ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾಯಿತು. ಪೌಲನಿಗೂ ಇತರ ಕೆಲವು ಕೈದಿಗಳಿಗೂ ಜೂಲಿಯಸ್ ಎಂಬ ಸೇನಾಧಿಕಾರಿಯು ಕಾವಲಾಗಿದ್ದನು. ಜೂಲಿಯಸನು ಚಕ್ರವರ್ತಿಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದನು.
ನಾವು ಹಡಗನ್ನು ಹತ್ತಿ ಅಲ್ಲಿಂದ ಹೊರಟೆವು. ಆ ಹಡಗು ಅದ್ರಮಿತ್ತಿ ಪಟ್ಟಣದಿಂದ ಬಂದಿತ್ತು ಮತ್ತು ಏಷ್ಯಾದ ಬೇರೆಬೇರೆ ಸ್ಥಳಗಳಿಗೆ ಹೋಗಲು ಸಿದ್ಧವಾಗಿತ್ತು. ಅರಿಸ್ತಾರ್ಕನು ನಮ್ಮೊಂದಿಗೆ ಬಂದನು. ಅವನು ಮಕೆದೋನಿಯಕ್ಕೆ ಸೇರಿದ ಥೆಸಲೋನಿಕ ಪಟ್ಟಣದವನು.
ಮರುದಿನ ನಾವು ಸಿದೋನ್ ಪಟ್ಟಣಕ್ಕೆ ಬಂದೆವು. ಜೂಲಿಯಸನು ಪೌಲನ ಬಗ್ಗೆ ಕನಿಕರವುಳ್ಳವನಾಗಿದ್ದನು. ಸ್ನೇಹಿತರ ಬಳಿಗೆ ಹೋಗಿ ಅವರನ್ನು ಭೇಟಿಯಾಗಲು ಅವನು ಪೌಲನಿಗೆ ಸ್ವತಂತ್ರವನ್ನು ಕೊಟ್ಟನು. ಸ್ನೇಹಿತರು ಪೌಲನ ಅಗತ್ಯತೆಗಳನ್ನು ಪೂರೈಸಿದನು.
ನಾವು ಅನೇಕ ದಿನಗಳವರೆಗೆ ನಿಧಾನವಾಗಿ ನೌಕಾಯಾನ ಮಾಡಿದೆವು. ಎದುರುಗಾಳಿ ಬೀಸುತ್ತಿದ್ದುದರಿಂದ ನಾವು ಸ್ನೀಡ ಪಟ್ಟಣವನ್ನು ತಲುಪುವುದೇ ಕಷ್ಟವಾಯಿತು. ಆ ಮಾರ್ಗದಲ್ಲಿ ಇನ್ನೂ ಮುಂದೆ ಪ್ರಯಾಣ ಮಾಡಲು ನಮಗೆ ಸಾಧ್ಯವಾಗಲಿಲ್ಲ. ಆದ್ದರಿಂದ ನಾವು ಸಾಲ್ಮೊನೆಯ ಸಮೀಪದಲ್ಲಿದ್ದ ಕ್ರೇಟ್ ದ್ವೀಪದ ದಕ್ಷಿಣದ ಭಾಗದಲ್ಲಿ ನೌಕಾಯಾನ ಮಾಡಿದೆವು.
ಆದ್ದರಿಂದ ಪೌಲನು ಅವರಿಗೆ, “ಜನರೇ, ಈ ಪ್ರಯಾಣದಲ್ಲಿ ನಮಗೆ ಬಹಳ ತೊಂದರೆಯಿದೆ ಎಂದು ನನಗೆ ತೋರುತ್ತದೆ. ಹಡಗು ಮತ್ತು ಹಡಗಿನಲ್ಲಿರುವ ವಸ್ತುಗಳು ನಾಶವಾಗುತ್ತವೆ. ನಮ್ಮ ಪ್ರಾಣಗಳು ಸಹ ನಷ್ಟವಾಗಬಹುದು!” ಎಂದು ಎಚ್ಚರಿಸಿದನು.
ಆದರೆ ನೌಕೆಯ ನಾಯಕನು ಮತ್ತು ನೌಕೆಯ ಯಜಮಾನನು ಪೌಲನ ಮಾತನ್ನು ಒಪ್ಪಿಕೊಳ್ಳಲಿಲ್ಲ. ಅದುದರಿಂದ ಸೇನಾಧಿಕಾರಿಯು ಪೌಲನ ಮಾತಿಗೆ ಗಮನ ಕೊಡದೆ, ನೌಕೆಯ ನಾಯಕನು ಮತ್ತು ಯಜಮಾನನು ಹೇಳಿದ ಮಾತುಗಳನ್ನು ನಂಬಿದನು.
ಆ ರೇವು (ಸುರಕ್ಷಿತ ರೇವು) ಚಳಿಗಾಲದಲ್ಲಿ ಹಡಗು ನಿಲ್ಲುವುದಕ್ಕೆ ಒಳ್ಳೆಯ ಸ್ಥಳವಾಗಿರಲಿಲ್ಲ. ಆದ್ದರಿಂದ ಹಡಗು ಅಲ್ಲಿಂದ ಹೊರಡಲೇಬೇಕೆಂದು ಹೆಚ್ಚುಮಂದಿ ನಿರ್ಧರಿಸಿದರು. ನಾವು ಫೆನಿಕ್ಸ್ಗೆ ತಲುಪಬಹುದೆಂದು ಅವರ ನಿರೀಕ್ಷೆಯಾಗಿತ್ತು. ಚಳಿಗಾಲದಲ್ಲಿ ಹಡಗು ಅಲ್ಲಿ ತಂಗಬಹುದಾಗಿತ್ತು. ಫೆನಿಕ್ಸ್ ಕ್ರೇಟ್ ದ್ವೀಪದ ಒಂದು ಪಟ್ಟಣ. ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದ್ದ ಬಂದರನ್ನು ಅದು ಹೊಂದಿತ್ತು.
ಬಳಿಕ ಒಳ್ಳೆಯ ಗಾಳಿಯು ದಕ್ಷಿಣದ ಕಡೆಯಿಂದ ಬೀಸತೊಡಗಿತು. ಹಡಗಿನಲ್ಲಿದ್ದ ಜನರು, “ನಮಗೆ ಬೇಕಾಗಿದ್ದು ಈ ಗಾಳಿಯೇ, ಈಗ ಅದು ನಮಗೆ ದೊರಕಿತು!” ಎಂದು ಭಾವಿಸಿಕೊಂಡರು. ಆದ್ದರಿಂದ ಅವರು ಹಡಗಿನ ಲಂಗರನ್ನು ಮೇಲಕ್ಕೆ ಎಳೆದರು. ನಾವು ಕ್ರೇಟ್ ದ್ವೀಪದ ಕರಾವಳಿಯಲ್ಲೇ ನೌಕಾಯಾನ ಮಾಡಿದೆವು.
ನಾವು ಕಾವ್ದ؆ ಎಂಬ ಚಿಕ್ಕ ದ್ವೀಪದ ಮರೆಯಲ್ಲಿ ಹಾದುಹೋದೆವು. ಆಗ ನಾವು ಹಡಗಿನಲ್ಲಿದ್ದ ಚಿಕ್ಕ ದೋಣಿಯನ್ನು ಒಳಗೆ ತೆಗೆದುಕೊಳ್ಳಲು ಸಾಧ್ಯವಾಯಿತು. ಆದರೂ ಆ ಕೆಲಸ ಬಹಳ ಪ್ರಯಾಸಕರವಾಗಿತ್ತು.
ಬಳಿಕ ಹಡಗು ಒಡೆದು ಹೋಗದಂತೆ ಹಡಗಿನ ಸುತ್ತಲೂ ಹಗ್ಗಗಳನ್ನು ಬಿಗಿದರು. ಅನಂತರ ಸರ್ತಿಸ್؆ ಎಂಬ ಕಳ್ಳುಸುಬಿನಲ್ಲಿ ಹಡಗು ಎಲ್ಲಿ ಸಿಕ್ಕಿಕೊಳ್ಳುವುದೊ ಎಂದು ಅವರಿಗೆ ಭಯವಾಯಿತು. ಆದುದರಿಂದ ಅವರು ಹಾಯಿಯನ್ನು ಇಳಿಸಿ ಹಡಗನ್ನು ಬಡಿದುಕೊಂಡು ಹೋಗಲು ಗಾಳಿಗೆ ಅವಕಾಶ ಮಾಡಿಕೊಟ್ಟರು.
ಅನೇಕ ದಿನಗಳವರೆಗೆ ನಾವು ಸೂರ್ಯನನ್ನಾಗಲಿ ನಕ್ಷತ್ರಗಳನ್ನಾಗಲಿ ನೋಡಲಾಗಲಿಲ್ಲ. ಬಿರುಗಾಳಿಯು ಭೀಕರವಾಗಿತ್ತು. ನಾವು ಜೀವಸಹಿತ ಉಳಿಯುತ್ತೇವೆ ಎಂಬ ನಿರೀಕ್ಷೆ ಕಳೆದುಹೋಯಿತು. ನಾವು ಸಾಯುತ್ತೇವೆ ಎಂದು ಭಾವಿಸಿಕೊಂಡೆವು.
ಆ ಜನರು ಬಹಳ ದಿನಗಳವರೆಗೆ ಊಟಮಾಡಲಿಲ್ಲ. ಆಗ ಒಂದು ದಿನ ಪೌಲನು ಎದ್ದು ನಿಂತುಕೊಂಡು ಅವರಿಗೆ, “ಜನರೇ, ಕ್ರೇಟ್ ದ್ವೀಪದಿಂದ ಹೊರಡಬೇಡಿರಿ ಎಂದು ನಾನು ನಿಮಗೆ ಹೇಳಿದೆ. ನೀವು ನನ್ನ ಮಾತನ್ನು ಕೇಳಬೇಕಿತ್ತು. ಆಗ ನಿಮಗೆ ಇಷ್ಟು ಕಷ್ಟವಾಗಲಿ ನಷ್ಟವಾಗಲಿ ಆಗುತ್ತಿರಲಿಲ್ಲ.
ದೇವರ ದೂತನು, ಪೌಲನೇ, ಭಯಪಡಬೇಡ! ನೀನು ಸೀಸರನ ಮುಂದೆ ನಿಂತುಕೊಳ್ಳಬೇಕು. ನಿನ್ನೊಂದಿಗೆ ನೌಕಾಯಾನ ಮಾಡತ್ತಿರುವ ಎಲ್ಲಾ ಜನರ ಪ್ರಾಣಗಳನ್ನು ಉಳಿಸುವುದಾಗಿ ದೇವರು ನಿನಗೆ ವಾಗ್ದಾನವನ್ನು ಮಾಡಿದ್ದಾನೆ؆ ಎಂದು ಹೇಳಿದನು.
ಅವರು ಅಳತೆ ಗುಂಡನ್ನು ಹಗ್ಗದ ತುದಿಗೆ ಕಟ್ಟಿ ಹಗ್ಗವನ್ನು ನೀರಿನಲ್ಲಿ ಇಳಿಯಬಿಟ್ಟರು. ನೀರು ನೂರಿಪ್ಪತ್ತು ಅಡಿ ಆಳವಾಗಿತ್ತು. ಅವರು ಇನ್ನೂ ಸ್ವಲ್ಪದೂರ ಹೋಗಿ ಹಗ್ಗವನ್ನು ನೀರಿನಲ್ಲಿ ಇಳಿಯಬಿಟ್ಟರು. ಅಲ್ಲಿ ನೀರಿನ ಆಳ ತೊಂಭತ್ತು ಅಡಿಯಿತ್ತು.
ಈಗ ನೀವು ಸ್ವಲ್ಪವಾದರೂ ತಿನ್ನುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಜೀವಂತವಾಗಿ ಉಳಿಯಬೇಕಾದರೆ ನಿಮಗೆ ಊಟ ಅವಶ್ಯಕವಾಗಿದೆ. ನಿಮ್ಮಲ್ಲಿರುವ ಯಾರೂ ನಿಮ್ಮ ತಲೆಕೂದಲುಗಳಲ್ಲಿ ಒಂದನ್ನಾದರೂ ಕಳೆದುಕೊಳ್ಳುವುದಿಲ್ಲ” ಎಂದು ಹೇಳಿದನು.
ಬೆಳಗಾದಾಗ ನಾವಿಕರು ಭೂಮಿಯನ್ನು ಕಂಡರು. ಆದರೆ ಅದು ಯಾವ ಭೂಮಿಯೆಂದು ಗೊತ್ತಿರಲಿಲ್ಲ. ಅವರು ಕಂಡದ್ದು ಉಸುಬಿನ ದಡವುಳ್ಳ ಒಂದು ಕೊಲ್ಲಿ. ಸಾಧ್ಯವಾದರೆ ಹಡಗನ್ನು ಆ ಕೊಲ್ಲಿಗೆ ನಡೆಸಬೇಕೆಂದು ನಾವಿಕರು ಬಯಸಿದರು.
ಆದರೆ ಹಡಗು ಉಸುಬಿನ ದಿಬ್ಬಕ್ಕೆ ಅಪ್ಪಳಿಸಿತು. ಹಡಗಿನ ಮುಂಭಾಗವು ಅದರಲ್ಲಿ ಸಿಕ್ಕಿಕೊಂಡಿತು. ಹಡಗು ಚಲಿಸಲಾಗಲಿಲ್ಲ. ಬಳಿಕ ದೊಡ್ಡ ಅಲೆಗಳು ಹಡಗಿನ ಹಿಂಭಾಗಕ್ಕೆ ಬಡಿದು ಚೂರುಚೂರು ಮಾಡಲಾರಂಭಿಸಿದವು.