1
|
ಗಲಭೆಯು ನಿಂತುಹೋದ ಮೇಲೆ, ಪೌಲನು ಯೇಸುವಿನ ಶಿಷ್ಯರನ್ನು ಕರೆಯಿಸಿ ಅವರನ್ನು ಧೈರ್ಯಪಡಿಸಿದನು. ಬಳಿಕ ಪೌಲನು ಅಲ್ಲಿಂದ ಹೊರಟು ಮಕೆದೋನಿಯಾಕ್ಕೆ ಹೋದನು. |
2
|
ಅವನು ಆ ಪ್ರದೇಶದಲ್ಲಿ ಪ್ರಯಾಣ ಮಾಡುತ್ತಾ ಅನೇಕ ಊರುಗಳಿಗೆ ಭೇಟಿನೀಡಿ, ಯೇಸುವಿನ ಶಿಷ್ಯರಿಗೆ ಅನೇಕ ಸಂಗತಿಗಳನ್ನು ತಿಳಿಸಿ ಬಲಪಡಿಸಿದನು. ಬಳಿಕ ಪೌಲನು ಗ್ರೀಸಿಗೆ (ಅಖಾಯ) ಹೋದನು. |
3
|
ಅಲ್ಲಿ ಅವನು ಮೂರು ತಿಂಗಳವರೆಗೆ ಇದ್ದನು. ಅವನು ಸಿರಿಯಕ್ಕೆ ನೌಕಾಯಾನ ಮಾಡಲು ಸಿದ್ಧನಾಗಿದ್ದನು. ಆದರೆ ಕೆಲವು ಯೆಹೂದ್ಯರು ಅವನಿಗೆ ವಿರೋಧವಾಗಿ ಯೋಜನೆ ಮಾಡಿದರು. ಆದ್ದರಿಂದ ಪೌಲನು ಸಿರಿಯಕ್ಕೆ ಮಕೆದೋನಿಯದ ಮೂಲಕ ಹಿಂತಿರುಗಿ ಹೋಗಲು ನಿರ್ಧರಿಸಿದನು. |
4
|
ಕೆಲವು ಜನರು ಅವನೊಂದಿಗಿದ್ದರು. ಅವರು ಯಾರೆಂದರೆ: ಬೆರೋಯ ಪಟ್ಟಣದ ಪುರ್ರನ ಮಗನಾದ ಸೋಪತ್ರನು, ಥೆಸಲೋನಿಕ ಪಟ್ಟಣದ ಆರಿಸ್ತಾರ್ಕ ಮತ್ತು ಸೆಕುಂದ, ದರ್ಬೆ ಪಟ್ಟಣದ ಗಾಯ ಮತ್ತು ತಿಮೊಥೆಯ, ಅಲ್ಲದೆ ಏಷ್ಯಾದ ತುಖಿಕ ಹಾಗು ತ್ರೊಫಿಮ. |
5
|
ಇವರು ಪೌಲನಿಗಿಂತ ಮುಂಚಿತವಾಗಿಯೇ ಹೋದರು. ಅವರು ನಮಗಾಗಿ ತ್ರೋವ ಪಟ್ಟಣದಲ್ಲಿ ಕಾಯುತ್ತಿದ್ದರು. |
6
|
ಯೆಹೂದ್ಯರ ಹುಳಿ ರಹಿತ ರೊಟ್ಟಿ ಹಬ್ಬದ ನಂತರ ನಾವು ಫಿಲಿಪ್ಪಿ ಪಟ್ಟಣದ ಹಡಗಿನಲ್ಲಿ ಹೋದೆವು. ಐದು ದಿನಗಳಾದ ನಂತರ ನಾವು ಇವರನ್ನು ತ್ರೋವದಲ್ಲಿ ಸಂಧಿಸಿದೆವು. ಅಲ್ಲಿ ನಾವು ಏಳು ದಿನ ತಂಗಿದೆವು. |
7
|
ಭಾನುವಾರದಂದು, ನಾವೆಲ್ಲರು ಪ್ರಭುವಿನ ರಾತ್ರಿ ಭೋಜನಕ್ಕೆ ಒಟ್ಟಾಗಿ ಸೇರಿದೆವು. ಸಭೆ ಸೇರಿಬಂದಿದ್ದ ಜನರೊಂದಿಗೆ ಪೌಲನು ಮಾತಾಡಿದನು. ಅವನು ಮರುದಿನ ಅಲ್ಲಿಂದ ಹೊರಡಬೇಕೆಂದು ಅಲೋಚಿಸಿಕೊಂಡಿದ್ದನು. ಪೌಲನು ಮಧ್ಯರಾತ್ರಿಯವರೆಗೂ ಮಾತಾಡುತ್ತಲೇ ಇದ್ದನು. |
8
|
ನಾವೆಲ್ಲರೂ ಮೇಲಂತಸ್ತಿನ ಕೊಠಡಿಯೊಂದರಲ್ಲಿ ಸೇರಿ ಬಂದಿದ್ದೆವು. ಆ ಕೊಠಡಿಯಲ್ಲಿ ಅನೇಕ ದೀಪಗಳಿದ್ದವು. |
9
|
ಯುತಿಕ ಎಂಬ ಯುವಕನು ಕಿಟಕಿಯಲ್ಲಿ ಕುಳಿತುಕೊಂಡಿದ್ದನು. ಪೌಲನು ಮಾತಾಡುತ್ತಲೇ ಇದ್ದನು. ಇತ್ತ ಯುವಕನು ಗಾಢವಾಗಿ ನಿದ್ರಿಸುತ್ತಾ ಮೂರನೆ ಅಂತಸ್ತಿನಿಂದ ಕೆಳಗಡೆ ಬಿದ್ದುಬಿಟ್ಟನು. ಜನರು ಕೆಳಗಿಳಿದು ಹೋಗಿ ಅವನನ್ನು ಎತ್ತಿ ನೋಡಿದಾಗ ಅವನು ಸತ್ತಿದ್ದನು. |
10
|
ಪೌಲನು ಕೆಳಗಿಳಿದು ಅವನ ಬಳಿಗೆ ಹೋಗಿ, ಮೊಣಕಾಲೂರಿ ಅವನನ್ನು ಅಪ್ಪಿಕೊಂಡು, ಅಲ್ಲಿದ್ದ ವಿಶ್ವಾಸಿಗಳಿಗೆ, “ಚಿಂತಿಸಬೇಡಿ. ಇವನು ಮತ್ತೆ ಜೀವಂತನಾದನು” ಎಂದು ಹೇಳಿದನು. |
11
|
ಪೌಲನು ಮತ್ತೆ ಮೇಲಂತಸ್ತಿಗೆ ಹೋಗಿ ರೊಟ್ಟಿಯನ್ನು ಮುರಿದು ಊಟಮಾಡಿದನು. ಪೌಲನು ಅವರೊಂದಿಗೆ ದೀರ್ಘಕಾಲ ಮಾತಾಡಿದನು. ಅಷ್ಟರಲ್ಲಿಯೇ ಮುಂಜಾನೆಯಾಗಿತ್ತು. ಬಳಿಕ ಪೌಲನು ಹೊರಟುಹೋದನು. |
12
|
ಜನರು ಜೀವಂತನಾಗಿದ್ದ ಆ ಯುವಕನನ್ನು ಮನೆಗೆ ಕರೆದುಕೊಂಡು ಹೋದರು. ಇದರಿಂದ ಜನರಿಗೆ ಬಹಳ ಆದರಣೆಯಾಯಿತು. |
13
|
ನಾವು ಪೌಲನಿಗಿಂತ ಮುಂಚಿತವಾಗಿಯೇ ಅಸ್ಸೊಸಿ ಎಂಬ ಪಟ್ಟಣಕ್ಕೆ ನೌಕಾಯಾನ ಮಾಡಿದೆವು. ತಾನು ಭೂಮಾರ್ಗವಾಗಿ ಬರುವುದಾಗಿಯೂ ಅಸ್ಸೊಸಿನಲ್ಲಿ ನಮ್ಮನ್ನು ಸಂಧಿಸಿ ಅಲ್ಲಿಂದ ನಮ್ಮೊಂದಿಗೆ ಹಡಗಿನಲ್ಲಿ ಪ್ರಯಾಣ ಮಾಡುವುದಾಗಿಯೂ ಪೌಲನು ನಮಗೆ ತಿಳಿಸಿದ್ದನು. |
14
|
ಅಂತೆಯೇ ನಾವು ಪೌಲನನ್ನು ಅಸ್ಸೊಸಿನಲ್ಲಿ ಸಂಧಿಸಿದೆವು. ಅಲ್ಲಿಂದ ಅವನು ನಮ್ಮೊಂದಿಗೆ ಹಡಗಿನಲ್ಲಿ ಪ್ರಯಾಣ ಮಾಡಿದನು. ನಾವೆಲ್ಲರೂ ಮಿತಿಲೇನಿ ಪಟ್ಟಣಕ್ಕೆ ಹೋದೆವು. |
15
|
ಮರುದಿನ ನಾವು ಅಲ್ಲಿಂದ ನೌಕಾಯಾನ ಮಾಡಿ ಖಿಯೋಸ್ ದ್ವೀಪದ ಸಮೀಪದಲ್ಲಿದ್ದ ಸ್ಥಳವೊಂದಕ್ಕೆ ಬಂದೆವು. ಮರುದಿನ ಸಾಮೋಸ್ ದ್ವೀಪಕ್ಕೆ ನೌಕಾಯಾನ ಮಾಡಿದೆವು. ಅದರ ಮೂರನೆಯ ದಿನ ನಾವು ಮಿಲೇತ ಪಟ್ಟಣಕ್ಕೆ ಬಂದೆವು. |
16
|
ಎಫೆಸದಲ್ಲಿ ತಂಗಬಾರದೆಂದು ಪೌಲನು ಆಗಲೇ ನಿರ್ಧಾರ ಮಾಡಿದ್ದನು. ಏಷ್ಯಾದಲ್ಲಿ ದೀರ್ಘಕಾಲ ತಂಗಲು ಅವನಿಗೆ ಇಷ್ಟವಿರಲಿಲ್ಲ. ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂದು ಅವನು ತನ್ನ ಪ್ರಯಾಣವನ್ನು ತ್ವರಿತಗೊಳಿಸಿದನು. |
17
|
ಪೌಲನು ಮಿಲೇತದಿಂದ ಒಂದು ಸಂದೇಶವನ್ನು ಎಫೆಸಕ್ಕೆ ಕಳುಹಿಸಿ ಅಲ್ಲಿನ ಸಭೆಯ ಹಿರಿಯರನ್ನು ತನ್ನ ಬಳಿಗೆ ಬರಮಾಡಿಕೊಂಡನು. |
18
|
ಆ ಹಿರಿಯರು ಬಂದಾಗ ಪೌಲನು ಅವರಿಗೆ, “ನಾನು ಏಷ್ಯಾ ಪ್ರಾಂತ್ಯಕ್ಕೆ ಬಂದ ಮೊದಲನೆಯ ದಿನದಿಂದಲೂ ನೀವು ನನ್ನ ಜೀವಿತದ ಬಗ್ಗೆ ತಿಳಿದಿದ್ದೀರಿ. ನಾನು ನಿಮ್ಮೊಂದಿಗೆ ಇದ್ದ ಕಾಲದಲ್ಲೆಲ್ಲಾ ನಾನು ಯಾವ ರೀತಿಯಲ್ಲಿ ಜೀವಿಸಿದೆನೆಂಬುದು ನಿಮಗೆ ಗೊತ್ತಿದೆ. |
19
|
ಯೆಹೂದ್ಯರು ನನಗೆ ವಿರೋಧವಾಗಿ ಮಾಡಿದ ಒಳಸಂಚುಗಳಿಂದ ನಾನು ಬಹಳ ಕಷ್ಟಪಡಬೇಕಾಯಿತು. ಅನೇಕ ಸಲ ಕಣ್ಣೀರಿಡಬೇಕಾಯಿತು. ಆದರೆ ನಾನು ಯಾವಾಗಲೂ ಪ್ರಭುವಿನ ಸೇವೆ ಮಾಡಿದೆನೆಂಬುದು ನಿಮಗೆ ಗೊತ್ತಿದೆ. ನಾನು ನನ್ನ ಬಗ್ಗೆ ಚಿಂತಿಸದೆ, |
20
|
ನಿಮಗೆ ಒಳ್ಳೆಯದನ್ನೇ ಯಾವಾಗಲೂ ಮಾಡಿದೆನು. ನಾನು ನಿಮಗೆ ಯೇಸುವಿನ ಕುರಿತಾದ ಸುವಾರ್ತೆಯನ್ನು ಬಹಿರಂಗವಾಗಿ ಜನರೆದುರಿನಲ್ಲಿ ತಿಳಿಸಿದೆನು ಮತ್ತು ನಿಮ್ಮ ಮನೆಗಳಲ್ಲಿಯೂ ಸಹ ಬೋಧಿಸಿದೆನು. |
21
|
ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು. |
22
|
”ಆದರೆ ಈಗ ನಾನು ಪವಿತ್ರಾತ್ಮನಿಗೆ ವಿಧೇಯನಾಗಿ ಜೆರುಸಲೇಮಿಗೆ ಹೋಗಬೇಕು. ಅಲ್ಲಿ ನನಗೆ ಏನು ಸಂಭವಿಸುವುದೋ ತಿಳಿಯದು. |
23
|
ಜೆರುಸಲೇಮಿನಲ್ಲಿ ತೊಂದರೆಗಳು ಮತ್ತು ಸೆರೆವಾಸವು ನನಗಾಗಿ ಕಾದಿವೆಯೆಂದು ಪವಿತ್ರಾತ್ಮನು ಪ್ರತಿಯೊಂದು ಪಟ್ಟಣದಲ್ಲಿಯೂ ನನಗೆ ಹೇಳುತ್ತಿರುವುದು ಮಾತ್ರ ಸ್ಪಷ್ಟವಾಗಿದೆ. |
24
|
ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ. |
25
|
”ಈಗ ನನಗೆ ಕಿವಿಗೊಡಿ. ನಿಮ್ಮಲ್ಲಿ ಒಬ್ಬರಾಗಲಿ ನನ್ನನ್ನು ಮತ್ತೆಂದಿಗೂ ನೋಡುವುದಿಲ್ಲವೆಂದು ನನಗೆ ಗೊತ್ತಿದೆ. ನಿಮ್ಮೊಂದಿಗೆ ಇದ್ದ ಸಮಯದಲ್ಲೆಲ್ಲಾ ದೇವರ ರಾಜ್ಯದ ವಿಷಯವಾದ ಸುವಾರ್ತೆಯನ್ನು ನಾನು ನಿಮಗೆ ತಿಳಿಸಿದೆನು. |
26
|
ಆದ್ದರಿಂದ ಇಂದು ನಾನು ನಿಮಗೆ ದೃಢವಾಗಿ ಹೇಳಬಹುದಾದ ಒಂದು ಸಂಗತಿಯೇನೆಂದರೆ, ನಿಮ್ಮಲ್ಲಿ ಯಾರಾದರೂ ರಕ್ಷಣೆ ಹೊಂದಿಲ್ಲದಿದ್ದರೆ ಅದಕ್ಕೆ ನಾನು ಹೊಣೆಯಲ್ಲ. |
27
|
ಯಾಕೆಂದರೆ ದೇವರ ಅಪೇಕ್ಷೆಗನುಸಾರವಾಗಿ ನೀವು ತಿಳಿದುಕೊಳ್ಳಬೇಕಾದ ಪ್ರತಿಯೊಂದನ್ನೂ ನಾನು ನಿಮಗೆ ನಿಶ್ಚಯವಾಗಿ ತಿಳಿಸಿದ್ದೇನೆ. |
28
|
ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ. |
29
|
ನಾನು ಹೊರಟುಹೋದ ಮೇಲೆ ಬೇರೆಯವರು ನಿಮ್ಮ ಸಭೆಗೆ ಬರುತ್ತಾರೆಂದು ನನಗೆ ಗೊತ್ತಿದೆ. ಕ್ರೂರವಾದ ತೋಳಗಳಂತಿರುವ ಅವರು ಮಂದೆಯನ್ನು ನಾಶಮಾಡಲು ಪ್ರಯತ್ನಿಸುವರು. |
30
|
ಅಲ್ಲದೆ, ನಿಮ್ಮ ಸಭೆಯ ಕೆಲವು ಜನರೇ ದುರ್ಬೋಧಕರಾಗಿ ಯೇಸುವಿನ ಶಿಷ್ಯರಲ್ಲಿ ಕೆಲವರನ್ನು ಸತ್ಯದಿಂದ ದೂರಕ್ಕೆ ನಡೆಸುವರು. |
31
|
ಆದ್ದರಿಂದ ಎಚ್ಚರಿಕೆಯಿಂದಿರಿ! ನಾನು ಮೂರು ವರ್ಷಗಳ ಕಾಲ ನಿಮ್ಮೊಂದಿಗೆ ಇದ್ದೆನು. ಈ ಕಾಲಾವಧಿಯಲ್ಲಿ ನಾನು ನಿಮಗೆ ಹಗಲಿರುಳು ಉಪದೇಶಿಸುತ್ತಾ ನಿಮಗಾಗಿ ಕಣ್ಣೀರಿಡುತ್ತಾ ನಿಮ್ಮನ್ನು ಎಚ್ಚರಿಸಿದ್ದನ್ನು ಮರೆಯದಿರಿ. |
32
|
”ಈಗ ನಾನು ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತಿದ್ದೇನೆ. ಆತನ ಕೃಪಾವಾಕ್ಯವು ನಿಮ್ಮ ಭಕ್ತಿಯನ್ನು ವೃದ್ಧಿಪಡಿಸಿ ಪರಿಶುದ್ಧರ ಬಾಧ್ಯತೆಯಲ್ಲಿ ಪಾಲುಗಾರರನ್ನಾಗಿ ಮಾಡುವುದು. |
33
|
ನಾನು ನಿಮ್ಮೊಂದಿಗೆ ಇದ್ದಾಗ, ಯಾರ ಹಣವನ್ನಾಗಲಿ ಒಳ್ಳೆಯ ಬಟ್ಟೆಗಳನ್ನಾಗಲಿ ಎಂದೂ ಬಯಸಲಿಲ್ಲ. |
34
|
ನಾನು ಯಾವಾಗಲೂ ನನ್ನ ಅಗತ್ಯತೆಗಳನ್ನು ಮತ್ತು ನನ್ನೊಂದಿಗಿರುವವರ ಅಗತ್ಯತೆಗಳನ್ನು ಪೂರೈಸುವುದಕ್ಕಾಗಿ ದುಡಿಯುತ್ತಿದ್ದೆನು ಎಂಬುದು ನಿಮಗೆ ಗೊತ್ತಿದೆ. |
35
|
ಕಷ್ಟಪಟ್ಟು ದುಡಿದು ದುರ್ಬಲರಿಗೆ ನೆರವಾಗಬೇಕೆಂದು ನಾನೇ ನಿಮಗೆ ಮಾದರಿಯಾಗಿ ತೋರಿಸಿಕೊಟ್ಟಿದ್ದೇನೆ. ತೆಗೆದುಕೊಳ್ಳುವುದಕ್ಕಿಂತ ಕೊಡುವುದರಲ್ಲೇ ಹೆಚ್ಚು ಸಂತೋಷ؆ ಎಂಬ ಯೇಸುವಿನ ಮಾತನ್ನು ನಾವು ಮರೆಯಕೂಡದೆಂದು ನಿಮಗೆ ಉಪದೇಶಿಸಿದೆನು” ಎಂದು ಹೇಳಿದನು. |
36
|
ಪೌಲನು ಈ ಸಂಗತಿಗಳನ್ನು ಹೇಳಿ ಮುಗಿಸಿದ ಮೇಲೆ ಮೊಣಕಾಲೂರಿ ಅವರೆಲ್ಲರೊಡನೆ ಪ್ರಾರ್ಥಿಸಿದನು. |
37
|
[This verse may not be a part of this translation] |
38
|
[This verse may not be a part of this translation] |
Acts 20:26 Kannada Language Bible Words basic statistical display
COMING SOON ...