1
|
ತರುವಾಯ ಯೆಹೋವನು ಮೋಶೆಗೆ ಇಂತೆಂದನು: |
2
|
“ನಾನು ಯೆಹೂದ ಕುಲದಿಂದ ಊರಿಯ ಮಗನಾದ ಬೆಚಲೇಲನನ್ನು ಆರಿಸಿಕೊಂಡಿದ್ದೇನೆ. ಊರಿಯು ಹೂರನ ಮಗನು. |
3
|
ನಾನು ಬೆಚಲೇಲನನ್ನು ದೇವರಾತ್ಮಭರಿತನನ್ನಾಗಿ ಮಾಡಿದ್ದೇನೆ. ನಾನು ಅವನಿಗೆ ಎಲ್ಲಾ ಬಗೆಯ ಕೆಲಸಗಳನ್ನು ಮಾಡಲು ನಿಪುಣತೆಯನ್ನೂ ಜ್ಞಾನವನ್ನೂ ಅನುಗ್ರಹಿಸಿದ್ದೇನೆ. |
4
|
ಬೆಚಲೇಲನು ಬಹಳ ಉತ್ತಮ ಚಿತ್ರಕಾರನಾಗಿದ್ದಾನೆ. ಬೆಳ್ಳಿಬಂಗಾರಗಳ ಮತ್ತು ತಾಮ್ರದ ವಸ್ತುಗಳನ್ನು ಅವನು ಮಾಡಬಲ್ಲನು. |
5
|
ಅವನು ರತ್ನಗಳನ್ನು ಕೆತ್ತಿ ಅಂದವಾದ ಆಭರಣಗಳನ್ನು ಮಾಡಬಲ್ಲನು ಮತ್ತು ಮರಗೆಲಸವನ್ನು ಮಾಡಬಲ್ಲನು. ಅವನು ಎಲ್ಲಾ ತರದ ಕೆಲಸಗಳನ್ನು ಮಾಡಬಲ್ಲನು. |
6
|
ಅವನೊಂದಿಗೆ ಕೆಲಸ ಮಾಡಲು ನಾನು ಒಹೊಲೀಯಾಬನನ್ನು ಆರಿಸಿಕೊಂಡಿದ್ದೇನೆ. ಒಹೊಲೀಯಾಬನು ದಾನ್ ಕುಲದ ಅಹೀಸಾಮಾಕನ ಮಗನು. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಬೇರೆ ಕೆಲಸಗಾರರಿಗೆಲ್ಲಾ ನಿಪುಣತೆಯನ್ನು ಅನುಗ್ರಹಿಸಿದ್ದೇನೆ: |
7
|
ದೇವದರ್ಶನಗುಡಾರ, ಒಡಂಬಡಿಕೆ ಪೆಟ್ಟಿಗೆ, ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು, |
8
|
ಮೇಜು ಮತ್ತು ಅದರ ಮೇಲಿನ ವಸ್ತುಗಳು, ಬಂಗಾರದ ದೀಪಸ್ತಂಭ ಮತ್ತು ಅದರ ಉಪಕರಣಗಳು, |
9
|
ಧೂಪವೇದಿಕೆ, ಯಜ್ಞವೇದಿಕೆ ಮತ್ತು ಅವುಗಳ ಉಪಕರಣಗಳು, ಗಂಗಾಳ ಮತ್ತು ಅದರ ಪೀಠ. |
10
|
ಯಾಜಕನಾದ ಆರೋನನ ಎಲ್ಲಾ ವಿಶೇಷ ಬಟ್ಟೆಗಳು, ಆರೋನನ ಪುತ್ರರು ಯಾಜಕರಾಗಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ಎಲ್ಲಾ ಬಟ್ಟೆಗಳು. |
11
|
ಸುವಾಸನೆಯುಳ್ಳ ಅಭಿಷೇಕತೈಲ, ಪವಿತ್ರ ಸ್ಥಳದಲ್ಲಿ ಉಪಯೋಗಿಸುವ ಸುವಾಸನೆಯುಳ್ಳ ಧೂಪ. ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲೇ ಈ ಕೆಲಸಗಾರರು ಈ ವಸ್ತುಗಳನ್ನೆಲ್ಲಾ ಮಾಡತಕ್ಕದ್ದು.” |
12
|
ತರುವಾಯ ಯೆಹೋವನು ಮೋಶೆಗೆ ಇಂತೆಂದನು: |
13
|
“ಇದನ್ನು ಇಸ್ರೇಲರಿಗೆ ಹೇಳು: ‘ನೀವು ನನ್ನ ವಿಶೇಷವಾದ ಸಬ್ಬತ್ ದಿನವನ್ನು ಖಂಡಿತವಾಗಿ ಆಚರಿಸಬೇಕು. ಯೆಹೋವನಾದ ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿರುವುದಕ್ಕೆ ಇದು ಗುರುತಾಗಿದೆ. |
14
|
“ಸಬ್ಬತ್ ದಿನವನ್ನು ವಿಶೇಷ ದಿನವೆಂದು ಪರಿಗಣಿಸಿ ಆಚರಿಸಿರಿ. ಆ ದಿನವನ್ನು ಬೇರೆ ದಿನದಂತೆ ಪರಿಗಣಿಸಿ ನಡೆಯುವವನಿಗೆ ಮರಣದಂಡನೆಯಾಗಬೇಕು. ಸಬ್ಬತ್ ದಿನದಲ್ಲಿ ಯಾವನಾದರೂ ಕೆಲಸಮಾಡಿದರೆ ಅವನನ್ನು ಬಹಿಷ್ಕರಿಸಬೇಕು. |
15
|
ಕೆಲಸ ಮಾಡುವುದಕ್ಕೆ ವಾರದಲ್ಲಿ ಬೇರೆ ಆರು ದಿನಗಳಿವೆ. ಆದರೆ ಏಳನೆಯ ದಿನವು ವಿಶ್ರಾಂತಿಯ ಬಹು ವಿಶೇಷವಾದ ದಿನವಾಗಿದೆ. ಯೆಹೋವನನ್ನು ಸನ್ಮಾನಿಸಲು ಅದೊಂದು ವಿಶೇಷ ದಿನವಾಗಿದೆ. ಸಬ್ಬತ್ತಿನ ಸಮಯದಲ್ಲಿ ಕೆಲಸಮಾಡುವವನು ಕೊಲ್ಲಲ್ಪಡಬೇಕು. |
16
|
ಇಸ್ರೇಲರು ಸಬ್ಬತ್ ದಿನವನ್ನು ಜ್ಞಾಪಿಸಿಕೊಂಡು ಅದನ್ನು ವಿಶೇಷ ದಿನವನ್ನಾಗಿ ಮಾಡಿಕೊಳ್ಳತಕ್ಕದ್ದು. ಅವರು ಇದನ್ನು ಎಂದೆಂದೂ ಮಾಡತಕ್ಕದ್ದು. ಇದು ಎಂದೆಂದಿಗೂ ಮುಂದುವರಿಯುವ ಒಡಂಬಡಿಕೆ. |
17
|
ಸಬ್ಬತ್ ನನಗೂ ಮತ್ತು ಇಸ್ರೇಲರಿಗೂ ನಡುವೆ ಎಂದೆಂದೂ ಇರುವ ಸೂಚನೆಯಾಗಿರುವುದು. ಯೆಹೋವನು ಆರು ದಿನಗಳಲ್ಲಿ ಕೆಲಸಮಾಡಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದನು. ಏಳನೆಯ ದಿನದಲ್ಲಿ ಕೆಲಸ ಮಾಡದೆ ವಿಶ್ರಮಿಸಿಕೊಂಡನು.’“ |
18
|
ಹೀಗೆ, ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡುವುದನ್ನು ಮುಗಿಸಿದನು. ಬಳಿಕ ಯೆಹೋವನು ಒಡಂಬಡಿಕೆ ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಗೆ ಕೊಟ್ಟನು. ಅವು ದೇವರ ಬೆರಳಿನಿಂದ ಲಿಖಿತವಾಗಿತ್ತು. |
Exodus 31:1 Kannada Language Bible Words basic statistical display
COMING SOON ...