1
|
ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ. |
2
|
ತನ್ನ ದೃಷ್ಟಿ ಯಲ್ಲಿ ಮನುಷ್ಯನ ಪ್ರತಿಯೊಂದು ಮಾರ್ಗವು ಸರಿ ಯಾಗಿದೆ; ಕರ್ತನು ಹೃದಯಗಳನ್ನು ಪರೀಕ್ಷಿಸುತ್ತಾನೆ. |
3
|
ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ. |
4
|
ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಪಾಪವೇ. |
5
|
ಶ್ರದ್ಧೆಯುಳ್ಳ ಯೋಚನೆಗಳು ಸಮ್ಮದ್ಧಿಗೆ ಒಲಿಯುತ್ತವೆ; ಆತುರಪಡುವ ಪ್ರತಿಯೊಬ್ಬನ ಯೋಚನೆಗಳು ಕೊರ ತೆಗೆ ಉಳಿಯುತ್ತವೆ. |
6
|
ಸುಳ್ಳಿನ ನಾಲಿಗೆಯಿಂದ ಸಂಪಾ ದಿಸುವ ಸಂಪತ್ತು ಮೃತ್ಯುವನ್ನು ಹುಡುಕುವವರಿಂದ ಬಡಿಯಲ್ಪಟ್ಟ ವ್ಯರ್ಥತ್ವವಾಗಿದೆ. |
7
|
ದುಷ್ಟರ ಸೂರೆಯು ಅವರನ್ನು ನಾಶಪಡಿಸುವದು; ನ್ಯಾಯವಾದದ್ದನ್ನು ಮಾಡುವದನ್ನು ಅವರು ನಿರಾಕರಿಸುತ್ತಾರೆ. |
8
|
ಮನುಷ್ಯನ ಮಾರ್ಗವು ಡೊಂಕು ಮತ್ತು ಅಪರಿಚಿತ; ಪವಿತ್ರನಿ ಗಾದರೋ ಅವನ ಕ್ರಿಯೆಯು ಸರಳ. |
9
|
ವಿಶಾಲವಾದ ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವದಕ್ಕಿಂತ ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವದು ಲೇಸು. |
10
|
ದುಷ್ಟರ ಮನಸ್ಸು ಕೇಡನ್ನು ಅಪೇಕ್ಷಿಸುತ್ತದೆ; ಅವನ ದೃಷ್ಟಿಯಲ್ಲಿ ತನ್ನ ನೆರೆಯವನು ಯಾವ ದಯೆ ಯನ್ನು ಕಂಡುಕೊಳ್ಳುವದಿಲ್ಲ. |
11
|
ಪರಿಹಾಸ್ಯಕರನ್ನು ಶಿಕ್ಷಿಸಿ ದರೆ ಬುದ್ಧಿಹೀನರು ಜ್ಞಾನವಂತರಾಗುವರು; ಜ್ಞಾನಿಯು ಶಿಕ್ಷಣ ಹೊಂದಿದರೆ ಅವನು ತಿಳುವಳಿಕೆಯನ್ನು ಹೊಂದು ತ್ತಾನೆ. |
12
|
ನೀತಿವಂತನು ದುಷ್ಟನ ಮನೆಯನ್ನು ಬುದ್ಧಿ ಯಿಂದ ಲಕ್ಷಿಸುತ್ತಾನೆ; ಅವರ ದುಷ್ಟತನಕ್ಕಾಗಿ ದೇವರು ಅವರನ್ನು ಕೆಡವುತ್ತಾನೆ. |
13
|
ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನು ಕೂಗಿದಾಗ ಯಾರೂ ಅವನಿಗೆ ಉತ್ತರಕೊಡುವದಿಲ್ಲ. |
14
|
ಗುಪ್ತ ಲಂಚವು ಕೋಪವನ್ನು ಅಡಗಿಸುವದು; ಎದೆಯಲ್ಲಿ ಕೊಟ್ಟ ಬಹುಮಾನವು ರೌದ್ರವನ್ನು ಆರಿಸುತ್ತದೆ. |
15
|
ನ್ಯಾಯತೀರಿಸುವದು ನೀತಿವಂತರಿಗೆ ಸಂತೋಷವಾ ಗಿದೆ; ಅಕ್ರಮವನ್ನು ಮಾಡುವವರಿಗೆ ನಾಶನ. |
16
|
ವಿವೇ ಕದ ಮಾರ್ಗವನ್ನು ಬಿಟ್ಟು, ತಿರುಗುವವನು ಸತ್ತವರ ಕೂಟದಲ್ಲಿ ಇರುವಂಥವನಾಗಿದ್ದಾನೆ. |
17
|
ಭೋಗಾಸ ಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ ತೈಲವನ್ನೂ ಅಪೇಕ್ಷಿಸುವವನು ನಿರ್ಭಾಗ್ಯನಾಗುವನು. |
18
|
ನೀತಿ ವಂತರಿಗಾಗಿ ದುಷ್ಟರೂ ಯಥಾರ್ಥವಂತರಿಗಾಗಿ ದೋಷಕರೂ ಈಡಾಗುವರು. |
19
|
ಕಾಡುವ ಕೋಪವುಳ್ಳ ಸ್ತ್ರೀಯೊಂದಿಗೆ ವಾಸಮಾಡುವದಕ್ಕಿಂತ ಅಡವಿಯಲ್ಲಿ ವಾಸಿಸುವದು ಲೇಸು. |
20
|
ಜ್ಞಾನವಂತರ ನಿವಾಸದಲ್ಲಿ ಅಪೇಕ್ಷಿಸತಕ್ಕ ಐಶ್ವರ್ಯವೂ ಎಣ್ಣೆಯೂ ಇರುತ್ತವೆ; ಬುದ್ಧಿಹೀನನು ಇದ್ದದ್ದನ್ನು ಖರ್ಚು ಮಾಡುತ್ತಾನೆ. |
21
|
ನೀತಿಯನ್ನೂ ಕರುಣೆಯನ್ನೂ ಹಿಂಬಾಲಿಸುವವನು; ಜೀವವನ್ನೂ ನೀತಿಯನ್ನೂ ಕೀರ್ತಿಯನ್ನೂ ಕಂಡು ಕೊಳ್ಳುತ್ತಾನೆ. |
22
|
ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ ಅದರಲ್ಲಿ ಭರವಸವಿಟ್ಟು ಬಲವನ್ನು ಕೆಡವಿ ಹಾಕು ತ್ತಾನೆ. |
23
|
ತನ್ನ ಬಾಯಿಯನ್ನು ನಾಲಿಗೆಯನ್ನು ಕಾಯುವ ವನು ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ. |
24
|
ಸೊಕ್ಕೇರಿದ ಗರ್ವದಲ್ಲಿ ವರ್ತಿಸುವ ವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕನು. |
25
|
ಸೋಮಾರಿಯ ಆಶೆಯು ಅವನನ್ನು ಕೊಲ್ಲುತ್ತವೆ. ಅವನ ಕೈಗಳು ದುಡಿಯುವದಕ್ಕೆ ನಿರಾಕರಿಸುತ್ತವೆ. |
26
|
ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ. |
27
|
ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ. |
28
|
ಸುಳ್ಳುಸಾಕ್ಷಿಯವನು ನಾಶವಾಗುವನು; ಕೇಳುವವನು ಬಿಡದೆ ಮಾತಾಡುವನು. |
29
|
ದುಷ್ಟನು ತನ್ನ ಮುಖವನ್ನು ಕಠಿಣಮಾಡಿಕೊಳ್ಳುತ್ತಾನೆ; ಯಥಾ ರ್ಥವಂತನಾದರೋ ತನ್ನ ಮಾರ್ಗವನ್ನು ಸರಿಪಡಿಸಿ ಕೊಳ್ಳುತ್ತಾನೆ. |
30
|
ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ. |
31
|
ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ. |
Proverbs 21:24 Kannada Language Bible Words basic statistical display
COMING SOON ...