ಪೇತ್ರನು ಅವರಿಗೆ, “ನಾನು ಜೊಪ್ಪ ಪಟ್ಟಣದಲ್ಲಿದ್ದೆನು. ನಾನು ಪ್ರಾರ್ಥಿಸುತ್ತಿದ್ದಾಗ ನನಗೊಂದು ದರ್ಶನವಾಯಿತು. ಆ ದರ್ಶನದಲ್ಲಿ, ಆಕಾಶದಿಂದ ಇಳಿದು ಬರುತ್ತಿರುವ ಒಂದು ವಸ್ತುವನ್ನು ಕಂಡೆನು. ಅದು ದೊಡ್ಡ ತಟ್ಟೆಯಂತಿತ್ತು. ಅದರ ನಾಲ್ಕು ಮೂಲೆಗಳಲ್ಲಿ ಹಗ್ಗವನ್ನು ಕಟ್ಟಿ ಭೂಮಿಗೆ ಇಳಿಯಬಿಡಲಾಗಿತ್ತು. ಅದು ಇಳಿದು ಬಂದು ನನ್ನ ಸಮೀಪದಲ್ಲೇ ನಿಂತುಕೊಂಡಿತು.
ತನ್ನ ಮನೆಯಲ್ಲಿ ದೇವದೂತನೊಬ್ಬನು ನಿಂತಿರುವುದನ್ನು ತಾನು ಕಂಡದ್ದರ ಬಗ್ಗೆ ಕೊರ್ನೇಲಿಯನು ನನಗೆ ಹೇಳಿದನು. ಆ ದೇವದೂತನು ಕೊರ್ನೇಲಿಯನಿಗೆ, ಕೆಲವು ಜನರನ್ನು ಜೊಪ್ಪಕ್ಕೆ ಕಳುಹಿಸು. ಸೀಮೋನ್ ಪೇತ್ರನನ್ನು ಆಹ್ವಾನಿಸಿ ನಿಮ್ಮ ಬಳಿಗೆ ಬರಮಾಡಿಕೊ.
ಆಗ ನಾನು ಪ್ರಭುವಿನ ಮಾತುಗಳನ್ನು ಜ್ಞಾಪಿಸಿಕೊಂಡೆನು. ಯೋಹಾನನು ಜನರಿಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ಆದರೆ ನೀವು ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನ ಪಡೆಯುವಿರಿ!؆ ಎಂದು ಪ್ರಭುವು ಹೇಳಿದ್ದನು.
ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು.
ಸ್ತೆಫನನು ಕೊಲ್ಲಲ್ಪಟ್ಟ ನಂತರ ಉಂಟಾದ ಹಿಂಸೆಯಿಂದಾಗಿ ವಿಶ್ವಾಸಿಗಳು ಚದರಿಹೋದರು. ವಿಶ್ವಾಸಿಗಳಲ್ಲಿ ಕೆಲವರು ಬಹು ದೂರದ ಸ್ಥಳಗಳಾದ ಫೆನಿಷ್ಯ, ಸೈಪ್ರಸ್ ಮತ್ತು ಅಂತಿಯೋಕ್ಯಗಳಿಗೆ ಹೋದರು. ವಿಶ್ವಾಸಿಗಳು ಈ ಸ್ಥಳಗಳಲ್ಲಿ ಸುವಾರ್ತೆಯನ್ನು ತಿಳಿಸಿದರು. ಆದರೆ ಅವರು ಯೆಹೂದ್ಯರಿಗೆ ಮಾತ್ರ ತಿಳಿಸಿದರು.
ಈ ವಿಶ್ವಾಸಿಗಳಲ್ಲಿ ಕೆಲವರು ಸೈಪ್ರಸ್ ಮತ್ತು ಸಿರೇನ್ ಸ್ಥಳಗಳವರಾಗಿದ್ದರು. ಈ ಜನರು ಅಂತಿಯೋಕ್ಯಕ್ಕೆ ಬಂದಾಗ ಅವರು, ಪ್ರಭುವಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅಲ್ಲಿಯ ಗ್ರೀಕ್ ಜನರಿಗೆ ತಿಳಿಸಿದರು.
ಬಾರ್ನಬನು ಅಲ್ಲಿ ಸೌಲನನ್ನು ಕಂಡುಕೊಂಡು ಅವನನ್ನು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಸೌಲನು ಮತ್ತು ಬಾರ್ನಬನು ಅಂತಿಯೋಕ್ಯದಲ್ಲಿ ಒಂದು ವರ್ಷ ಪೂರ್ತಿ ಸಭೆಯ ಅನ್ಯೋನ್ಯತೆಯಲ್ಲಿ ಇದ್ದುಕೊಂಡು ಅನೇಕ ಜನರಿಗೆ ಬೋಧಿಸಿದರು. ಯೇಸುವಿನ ಹಿಂಬಾಲಕರಿಗೆ ಕ್ರೈಸ್ತರು؆ ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲೇ.
ಈ ಪ್ರವಾದಿಗಳಲ್ಲಿ ಅಗಬ؆ ಎಂಬ ಒಬ್ಬನಿದ್ದನು. ಅಗಬನು ಅಂತಿಯೋಕ್ಯದಲ್ಲಿ ಪವಿತ್ರಾತ್ಮನ ಪ್ರೇರಣೆಯಿಂದ, “ಇಡೀ ಪ್ರಪಂಚಕ್ಕೆ ಭೀಕರ ಕ್ಷಾಮ ಬರಲಿದೆ” ಎಂದು ಹೇಳಿದನು. (ಈ ಬರಗಾಲವು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ ಬಂದಿತು.)