1
|
ತನ್ನ ದ್ರಾಕ್ಷೇ ತೋಟಕ್ಕೆ ಕೂಲಿಯಾಳು ಗಳನ್ನು ಕರೆಯುವದಕ್ಕಾಗಿ ಬೆಳಿಗ್ಗೆ ಹೊರಟ ಮನೇ ಯಜಮಾನನಿಗೆ ಪರಲೋಕರಾಜ್ಯವು ಹೋಲಿ ಕೆಯಾಗಿದೆ. |
2
|
ಅವನು ದಿನಕ್ಕೆ ಒಂದು ಪಾವಲಿಯಂತೆ (ಪೆನ್ನಿ) ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿ ಕೊಂಡು ತನ್ನ ದ್ರಾಕ್ಷೇತೋಟಕ್ಕೆ ಅವರನ್ನು ಕಳುಹಿಸಿ ಕೊಟ್ಟನು. |
3
|
ಮತ್ತು ಅವನು ಸುಮಾರು ಮೂರನೆಯ ತಾಸಿನಲ್ಲಿ ಹೊರಗೆಹೋಗಿ ಇನ್ನು ಕೆಲವರು ಸಂತೆಯ ಸ್ಥಳದಲ್ಲಿ ಕೆಲಸವಿಲ್ಲದೆ ನಿಂತಿರುವದನ್ನು ಕಂಡು |
4
|
ಅವರಿಗೆ--ನೀವು ಸಹ ದ್ರಾಕ್ಷೇ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುವೆನು ಎಂದು ಹೇಳಿದನು. ಆಗ ಅವರು ಹೊರಟು ಹೋದರು. |
5
|
ಅವನು ಸುಮಾರು ಆರನೆಯ ಮತ್ತು ಒಂಭತ್ತನೆಯ ತಾಸಿನಲ್ಲಿ ತಿರಿಗಿ ಹೋಗಿ ಹಾಗೆಯೇ ಮಾಡಿದನು. |
6
|
ತರುವಾಯ ಸುಮಾರು ಹನ್ನೊಂದ ನೆಯ ತಾಸಿನಲ್ಲಿ ಅವನು ಹೊರಗೆಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವದನ್ನು ಕಂಡು ಅವರಿಗೆ--ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವದೇಕೆ ಎಂದು ಕೇಳಿದನು. |
7
|
ಅವರು ಅವನಿಗೆ--ಯಾಕಂದರೆ ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ ಅಂದರು. ಆಗ ಅವನು ಅವರಿಗೆ--ನೀವು ಸಹ ದ್ರಾಕ್ಷೇತೋಟಕ್ಕೆ ಹೋಗಿರಿ ಮತ್ತು ಸರಿಯಾದದ್ದನ್ನು ನೀವು ಹೊಂದುವಿರಿ ಎಂದು ಹೇಳಿ ದನು. |
8
|
ಹೀಗೆ ಸಾಯಂಕಾಲವಾದಾಗ ದ್ರಾಕ್ಷೇತೋಟ ದ ಯಜಮಾನನು ತನ್ನ ಮನೇವಾರ್ತೆಯವನಿಗೆ-- ಕೂಲಿಯಾಳುಗಳನ್ನು ಕರೆದು ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನ ವರೆಗೆ ಕೂಲಿಯನ್ನು ಕೊಡು ಎಂದು ಹೇಳಿದನು. |
9
|
ಸುಮಾರು ಹನ್ನೊಂದನೆ ಯ ತಾಸಿನಲ್ಲಿ ಕರೆಯಲ್ಪಟ್ಟವರಾದ ಪ್ರತಿಯೊಬ್ಬನು ಒಂದೊಂದು ಪಾವಲಿಯನ್ನು ಹೊಂದಿದನು. |
10
|
ಆದರೆ ಮೊದಲು ಬಂದವರು ತಮಗೆ ಹೆಚ್ಚು ದೊರೆಯುವ ದೆಂದು ನೆನಸಿದರು. ಆದರೂ ಅವರಲ್ಲಿ ಪ್ರತಿಯೊಬ್ಬನು ಅದೇ ರೀತಿಯಲ್ಲಿ ಒಂದೊಂದು ಪಾವಲಿಯನ್ನು ಹೊಂದಿದನು. |
11
|
ಅವರು ಅದನ್ನು ಹೊಂದಿದಾಗ ಮನೇ ಯಜಮಾನನಿಗೆ ವಿರೋಧವಾಗಿ ಗುಣು ಗುಟ್ಟುತ್ತಾ-- |
12
|
ಕಡೆಯವರಾದ ಇವರು ಒಂದೇ ತಾಸು ಕೆಲಸ ಮಾಡಿದ್ದಾರೆ; ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸ ಮಾಡಿದ ನಮಗೆ ನೀನು ಅವರನ್ನು ಸಮಮಾಡಿದ್ದೀ ಅಂದರು. |
13
|
ಆದರೆ ಅವನು ಅವರಲ್ಲಿ ಒಬ್ಬನಿಗೆ ಪ್ರತ್ಯುತ್ತರವಾಗಿ--ಸ್ನೇಹಿ ತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ; ಒಂದು ಪಾವಲಿಗೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳ ಲಿಲ್ಲವೇ? |
14
|
ನಿನ್ನದನ್ನು ತಕ್ಕೊಂಡು ಹೋಗು; ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವೆನು. |
15
|
ನನ್ನ ಸ್ವಂತದ್ದನ್ನು ನನ್ನ ಇಷ್ಟಬಂದಂತೆ ಮಾಡುವದು ನನಗೆ ನ್ಯಾಯವಲ್ಲವೋ? ನಾನು ಒಳ್ಳೆಯವನಾದ ದರಿಂದ ನಿನ್ನ ಕಣ್ಣು ಕೆಟ್ಟದ್ದಾಗಿದೆಯೋ ಅಂದನು. |
16
|
ಹೀಗೆ ಕಡೆಯವರು ಮೊದಲನೆಯವರಾಗುವರು; ಮೊದಲನೆಯವರು ಕಡೆಯವರಾಗುವರು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಎಂದು ಹೇಳಿದನು. |
17
|
ತರುವಾಯ ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ವಿಂಗಡವಾಗಿ ಕರೆದು ಅವರಿಗೆ-- |
18
|
ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು. |
19
|
ಇದಲ್ಲದೆ ಆತನನ್ನು ಹಾಸ್ಯ ಮಾಡು ವದಕ್ಕೂ ಕೊರಡೆಗಳಿಂದ ಹೊಡೆಯುವದಕ್ಕೂ ಶಿಲುಬೆಗೆ ಹಾಕುವದಕ್ಕೂ ಆತನನ್ನು ಅನ್ಯಜನರಿಗೆ ಒಪ್ಪಿಸಿಕೊಡುವರು; ಮತ್ತು ಮೂರನೆಯ ದಿನದಲ್ಲಿ ಆತನು ತಿರಿಗಿ ಎದ್ದು ಬರುವನು ಎಂದು ಹೇಳಿದನು. |
20
|
ತರುವಾಯ ಜೆಬೆದಾಯನ ಮಕ್ಕಳ ತಾಯಿಯು ತನ್ನ ಕುಮಾರರೊಂದಿಗೆ ಆತನ ಬಳಿಗೆ ಬಂದು ಆತ ನನ್ನು ಆರಾಧಿಸುತ್ತಾ ಆತನನ್ನು ಏನೋ ಬೇಡಿಕೊಳ್ಳ ಬೇಕೆಂದು ಅಪೇಕ್ಷಿಸಿದಳು. |
21
|
ಆತನು ಆಕೆಗೆ--ನೀನು ಏನು ಅಪೇಕ್ಷಿಸುತ್ತೀ ಎಂದು ಕೇಳಲು ಆಕೆಯು ಆತನಿಗೆ -- ನಿನ್ನ ರಾಜ್ಯದಲ್ಲಿ ಈ ನನ್ನ ಇಬ್ಬರು ಕುಮಾರರು ಒಬ್ಬನು ನಿನ್ನ ಬಲಗಡೆಯಲ್ಲೂ ಇನ್ನೊಬ್ಬನು ನಿನ್ನ ಎಡಗಡೆಯಲ್ಲೂ ಕೂತುಕೊಳ್ಳುವಂತೆ ಅನುಗ್ರಹಿಸ ಬೇಕು ಎಂದು ಬೇಡಿಕೊಂಡಳು. |
22
|
ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ |
23
|
ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ |
24
|
ಬೇರೆ ಹತ್ತು ಮಂದಿಯು ಅದನ್ನು ಕೇಳಿ ಆ ಇಬ್ಬರು ಸಹೋದ ರರಿಗೆ ವಿರೋಧವಾಗಿ ಕೋಪಗೊಂಡರು. |
25
|
ಆದರೆ ಯೇಸು ಅವರನ್ನು ತನ್ನ ಹತ್ತಿರಕ್ಕೆ ಕರೆದು--ಅನ್ಯ ಜನಾಂಗಗಳ ಅಧಿಪತಿಗಳು ಅವರ ಮೇಲೆ ದೊರೆತನ ಮಾಡುವರೆಂದೂ ದೊಡ್ಡವರು ಅವರ ಮೇಲೆ ಅಧಿಕಾರವನ್ನು ನಡಿಸುವರೆಂದೂ ನಿಮಗೆ ತಿಳಿದಿದೆ. ಆದರೆ ನಿಮ್ಮಲ್ಲಿ ಅದು ಹಾಗಿರಬಾರದು. |
26
|
ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿ ರಲಿ |
27
|
ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆ ಂದಿದ್ದರೆ ಅವನು ನಿಮ್ಮ ಆಳಾಗಿರಲಿ. |
28
|
ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು. |
29
|
ಅವರು ಯೆರಿಕೋವಿನಿಂದ ಹೊರಟು ಹೋಗುತ್ತಿರುವಾಗ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. |
30
|
ಆಗ ಇಗೋ, ಯೇಸು ಹಾದುಹೋಗುತ್ತಿದ್ದಾನೆಂದು ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಕೇಳಿ--ಓ ಕರ್ತನೇ, ದಾವೀದನಕುಮಾರನೇ, ನಮ್ಮ ಮೇಲೆ ಕರುಣೆಯಿಡು ಎಂದು ಕೂಗಿ ಹೇಳಿದರು. |
31
|
ಆದರೆ ಅವರು ಸುಮ್ಮನಿ ರುವಂತೆ ಜನರ ಸಮೂಹವು ಅವರನ್ನು ಗದರಿಸಿದರು. ಆದಾಗ್ಯೂ ಅವರು--ಓ ಕರ್ತನೇ, ದಾವೀದನಕುಮಾ ರನೇ, ನಮ್ಮ ಮೇಲೆ ಕರುಣೆ ಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು. |
32
|
ಆಗ ಯೇಸು ನಿಂತು ಅವರನ್ನು ಕರೆದು--ನಾನು ನಿಮಗೆ ಏನು ಮಾಡ ಬೇಕೆಂದು ನೀವು ಅಪೇಕ್ಷಿಸುತ್ತೀರಿ ಎಂದು ಕೇಳಿದನು. |
33
|
ಅವರು ಆತನಿಗೆ--ಕರ್ತನೇ, ನಮ್ಮ ಕಣ್ಣುಗಳು ತೆರೆಯಲ್ಪಡಬೇಕು ಅಂದರು. |
34
|
ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದನು; ಕೂಡಲೆ ಅವರ ಕಣ್ಣುಗಳು ದೃಷ್ಟಿಹೊಂದಿದವು; ಮತ್ತು ಅವರು ಆತನನ್ನು ಹಿಂಬಾಲಿಸಿದರು. |
Matthew 20:1 Kannada Language Bible Words basic statistical display
COMING SOON ...