಿಸ್ಮಯ ಗೊಂಡು--ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದಿದ್ದಾವು? |
55
|
ಈತನು ಬಡಗಿ ಯ ಮಗನಲ್ಲವೇ? ಮರಿಯಳೆಂದು ಕರೆಯಲ್ಪಡು ವವಳು ಈತನ ತಾಯಿಯಲ್ಲವೇ? ಮತ್ತು ಯಾಕೋಬ, ಯೋಸೇಫ, ಸೀಮೋನ, ಯೂದ ಈತನ ಸಹೋದರ ರಲ್ಲವೇ? |
56
|
ಈತನ ಸಹೋದರಿಯರೆಲ್ಲರೂ ನಮ್ಮೊಂ ದಿಗೆ ಇದ್ದಾರಲ್ಲವೇ? ಹಾಗಾದರೆ ಇವೆಲ್ಲವುಗಳು ಈ ಮನುಷ್ಯನಿಗೆ ಎಲ್ಲಿಂದ ಬಂದಿದ್ದಾವೆಂದು ಅಂದು ಕೊಂಡರು. |
57
|
ಅವರು ಆತನ ವಿಷಯದಲ್ಲಿ ಅಭ್ಯಂತರ ಪಟ್ಟರು. ಆದರೆ ಯೇಸು ಅವರಿಗೆ--ಪ್ರವಾದಿಗೆ ಮತ್ತೆಲ್ಲಿಯಾದರೂ ಸನ್ಮಾನವಿದೆ, ಆದರೆ ತನ್ನ ಸ್ವಂತ ದೇಶದಲ್ಲಿ ತನ್ನ ಸ್ವಂತ ಮನೆಯಲ್ಲಿ ಮಾತ್ರ ಇಲ್ಲ ಅಂದನು. |
58
|
ಆತನು ಅವರ ಅಪನಂಬಿಕೆಯ ದೆಸೆ ಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ನಡಿಸಲಿಲ್ಲ. |
Matthew 13:5 Kannada Language Bible Words basic statistical display
COMING SOON ...