1
|
ವಿವಾದದೊಂದಿಗೆ ಬಲಿಗಳಿಂದ ತುಂಬಿದ ಮನೆಗಿಂತ ಸಮಾಧಾನದ ಒಣತುತ್ತೇ ಮೇಲು. |
2
|
ನಾಚಿಕೆಪಡಿಸುವ ಮಗನ ಮೇಲೆ ಜ್ಞಾನಿ ಯಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು. |
3
|
ಬೆಳ್ಳಿ ಬಂಗಾರ ಗಳನ್ನು ಪುಟ ಕುಲುಮೆಗಳು ಶೋಧಿಸುವವು, ಕರ್ತನು ಹೃದಯಗಳನ್ನು ಶೋಧಿಸುತ್ತಾನೆ. |
4
|
ಕೇಡು ಮಾಡುವ ವನು ಕೆಟ್ಟ ತುಟಿಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು; |
5
|
ಬಡವರನ್ನು ಹಾಸ್ಯಮಾಡುವವನು ತನ್ನ ಸೃಷ್ಟಿ ಕರ್ತ ನನ್ನೇ ನಿಂದಿಸುತ್ತಾನೆ; ವಿಪತ್ತುಗಳಿಗೆ ಸಂತೋಷಿಸು ವವನು ಶಿಕ್ಷೆಯನ್ನು ಹೊಂದಲೇಬೇಕು. |
6
|
ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆ ಗಳೇ. |
7
|
ಬುದ್ಧಿಹೀನನಿಗೆ ಉತ್ತಮವಾದ ನುಡಿಯುಕ್ತ ವಲ್ಲ; ರಾಜಪುತ್ರನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಹೆಚ್ಚಾಗಿ ಯುಕ್ತವಲ್ಲ. |
8
|
ತಕ್ಕೊಳ್ಳುವವನ ಕಣ್ಣುಗಳಿಗೆ ಲಂಚವು ಬೆಲೆಯುಳ್ಳ ಕಲ್ಲಿನಂತಿದೆ; ಅದನ್ನು ಹೇಗೆ ತಿರುಗಿಸಿದರೂ ಅಭಿವೃದ್ಧಿಯಾಗುತ್ತದೆ. |
9
|
ದೋಷ ವನ್ನು ಮುಚ್ಚುವವನು ಪ್ರೀತಿಯನ್ನು ಹುಡುಕುತ್ತಾನೆ, ಸಂಗತಿಯನ್ನು ಎತ್ತಿ ಆಡುವವನು ಸ್ನೇಹಿತರನ್ನು ಪ್ರತ್ಯೇ ಕಿಸುತ್ತಾನೆ. |
10
|
ಬುದ್ಧಿಹೀನನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟು ತ್ತದೆ. |
11
|
ಕೆಟ್ಟವನು ದಂಗೆಯನ್ನೇ ಹುಡುಕುತ್ತಾನೆ; ಆದ ಕಾರಣ ಕ್ರೂರ ಸೇವಕನು ಅವನಿಗೆ ವಿರೋಧವಾಗಿ ಕಳುಹಿಸಲ್ಪಡುವನು. |
12
|
ಮೂರ್ಖತನದಲ್ಲಿ ಮುಳುಗಿ ರುವ ಮೂಢನಿಗೆ ಎದುರಾಗುವದಕ್ಕಿಂತಲೂ ಮರಿಗ ಳನ್ನು ಕಳೆದುಕೊಂಡ ಕರಡಿಗೆ ಎದುರಾಗುವದು ಲೇಸು. |
13
|
ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆ ಯಿಂದ ಕೇಡು ತೊಲಗುವದೇ ಇಲ್ಲ. |
14
|
ಒಬ್ಬನು ನೀರನ್ನು ಹೊರಬಿಡುವಂತೆ ಕಲಹದ ಪ್ರಾರಂಭವು ಇರುವದು. ಆದಕಾರಣ ಆ ಕಲಹಕ್ಕೆ ಕೈ ಹಾಕುವದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು. |
15
|
ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು. |
16
|
ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ? |
17
|
ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ. |
18
|
ವಿವೇಕವಿಲ್ಲದವನು ಕೈ ಮೇಲೆ ಹೊಡೆದು ತನ್ನ ಸ್ನೇಹಿತನ ಎದುರಿನಲ್ಲಿ ಹೊಣೆ ಯಾಗುತ್ತಾನೆ. |
19
|
ಕಲಹವನ್ನು ಪ್ರೀತಿಮಾಡುವವನು ದೋಷವನ್ನು ಪ್ರೀತಿಮಾಡುತ್ತಾನೆ; ತನ್ನ ದ್ವಾರವನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಹುಡುಕುತ್ತಾನೆ. |
20
|
ಮೂರ್ಖ ಹೃದಯವುಳ್ಳವನು ಒಳ್ಳೇದನ್ನು ಪಡೆ ಯನು; ಕೆಟ್ಟನಾಲಿಗೆಯುಳ್ಳವನು ಹಾನಿಗೆ ಬೀಳುವನು. |
21
|
ಬುದ್ಧಿಹೀನನನ್ನು ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವದಿಲ್ಲ. |
22
|
ಹರ್ಷ ಹೃದಯನು ಔಷಧದಂತೆ ಒಳ್ಳೇದು ಮಾಡುತ್ತಾನೆ; ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ. |
23
|
ನ್ಯಾಯದ ಮಾರ್ಗ ಗಳನ್ನು ತಿರುಗಿಸಿಬಿಡುವದಕ್ಕೆ ದುಷ್ಟನು ಎದೆಯಿಂದ ಲಂಚವನ್ನು ತೆಗೆದುಕೊಳ್ಳುತ್ತಾನೆ. |
24
|
ವಿವೇಕಿಯ ಮುಂದೆ ಜ್ಞಾನವಿದೆ; ಬುದ್ಧಿಹೀನನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಇರುವವು. |
25
|
ಬುದ್ಧಿಹೀನ ನಾದ ಮಗನು ತನ್ನ ತಂದೆಗೆ ದುಃಖವೂ ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ. |
26
|
ನೀತಿವಂತನನ್ನು ಶಿಕ್ಷಿಸುವದು ಇಲ್ಲವೆ ಅಕ್ರಮಕ್ಕಾಗಿ ರಾಜಪುತ್ರರನ್ನು ಹೊಡೆಯುವದು ಯುಕ್ತವಲ್ಲ. |
27
|
ತಿಳುವಳಿಕೆಯುಳ್ಳ ವನು ಮಿತವಾಗಿ ಮಾತನಾಡುತ್ತಾನೆ; ವಿವೇಕಿಯು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ. |
28
|
ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆಂದು ಎಣಿಸಲ್ಪಡುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿಯೆಂದು ಅನ್ನಿಸಿಕೊಳ್ಳುವನು. |
Proverbs 17:21 Kannada Language Bible Words basic statistical display
COMING SOON ...