1
|
ಆಗ ಬಿಳಾಮನು ಬಾಲಾಕನಿಗೆ--ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿ ಗಳನ್ನೂ ಏಳು ಟಗರುಗಳನ್ನೂ ನನಗೆ ಇಲ್ಲಿ ಸಿದ್ಧಮಾಡು ಅಂದನು. |
2
|
ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು; ಬಾಲಾಕನೂ ಬಿಳಾಮನೂ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದರು. |
3
|
ಆಗ ಬಿಳಾಮನು ಬಾಲಾಕನಿಗೆ--ನೀನು ನಿನ್ನ ದಹನ ಬಲಿಯ ಹತ್ತಿರ ನಿಂತುಕೊ; ನಾನು ಹೋಗುತ್ತೇನೆ; ಒಂದು ವೇಳೆ ಕರ್ತನು ನನಗೆ ಎದುರಾಗಿ ಬರುವನು, ಆತನು ನನಗೆ ಏನು ತೋರಿಸುವನೋ ಅದನ್ನು ನಿನಗೆ ತಿಳಿಸುವೆನೆಂದು ಹೇಳಿ ಒಂದು ಎತ್ತರವಾದ ಸ್ಥಳಕ್ಕೆ ಹೋದನು. |
4
|
ಆಗ ದೇವರು ಬಿಳಾಮನನ್ನು ಸಂಧಿಸಿದನು. ಅವನು ಆತನಿಗೆ--ನಾನು ಏಳು ಬಲಿ ಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ ಅಂದನು. |
5
|
ಕರ್ತನು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆನೀನು ಬಾಲಾಕನ ಬಳಿಗೆ ತಿರಿಗಿ ಹೋಗಿ ಈ ಪ್ರಕಾರ ಮಾತನಾಡಬೇಕು ಅಂದನು. |
6
|
ಆಗ ಅವನು ಬಾಲಾಕನ ಬಳಿಗೆ ತಿರಿಗಿ ಬಂದನು; ಅಗೋ, ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು. |
7
|
ಆಗ ಅವನು ಸಾಮ್ಯರೂಪವಾಗಿ--ಮೋವಾಬಿನ ಅರಸನಾದ ಬಾಲಾಕನು ನನ್ನನ್ನು ಅರಾಮಿನಿಂದಲೂ ಪೂರ್ವ ಪರ್ವತಗಳಿಂದಲೂ ಕರೆಯಿಸಿ--ನನಗೋ ಸ್ಕರ ಯಾಕೋಬನನ್ನು ಶಪಿಸ ಬಾ; ಇಸ್ರಾಯೇಲನ್ನು ಎದುರಿಸುವದಕ್ಕೆ ಬಾ ಎಂದು ನನಗೆ ಹೇಳಿದ್ದಾನೆ. |
8
|
ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಕರ್ತನು ಎದುರಿಸದವನನ್ನು ನಾನು ಹೇಗೆ ಎದುರಿ ಸಲಿ? |
9
|
ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ. |
10
|
ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು. |
11
|
ಆಗ ಬಾಲಾಕನು ಬಿಳಾಮನಿಗೆ--ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆಯಿಸಿದೆನು; ಇಗೋ, ನೀನು ಅವರನ್ನು ಸಂಪೂರ್ಣ ವಾಗಿ ಆಶೀರ್ವದಿಸಿದಿ ಅಂದನು. |
12
|
ಅದಕ್ಕೆ ಅವನು ಪ್ರತ್ಯುತ್ತರವಾಗಿ--ಕರ್ತನು ನನ್ನ ಬಾಯೊಳಗೆ ಇಡುವದನ್ನು ಹೇಳುವದಕ್ಕೆ ನಾನು ಜಾಗ್ರತೆಯಾಗಿರ ಬೇಕಲ್ಲವೋ ಅಂದನು. |
13
|
ಬಾಲಾಕನು ಅವನಿಗೆ--ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ; ಅವರನ್ನೆಲ್ಲಾ ನೋಡದೆ ಅವರ ಅಂತ್ಯ ಭಾಗವನ್ನು ಮಾತ್ರ ನೋಡುವಿ; |
14
|
ಅಲ್ಲಿಂದ ಅವರನ್ನು ನನಗೋ ಸ್ಕರ ಶಪಿಸು ಅಂದನು. ಹಾಗೆ ಬಾಲಾಕನು ಬಿಳಾಮ ನನ್ನು ಪಿಸ್ಗಾದ ತುದಿಗೆ ಚೋಫೀಮನ ಬೈಲಿಗೆ ಕರ ಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿ ದನು. |
15
|
ಆಗ ಅವನು ಬಾಲಾಕನಿಗೆ--ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ; ನಾನು ಅಲ್ಲಿ ಕರ್ತನನ್ನು ಆಚೆಯಲ್ಲಿ ಎದುರುಗೊಳ್ಳುವೆನು ಅಂದನು. |
16
|
ಕರ್ತನು ಬಿಳಾಮನ ಎದುರಿಗೆ ಬಂದು ಅವನ ಬಾಯೊಳಗೆ ವಾಕ್ಯವನ್ನಿಟ್ಟು--ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಈ ಪ್ರಕಾರ ಮಾತನಾಡು ಅಂದನು. |
17
|
ಇವನು ಅವನ ಬಳಿಗೆ ಬಂದಾಗ ಇಗೋ, ಅವನೂ ಅವನ ಸಂಗಡ ಮೋವಾಬಿನ ಪ್ರಧಾನರೂ ಅವನ ದಹನಬಲಿಯ ಹತ್ತಿರ ನಿಂತುಕೊಂಡಿದ್ದರು; |
18
|
ಬಾಲಾ ಕನು ಅವನಿಗೆ--ಕರ್ತನು ಏನು ಹೇಳಿದ್ದಾನೆ ಅಂದನು. ಅವನು ಸಾಮ್ಯರೂಪವಾಗಿ--ಬಾಲಾಕನೇ, ಎದ್ದು ಕೇಳು; ಚಿಪ್ಪೋರನ ಮಗನೇ, ನನಗೆ ಕಿವಿಗೊಡು. |
19
|
ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ? |
20
|
ಇಗೋ, ಆಶೀರ್ವದಿಸು ವದಕ್ಕೆ ಅಪ್ಪಣೆ ಹೊಂದಿದ್ದೇನೆ; ಆತನು ಆಶೀರ್ವದಿ ಸುತ್ತಿದ್ದಾನೆ; ನಾನು ಅದನ್ನು ಬದಲು ಮಾಡುವದ ಕ್ಕಾಗದು. |
21
|
ಆತನು ಯಾಕೋಬನಲ್ಲಿ ಪಾಪವನ್ನು ಕಾಣಲಿಲ್ಲ; ಇಸ್ರಾಯೇಲನಲ್ಲಿ ವಕ್ರತೆಯನ್ನು ನೋಡಲಿಲ್ಲ; ಅವನ ದೇವರಾದ ಕರ್ತನು ಅವನ ಸಂಗಡ ಇದ್ದಾನೆ; ಅರಸನ ಜಯ ಧ್ವನಿಯು ಅವರಲ್ಲಿ ಉಂಟು. |
22
|
ದೇವರು ಅವರನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದ್ದಾನೆ. ಅವನಿಗೆ ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಉಂಟು. |
23
|
ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು. |
24
|
ಇಗೋ, ಜನವು ದೊಡ್ಡ ಸಿಂಹದ ಹಾಗೆ ಏಳುವದು; ಸಿಂಹದ ಮರಿಯ ಹಾಗೆ ಎದ್ದೇಳುವದು; ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು. |
25
|
ಆಗ ಬಾಲಾಕನು ಬಿಳಾಮ ನಿಗೆ--ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ ಅಂದನು. |
26
|
ಆದರೆ ಬಿಳಾಮನು ಪ್ರತ್ಯುತ್ತರ ವಾಗಿ ಬಾಲಾಕನಿಗೆ ಕರ್ತನು ಹೇಳುವದನ್ನೆಲ್ಲಾ ನಾನು ಮಾಡುವನೆಂದು ನಿನಗೆ ಹೇಳಲಿಲ್ಲವೋ? ಅಂದನು. |
27
|
ಆಗ ಬಾಲಾಕನು ಬಿಳಾಮನಿಗೆ--ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವ ರನ್ನು ಶಪಿಸುವದು ಒಂದು ವೇಳೆ ದೇವರಿಗೆ ಯುಕ್ತವಾಗಿ ದ್ದೀತು ಅಂದನು. |
28
|
ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿನ ತುದಿಗೆ ಕರಕೊಂಡು ಹೋದನು. |
29
|
ಬಿಳಾಮನು ಬಾಲಾಕನಿಗೆ--ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು ಅಂದನು. |
30
|
ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಅರ್ಪಿಸಿದನು. |
Numbers 23:1 Kannada Language Bible Words basic statistical display
COMING SOON ...