1
|
ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ. |
2
|
ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು. |
3
|
ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ. |
4
|
ಕರ್ತನನ್ನು ಪ್ರಾರ್ಥಿಸದೆ ರೊಟ್ಟಿಯನ್ನೋ ಎಂಬಂತೆ ನನ್ನ ಜನರನ್ನು ತಿಂದು ಅಪರಾಧಮಾಡಿದವರಿಗೆ ತಿಳುವಳಿಕೆಯಿಲ್ಲವೋ? |
5
|
ಅಲ್ಲಿ ಅವರು ಭಯಭ್ರಾಂತ ರಾದರು; ಯಾಕಂದರೆ ದೇವರು ನೀತಿವಂತರ ಸಂತತಿ ಯಲ್ಲಿ ಇದ್ದಾನೆ. |
6
|
ಕರ್ತನು ಬಡವನ ಆಶ್ರಯವಾಗಿರು ವದರಿಂದ ನೀವು ಅವನ ಆಲೋಚನೆಯನ್ನು ನಾಚಿಕೆ ಪಡಿಸಿದ್ದೀರಿ. |
7
|
ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು. |
Psalms 14:1 Kannada Language Bible Words basic statistical display
COMING SOON ...