1
|
ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ. |
2
|
ಕೆಟ್ಟತನದ ಸಂಪತ್ತುಗಳು ಪ್ರಯೋಜನವಿಲ್ಲ; ನೀತಿಯು ಮರಣದಿಂದ ಬಿಡಿಸುತ್ತದೆ. |
3
|
ನೀತಿವಂತನ ಪ್ರಾಣವನ್ನು ಕರ್ತನು ಹಸಿವೆಗೊಳಿಸನು; ದುಷ್ಟರ ಆಸ್ತಿಯನ್ನು ಆತನು ತಳ್ಳಿಹಾಕುತ್ತಾನೆ. |
4
|
ಬಿಗಿ ಇಲ್ಲದ ಕೈಯಿಂದ ವ್ಯಾಪಾರ ಮಾಡುವವನು ದರಿದ್ರನಾಗು ವನು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ. |
5
|
ಬೇಸಿಗೆಯಲ್ಲಿ ಕೂಡಿಸುವವನು ಬುದ್ಧಿ ವಂತನಾದ ಮಗನು ಸುಗ್ಗಿಯಲ್ಲಿ ನಿದ್ರೆಮಾಡುವವನು ನಾಚಿಕೆಪಡಿಸುವ ಮಗನು. |
6
|
ನೀತಿವಂತರ ತಲೆಯ ಮೇಲೆ ಆಶೀರ್ವಾದಗಳು ಇವೆ; ಆದರೆ ದುಷ್ಟನ ಬಾಯಿಯನ್ನು ಬಲಾತ್ಕಾರವು ಮುಚ್ಚುತ್ತದೆ. |
7
|
ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ. |
8
|
ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು. ಹರಟೆಯ ಮೂರ್ಖನು ಬೀಳುವನು. |
9
|
ಯಥಾರ್ಥವಾಗಿ ನಡೆಯುತ್ತಿರುವವನು ದೃಢವಾಗಿ ನಡೆಯುತ್ತಾನೆ; ತನ್ನ ಮಾರ್ಗಗಳನ್ನು ಡೊಂಕು ಮಾಡು ತ್ತಿರುವವನು ಬಯಲಿಗೆ ಬರುವನು. |
10
|
ಕಣ್ಣು ಮಿಟಕಿ ಸುವವನು ದುಃಖವನ್ನುಂಟುಮಾಡುತ್ತಾನೆ; ಹರಟೆಯ ಮೂರ್ಖನು ಬೀಳುವನು. |
11
|
ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ. |
12
|
ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚು ತ್ತದೆ. |
13
|
ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕು ತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ. |
14
|
ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ. |
15
|
ಐಶ್ವರ್ಯವಂತನ ಸಂಪತ್ತು ಅವನ ಬಲವಾದ ಪಟ್ಟಣ; ಬಡವರ ನಾಶನವು ಅವರ ಬಡತನವೇ. |
16
|
ನೀತಿವಂತರ ಪ್ರಯಾಸವು ಜೀವಕ್ಕಾಗಿಯೂ ದುಷ್ಟರ ಫಲವು ಪಾಪಕ್ಕಾಗಿಯೂ ಇವೆ. |
17
|
ಶಿಕ್ಷಣವನ್ನು ಕೈಕೊಳ್ಳುವವನು ಜೀವನದ ಮಾರ್ಗದಲ್ಲಿ ಇದ್ದಾನೆ; ಗದರಿಕೆಯನ್ನು ತಿರಸ್ಕರಿಸುವವನು ತಪ್ಪುಮಾಡುತ್ತಾನೆ. |
18
|
ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು. |
19
|
ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು. |
20
|
ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು. |
21
|
ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ. |
22
|
ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ. |
23
|
ಬುದ್ಧಿಹೀನನಿಗೆ ಕೇಡು ಮಾಡುವದು ಹಾಸ್ಯಾ ಸ್ಪದವಾಗಿದೆ; ಆದರೆ ಗ್ರಹಿಸುವವನಿಗೆ ಜ್ಞಾನವಿದೆ. |
24
|
ದುಷ್ಟನ ಭಯವು ಅವನ ಮೇಲೆ ಬರುವದು; ನೀತಿವಂತರ ಇಷ್ಟವು ಸಫಲವಾಗುವದು. |
25
|
ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ. |
26
|
ಹಲ್ಲುಗಳಿಗೆ ಹುಳಿಯೂ ಕಣ್ಣುಗಳಿಗೆ ಹೊಗೆಯೂ ಹೇಗೋ ಹಾಗೆಯೇ ತನ್ನನ್ನು ಕಳುಹಿಸು ವವರಿಗೆ ಸೋಮಾರಿಯೂ ಇರುವನು. |
27
|
ಕರ್ತನ ಭಯವು ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರುಷ ಗಳು ಕಡಿಮೆ ಮಾಡಲ್ಪಡುವವು. |
28
|
ನೀತಿವಂತರ ನಿರೀ ಕ್ಷೆಯು ಆನಂದಕರವಾಗಿರುವದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವದು. |
29
|
ಯಥಾರ್ಥವಂತರಿಗೆ ಕರ್ತನ ಮಾರ್ಗವು ಬಲವಾಗಿದೆ; ಅಕ್ರಮ ಮಾಡುವ ವರಿಗೆ ಅದು ನಾಶನವಾಗಿರುವದು. |
30
|
ನೀತಿವಂತರು ಎಂದಿಗೂ ಕದಲುವದೇ ಇಲ್ಲ; ದುಷ್ಟರು ಭೂಮಿಯಲ್ಲಿ ವಾಸಮಾಡುವದಿಲ್ಲ. |
31
|
ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು. |
32
|
ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ. |
Proverbs 10:28 Kannada Language Bible Words basic statistical display
COMING SOON ...