1
|
ಕರ್ತನನ್ನು ಕೊಂಡಾಡಿರಿ; ಆತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಇರುವದು. |
2
|
ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ, |
3
|
ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಹಾಗೆ ಹೇಳಲಿ. |
4
|
ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ, |
5
|
ಹಸಿದು, ದಾಹಗೊಂಡು ಅವರ ಪ್ರಾಣವು ಅವರಲ್ಲಿ ಕುಗ್ಗಿಹೋಯಿತು. |
6
|
ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿ, |
7
|
ವಾಸಿಸುವ ಪಟ್ಟಣಕ್ಕೆ ಹೋಗುವ ಹಾಗೆ ಅವರನ್ನು ಸರಿಯಾದ ಹಾದಿಯಲ್ಲಿ ನಡಿಸಿದನು. |
8
|
ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಮನುಷ್ಯನ ಮಕ್ಕಳಿಗೆ ಆತನು ಮಾಡುವ ಅದ್ಭುತ ಗಳಿಗೋಸ್ಕರವೂ ಕೊಂಡಾಡಲಿ. |
9
|
ದಾಹಪಟ್ಟ ಪ್ರಾಣ ವನ್ನು ತೃಪ್ತಿಪಡಿಸಿ ಹಸಿದ ಪ್ರಾಣವನ್ನು ಒಳ್ಳೇದರಿಂದ ತುಂಬಿಸಿದ್ದಾನೆ. |
10
|
ಕತ್ತಲಲ್ಲಿ ಮತ್ತು ಮರಣದ ನೆರಳಿ ನಲ್ಲಿ ಕೂತವರೂ ದೀನತೆಯಲ್ಲಿಯೂ ಕಬ್ಬಿಣದ ಬೇಡಿ ಯಲ್ಲಿ ಬಂಧಿತರೂ ಸೆರೆಬಿದ್ದವರೂ ಆದ ಇವರು |
11
|
ದೇವರ ಮಾತುಗಳನ್ನು ಎದುರಿಸಿ, ಮಹೋನ್ನತನ ಆಲೋಚನೆಯನ್ನು ಅಸಹ್ಯಿಸಿದ್ದರಿಂದ |
12
|
ಆತನು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕ ನಿಲ್ಲದೆ ಕೆಳಗೆ ಬಿದ್ದರು. |
13
|
ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳ ಗಿಂದ ಅವರನ್ನು ರಕ್ಷಿಸಿ |
14
|
ಕತ್ತಲೆಯೊಳಗಿಂದಲೂ ಮರಣದ ನೆರಳಿನಿಂದಲೂ ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟನು. |
15
|
ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋ ಸ್ಕರವೂ ಕೊಂಡಾಡಲಿ. |
16
|
ಆತನು ಹಿತ್ತಾಳೆಯ ಕದ ಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದು ಬಿಟ್ಟಿದ್ದಾನೆ. |
17
|
ಮೂಢರು ತಮ್ಮ ದ್ರೋಹದಿಂದಲೂ ಅಕ್ರಮಗಳಿಂದಲೂ ಶ್ರಮೆಪಡುತ್ತಾರೆ. |
18
|
ಅವರ ಪ್ರಾಣವು ಎಲ್ಲಾ ಆಹಾರವನ್ನು ಅಸಹ್ಯಿಸುತ್ತದೆ; ಅವರು ಮರಣದ ಬಾಗಲುಗಳಿಗೆ ಸವಿಾಪಿಸುತ್ತಾರೆ. |
19
|
ಆಗ ಅವರು ತಮ್ಮ ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಲು ಆತನು ಅವರನ್ನು ಅವರ ಸಂಕಟಗಳೊಳಗಿಂದ ರಕ್ಷಿಸುತ್ತಾನೆ. |
20
|
ಆತನು ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಸ್ವಸ್ಥಮಾಡಿ ಅವರ ನಾಶನಗಳಿಂದ ಅವರನ್ನು ತಪ್ಪಿಸಿ ದನು. |
21
|
ಅವರು ಕರ್ತನನ್ನು ಆತನ ಒಳ್ಳೆಯತನ ಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ. |
22
|
ಸ್ತೋತ್ರದ ಬಲಿಗಳನ್ನು ಅರ್ಪಿಸಿ ಆತನ ಕೆಲಸಗಳನ್ನು ಉತ್ಸಾಹ ದಿಂದ ಸಾರಲಿ. |
23
|
ಹಡಗುಗಳಲ್ಲಿ ಸಮುದ್ರಕ್ಕೆ ಇಳಿದು ಹೋಗಿ ಬಹಳ ನೀರುಗಳಲ್ಲಿ ವ್ಯಾಪಾರಮಾಡುವವರು |
24
|
ಕರ್ತನ ಕೆಲಸಗಳನ್ನೂ ಅಗಾಧಗಳಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ. |
25
|
ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ. |
26
|
ಅವರು ಆಕಾಶಕ್ಕೆ ಏರು ತ್ತಾರೆ; ತಿರುಗಿ ಅಗಾಧಗಳಿಗೆ ಇಳಿಯುತ್ತಾರೆ; ಅವರ ಪ್ರಾಣವು ಕಳವಳದಿಂದ ಕರಗಿಹೋಗುತ್ತದೆ. |
27
|
ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು. |
28
|
ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ |
29
|
ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು. |
30
|
ಅವು ಶಾಂತವಾದಾಗ ಅವರು ಸಂತೋಷಪಡುತ್ತಾರೆ; ಹೀಗೆ ಅವರು ಅಪೇಕ್ಷಿಸಿದ ರೇವಿಗೆ ಅವರನ್ನು ನಡೆಸುತ್ತಾನೆ. |
31
|
ಅವರು ಕರ್ತನನ್ನು ಆತನ ಒಳ್ಳೇತನಕ್ಕೋಸ್ಕರವೂ ಆತನು ಮನುಷ್ಯನ ಮಕ್ಕಳಿಗೆ ಮಾಡುವ ಅದ್ಭುತಗಳಿ ಗೋಸ್ಕರವೂ ಕೊಂಡಾಡಲಿ. |
32
|
ಜನರು ಸಭೆಯಲ್ಲಿ ಆತನನ್ನು ಘನಪಡಿಸಿ ಹಿರಿಯರ ಸಭೆಯಲ್ಲಿ ಆತನನ್ನು ಸ್ತುತಿಸಲಿ. |
33
|
ಆತನು ನದಿಗಳನ್ನು ಅರಣ್ಯವಾಗಿಯೂ ನೀರಿನ ಬುಗ್ಗೆಗಳನ್ನು ಒಣ ಭೂಮಿಯಾಗಿಯೂ |
34
|
ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ. |
35
|
ಆತನು ಅರಣ್ಯವನ್ನು ನೀರಿನ ಕೆರೆಯಾಗಿಯೂ ಒಣ ಭೂಮಿ ಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸುತ್ತಾನೆ. |
36
|
ಅಲ್ಲಿ ಹಸಿದವರನ್ನು ವಾಸಿಸಮಾಡುತ್ತಾನೆ; ಆಗ ಅವರು ವಾಸಿಸುವ ಪಟ್ಟಣವನ್ನು ಸ್ಥಾಪಿಸಿ, |
37
|
ಹೊಲ ಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಡುವರು; ಅವು ಹುಟ್ಟುವಳಿಯ ಫಲವನ್ನು ಕೊಡುವವು. |
38
|
ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ. |
39
|
ತಿರಿಗಿ ಅವರು ಕಡಿಮೆಯಾಗಿ ಕೇಡು ಚಿಂತೆಗಳ ಸಂಕಟದಿಂದ ಕುಗ್ಗುತ್ತಾರೆ. |
40
|
ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ. |
41
|
ಆದಾಗ್ಯೂ ಆತನು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ ಅವನ ಕುಟುಂಬಗಳನ್ನು ಮಂದೆಯ ಹಾಗೆ ಇರಿಸುತ್ತಾನೆ. |
42
|
ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು. |
43
|
ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು. |
Psalms 107:6 Kannada Language Bible Words basic statistical display
COMING SOON ...