ಯೆಹೋವನೇ, ನಾನು ನಿನ್ನ ವಿಚಾರ ಕೇಳಿದೆನು. ಯೆಹೋವನೇ, ನೀನು ಹಿಂದಿನ ಕಾಲದಲ್ಲಿ ಮಾಡಿದ ಮಹತ್ಕಾರ್ಯಗಳು ನನ್ನನ್ನು ಚಕಿತಗೊಳಿಸಿದೆ. ನಮ್ಮ ಕಾಲದಲ್ಲಿಯೂ ಮಹಾಕಾರ್ಯಗಳನ್ನು ಮಾಡಬೇಕೆಂದು ಪ್ರಾರ್ಥಿಸುತ್ತೇನೆ. ದಯಮಾಡಿ, ಆ ಘಟನೆಗಳು ನಮ್ಮ ದಿವಸಗಳಲ್ಲೂ ನೆರವೇರುವಂತೆ ಮಾಡು. ಅದರ ಜೊತೆಯಲ್ಲಿ ನಮ್ಮ ಮೇಲೆ ಕರುಣೆ ತೋರಿಸಲು ಮರೆಯಬೇಡ.
ಯೆಹೋವನು ನಿಂತು ಪ್ರಪಂಚದ ನ್ಯಾಯ ತೀರಿಸಿದನು. ಎಲ್ಲಾ ಜನಾಂಗಗಳ ಜನರ ಕಡೆಗೆ ನೋಡಿದನು. ಅವರು ಭಯದಿಂದ ನಡುಗಿದರು. ತಲಾಂತರಗಳಿಂದ ಪರ್ವತಗಳು ಸ್ಥಿರವಾಗಿ ನಿಂತಿದ್ದವು. ಆದರೆ ಅದೇ ಪರ್ವತಗಳು ತುಂಡುತುಂಡಾಗಿ ಬಿದ್ದವು. ಪುರಾತನ ಕಾಲದ ಬೆಟ್ಟಗಳು ಬಿದ್ದುಹೋದವು. ದೇವರು ಅದೇ ರೀತಿಯಾಗಿ ಯಾವಾಗಲೂ ಇದ್ದನು.
ಯೆಹೋವನೇ, ನೀನು ನದಿಗಳ ಮೇಲೆ ಕೋಪಗೊಂಡಿದ್ದೀಯೋ? ತೊರೆಗಳ ಮೇಲೆ ನೀನು ಕೋಪಗೊಂಡಿದ್ದೀಯೋ? ಸಮುದ್ರದ ಮೇಲೆ ನೀನು ಕೋಪಗೊಂಡಿದ್ದೀಯೋ? ನೀನು ನಿನ್ನ ಕುದುರೆಗಳ ಮೇಲೆ ಮತ್ತು ರಥಗಳ ಮೇಲೆ ಸವಾರಿ ಮಾಡಿದಾಗ ಕೋಪಗೊಂಡಿದ್ದೀಯೋ?
ಸೂರ್ಯಚಂದ್ರರು ತಮ್ಮ ಪ್ರಕಾಶವನ್ನು ಕಳಕೊಂಡವು. ನಿನ್ನ ಹೊಳೆಯುವ ಮಿಂಚುಗಳನ್ನು ನೋಡಿ ಅವು ಪ್ರಕಾಶಿಸುವದನ್ನು ನಿಲ್ಲಿಸಿದವು. ಆ ಮಿಂಚುಗಳು ಗಾಳಿಯಲ್ಲಿ ತೂರಿಬರುವ ಭರ್ಜಿ, ಬಾಣಗಳಂತಿದ್ದವು.
ನಿನ್ನ ಜನರನ್ನು ರಕ್ಷಿಸಲು ನೀನು ಬಂದೆ. ನೀನು ಆರಿಸಿದ್ದ ರಾಜನನ್ನು ಜಯದ ಕಡೆಗೆ ನಡಿಸುವುದಕ್ಕಾಗಿ ಬಂದೆ. ಪ್ರತೀ ದುಷ್ಟ ಕುಟುಂಬದ ನಾಯಕನನ್ನು ನೀನು ಸಂಹರಿಸಿದೆ. ಭೂಲೋಕದಲ್ಲಿದ್ದ ಪ್ರಮುಖನಿಂದಿಡಿದು ಪ್ರಮುಖನಲ್ಲದವನವರೆಗೂ ನೀನು ಹತಿಸಿದೆ.
ವೈರಿಗಳ ಸೈನ್ಯವನ್ನು ಮೋಶೆಯ ಕೋಲಿನಿಂದ ನಿಲ್ಲಿಸಿದೆ. ಆ ಸೈನಿಕರು ಬಿರುಗಾಳಿಯಂತೆ ನಮ್ಮೊಂದಿಗೆ ಯುದ್ಧ ಮಾಡಲು ಬಂದರು. ರಸ್ತೆಯ ಮೇಲೆ ಇದ್ದ ಒಬ್ಬ ಬಡ ಮನುಷ್ಯನನ್ನು ದೋಚಿದ ಪ್ರಕಾರ ನಮ್ಮನ್ನು ಸುಲಭದಲ್ಲಿ ಗೆಲ್ಲುವೆವೆಂದು ಅವರು ನೆನೆಸಿದ್ದರು.
ಆ ವಿಷಯವನ್ನು ಕೇಳಿದಾಗ ನನ್ನ ಶರೀರವೆಲ್ಲಾ ನಡುಗಿತು. ಆಶ್ಟರ್ಯದಿಂದ ನಾನು ಸಿಳ್ಳುಹಾಕಿದೆ. ನನ್ನ ಎಲುಬುಗಳ ಬಲಹೀನತೆಯಿಂದ ನಾನು ನಡುಗುವವನಾಗಿ ನಿಂತೆನು. ಅವರು ಜನರ ಮೇಲೆ ಬೀಳಲು ಬರುವಾಗ ನಾನು ಅವರು ನಾಶನದ ದಿವಸವನ್ನು ಎದುರು ನೋಡುತ್ತಿದ್ದೇನೆ.
ನನ್ನ ಒಡೆಯನಾದ ಯೆಹೋವನು ನನಗೆ ಬಲವನ್ನು ಕೊಡುವನು. ಜಿಂಕೆಯಂತೆ ವೇಗವಾಗಿ ಓಡಲು ನನಗೆ ಸಹಾಯ ಮಾಡುವನು. ಪರ್ವತಗಳಲ್ಲಿ ನನ್ನನ್ನು ಸುರಕ್ಷಿತವಾಗಿ ನಡಿಸುವನು. ಸಂಗೀತ ನಿರ್ದೇಶಕನಿಗೆ. ತಂತಿವಾದ್ಯಗಳಿಂದ ಹಾಡತಕ್ಕದ್ದು.