1
|
ಇಸ್ರಾಯೇಲ್ಯರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಸಾಮ ತಿಗಳು. |
2
|
ಜ್ಞಾನವನ್ನು ಶಿಕ್ಷಣವನ್ನು ತಿಳುಕೊಳ್ಳುವದಕ್ಕೂ ವಿವೇಕದ ಮಾತುಗಳನ್ನು ಗ್ರಹಿಸುವದಕ್ಕೂ |
3
|
ಜ್ಞಾನ ನ್ಯಾಯತೀರ್ಪು ನೀತಿ ಇವುಗಳ ಬೋಧನೆಯನ್ನು ಹೊಂದುವದಕ್ಕೂ |
4
|
ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ. |
5
|
ಜ್ಞಾನಿಯು ಕೇಳಿ ಜ್ಞಾನ ವನ್ನು ಹೆಚ್ಚಿಸಿಕೊಳ್ಳುವನು; ತಿಳುವಳಿಕೆಯ ಮನುಷ್ಯನು ಜ್ಞಾನದ ಆಲೋಚನೆಗಳನ್ನು ಸಂಪಾದಿಸಿಕೊಳ್ಳುವನು. |
6
|
ಸಾಮತಿಯನ್ನು ಅದರ ಅರ್ಥವನ್ನು ಜ್ಞಾನಿಗಳ ಮಾತು ಗಳನ್ನು ಅವರ ಗೂಢವಾದ ಮಾತುಗಳನ್ನು ಗ್ರಹಿಸು ವಂತೆ ಇವು ಮಾಡುವವುಗಳಾಗಿವೆ. |
7
|
ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ. |
8
|
ನನ್ನ ಮಗನೇ, ನಿನ್ನ ತಂದೆಯ ಶಿಕ್ಷಣವನ್ನು ಕೇಳು, ನಿನ್ನ ತಾಯಿಯ ಕಟ್ಟಳೆಯನ್ನು ತೊರೆಯಬೇಡ; |
9
|
ಅವು ನಿನ್ನ ತಲೆಗೆ ಕೃಪೆಯ ಆಭರಣವೂ ನಿನ್ನ ಕೊರಳಿನ ಸುತ್ತಲೂ ಸರಗಳಂತೆಯೂ ಇರುವವು. |
10
|
ನನ್ನ ಮಗನೇ, ಪಾಪಿ ಗಳು ನಿನ್ನನ್ನು ಆಕರ್ಷಿಸಿದರೆ ನೀನು ಒಪ್ಪಬೇಡ. |
11
|
ಅವರು--ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚು ಹಾಕೋಣ, ನಿರಪರಾಧಿಗಳಿಗಾಗಿ ನಿಷ್ಕಾರಣದಿಂದ ರಹಸ್ಯವಾಗಿ ಅಡಗಿಕೊಳ್ಳೋಣ. |
12
|
ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ. |
13
|
ಅಮೂಲ್ಯವಾದ ಎಲ್ಲಾ ಸಂಪತ್ತನ್ನು ನಾವು ಕಂಡು ಹಿಡಿದು ಕೊಳ್ಳೆಯಿಂದ ನಮ್ಮ ಮನೆಗಳನ್ನು ತುಂಬಿ ಕೊಳ್ಳೋಣ. |
14
|
ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಮ್ಮೆಲ್ಲರಿಗೂ ಒಂದೇ ಹಣದ ಚೀಲ ಇರಲಿ ಎಂದು ಹೇಳುತ್ತಾರೆ. |
15
|
ನನ್ನ ಮಗನೇ, ಮಾರ್ಗದಲ್ಲಿ ಅವರೊಂದಿಗೆ ನಡೆಯಬೇಡ; ಅವರ ಮಾರ್ಗದಿಂದ ನಿನ್ನ ಹೆಜ್ಜೆಯನ್ನು ಹಿಂದೆ ತಕ್ಕೋ. |
16
|
ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ. |
17
|
ನಿಶ್ಚಯವಾಗಿ ಪಕ್ಷಿಯ ಕಣ್ಣೆದುರಿಗೆ ಬಲೆಯನ್ನು ಹರಡುವದು ವ್ಯರ್ಥವೇ. |
18
|
ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ. |
19
|
ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ. |
20
|
ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ. |
21
|
ಸಮೂಹದ ಮುಖ್ಯ ಸ್ಥಳದಲ್ಲಿಯೂ ದ್ವಾರಗಳ ಬಳಿಯಲ್ಲಿಯೂ ಅವಳು ಕೂಗುತ್ತಾಳೆ, ಪಟ್ಟಣದಲ್ಲಿ ಅವಳು ತನ್ನ ಮಾತುಗಳನ್ನು ಉಚ್ಚರಿಸುತ್ತಾ-- |
22
|
ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು? |
23
|
ನನ್ನ ಗದರಿಕೆಗೆ ನೀವು ತಿರುಗಿ ಕೊಳ್ಳಿರಿ; ಇಗೋ, ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ ನಿಮಗೆ ನನ್ನ ಮಾತುಗಳು ತಿಳಿಯುವಂತೆ ಮಾಡುವೆನು. |
24
|
ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ |
25
|
ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ |
26
|
ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ |
27
|
ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು. |
28
|
ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ. |
29
|
ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ |
30
|
ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ |
31
|
ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು. |
32
|
ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು. |
33
|
ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು. |
Proverbs 1:20 Kannada Language Bible Words basic statistical display
COMING SOON ...