1
|
ಎಲೀಹು ಮಾತನ್ನು ಮುಂದುವರಿಸಿ ಇಂತೆಂದನು: |
2
|
“ಯೋಬನೇ, ಇನ್ನು ಸ್ವಲ್ಪಹೊತ್ತು ನನ್ನೊಂದಿಗೆ ತಾಳ್ಮೆಯಿಂದಿರು. ದೇವರ ಪರವಾಗಿ ಹೇಳಬೇಕಾಗಿರುವ ಇನ್ನೂ ಕೆಲವು ಮಾತುಗಳಿವೆ. |
3
|
‘ನಾನು ಜ್ಞಾನವನ್ನು ಬಹುದೂರದಿಂದ ಪಡೆದುಕೊಂಡಿದ್ದೇನೆ. ನನ್ನ ಸೃಷ್ಟಿಕರ್ತನಾದ ದೇವರು ನ್ಯಾಯವಂತನೆಂದು ನಿರೂಪಿಸುವೆ. |
4
|
ಯೋಬನೇ, ನಾನು ಹೇಳುವ ಪ್ರತಿಯೊಂದು ಮಾತೂ ಸತ್ಯ. ನಿನ್ನ ಬಳಿಯಲ್ಲಿ ಜ್ಞಾನಪೂರ್ಣನೊಬ್ಬನು ಇದ್ದಾನೆ. |
5
|
“ದೇವರು ಮಹಾಶಕ್ತಿಶಾಲಿಯಾಗಿದ್ದರೂ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ಮಹಾಬಲಶಾಲಿಯೂ ಹೌದು, ಮಹಾ ಜ್ಞಾನಿಯೂ ಹೌದು! |
6
|
ದೇವರು ದುಷ್ಟರನ್ನು ಜೀವಿಸಲು ಅವಕಾಶ ಕೊಡುವುದಿಲ್ಲ. ಆತನು ಬಡಜನರಿಗೆ ಯಾವಾಗಲೂ ನ್ಯಾಯದೊರಕಿಸುವನು. |
7
|
ನೀತಿವಂತರನ್ನು ದೇವರು ಪರಿಪಾಲಿಸುವನು; ಆತನು ಒಳ್ಳೆಯವರನ್ನು ಅಧಿಪತಿಗಳನ್ನಾಗಿ ನೇಮಿಸುವನು; ಅವರಿಗೆ ಸದಾಕಾಲ ಗೌರವ ದೊರೆಯುವಂತೆ ಮಾಡುವನು. |
8
|
“ಅವರು ಒಂದು ವೇಳೆ ದಂಡನೆಗೆ ಒಳಗಾಗಿ ಸರಪಣಿಗಳಿಂದ ಬಂಧಿಸಲ್ಪಟ್ಟು ಸಂಕಟಪಡುತ್ತಿದ್ದರೆ, |
9
|
ಆತನು ಅವರ ದುಷ್ಕೃತ್ಯವನ್ನೂ ಪಾಪವನ್ನೂ ಗರ್ವವನ್ನೂ ಅವರಿಗೆ ತಿಳಿಯಪಡಿಸುವನು. |
10
|
ಇದಲ್ಲದೆ ತನ್ನ ಎಚ್ಚರಿಕೆಯ ಮಾತಿಗೆ ಕಿವಿಗೊಡುವಂತೆ ಬಲವಂತ ಮಾಡುವನು; ಪಾಪಮಾಡಕೂಡದೆಂದು ಆಜ್ಞಾಪಿಸುವನು. |
11
|
ಅವರು ದೇವರಿಗೆ ಕಿವಿಗೊಟ್ಟು ಆತನಿಗೆ ವಿಧೇಯರಾದರೆ, ಆತನು ಅವರನ್ನು ಅಭಿವೃದ್ಧಿಪಡಿಸುವನು; ಆಗ ಅವರ ಜೀವನವು ಸುಖಕರವಾಗುವುದು. |
12
|
ಆದರೆ ಅವರು ದೇವರಿಗೆ ವಿಧೇಯರಾಗದಿದ್ದರೆ ನಾಶವಾಗುವರು; ಮೂಢರಂತೆ ಸಾಯುವರು. |
13
|
“ದೇವರ ಬಗ್ಗೆ ಲಕ್ಷಿಸದವರು ಯಾವಾಗಲೂ ಕೋಪದಿಂದಿರುವರು. ದೇವರು ಅವರನ್ನು ದಂಡಿಸಿದರೂ ಅವರು ದೇವರಿಗೆ ಮೊರೆಯಿಡುವುದಿಲ್ಲ. |
14
|
ಅವರು ಯೌವನ ಪ್ರಾಯದಲ್ಲೇ ಪುರುಷಗಾಮಿಗಳಂತೆ ಸಾಯುವರು. |
15
|
ಆದರೆ ದೇವರು ದೀನರನ್ನು ವಿಪತ್ತುಗಳಿಂದ ಬಿಡಿಸುವನು. ಆ ವಿಪತ್ತುಗಳಿಂದ ದೇವರು ಜನರನ್ನು ಎಚ್ಚರಗೊಳಿಸಿ ತನಗೆ ಕಿವಿಗೊಡುವಂತೆ ಮಾಡುವನು. |
16
|
“ಯೋಬನೇ, ದೇವರು ನಿನ್ನನ್ನು ಕೇಡಿನಿಂದ ತಪ್ಪಿಸಿ ಸುರಕ್ಷಿತವೂ ಅಭಿವೃದ್ಧಿಕರವೂ ಆಗಿರುವ ಸ್ಥಳಕ್ಕೆ ಕರೆದುಕೊಂಡು ಬಂದು ನಿನಗೆ ಊಟವನ್ನು ಯಥೇಚ್ಛವಾಗಿ ಬಡಿಸಲು ಇಷ್ಟಪಡುತ್ತಾನೆ. |
17
|
ಯೋಬನೇ, ಈಗಲಾದರೋ ನೀನು ದೋಷಿಯೆಂದು ನಿರ್ಣಯಿಸಲ್ಪಟ್ಟಿರುವೆ; ದುಷ್ಟನಂತೆ ದಂಡಿಸಲ್ಪಟ್ಟಿರುವೆ. |
18
|
ಯೋಬನೇ, ಕೋಪವು ನಿನ್ನನ್ನು ಮೋಸಗೊಳಿಸದಿರಲಿ; ಹಣವು ನಿನ್ನ ಮನಸ್ಸನ್ನು ಮಾರ್ಪಡಿಸದಿರಲಿ, ನಿನ್ನನ್ನು ನಾಶನಕ್ಕೆ ನಡೆಸದಿರಲಿ. |
19
|
ನಿನ್ನ ಎಲ್ಲಾ ಹಣವು ಈಗ ನಿನಗೆ ಸಹಾಯ ಮಾಡಲಾರದು; ನಿನ್ನಲ್ಲಿರುವ ಶಕ್ತಿಸಾಮರ್ಥವು ಸಹ ನಿನಗೆ ಸಹಾಯ ಮಾಡಲಾರದು. |
20
|
ಜನಾಂಗಗಳು ಇದ್ದಕ್ಕಿದ್ದಂತೆ ಕಾಣೆಯಾಗುವ ರಾತ್ರಿಗಾಗಿ ಬಯಸಬೇಡ. |
21
|
ಯೋಬನೇ, ನೀನು ಬಹಳ ಸಂಕಟಪಟ್ಟಿರುವೆ. ಆದ್ದರಿಂದ ಕೆಡುಕನ್ನು ಆರಿಸಿಕೊಳ್ಳಬೇಡ; ತಪ್ಪು ಮಾಡದಂತೆ ಎಚ್ಚರಿಕೆಯಾಗಿರು. |
22
|
“ಇಗೋ, ದೇವರು ತನ್ನ ಶಕ್ತಿಯಿಂದ ಮಹಾಕಾರ್ಯವನ್ನು ಮಾಡುವನು! ಆತನು ಎಲ್ಲರಿಗೂ ಅತ್ಯಂತ ದೊಡ್ಡ ಉಪದೇಶಕನಾಗಿದ್ದಾನೆ. |
23
|
ದೇವರಿಗೆ ಕೆಲಸವನ್ನು ನೇಮಿಸಲು ಯಾರಿಗೆ ಸಾಧ್ಯ? ಆತನಿಗೆ, ‘ನೀನು ತಪ್ಪನ್ನು ಮಾಡಿರುವೆ’ ಎಂದು ಹೇಳಲು ಯಾರಿಗೆ ಸಾಧ್ಯ? |
24
|
“ದೇವರನ್ನು ಆತನ ಕಾರ್ಯಗಳಿಗಾಗಿ ಕೊಂಡಾಡಲು ಮರೆಯಬೇಡ. ಜನರು ಆತನನ್ನು ಕುರಿತು ಅನೇಕ ಸುತ್ತಿಗೀತೆಗಳನ್ನು ಬರೆದಿದ್ದಾರೆ. |
25
|
ಪ್ರತಿಯೊಬ್ಬನೂ ದೇವರ ಕಾರ್ಯವನ್ನು ನೋಡಬಲ್ಲನು. ದೂರದೇಶಗಳ ಜನರು ಸಹ ಆತನು ಕಾರ್ಯವನ್ನು ನೋಡಬಲ್ಲರು. |
26
|
ಹೌದು, ದೇವರೇ ಮಹೋನ್ನತನು. ಆತನ ಮಹತ್ವವನ್ನು ನಾವು ಅರ್ಥಮಾಡಿಕೊಳ್ಳಲಾರೆವು. ಆತನು ಎಂದಿನಿಂದ ಜೀವಿಸಿರುವನೊ ನಮಗೆ ತಿಳಿಯದು. |
27
|
“ದೇವರು ಭೂಮಿಯ ನೀರನ್ನು ಹಬೆಯ ರೂಪದಲ್ಲಿ ಮೇಲಕ್ಕೆ ಕೊಂಡೊಯ್ದು ಅದನ್ನು ಮಂಜನ್ನಾಗಿಯೂ ಮಳೆಯನ್ನಾಗಿಯೂ ಪರಿವರ್ತಿಸುತ್ತಾನೆ. |
28
|
ಆದ್ದರಿಂದ ಮೋಡಗಳು ನೀರನ್ನು ಸುರಿಯ ಮಾಡುತ್ತವೆ; ಅನೇಕರ ಮೇಲೆ ಮಳೆಯು ಸುರಿಯುತ್ತದೆ. |
29
|
ದೇವರು ಮೋಡಗಳನ್ನು ಹರಡುವ ಬಗೆಯನ್ನಾಗಲಿ ಆಕಾಶದಲ್ಲಿ ಗುಡುಗು ಗರ್ಜಿಸುವ ಬಗೆಯನ್ನಾಗಲಿ ಯಾವನೂ ಅರ್ಥಮಾಡಿಕೊಳ್ಳಲಾರನು. |
30
|
ಇಗೋ, ದೇವರು ತನ್ನ ಪ್ರಕಾಶವನ್ನು ಆಕಾಶದಲ್ಲೆಲ್ಲಾ ಹರಡಿ ಸಮುದ್ರದ ಆಳವಾದ ಭಾಗಗಳನ್ನು ಬೆಳಕಿನಿಂದ ತುಂಬಿಸಿದ್ದಾನೆ. |
31
|
ಜನಾಂಗಗಳನ್ನು ಹತೋಟಿಯಲ್ಲಿಡುವುದಕ್ಕಾಗಿಯೂ ಬೇಕಾದಷ್ಟು ಆಹಾರವನ್ನು ಕೊಡುವುದಕ್ಕಾಗಿಯೂ ದೇವರು ಅವುಗಳನ್ನು ಉಪಯೋಗಿಸುವನು. |
32
|
ದೇವರು ತನ್ನ ಕೈಗಳಲ್ಲಿ ಸಿಡಿಲನ್ನು ಹಿಡಿದುಕೊಂಡು ಅದಕ್ಕೆ ಆಜ್ಞಾಪಿಸಲು ಅದು ಆತನ ಚಿತ್ತಕ್ಕನುಸಾರವಾಗಿ ಹೊಡೆಯುವುದು. |
33
|
ಬಿರುಗಾಳಿಯು ಬರುತ್ತಿದೆಯೆಂದು ಗುಡುಗು ಎಚ್ಚರಿಕೆ ನೀಡುತ್ತದೆ; ಬಿರುಗಾಳಿ ಬರುತ್ತಿರುವುದು ದನಕರುಗಳಿಗೂ ಸಹ ಗೊತ್ತಾಗುವುದು.” |
Job 36:25 Kannada Language Bible Words basic statistical display
COMING SOON ...