1
|
ಓ ನನ್ನ ಜನರೇ, ನನ್ನ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ; ನನ್ನ ಬಾಯಿ ಮಾತುಗಳಿಗೆ ನಿಮ್ಮ ಕಿವಿಗಳನ್ನು ಬೊಗ್ಗಿಸಿರಿ. |
2
|
ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು. |
3
|
ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು. |
4
|
ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ. |
5
|
ಆತನು ಯಾಕೋಬನಲ್ಲಿ ಸಾಕ್ಷಿ ಯನ್ನು ಸ್ಥಾಪಿಸಿ ಇಸ್ರಾಯೇಲಿನಲ್ಲಿ ನ್ಯಾಯಪ್ರಮಾಣವನ್ನು ಇಟ್ಟು |
6
|
ಮುಂದಿನ ವಂಶವು ಅಂದರೆ ಹುಟ್ಟುವ ದಕ್ಕಿರುವ ಮಕ್ಕಳು ತಿಳಿದು, ಎದ್ದು, ತಮ್ಮ ಮಕ್ಕಳಿಗೆ ವಿವರಿಸಲಾಗಿ |
7
|
ಇವರು ದೇವರಲ್ಲಿ ತಮ್ಮ ನಿರೀಕ್ಷೆ ಇಡುವಂತೆಯೂ ದೇವರ ಕ್ರಿಯೆಗಳನ್ನು ಮರೆತುಬಿಡ ದಂತೆಯೂ ಆತನ ಆಜ್ಞೆಗಳನ್ನು ಕೈಕೊಂಡು |
8
|
ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು. |
9
|
ಎಫ್ರಾಯಾಮನ ಮಕ್ಕಳು ಆಯುಧಗಳನ್ನು ಧರಿಸಿ ಬಿಲ್ಲುಗಳನ್ನು ಹೊತ್ತುಕೊಂಡು ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು. |
10
|
ಅವರು ದೇವರ ಒಡಂಬಡಿಕೆ ಯನ್ನು ಕೈಕೊಳ್ಳದೆ ಆತನ ನ್ಯಾಯಪ್ರಮಾಣದಲ್ಲಿ ನಡೆಯಲೊಲ್ಲದೆ ಇದ್ದರು. |
11
|
ಆತನು ಅವರಿಗೆ ತೋರಿ ಸಿದ ಆತನ ಕೃತ್ಯಗಳನ್ನೂ ಆದ್ಭುತಗಳನ್ನೂ ಮರೆತು ಬಿಟ್ಟರು. |
12
|
ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ, ಸೋನ್ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು. |
13
|
ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು. |
14
|
ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು. |
15
|
ಅರಣ್ಯ ದಲ್ಲಿ ಆತನು ಬಂಡೆಗಳನ್ನು ಸೀಳಿ ಅವರಿಗೆ ಮಹಾ ಜಲಾಗಾಧಗಳ ಹಾಗೆ ನೀರು ಕುಡಿಯಲು ಕೊಟ್ಟನು. |
16
|
ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು ನದಿಗಳಂತೆ ನೀರನ್ನು ಹರಿಯಮಾಡಿದನು. |
17
|
ಆದರೆ ಅವರು ಇನ್ನೂ ಆತನಿಗೆ ವಿರೋಧವಾಗಿ ಪಾಪಮಾಡಿ ಅರಣ್ಯದಲ್ಲಿ ಮಹೋನ್ನತನಿಗೆ ಕೋಪ ವನ್ನೆಬ್ಬಿಸಿ |
18
|
ದೇವರನ್ನು ತಮ್ಮ ಹೃದಯದಲ್ಲಿ ಶೋಧಿಸು ವವರಾಗಿ ತಮ್ಮ ದುರಾಶೆಗಳಿಗ್ಕೋಸ್ಕರ ಆಹಾರವನ್ನು ಕೇಳಿದರು. |
19
|
ಹೌದು, ಅವರು ದೇವರಿಗೆ ವಿರೋಧ ವಾಗಿ ಮಾತನಾಡಿ--ದೇವರು ಅರಣ್ಯದಲ್ಲಿ ಮೇಜನ್ನು ಸಿದ್ಧ ಮಾಡಬಲ್ಲನೋ ಅಂದರು. |
20
|
ಇಗೋ, ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು; ಹಳ್ಳಗಳು ಹರಿದವು; ರೊಟ್ಟಿಯನ್ನೂ ಕೊಡಬಲ್ಲನೋ? ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು. |
21
|
ಆದದರಿಂದ ಕರ್ತನು ಇದನ್ನು ಕೇಳಿದಾಗ ಉಗ್ರನಾದನು; ಯಾಕೋಬನಲ್ಲಿ ಬೆಂಕಿ ಹೊತ್ತಿತ್ತು; ಇಸ್ರಾಯೇಲಿನ ಮೇಲೆ ಕೋಪವು ಸಹ ಎದ್ದಿತು. |
22
|
ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ; ಆತನ ರಕ್ಷಣೆಯಲ್ಲಿ ಭರವಸವಿಡಲಿಲ್ಲ. |
23
|
ಆದರೆ ಆತನು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ ಪರಲೋಕದ ಕದಗಳನ್ನು ತೆರೆದನು. |
24
|
ಉಣ್ಣುವದಕ್ಕೆ ಮನ್ನವನ್ನು ಅವರ ಮೇಲೆ ಸುರಿಸಿ ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟನು. |
25
|
ಮನುಷ್ಯನು ದೂತರ ಆಹಾರ ವನ್ನು ತಿಂದನು; ತೃಪ್ತಿಯಾಗುವಷ್ಟು ಆಹಾರವನ್ನು ಅವರಿಗೆ ಆತನು ಕಳುಹಿಸಿದನು. |
26
|
ಮೂಡಣ ಗಾಳಿ ಯನ್ನು ಆಕಾಶದಲ್ಲಿ ಹುಟ್ಟಿಸಿ ತನ್ನ ಬಲದಿಂದ ದಕ್ಷಿಣ ಗಾಳಿಯನ್ನು ತಂದನು. |
27
|
ಧೂಳಿನಂತೆ ಮಾಂಸವನ್ನೂ ಸಮುದ್ರದ ಮರಳಿನಂತೆ ರೆಕ್ಕೆಯುಳ್ಳ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿ |
28
|
ಅವರ ಮಧ್ಯದಲ್ಲಿಯೂ ಅವರ ನಿವಾಸಗಳ ಸುತ್ತಲೂ ಬೀಳಮಾಡಿದನು. |
29
|
ಅವರು ತಿಂದು ಬಹಳ ತೃಪ್ತಿಯಾದರು; ಅವರು ಆಶಿಸಿದ್ದನ್ನು ಆತನು ಅವರಿಗೆ ಕೊಟ್ಟನು. |
30
|
ಅವರು ತಮ್ಮ ಆಶೆಯನ್ನು ಬಿಡದೆ ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ |
31
|
ದೇವರ ಕೋಪವು ಅವರ ಮೇಲೆ ಎದ್ದು ಅವರಲ್ಲಿ ಕೊಬ್ಬಿದವ ರನ್ನು ಕೊಂದುಹಾಕಿ ಇಸ್ರಾಯೇಲಿನ ಪ್ರಾಯಸ್ಥರನ್ನು ಹೊಡೆದು ಬೀಳಿಸಿತು. |
32
|
ಇದೆಲ್ಲಾ ಆದಾಗ್ಯೂ ಅವರು ಇನ್ನೂ ಪಾಪಮಾಡಿ ಆತನ ಆದ್ಭುತಗಳನ್ನು ನಂಬ ಲಿಲ್ಲ. |
33
|
ಆಗ ಆತನು ಅವರ ದಿವಸಗಳನ್ನು ಉಸಿರಿ ನಂತೆಯೂ ಅವರ ವರುಷಗಳನ್ನು ಕಳವಳದಲ್ಲಿಯೂ ಮುಗಿಸಿದನು. |
34
|
ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ |
35
|
ದೇವರು ತಮ್ಮ ಬಂಡೆ ಎಂದೂ ಮಹೋನ್ನತ ನಾದ ದೇವರು ತಮ್ಮ ವಿಮೋಚಕನೆಂದೂ ಜ್ಞಾಪಕ ಮಾಡಿಕೊಂಡರು. |
36
|
ಆದಾಗ್ಯೂ ತಮ್ಮ ಬಾಯಿಗಳಿಂದ ಆತನಿಗೆ ಮುಖಸ್ತುತಿ ಮಾಡಿ ತಮ್ಮ ನಾಲಿಗೆಯಿಂದ ಆತನಿಗೆ ಸುಳ್ಳು ಹೇಳಿದರು. |
37
|
ಅವರ ಹೃದಯವು ಆತನ ಸಂಗಡ ಇರಲಿಲ್ಲ ಅವರು ಆತನ ಒಡಂಬಡಿ ಕೆಯಲ್ಲೂ ಸ್ಥಿರವಾಗಿರಲಿಲ್ಲ |
38
|
ಆದಾಗ್ಯೂ ಆತನು ಅಂತಃಕರಣವುಳ್ಳವನಾಗಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಹೌದು, ಆತನು ಅನೇಕ ಸಾರಿ ತನ್ನ ಕೋಪವನ್ನು ತೋರಿಸದೆ ಕೋಪೋದ್ರೇಕವನ್ನೂ ಮಾಡಿಕೊಳ್ಳಲಿಲ್ಲ. |
39
|
ಅವರು ಕೇವಲ ಮನುಷ್ಯ ರೆಂದು, ಹಾರಿಹೋಗಿ ತಿರುಗಿಬಾರದ ಗಾಳಿಯಾಗಿ ದ್ದಾರೆಂದು ಆತನು ಜ್ಞಾಪಕಮಾಡಿಕೊಂಡನು. |
40
|
ಎಷ್ಟೋ ಸಾರಿ ಅವರು ಅರಣ್ಯದಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಕಾಡಿನಲ್ಲಿ ಆತನನ್ನು ದುಃಖ ಪಡಿಸಿದರು. |
41
|
ಹೌದು, ಅವರು ತಿರುಗಿಬಿದ್ದು ದೇವ ರನ್ನು ಪರೀಕ್ಷಿಸಿ ಇಸ್ರಾಯೇಲಿನ ಪರಿಶುದ್ಧನಿಗೆ ಮಿತಿ ಮಾಡಿದರು. |
42
|
ಆತನು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ |
43
|
ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ. |
44
|
ಅವರು ಕುಡಿ ಯಲಾರದ ಹಾಗೆ ಅವರ ನದಿಗಳನ್ನೂ ಹೊಳೆಗ ಳನ್ನೂ ಆತನು ರಕ್ತಕ್ಕೆ ಮಾರ್ಪಡಿಸಿದನು. |
45
|
ಅವರಲ್ಲಿ ವಿವಿಧ ಹುಳಗಳನ್ನು ಕಳುಹಿಸಿದನು, ಅವು ಅವರನ್ನು ತಿಂದು ಬಿಟ್ಟವು; ಕಪ್ಪೆಗಳನ್ನು ಸಹ ಕಳುಹಿಸಿದನು; ಅವು ಅವರನ್ನು ನಾಶಮಾಡಿದವು. |
46
|
ಅವರ ಬೆಳೆ ಯನ್ನು ಕಂಬಳಿ ಹುಳಗಳಿಗೂ ವ್ಯವಸಾಯವನ್ನು ಮಿಡಿತೆಗಳಿಗೂ ಕೊಟ್ಟು |
47
|
ಅವರ ದ್ರಾಕ್ಷೇ ಬಳ್ಳಿಗ ಳನ್ನು ಕಲ್ಮಳೆಯಿಂದಲೂ ಆಲದ ಮರಗಳನ್ನು ಮಂಜಿ ನಿಂದಲೂ ನಾಶ ಮಾಡಿ |
48
|
ಅವರ ದನಗಳನ್ನು ಕಲ್ಮ ಳೆಗೂ ಮಂದೆಗಳನ್ನು ಸಿಡಿಲಿಗೂ ಒಪ್ಪಿಸಿಬಿಟ್ಟನು. |
49
|
ಉಪದ್ರಪಡಿಸುವ ದೂತರನ್ನೋ ಎಂಬಂತೆ ತನ್ನ ಕೋಪದ ಉರಿಯನ್ನು ಉಗ್ರ, ರೋಷ, ಇಕ್ಕಟ್ಟುಗಳನ್ನು ಅವರ ಮೇಲೆ ಸುರಿಸಿದನು. |
50
|
ತನ್ನ ಕೋಪಕ್ಕೆ ದಾರಿಮಾಡಿ ಅವರ ಪ್ರಾಣವನ್ನು ಸಾವಿನಿಂದ ಉಳಿಸದೆ ಅವರ ಜೀವವನ್ನು ಜಾಡ್ಯಕ್ಕೆ ಒಪ್ಪಿಸಿ |
51
|
ಐಗುಪ್ತದಲ್ಲಿ ಚೊಚ್ಚಲವಾದವರೆಲ್ಲರನ್ನೂ ಹಾಮನ ಗುಡಾರಗಳಲ್ಲಿ ಶಕ್ತಿಯ ಪ್ರಥಮ ಫಲವನ್ನೂ ಹೊಡೆದನು. |
52
|
ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು. |
53
|
ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು. |
54
|
ತನ್ನ ಪರಿಶುದ್ದಾಲಯದ ಮೇರೆಗೂ ಆತನ ಬಲಗೈ ಕೊಂಡುಕೊಂಡ ಈ ಪರ್ವತಕ್ಕೂ ಅವರನ್ನು ಬರ ಮಾಡಿದನು. |
55
|
ಅನ್ಯಜನಾಂಗವನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಅಳತೆಮಾಡಿ, ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲಿನ ಗೋತ್ರ ಗಳು ವಾಸಿಸುವಂತೆ ಮಾಡಿದನು. |
56
|
ಆದರೆ ಅವರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ರೇಗಿಸಿದರು; ಆತನ ವಿಧಿಗಳನ್ನು ಕೈಕೊಳ್ಳ ಲಿಲ್ಲ. |
57
|
ತಮ್ಮ ಪಿತೃಗಳ ಹಾಗೆ ತಿರುಗಿಬಿದ್ದು ಅಪ ನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ವಾರೆ ಯಾದರು. |
58
|
ತಮ್ಮ ಉನ್ನತ ಸ್ಥಳಗಳಿಂದ ಆತನಿಗೆ ಕೋಪವನ್ನೆಬ್ಬಿಸಿ ಕೆತ್ತಿದ ತಮ್ಮ ವಿಗ್ರಹಗಳಿಂದ ಆತನಿಗೆ ರೋಷವನ್ನೆಬ್ಬಿಸಿದರು. |
59
|
ದೇವರು ಇದನ್ನು ಕೇಳಿ ಉಗ್ರನಾಗಿ ಇಸ್ರಾಯೇಲನ್ನು ಬಹು ಅಸಹ್ಯಿಸಿ ಬಿಟ್ಟು, |
60
|
ಸಿಲೋವಿನ ಗುಡಾರವನ್ನೂ ಮನುಷ್ಯರೊಳಗೆ ಆತನು ಹಾಕಿದ ಗುಡಾರವನ್ನೂ ಬಿಟ್ಟು, |
61
|
ತನ್ನ ಬಲ ವನ್ನು ಸೆರೆಗೂ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟನು. |
62
|
ತನ್ನ ಜನರನ್ನು ಕತ್ತಿಗೆ ಒಪ್ಪಿಸಿಕೊಟ್ಟು ತನ್ನ ಬಾಧ್ಯತೆಗೆ ವಿರೋಧವಾಗಿ ಉಗ್ರನಾದನು. |
63
|
ಅವರ ಪ್ರಾಯಸ್ಥರನ್ನು ಬೆಂಕಿಯು ದಹಿಸಿಬಿಟ್ಟಿತು; ಅವರ ಕನ್ಯೆಯರು ಮದುವೆಯಾಗಲಿಲ್ಲ. |
64
|
ಅವರ ಯಾಜಕರು ಕತ್ತಿಯಿಂದ ಸಂಹಾರವಾದರು; ಅವರ ವಿಧವೆಯರು ಗೋಳಾಡಲಿಲ್ಲ. |
65
|
ಆಗ ಕರ್ತನು ನಿದ್ದೆಯಿಂದ ಎಚ್ಚತ್ತವನ ಹಾಗೆಯೂ ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆಯೂ ಎಚ್ಚತ್ತು, |
66
|
ತನ್ನ ವೈರಿಗಳನ್ನು ಹಿಂದಕ್ಕೆ ಹೊಡೆದು, ನಿತ್ಯ ನಿಂದೆಯನ್ನು ಅವರಿಗೆ ಕೊಟ್ಟನು. |
67
|
ಆತನು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯಾಮನ ಗೋತ್ರವನ್ನು ಆದು ಕೊಳ್ಳದೆ, |
68
|
ಯೆಹೂದನ ಕುಲವನ್ನೂ ತಾನು ಪ್ರೀತಿ ಮಾಡಿದ ಚೀಯೋನ್ ಪರ್ವತವನ್ನೂ ಆದುಕೊಂಡು, |
69
|
ಉನ್ನತವಾದವುಗಳಂತೆಯೂ ಯುಗಯುಗಕ್ಕೂ ತಾನು ಅಸ್ತಿವಾರ ಹಾಕಿದ ಭೂಮಿಯಂತೆಯೂ ತನ್ನ ಪರಿಶುದ್ಧಾಲಯವನ್ನು ಕಟ್ಟಿದನು |
70
|
ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು, |
71
|
ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು. |
72
|
ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು. |
Psalms 78:13 Kannada Language Bible Words basic statistical display
COMING SOON ...