1
|
ಯೇಸು ತಿರಿಗಿ ಸಾಮ್ಯ ರೂಪವಾಗಿ ಅವರ ಕೂಡ ಮಾತನಾಡುತ್ತಾ-- |
2
|
ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ. |
3
|
ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು. |
4
|
ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು. |
5
|
ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು. |
6
|
ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು. |
7
|
ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು. |
8
|
ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ. |
9
|
ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು. |
10
|
ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು. |
11
|
ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು. |
12
|
ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು. |
13
|
ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು. |
14
|
ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು. |
15
|
ಆಗ ಫರಿಸಾಯರು ಹೊರಟುಹೋಗಿ ಆತನನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು. |
16
|
ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು |
17
|
ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು. |
18
|
ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ? |
19
|
ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ ಅಂದನು. ಆಗ ಅವರು ಒಂದು ಪಾವಲಿ ಯನ್ನು ತಂದುಕೊಟ್ಟರು. |
20
|
ಆತನು ಅವರಿಗೆ--ಈ ರೂಪವೂ ಮೇಲ್ಬರಹವೂ ಯಾರದು ಎಂದು ಕೇಳಿ ದನು. |
21
|
ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು. |
22
|
ಇವುಗಳನ್ನು ಅವರು ಕೇಳಿದಾಗ ಆಶ್ಚರ್ಯಪಟ್ಟರು; ಮತ್ತು ಆತನನ್ನು ಬಿಟ್ಟು ಹೊರಟುಹೋದರು. |
23
|
ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಆತನ ಬಳಿಗೆ ಬಂದು-- |
24
|
ಬೋಧ ಕನೇ, ಒಬ್ಬ ಮನುಷ್ಯನು ಮಕ್ಕಳಿಲ್ಲದೆ ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ಮದುವೆಯಾಗಿ ತನ್ನ ಸಹೋದರನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ. |
25
|
ಹೀಗಿರಲಾಗಿ ನಮ್ಮ ಕೂಡ ಏಳು ಮಂದಿ ಸಹೋದರರಿದ್ದರು; ಮೊದಲನೆ ಯವನು ಮದುವೆ ಮಾಡಿಕೊಂಡು ಸತ್ತನು; ಮತ್ತು ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ಸಹೋದರನಿಗೆ ಬಿಟ್ಟನು. |
26
|
ಅದರಂತೆಯೇ ಎರಡ ನೆಯವನು ಮತ್ತು ಮೂರನೆಯವನು ಹೀಗೆ ಏಳನೆಯ ವನವರೆಗೂ ಮಾಡಿದರು. |
27
|
ಕಡೆಯದಾಗಿ ಆ ಸ್ತ್ರೀಯೂ ಸತ್ತಳು. |
28
|
ಆದದರಿಂದ ಪುನರುತ್ಥಾನದಲ್ಲಿ ಆ ಏಳು ಮಂದಿಯಲ್ಲಿ ಆಕೆಯು ಯಾರಿಗೆ ಹೆಂಡತಿ ಯಾಗಿರುವಳು? ಯಾಕಂದರೆ ಅವರೆಲ್ಲರೂ ಆಕೆಯನ್ನು ಮದುವೆಮಾಡಿಕೊಂಡಿದ್ದರಲ್ಲಾ ಎಂದು ಕೇಳಿದರು. |
29
|
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ. |
30
|
ಯಾಕಂದರೆ ಪುನರುತ್ಥಾನದಲ್ಲಿ ಅವರು ಮದುವೆಯಾಗುವದಿಲ್ಲ ಮತ್ತು ಮದುವೆ ಮಾಡಿಕೊಡುವದೂ ಇಲ್ಲ; ಆದರೆ ಅವರು ಪರಲೋಕ ದಲ್ಲಿರುವ ದೇವದೂತರಂತೆ ಇರುತ್ತಾರೆ. |
31
|
ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ-- |
32
|
ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು. |
33
|
ಜನ ಸಮೂಹದವರು ಇದನ್ನು ಕೇಳಿ ಆತನ ಬೋಧನೆಗೆ ವಿಸ್ಮಯಗೊಂಡರು. |
34
|
ಆದರೆ ಆತನು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿರಿ ಅಲ್ಲಿಗೆ ಕೂಡಿಬಂದರು. |
35
|
ಅವರಲ್ಲಿ ನ್ಯಾಯಶಾಸ್ತ್ರಿಯಾಗಿದ್ದ ಒಬ್ಬನು ಆತನನ್ನು ಶೋಧಿಸುವದಕ್ಕಾಗಿ-- |
36
|
ಬೋಧಕ ನೇ, ನ್ಯಾಯ ಪ್ರಮಾಣದಲ್ಲಿ ದೊಡ್ಡ ಆಜ್ಞೆ ಯಾವದು ಎಂದು ಆತನನ್ನು ಪ್ರಶ್ನಿಸಿದನು. |
37
|
ಯೇಸು ಅವ ನಿಗೆ--ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣ ದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸಬೇಕು. |
38
|
ಈ ಆಜ್ಞೆಯು ಮೊದಲನೆಯದೂ ದೊಡ್ಡದೂ ಆಗಿದೆ. ಅದರಂತೆ-- |
39
|
ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕೆಂಬದು ಎರಡನೆಯದು. |
40
|
ನ್ಯಾಯ ಪ್ರಮಾಣವೆಲ್ಲವೂ ಪ್ರವಾದನೆಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ ಅಂದನು. |
41
|
ಫರಿಸಾಯರು ಕೂಡಿ ಬಂದಿರುವಾಗ ಯೇಸು ಅವರಿಗೆ-- |
42
|
ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು. |
43
|
ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ-- |
44
|
ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ. |
45
|
ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು. |
46
|
ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ. |
Matthew 22:44 Kannada Language Bible Words basic statistical display
COMING SOON ...