1
|
ನಿಮಗೆ ತೀರ್ಪು ಆಗದಂತೆ ನೀವೂ ತೀರ್ಪು ಮಾಡಬೇಡಿರಿ. |
2
|
ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು. |
3
|
ಮತ್ತು ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ರವೆಯನ್ನು ನೀನು ಯಾಕೆ ನೋಡುತ್ತೀ? |
4
|
ಇಲ್ಲವೆ ನೀನು ನಿನ್ನ ಸಹೋದರನಿಗೆ--ನಿನ್ನ ಕಣ್ಣಿ ನೊಳಗಿಂದ ರವೆಯನ್ನು ತೆಗೆಯುತ್ತೇನೆ ಎಂದು ಹೇಗೆ ಹೇಳುತ್ತೀ? ಆದರೆ ಇಗೋ, ನಿನ್ನ ಸ್ವಂತ ಕಣ್ಣಿನಲ್ಲಿ ತೊಲೆ ಇದೆಯಲ್ಲಾ? |
5
|
ಕಪಟಿ ನೀನು, ಮೊದಲು ನಿನ್ನ ಸ್ವಂತ ಕಣ್ಣಿನೊಳಗಿರುವ ತೊಲೆ ಯನ್ನು ತೆಗೆದು ಹಾಕು; ಆಗ ನಿನ್ನ ಸಹೋದರನ ಕಣ್ಣಿನೊಳಗಿರುವ ರವೆಯನ್ನು ತೆಗೆದು ಹಾಕುವದಕ್ಕೆ ನಿನಗೆ ಚೆನ್ನಾಗಿ ಕಾಣಿಸುವದು. |
6
|
ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು. |
7
|
ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು. |
8
|
ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು. |
9
|
ಇಲ್ಲವೆ ತನ್ನ ಮಗನು ರೊಟ್ಟಿಯನ್ನು ಕೇಳಿದರೆ ನಿಮ್ಮಲ್ಲಿ ಯಾವ ನಾದರೂ ಅವನಿಗೆ ಕಲ್ಲನ್ನು ಕೊಡುವನೇ? |
10
|
ಇಲ್ಲವೆ ಅವನು ಮಾನನ್ನು ಕೇಳಿದರೆ ತಂದೆಯು ಅವನಿಗೆ ಹಾವನ್ನು ಕೊಡುವನೇ? |
11
|
ಕೆಟ್ಟವರಾದ ನೀವು ಒಳ್ಳೇ ದಾನಗಳನ್ನು ನಿಮ್ಮ ಮಕ್ಕಳಿಗೆ ಕೊಡುವದು ಹೇಗೆ ಎಂಬದನ್ನು ತಿಳಿದವರಾಗಿದ್ದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳು ವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುತ್ತಾನಲ್ಲವೇ? |
12
|
ಆದದರಿಂದ ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಇಚ್ಛೈಸುವಿರೋ ಅವುಗಳನ್ನು ನೀವು ಸಹ ಅವರಿಗೆ ಹಾಗೆಯೇ ಮಾಡಿರಿ; ಯಾಕಂದರೆ ಇದೇ ನ್ಯಾಯಪ್ರಮಾಣದ ಮತ್ತು ಪ್ರವಾದಿಗಳ ತಾತ್ಪರ್ಯ. |
13
|
ಇಕ್ಕಟ್ಟಾದ ದ್ವಾರದೊಳಗೆ ನೀವು ಪ್ರವೇಶಿಸಿರಿ; ಯಾಕಂದರೆ ನಾಶನಕ್ಕೆ ನಡಿಸುವ ದ್ವಾರವು ಅಗಲವೂ ಮಾರ್ಗವು ವಿಶಾಲವೂ ಆಗಿದೆ. ಅದರೊಳಗೆ ಪ್ರವೇಶಿಸುವವರು ಬಹು ಜನ. |
14
|
ಜೀವಕ್ಕೆ ನಡಿಸುವ ದ್ವಾರವು ಇಕ್ಕಟ್ಟಾದದ್ದೂ ದಾರಿಯು ಬಿಕ್ಕಟ್ಟಾದದ್ದೂ ಆಗಿದೆ; ಆದದರಿಂದ ಅದನ್ನು ಕಂಡುಕೊಳ್ಳುವವರು ಸ್ವಲ್ಪ ಜನ. |
15
|
ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ. |
16
|
ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಲ್ಲಿ ದ್ರಾಕ್ಷೆಯನ್ನೂ ಮದ್ದುಗುಣಿಕೇಗಿಡಗಳಲ್ಲಿ ಅಂಜೂರ ಗಳನ್ನೂ ಕೂಡಿಸುವರೋ? |
17
|
ಅದರಂತೆಯೇ ಪ್ರತಿ ಯೊಂದು ಒಳ್ಳೆ ಮರವು ಒಳ್ಳೇ ಫಲವನ್ನು ಕೊಡುತ್ತದೆ; ಮತ್ತು ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ; |
18
|
ಒಳ್ಳೆ ಮರವು ಕೆಟ್ಟ ಫಲವನ್ನು ಕೊಡಲಾರದು; ಇಲ್ಲವೆ ಕೆಟ್ಟ ಮರವು ಒಳ್ಳೇ ಫಲವನ್ನು ಕೊಡಲಾರದು. |
19
|
ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿಯಲ್ಲಿ ಹಾಕಲ್ಪಡುತ್ತದೆ. |
20
|
ಆದದರಿಂದ ಅವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. |
21
|
ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು. |
22
|
ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು. |
23
|
ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು. |
24
|
ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು. |
25
|
ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು. |
26
|
ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು. |
27
|
ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು. |
28
|
ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ತರುವಾಯ ಜನರು ಆತನ ಬೋಧನೆಗೆ ಆಶ್ಚರ್ಯ ಪಟ್ಟರು. |
29
|
ಯಾಕಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಆಧಿಕಾರವಿದ್ದವನಂತೆ ಅವರಿಗೆ ಬೋಧಿಸಿದನು. |
Matthew 7:1 Kannada Language Bible Words basic statistical display
COMING SOON ...