ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿನ ಸಮೀಪಕ್ಕೆ ಬಂದಿದ್ದರು. ಅವರು ಆಲಿವ್ ಗುಡ್ಡದ ಬಳಿಯಿರುವ ಬೆತ್ಛಗೆ ಹಾಗೂ ಬೆಥಾನಿ ಎಂಬ ಊರುಗಳಿಗೆ ಬಂದಾಗ ಅಲ್ಲಿ ಯೇಸು ತನ್ನ ಇಬ್ಬರು ಶಿಷ್ಯರನ್ನು ಕರೆದು,
“ಅ2’್ನ ಇಬ್ಬರು ಶಿಷ್ಯರನ್ನು ಕರೆದಾತನ್ನ ಇಬ್ಬರು ಶಿಷ್ಯರನು ಅಧಿಕಾರವನೋಹಾನರ ಮೇಲೆ ರೋಪಗೊಂಡರು. 42ಯೇಸು ಎಲಲ್ಲಿ ಕಾಣುತ್ತಿರುವ ಊರಿಗೆ ಹೋಗಿರಿ. ನೀವು ಅದನ್ನು ಪ್ರವೇಶಿಸಿದಾಗ, ಯಾರೂ ಸವಾರಿ ಮಾಡಿಲ್ಲದ ಒಂದು ಕತ್ತೆ ಮರಿಯನ್ನು ಅಲ್ಲಿ ಕಟ್ಟಿರುವುದನ್ನು ಕಾಣುವಿರಿ. ಆ ಕತ್ತೆಯನ್ನು ಬಿಚ್ಚಿಕೊಂಡು, ನನ್ನ ಬಳಿಗೆ ತನ್ನಿರಿ.
ಯಾವನಾದರೂ ‘ಆ ಕತ್ತೆಯನ್ನು ಏಕೆ ತೆಗೆದುಕೊಂಡು ಹೋಗುತ್ತಿದ್ದೀರಿ’ ಎಂದು ನಿಮ್ಮನ್ನು ಕೇಳಿದರೆ, ‘ಒಡೆಯನಿಗೆ ಈ ಕತ್ತೆ ಬೇಕಾಗಿದೆ. ಆತನು ಇದನ್ನು ಬೇಗನೆ ಕಳುಹಿಸಿಕೊಡುವನು’ ಎಂದು ಅವನಿಗೆ ಹೇಳಿರಿ” ಎಂದನು.
ಕೆಲವು ಜನರು ಯೇಸುವಿನ ಮುಂದೆ ಹೋಗುತ್ತಿದ್ದರು. ಇತರ ಜನರು ಆತನ ಹಿಂದೆ ಹೋಗುತ್ತಿದ್ದರು. ಜನರೆಲ್ಲರೂ, “‘ಆತನನ್ನು ಕೊಂಡಾಡಿರಿ! ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ಆಶೀರ್ವಾದವಾಗಲಿ. ‘ ಕೀರ್ತನೆ 118:25, 26
ಯೇಸು ಜೆರುಸಲೇಮನ್ನು ತಲುಪಿದಾಗ, ದೇವಾಲಯಕ್ಕೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನೂ ನೋಡಿದನು. ಆದರೆ ಆಗಲೇ ತಡವಾಗಿತ್ತು. ಆದ್ದರಿಂದ ಯೇಸು ಹನ್ನೆರಡು ಜನ ಅಪೊಸ್ತಲರೊಂದಿಗೆ ಬೆಥಾನಿಯಕ್ಕೆ ಹೋದನು.
ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ನೋಡಿದನು. ಆದ್ದರಿಂದ ಆ ಮರದಲ್ಲಿ ಅಂಜೂರದ ಹಣ್ಣೇನಾದರೂ ಸಿಕ್ಕಬಹುದೆಂದು ಅದರ ಬಳಿಗೆ ಹೋದನು. ಆದರೆ ಆತನು ಆ ಮರದಲ್ಲಿ ಅಂಜೂರದ ಹಣ್ಣುಗಳನ್ನು ಕಾಣಲಿಲ್ಲ. ಅಲ್ಲಿ ಎಲೆಗಳು ಮಾತ್ರ ಇದ್ದವು. ಏಕೆಂದರೆ ಅದು ಅಂಜೂರ ಹಣ್ಣಿನ ಕಾಲವಾಗಿರಲಿಲ್ಲ.
ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮನ್ನು ಪ್ರವೇಶಿಸಿದರು. ಅವರು ದೇವಾಲಯದೊಳಗೆ ಬಂದಾಗ ಅಲ್ಲಿ ವಸ್ತುಗಳನ್ನು ಮಾರುತ್ತಿದ್ದ ಮತ್ತು ಕೊಳ್ಳುತ್ತಿದ್ದ ಜನರನ್ನು ಆತನು ಅಲ್ಲಿಂದ ಹೊರಡಿಸತೊಡಗಿದನು; ಹಣ ವಿನಿಮಯಮಾಡಿಕೊಳ್ಳುತ್ತಿದ್ದ ವ್ಯಾಪಾರಿಗಳ ಮತ್ತು ಪಾರಿವಾಳಗಳನ್ನು ಮಾರುತ್ತಿದ್ದವರ ಮೇಜುಗಳನ್ನು ಕೆಡವಿದನು.
ನಂತರ ಯೇಸು ಜನರಿಗೆ ಉಪದೇಶಿಸಿ, “‘ನನ್ನ ಆಲಯವು ಎಲ್ಲಾ ಜನರಿಗೂ ಪ್ರಾರ್ಥನೆಯ ಆಲಯವೆನಿಸಿಕೊಳ್ಳುವುದು.’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರು ಅಡಗಿಕೊಳ್ಳುವ ಸ್ಥಳವನ್ನಾಗಿ ಮಾಡಿದ್ದೀರಿ’ ಎಂದು ಹೇಳಿದನು.
ಮಹಾಯಾಜಕರು ಹಾಗೂ ಧರ್ಮೋಪದೇಶಕರು ಈ ಸಂಗತಿಗಳನ್ನು ಕೇಳಿ ಯೇಸುವನ್ನು ಕೊಲ್ಲಿಸಲು ತಕ್ಕ ಮಾರ್ಗವನ್ನು ಕಂಡುಹಿಡಿಯಲು ಪ್ರಯತ್ನಿಸತೊಡಗಿದರು. ಜನರೆಲ್ಲರೂ ಯೇಸುವಿನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಯೇಸುವಿಗೆ ಭಯಪಟ್ಟರು.
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಈ ಬೆಟ್ಟಕ್ಕೆ, ‘ನೀನು ಹೋಗಿ ಸಮುದ್ರದೊಳಗೆ ಬೀಳು’ ಎಂದು ಹೇಳಿ, ಸಂಶಯವನ್ನೇಪಡದೆ, ನೀವು ಹೇಳಿದ್ದು ಖಂಡಿತವಾಗಿ ನೆರವೇರುತ್ತದೆ ಎಂದು ನಂಬಿದರೆ, ದೇವರು ಅದನ್ನು ನಿಮಗಾಗಿ ಮಾಡುತ್ತಾನೆ.
ನೀವು ಪ್ರಾರ್ಥಿಸಲು ಸಿದ್ಧರಾಗಿರುವಾಗ, ನೀವು ಇನ್ನೊಬ್ಬನ ವಿಷಯದಲ್ಲಿ ಯಾವುದೇ ಕಾರಣದಿಂದಾಗಲಿ ಕೋಪದಿಂದಿರುವುದು ನಿಮ್ಮ ನೆನಪಿಗೆ ಬಂದರೆ, ಅವನನ್ನು ಕ್ಷಮಿಸಿಬಿಡಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವನು” ಎಂದು ಉತ್ತರಿಸಿದನು.
ಯೇಸು, “ನಾನೂ ನಿಮಗೊಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನ್ನ ಪ್ರಶ್ನೆಗೆ ಉತ್ತರಿಸಿದರೆ ನಾನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿದ್ದೇನೆ ಎಂಬುದನ್ನು ನಿಮಗೆ ತಿಳಿಸುತ್ತೇನೆ.
ಯೆಹೂದ್ಯನಾಯಕರು ಈ ಪ್ರಶ್ನೆಯ ಬಗ್ಗೆ ಚರ್ಚಿಸಿ ಒಬ್ಬರಿಗೊಬ್ಬರು, “‘ಯೋಹಾನನು ದೀಕ್ಷಾಸ್ನಾನ ಕೊಟ್ಟದ್ದು ದೇವರಿಂದ ಬಂದ ಅಧಿಕಾರದಿಂದ’ ಎಂದು ನಾವು ಉತ್ತರಿಸಿದರೆ, ಆಗ ‘ಮತ್ತೆ ನೀವು ಏಕೆ ಯೋಹಾನನನ್ನು ನಂಬಲಿಲ್ಲ?’ ಎಂದು ಯೇಸು ಕೇಳುತ್ತಾನೆ.
ಆದರೆ ‘ಯೋಹಾನನು ದೀಕ್ಷಾಸ್ನಾನ ಮಾಡಿಸಿದ್ದು ಮನುಷ್ಯನಿಂದ ಬಂದ ಅಧಿಕಾರದಿಂದ’ ಎಂದು ಹೇಳಿದರೆ, ಆಗ ಜನರು ನಮ್ಮ ಮೇಲೆ ಕೋಪಗೊಳ್ಳುತ್ತಾರೆ” ಎಂದು ಮಾತಾಡಿಕೊಂಡರು. ಜನರೆಲ್ಲರೂ ಯೋಹಾನನನ್ನು ಒಬ್ಬ ಪ್ರವಾದಿಯೆಂದು ನಂಬಿದ್ದರಿಂದ ಅವರು ಜನರಿಗೆ ಭಯಪಟ್ಟರು.
ಆದಕಾರಣ ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ” ಎಂದು ಉತ್ತರಿಸಿದರು. ಯೇಸು ಅವರಿಗೆ, “ಹಾಗಾದರೆ ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತಿದ್ದೇನೆಂದು ನಿಮಗೆ ಹೇಳುವುದಿಲ್ಲ” ಎಂದನು.