1
|
ತರುವಾಯ ಕೋಲಿನಂತಿದ್ದ ಒಂದು ದಂಡ ನನಗೆ ಕೊಡಲ್ಪಟ್ಟಿತು ಮತ್ತು ಆ ದೂತನು ನಿಂತುಕೊಂಡು ಎದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಆಲಯದಲ್ಲಿ ಆರಾಧನೆ ಮಾಡು ವವರನ್ನೂ ಅಳತೆಮಾಡು. |
2
|
ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು. |
3
|
ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು. |
4
|
ಭೂಲೋಕದ ದೇವರ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ. |
5
|
ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು. |
6
|
ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು. |
7
|
ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು. |
8
|
ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು. |
9
|
ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ. |
10
|
ಈ ಇಬ್ಬರು ಪ್ರವಾದಿಗಳು ಭೂಮಿಯ ಮೇಲೆ ವಾಸ ಮಾಡುವವರನ್ನು ಯಾತನೆ ಪಡಿಸಿದ್ದರಿಂದ ಇವರ ವಿಷಯದಲ್ಲಿ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ದಾನಗಳನ್ನು ಕಳುಹಿಸುವರು ಎಂದು ಹೇಳಿದನು. |
11
|
ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು. |
12
|
ಆಮೇಲೆ ಅವರಿಗೆ--ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು. ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡಿದರು. |
13
|
ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು. |
14
|
ಎರಡನೆಯ ಆಪತ್ತು ಕಳೆದುಹೋಯಿತು; ಇಗೋ, ಮೂರನೆಯ ಆಪತ್ತು ಬೇಗನೆ ಬರುತ್ತದೆ. |
15
|
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು. |
16
|
ತರುವಾಯ ದೇವರ ಸಮಕ್ಷಮದಲ್ಲಿ ತಮ ತಮ್ಮ ಆಸನಗಳ ಮೇಲೆ ಕೂತಿರುವ ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡಬಿದ್ದು-- |
17
|
ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು. |
18
|
ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನು |
19
|
ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು. |
Revelation 11:1 Kannada Language Bible Words basic statistical display
COMING SOON ...