ತನ್ನ ಆಳ್ವಿಕೆಯ ಮೂರನೆ ವರುಷದಲ್ಲಿ ರಾಜ್ಯದ ಅಧಿಕಾರಿಗಳಿಗೂ ನಾಯಕರುಗಳಿಗೂ ಒಂದು ಔತಣವನ್ನು ಏರ್ಪಡಿಸಿದನು. ಮೇದ್ಯ. ಪರ್ಶಿಯದ ಎಲ್ಲಾ ಸೈನ್ಯಾಧಿಕಾರಿಗಳೂ ಪ್ರಧಾನರೂ ಔತಣದಲ್ಲಿ ಭಾಗವಹಿಸಿದ್ದರು.
ಆ ನೂರೆಂಭತ್ತು ದಿವಸಗಳು ಕಳೆದ ಬಳಿಕ ಅಹಷ್ವೇರೋಷನು ಮತ್ತೆ ಇನ್ನೊಂದು ಔತಣವನ್ನು ಒಂದು ವಾರದ ತನಕ ಮುಂದುವರಿಸಿದನು. ಇದು ಅರಮನೆಯ ಒಳ ಉದ್ಯಾನವನದಲ್ಲಿ ನಡೆಯಿತು. ಇದಕ್ಕೆ ಶೂಷನ್ ನಗರದಿಂದ ಗಣ್ಯರು, ಸಾಮಾನ್ಯರು ಎಂಬ ಭೇದಭಾವವಿಲ್ಲದೆ ಎಲ್ಲರೂ ಆಮಂತ್ರಿಸಲ್ಪಟ್ಟಿದ್ದರು.
ಆ ಒಳ ಉದ್ಯಾನವನವು ಬಿಳಿ ಮತು ನೀಲಿಬಣ್ಣಗಳ ಬಟ್ಟೆಗಳಿಂದ ಶೃಂಗರಿಸಲ್ಪಟ್ಟಿತ್ತು. ಅವುಗಳನ್ನು ಬಿಳಿ ಮತ್ತು ನೇರಳೆ ಬಣ್ಣದ ದಾರಗಳಿಂದ ಬೆಳ್ಳಿಯ ಉಂಗುರಗಳಲ್ಲಿ ಕಟ್ಟಲ್ಪಟ್ಟ ಅಮೃತಶಿಲೆಯ ಕಂಬಗಳಿಗೆ ತೂಗು ಹಾಕಿದ್ದರು. ಬೆಲೆಬಾಳುವ ಕಲ್ಲುಗಳಿಂದಲೂ ಮುತ್ತು ಚಿಪ್ಪು, ರತ್ನಶಿಲೆಗಳಿಂದಲೂ ಅಲಂಕೃತವಾದ ನೆಲದ ಮೇಲೆ ಬೆಳ್ಳಿಬಂಗಾರಗಳಿಂದ ಮಾಡಿದ್ದ ಆಸನಗಳನ್ನಿಟ್ಟರು.
ಅತಿಥಿಗಳಿಗೆ ಬಂಗಾರದ ಪಾನಪಾತ್ರೆಯಲ್ಲಿ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಬೇರೆಬೇರೆ ವಿಧದ ಪಾತ್ರೆಗಳನ್ನು ಉಪಯೋಗಿಸಲಾಗಿತ್ತು. ರಾಜನ ಔದಾರ್ಯಕ್ಕೆ ತಕ್ಕಂತೆ ದ್ರಾಕ್ಷಾರಸವು ಧಾರಾಳವಾಗಿ ಹಂಚಲ್ಪಡುತ್ತಿತ್ತು.
ಇತರ ಅಧಿಕಾರಿಗಳು ಆಲಿಸುತ್ತಿದ್ದಾಗ ಮೆಮೂಕಾನ್ ಎದ್ದುನಿಂತು, “ರಾಣಿ ವಷ್ಟಿಯು ತಪ್ಪು ಮಾಡಿದಳು. ಇದು ರಾಜನಿಗೆ ವಿರುದ್ಧವಾಗಿ ಮಾತ್ರವೇ ಅಲ್ಲ, ರಾಜ್ಯದ ಸಕಲ ನಾಯಕರಿಗೂ ಸಂಸ್ಥಾನಗಳ ಎಲ್ಲಾ ಜನರಿಗೂ ವಿರುದ್ಧವಾದದ್ದು.
ಹೇಗೆಂದರೆ: ರಾಣಿಯು ಮಾಡಿದ್ದನ್ನು ರಾಜ್ಯದ ಇತರ ಸ್ತ್ರೀಯರು ಕೇಳಿ ತಾವೂ ತಮ್ಮ ಗಂಡಂದಿರಿಗೆ ಅವಿಧೇಯರಾಗುವರು. ಅವರು ತಮ್ಮ ಗಂಡಂದಿರಿಗೆ, ‘ರಾಜ ಅಹಷ್ವೇರೋಷನು ವಷ್ಟಿರಾಣಿಯನ್ನು ಕರೆದುಕೊಂಡು ಬರಬೇಕೆಂದು ಆಜ್ಞಾಪಿಸಿದನು, ಆದರೆ ಆಕೆ ಬರಲಿಲ್ಲ’ ಎಂದು ಹೇಳುವರು.
“ಪರ್ಶಿಯ ಮತ್ತು ಮೇದ್ಯ ನಾಯಕರುಗಳ ಹೆಂಡತಿಯರು ಸಹ ವಷ್ಟಿರಾಣಿ ಈ ಹೊತ್ತು ಮಾಡಿದ್ದನ್ನು ಕೇಳಿದ್ದಾರೆ. ಅವರು ಸಹ ವಷ್ಟಿರಾಣಿಯ ನಡತೆಯಿಂದ ಪ್ರೋತ್ಸಾಹಿತರಾಗಿ ರಾಜನ ಮುಖ್ಯ ನಾಯಕರುಗಳೊಡನೆ ಅದೇರೀತಿ ವರ್ತಿಸುವರು. ಇದರಿಂದಾಗಿ ಅಗೌರವವೂ ಕೋಪವೂ ತುಂಬಿಕೊಳ್ಳುತ್ತವೆ.
“ಆದುದರಿಂದ ರಾಜನು ಒಪ್ಪುವುದಾದರೆ ನನ್ನ ಸಲಹೆ ಏನಂದರೆ, ಅರಸನು ಒಂದು ರಾಜಾಜ್ಞೆಯನ್ನು ಹೊರಡಿಸಬೇಕು. ಆ ಆಜ್ಞೆಯು ಪರ್ಶಿಯ ಮತ್ತು ಮೇದ್ಯ ರಾಜಶಾಸನಗಳಲ್ಲಿ ಬರೆಯಲ್ಪಡಬೇಕು. ಪರ್ಶಿಯ ಮತ್ತು ಮೇದ್ಯ ರಾಜಶಾಸನಗಳು ಎಂದಿಗೂ ಬದಲಾಗುವದಿಲ್ಲ. ರಾಜಾಜ್ಞೆಯು ಏನೆಂದರೆ, ಅರಸನಾದ ಅಹಷ್ವೇರೋಷನ ಸನ್ನಿಧಿಗೆ ರಾಣಿಯು ಪ್ರವೇಶಿಸಲೇ ಕೂಡದು. ಮಾತ್ರವಲ್ಲ ರಾಜನು ವಷ್ಟಿ ರಾಣಿಯ ಸ್ಥಾನವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಾಕೆಗೆ ಕೊಡಲಿ.
ಈ ರಾಜಶಾಸನವು ವಿಶಾಲ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಪ್ರಕಟಿಸಲ್ಪಟ್ಟಾಗ ಎಲ್ಲಾ ಹೆಂಡತಿಯರು ತಮ್ಮ ಗಂಡಂದಿರಿಗೆ ಗೌರವವನ್ನು ಸಲ್ಲಿಸುವರು. ಶ್ರೇಷ್ಠರೂ ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಗೌರವವನ್ನು ಸಲ್ಲಿಸುವರು.”
ಅಹಷ್ವೇರೋಷನು ತನ್ನ ರಾಜ್ಯದ ಎಲ್ಲಾ ಕಡೆಗಳಿಗೆ, ಎಲ್ಲಾ ಸಂಸ್ಥಾನಗಳಿಗೆ ಅವರವರ ಭಾಷೆಯಲ್ಲಿ ಪತ್ರಗಳನ್ನು ಬರೆಯಿಸಿ ರವಾನಿಸಿದನು. ಅವರವರ ಭಾಷೆಯಲ್ಲಿ ಬರೆದ ಪತ್ರದಲ್ಲಿ ಪ್ರತಿಯೊಬ್ಬ ಗಂಡಸು ತನ್ನ ಸಂಸಾರವನ್ನು ಆಳಬೇಕು ಎಂಬುದಾಗಿ ಬರೆಯಲ್ಪಟ್ಟಿತ್ತು.