1
|
ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನ ಹೆಸರನ್ನು ಕರೆಯಿರಿ; ಜನ ಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯಮಾಡಿರಿ. |
2
|
ಆತನಿಗೆ ಹಾಡಿರಿ, ಆತನಿಗೆ ಕೀರ್ತನೆ ಹಾಡಿರಿ; ಆತನ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ. |
3
|
ಆತನ ಪರಿಶುದ್ಧ ನಾಮದಲ್ಲಿ ಹೊಗಳಿಕೊಳ್ಳಿರಿ; ಕರ್ತನನ್ನು ಹುಡುಕುವವರ ಹೃದಯವು ಸಂತೋಷಿಸಲಿ. |
4
|
ಕರ್ತನನ್ನೂ ಆತನ ಬಲವನ್ನೂ ಹುಡುಕಿರಿ. ಆತನ ಮುಖ ವನ್ನು ಯಾವಾಗಲೂ ಹುಡುಕಿರಿ. |
5
|
ಆತನು ಮಾಡಿದ ಆಶ್ಚರ್ಯ ಕಾರ್ಯಗಳನ್ನೂ ಆತನ ಅದ್ಭುತಗಳನ್ನೂ ಆತನ ಬಾಯಿಯ ನ್ಯಾಯಗಳನ್ನೂ ಜ್ಞಾಪಕಮಾಡಿ ಕೊಳ್ಳಿರಿ; |
6
|
ಆತನ ಸೇವಕನಾದ ಅಬ್ರಹಾಮನ ಸಂತತಿಯೇ, ಆತನು ಆದುಕೊಂಡ ಯಾಕೋಬನ ಮಕ್ಕಳೇ, |
7
|
ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ. |
8
|
ತನ್ನ ಒಡಂಬಡಿಕೆಯನ್ನೂ ಸಾವಿರ ತಲಾಂತರಗ ಳಿಗೆ ಆಜ್ಞಾಪಿಸಿದ ತನ್ನ ಮಾತನ್ನೂ |
9
|
ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಇಸಾಕನಿಗೆ ಇಟ್ಟ ಆಣೆಯನ್ನೂ ಆತನು ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾನೆ. |
10
|
ಅದನ್ನು ಯಾಕೋಬನಿಗೆ ದೃಢ ಮಾಡಿದನು ಮತ್ತು ಇಸ್ರಾಯೇಲಗೆ ನಿತ್ಯ ಒಡಂಬಡಿಕೆ ಯಾಗಿ ಸ್ಥಾಪಿಸಿ ಹೇಳಿದ್ದೇನಂದರೆ-- |
11
|
ನಿನಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು. |
12
|
ಆಗ ಅವರು ಲೆಕ್ಕಕ್ಕೆ ಸ್ವಲ್ಪವಾಗಿಯೂ ಹೌದು, ಬಹಳ ಸ್ವಲ್ಪ ಮಂದಿಯಾಗಿಯೂ ಪರದೇಶಸ್ಥರಾ ಗಿಯೂ ಅದರಲ್ಲಿ ಇದ್ದರು. |
13
|
ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋದರು. |
14
|
ಮನುಷ್ಯರು ಅವರಿಗೆ ಕೇಡು ಮಾಡದಂತೆ ಆತನು ತಡೆದನು; ಹೌದು, ಅವರಿಗೋ ಸ್ಕರ ಆತನು ಅರಸುಗಳನ್ನು ಗದರಿಸಿದನು. |
15
|
ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ ಎಂದು ಹೇಳಿದನು. |
16
|
ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು. |
17
|
ಅವರ ಮುಂದೆ ಒಬ್ಬ ಮನುಷ್ಯನನ್ನು ಅಂದರೆ ದಾಸನಾಗಿ ಮಾರಲ್ಪಟ್ಟ ಯೋಸೇಫನನ್ನು ಕಳುಹಿಸಿದನು. |
18
|
ಅವರು ಸಂಕೋಲೆಗಳಿಂದ ಅವನ ಕಾಲುಗಳನ್ನು ಬಾಧಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಬಂಧಿಸಿದರು. |
19
|
ಆತನ ವಾಕ್ಯವು ಬರುವ ವರೆಗೆ ಕರ್ತನ ಮಾತು ಅವನನ್ನು ಪುಟಕ್ಕೆ ಹಾಕಿತು. |
20
|
ಅರಸನು ಕಳುಹಿಸಿ ಅವನನ್ನು ಬಿಡಿಸಿದನು; ಜನಗಳ ಅಧಿಪತಿಯು ಅವನನ್ನು ಬಿಡುಗಡೆ ಮಾಡಿದನು. |
21
|
ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ |
22
|
ತನ್ನ ಪ್ರಧಾನರನ್ನು ಮನಸ್ಸು ಬಂದ ಹಾಗೆ ಕಟ್ಟುವದಕ್ಕೂ ತನ್ನ ಜ್ಞಾನ ವನ್ನು ಆಲೋಚನಾ ಕರ್ತರಿಗೆ ಕಲಿಸುವದಕ್ಕೂ ಇಟ್ಟನು. |
23
|
ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು. |
24
|
ಆತನು ತನ್ನ ಜನರನ್ನು ಬಹಳ ಅಭಿವೃದ್ಧಿಮಾಡಿ ಅವರ ವೈರಿಗಳಿಗಿಂತ ಬಲಿಷ್ಠ ರನ್ನಾಗಿ ಮಾಡಿದನು. |
25
|
ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು. |
26
|
ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು. |
27
|
ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು. |
28
|
ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ. |
29
|
ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು. |
30
|
ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು. |
31
|
ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು. |
32
|
ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು. |
33
|
ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು. |
34
|
ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು, |
35
|
ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು. |
36
|
ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು. |
37
|
ಆತನು ಬೆಳ್ಳಿ ಬಂಗಾರಗಳ ಸಂಗಡ ಅವರನ್ನು ಹೊರಗೆ ಬರಮಾಡಿ ದನು; ಅವರ ಗೋತ್ರಗಳಲ್ಲಿ ಬಲಹೀನನು ಒಬ್ಬನೂ ಇರಲಿಲ್ಲ. |
38
|
ಐಗುಪ್ತ್ಯರು ಅವರ ವಿಷಯದಲ್ಲಿ ಹೆದರಿಕೆ ಯುಳ್ಳವರಾದ್ದರಿಂದ ಅವರು ಹೊರಟು ಹೋದದಕ್ಕೆ ಸಂತೋಷಿಸಿದರು. |
39
|
ಆತನು ನೆರಳಿಗಾಗಿ ಮೇಘ ವನ್ನೂ ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ವಿಸ್ತರಿಸಿದನು. |
40
|
ಅವರು ಕೇಳಿದಾಗ ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ರೊಟ್ಟಿಯಿಂದ ಅವರನ್ನು ತೃಪ್ತಿಪಡಿಸಿದನು. |
41
|
ಆತನು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಒಣಗಿದ ಸ್ಥಳಗಳಲ್ಲಿ ನದಿಯಾಗಿ ಹರಿಯಿತು. |
42
|
ಆತನು ತನ್ನ ಪರಿಶುದ್ಧ ವಾಗ್ದಾನವನ್ನೂ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕ ಮಾಡಿಕೊಂಡನು. |
43
|
ಆತನು ತನ್ನ ಜನರನ್ನು ಆನಂದದಿಂದಲೂ ತಾನು ಆದುಕೊಂಡವರನ್ನು ಉತ್ಸಾ ಹದಿಂದಲೂ ಹೊರಗೆ ಬರಮಾಡಿದನು, |
44
|
ಅವರು ಪ್ರಜೆಗಳ ಕಷ್ಟಾರ್ಜಿತವನ್ನು ಸ್ವಾಧೀನಮಾಡಿಕೊಂಡರು. |
45
|
ಆತನ ನಿಯಮಗಳನ್ನು ಕೈಕೊಂಡು ನ್ಯಾಯಪ್ರಮಾಣ ಗಳನ್ನೂ ಕಾಪಾಡುವದಕ್ಕಾಗಿ ಆತನು ಅನ್ಯಜನಾಂಗದ ದೇಶಗಳನ್ನು ಅವರಿಗೆ ಕೊಟ್ಟನು. ಕರ್ತನನ್ನು ಸ್ತುತಿಸಿರಿ. |
Psalms 105:1 Kannada Language Bible Words basic statistical display
COMING SOON ...