1
|
ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ ಅದು ಮಾಲ್ಟ ದ್ವೀಪವೆಂದು ನಮಗೆ ತಿಳಿಯಿತು. |
2
|
ಆಗ ಮಳೆಯು ಸುರಿಯುತ್ತಿತ್ತು ಮತ್ತು ತುಂಬ ಚಳಿಯಿತ್ತು. ಆದರೆ ಅಲ್ಲಿನ ಜನರು ನಮಗೆ ವಿಶೇಷವಾದ ಕರುಣೆತೋರಿ ನಮಗಾಗಿ ಬೆಂಕಿಹೊತ್ತಿಸಿ ನಮ್ಮೆಲ್ಲರನ್ನು ಆಹ್ವಾನಿಸಿದರು. |
3
|
ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ ಅದನ್ನು ಬೆಂಕಿಯ ಮೇಲೆ ಹಾಕುತ್ತಿರಲು ಅದರ ಕಾವಿನ ದೆಸೆಯಿಂದ ವಿಷದ ಹಾವೊಂದು ಹೊರಗೆ ಬಂದು ಪೌಲನ ಕೈಗೆ ಸುತ್ತಿಕೊಂಡಿತು. |
4
|
ಪೌಲನ ಕೈಗೆ ಸುತ್ತಿಕೊಂಡಿದ್ದ ಆ ಹಾವನ್ನು ಅಲ್ಲಿನ ಜನರು ನೋಡಿ, “ಇವನು ಕೊಲೆಗಾರನೇ ಸರಿ! ಇವನು ಸಮುದ್ರದಲ್ಲಿ ಸಾಯದಿದ್ದರೂ ಇವನು ಬದುಕುವುದು ನ್ಯಾಯಕ್ಕೆ ಇಷ್ಟವಿಲ್ಲ” ಎಂದು ಹೇಳಿದರು. |
5
|
ಆದರೆ ಪೌಲನು ಆ ಹಾವನ್ನು ಬೆಂಕಿಯೊಳಕ್ಕೆ ಝಾಡಿಸಿ ಬಿಟ್ಟನು. ಪೌಲನಿಗೆ ಯಾವ ಹಾನಿಯೂ ಆಗಲಿಲ್ಲ. |
6
|
ಪೌಲನ ಮೈ ಊದಿಕೊಂಡು ಇದ್ದಕ್ಕಿದ್ದಂತೆ ಸತ್ತು ಬೀಳುತ್ತಾನೆ ಎಂದು ಅವರು ತಿಳಿದುಕೊಂಡಿದ್ದರು. ಅವರು ಪೌಲನನ್ನೇ ಬಹು ಹೊತ್ತಿನವರೆಗೆ ದಿಟ್ಟಿಸಿ ನೋಡುತ್ತಿದ್ದರೂ ಪೌಲನಿಗೆ ಯಾವ ಹಾನಿಯೂ ಆಗಲಿಲ್ಲ. ಆದ್ದರಿಂದ ಅವರು ತಮ್ಮ ಅಭಿಪ್ರಾಯವನ್ನು ಬದಲಿಸಿ, “ಇವನೊಬ್ಬ ದೇವರು!” ಎಂದು ಹೇಳಿದರು. |
7
|
ಆ ಸ್ಥಳದ ಸುತ್ತಮುತ್ತ ಕೆಲವು ಹೊಲಗಳು ಇದ್ದವು. ಆ ದ್ವೀಪದ ಪ್ರಮುಖ ವ್ಯಕ್ತಿಯೊಬ್ಬನಿಗೆ ಆ ಹೊಲಗಳು ಸೇರಿದ್ದವು. ಅವನ ಹೆಸರು ಪೊಪ್ಲಿಯ. ಅವನು ನಮ್ಮನ್ನು ತನ್ನ ಮನೆಗೆ ಸ್ವಾಗತಿಸಿದನು. ಪೊಪ್ಲಿಯನು ಕನಿಕರ ತೋರಿದನು. ನಾವು ಅವನ ಮನೆಯಲ್ಲಿ ಮೂರು ದಿನವಿದ್ದೆವು. |
8
|
ಪೊಪ್ಲಿಯನ ತಂದೆಯು ಬಹಳ ಅಸ್ವಸ್ಥನಾಗಿದ್ದನು. ಅವನಿಗೆ ಜ್ವರವಿತ್ತು ಮತ್ತು ರಕ್ತಭೇದಿಯಾಗುತ್ತಿತ್ತು. ಪೌಲನು ಅವನ ಬಳಿಗೆ ಹೋಗಿ ಅವನಿಗಾಗಿ ಪ್ರಾರ್ಥಿಸಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಗುಣಪಡಿಸಿದನು. |
9
|
ಇದಾದ ನಂತರ ದ್ವೀಪದಲ್ಲಿದ್ದ ಇತರ ರೋಗಿಗಳೆಲ್ಲ ಪೌಲನ ಬಳಿಗೆ ಬಂದರು. ಪೌಲನು ಅವರನ್ನು ಸಹ ಗುಣಪಡಿಸಿದನು. |
10
|
[This verse may not be a part of this translation] |
11
|
[This verse may not be a part of this translation] |
12
|
ನಾವು ಸಿರಾಕೊಸ್ ಪಟ್ಟಣಕ್ಕೆ ಬಂದು ಅಲ್ಲಿ ಮೂರು ದಿನವಿದ್ದೆವು. ಬಳಿಕ ಅಲ್ಲಿಂದ ಹೊರಟು |
13
|
ರೇಗಿಯ ಎಂಬ ಪಟ್ಟಣಕ್ಕೆ ಬಂದೆವು. ಮರುದಿನ ನೈರುತ್ಯ ಗಾಳಿಯು ಬೀಸತೊಡಗಿತು. ಆದ್ದರಿಂದ ಅಲ್ಲಿಂದ ಹೊರಡಲು ಸಾಧ್ಯವಾಯಿತು. ಒಂದು ದಿನವಾದ ಮೇಲೆ ಪುತೋಲಿ ಎಂಬ ಪಟ್ಟಣಕ್ಕೆ ಬಂದೆವು. |
14
|
ಅಲ್ಲಿ ಕೆಲವು ಮಂದಿ ವಿಶ್ವಾಸಿಗಳನ್ನು ಕಂಡೆವು. ತಮ್ಮೊಂದಿಗೆ ಒಂದು ವಾರವಾದರೂ ಇರಬೇಕೆಂದು ಅವರು ನಮ್ಮನ್ನು ಕೇಳಿಕೊಂಡರು. ಕೊನೆಗೆ ನಾವು ರೋಮಿಗೆ ಹೊರಟೆವು. |
15
|
ನಾವು ಇಲ್ಲಿರುವುದು ರೋಮಿನಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. ಅವರು ನಮ್ಮನ್ನು ಭೇಟಿಯಾಗುವುದಕ್ಕಾಗಿ ಅಪಿಯಾ؆ ಮಾರುಕಟ್ಟೆಗೂ ಮತ್ತು ತ್ರಿಛತ್ರ؆ ಎಂಬ ಸ್ಥಳಕ್ಕೂ ಬಂದರು. ಈ ವಿಶ್ವಾಸಿಗಳನ್ನು ಕಂಡಾಗ ಪೌಲನು ಧೈರ್ಯಗೊಂಡು ದೇವರಿಗೆ ಸ್ತೋತ್ರ ಸಲ್ಲಿಸಿದನು. |
16
|
ಬಳಿಕ ನಾವು ರೋಮಿಗೆ ಹೋದೆವು. ಅಲ್ಲಿ ಪ್ರತ್ಯೇಕವಾಗಿರಲು ಪೌಲನಿಗೆ ಅವಕಾಶವನ್ನು ಕೊಡಲಾಯಿತು. ಆದರೆ ಪೌಲನನ್ನು ಕಾಯುವುದಕ್ಕಾಗಿ ಸೈನಿಕನೊಬ್ಬನು ಅವನೊಂದಿಗಿದ್ದನು. |
17
|
ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಧಾನರಾಗಿದ್ದವರನ್ನು ಕರೆಯಿಸಿದನು. ಅವರು ಬಂದು ಒಟ್ಟಾಗಿ ಸೇರಿದಾಗ ಪೌಲನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ನಮ್ಮ ಜನರಿಗೂ ನಮ್ಮ ಪಿತೃಗಳ ಸಂಪ್ರದಾಯಗಳಿಗೂ ವಿರುದ್ಧವಾಗಿ ನಾನೇನೂ ಮಾಡಿಲ್ಲ. ಆದರೆ ನನ್ನನ್ನು ಜೆರುಸಲೇಮಿನಲ್ಲಿ ಬಂಧಿಸಿ ರೋಮಿನವರಿಗೆ ಒಪ್ಪಿಸಲಾಗಿದೆ. |
18
|
ರೋಮಿನವರು ನನಗೆ ಅನೇಕ ಪ್ರಶ್ನೆಗಳನ್ನು ಕೇಳಿದರು. ಆದರೆ ನನ್ನನ್ನು ಮರಣದಂಡನೆಗೆ ಗುರಿಮಾಡುವಂಥ ಯಾವ ಅಪರಾಧವನ್ನೂ ಅವರು ನನ್ನಲ್ಲಿ ಕಾಣಲಿಲ್ಲ. ಆದ್ದರಿಂದ ಅವರು ನನ್ನನ್ನು ಬಿಡುಗಡೆ ಮಾಡಬೇಕೆಂದಿದ್ದರು. |
19
|
ಆದರೆ ಅಲ್ಲಿದ್ದ ಯೆಹೂದ್ಯರು ಅದಕ್ಕೆ ಆಕ್ಷೇಪಿಸಿದರು. ಆದ್ದರಿಂದ ನನಗೆ ರೋಮಿನಲ್ಲಿ ಸೀಸರನ ಮುಂದೆ ವಿಚಾರಣೆಯಾಗಲಿ ಎಂದು ಕೇಳಿಕೊಳ್ಳಬೇಕಾಯಿತು. ಆದರೆ ನನ್ನ ಜನರು ಮಾಡಿದ್ದು ತಪ್ಪೆಂದು ನಾನು ನಿಮಗೆ ಹೇಳುತ್ತಿಲ್ಲ. |
20
|
ಆದಕಾರಣವೇ ನಾನು ನಿಮ್ಮನ್ನು ನೋಡಲು ಮತ್ತು ನಿಮ್ಮ ಸಂಗಡ ಮಾತಾಡಲು ಬಯಸಿದೆ. ಇಸ್ರೇಲಿನ ನಿರೀಕ್ಷೆಯಲ್ಲಿ ನಾನು ನಂಬಿಕೆ ಇಟ್ಟಿರುವುದರಿಂದಲೇ ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು. |
21
|
[This verse may not be a part of this translation] |
22
|
[This verse may not be a part of this translation] |
23
|
ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು. |
24
|
ಪೌಲನು ಹೇಳಿದ ಕೆಲವು ಸಂಗತಿಗಳನ್ನು ಕೆಲವು ಮಂದಿ ಯೆಹೂದ್ಯರು ನಂಬಿದರು. ಆದರೆ ಉಳಿದವರು ನಂಬಲಿಲ್ಲ. |
25
|
ಅವರು ವಾದಮಾಡಿ ಅಲ್ಲಿಂದ ಹೊರಡಲು ಸಿದ್ಧರಾದಾಗ ಪೌಲನು ಅವರಿಗೆ ಇಂತೆಂದನು: “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಮೂಲಕ ಪಿತೃಗಳಿಗೆ ಸತ್ಯವನ್ನು ತಿಳಿಸಿದನು. ಆತನು ಹೀಗೆ ಹೇಳಿದ್ದಾನೆ: |
26
|
”ಈ ಜನರ ಬಳಿಗೆ ಹೋಗಿ ಇಂತೆನ್ನಿರಿ: ನೀನು ಕಿವಿಗೊಟ್ಟು ಕೇಳಿದರೂ ಅರ್ಥಮಾಡಿಕೊಳ್ಳವುದಿಲ್ಲ; ಕಣ್ಣಾರೆ ಕಂಡರೂ ಗ್ರಹಿಸಿಕೊಳ್ಳುವುದಿಲ್ಲ. |
27
|
ಹೌದು, ಈ ಜನರ ಹೃದಯಗಳು ಕಠಿಣವಾಗಿವೆ. ಈ ಜನರಿಗೆ ಕಿವಿಗಳಿದ್ದರೂ ಕೇಳುವುದಿಲ್ಲ. ಸತ್ಯವಿದ್ದರೂ ನೋಡಬಯಸರು. ಅಲ್ಲದಿದ್ದರೆ ಇವರು ಕಣ್ಣಾರೆ ಕಂಡು, ಕಿವಿಯಾರೆ ಕೇಳಿ, ಮನಸಾರೆ ಗ್ರಹಿಸಿಕೊಂಡು ನನ್ನತ್ತ ತಿರುಗಿಕೊಳ್ಳುತ್ತಿದ್ದರು; ನನ್ನಿಂದ ಗುಣಹೊಂದುತ್ತಿದ್ದರು.؆ ಯೆಶಾಯ 6:9-10 |
28
|
”ದೇವರು ತನ್ನ ರಕ್ಷಣೆಯನ್ನು ಯೆಹೂದ್ಯರಲ್ಲದವರಿಗೆ ಕಳುಹಿಸಿದ್ದಾನೆ. ಅವರು ಅದಕ್ಕೆ ಕಿವಿಗೊಡುವರು. ಯೆಹೂದ್ಯರಾದ ನಿಮಗೆ ಇದು ತಿಳಿದಿರಲಿ!” |
29
|
[This verse may not be a part of this translation] |
30
|
ಪೌಲನು ತನ್ನ ಬಾಡಿಗೆ ಮನೆಯಲ್ಲಿ ಎರಡು ವರ್ಷಗಳವರೆಗೆ ವಾಸವಾಗಿದ್ದನು. ತನ್ನನ್ನು ಸಂದರ್ಶಿಸಲು ಬಂದ ಜನರೆಲ್ಲರನ್ನು ಆದರದಿಂದ ಬರಮಾಡಿಕೊಂಡು, |
31
|
ದೇವರ ರಾಜ್ಯದ ಬಗ್ಗೆ ಬೋಧಿಸುತ್ತಿದ್ದನು; ಪ್ರಭು ಯೇಸುಕ್ರಿಸ್ತನ ಬಗ್ಗೆ ಉಪದೇಶಿಸುತ್ತಿದ್ದನು; ಬಹು ಧೈರ್ಯದಿಂದ ಮಾತಾಡುತ್ತಿದ್ದನು. ಅವನಿಗೆ ಅಡ್ಡಿಮಾಡಲು ಯಾರೂ ಪ್ರಯತ್ನಿಸಲಿಲ್ಲ. |
Acts 28:19 Kannada Language Bible Words basic statistical display
COMING SOON ...