1
|
ಕೆಡುಕರ ವಿಷಯದಲ್ಲಿ ಹೊಟ್ಟೆಕಿಚ್ಚು ಪಡಬೇಡ; ಅವರೊಂದಿಗಿರಲು ಅಪೇಕ್ಷಿಸಬೇಡ. |
2
|
ಅವರು ಕೇಡು ಮಾಡಲು ತಮ್ಮ ಹೃದಯಗಳಲ್ಲಿ ಆಲೋಚಿಸಿಕೊಳ್ಳುವರು; ಅವರು ಕೇಡನ್ನೇ ಕುರಿತು ಮಾತಾಡುವರು. |
3
|
ಒಳ್ಳೆಯ ಮನೆಯು ಜ್ಞಾನದ ಮೇಲೂ ವಿವೇಕದ ಮೇಲೂ ಕಟ್ಟಲ್ಪಟ್ಟಿರುವುದು. |
4
|
ಅದರ ಕೋಣೆಗಳು ಅಮೂಲ್ಯವಾದ ಭಂಡಾರಗಳಿಂದ ತುಂಬಿರುವುದು ಜ್ಞಾನದಿಂದಲೇ. |
5
|
ಜ್ಞಾನವು ಮನುಷ್ಯನನ್ನು ಬಲಿಷ್ಠನನ್ನಾಗಿ ಮಾಡುವುದು. ವಿವೇಕವು ಮನುಷ್ಯನಿಗೆ ಬಲವನ್ನು ಕೊಡುತ್ತದೆ. |
6
|
ಯುದ್ಧವನ್ನು ಆರಂಭಿಸುವ ಮೊದಲೇ ಎಚ್ಚರಿಕೆಯಿಂದ ಆಲೋಚಿಸು. ಜಯವನ್ನು ಗಳಿಸಬೇಕಾದರೆ ನಿನಗೆ ಅನೇಕ ಒಳ್ಳೆಯ ಆಲೋಚನೆಗಾರರು ಅಗತ್ಯ. |
7
|
ಮೂಢರು ಜ್ಞಾನವನ್ನು ಅರ್ಥಮಾಡಿಕೊಳ್ಳಲಾರರು; ಮುಖ್ಯವಾದ ವಿಷಯಗಳನ್ನು ಚರ್ಚಿಸುವಾಗ ಮೂಢನು ಏನೂ ಹೇಳಲಾರ. |
8
|
ಕೇಡುಮಾಡುವವನನ್ನು ಜನರು ‘ಕೆಡುಕ’ ಎಂದು ಕರೆಯುವರು. |
9
|
ಮೂಢನ ಆಲೋಚನೆಗಳೆಲ್ಲಾ ಪಾಪಮಯ. ದುರಾಭಿಮಾನಿಯು ಜನರಿಗೆ ಅಸಹ್ಯ. |
10
|
ಕಷ್ಟದ ಸಮಯಗಳಲ್ಲಿ ನೀನು ಬಲಹೀನನಾಗಿದ್ದರೆ, ನೀನು ನಿಜವಾಗಿಯೂ ಬಲಹೀನ. |
11
|
ಜನರು ಯಾರನ್ನಾದರೂ ಕೊಲ್ಲಬೇಕೆಂದಿದ್ದರೆ, ಅವನನ್ನು ಉಳಿಸಲು ಪ್ರಯತ್ನಿಸು. |
12
|
“ಇದರ ಬಗ್ಗೆ ನನಗೆ ಗೊತ್ತಿರಲಿಲ್ಲ” ಎಂದು ನೀನು ಹೇಳಲಾಗದು. ಯೆಹೋವನಿಗೆ ಪ್ರತಿಯೊಂದು ತಿಳಿದಿದೆ. ನಿನ್ನ ಕಾರ್ಯಗಳ ಉದ್ದೇಶವೂ ಆತನಿಗೆ ತಿಳಿದಿದೆ. ಯೆಹೋವನು ನಿನ್ನನ್ನು ಗಮನಿಸಿ ನಿನ್ನ ಕಾರ್ಯಗಳಿಗೆ ಪ್ರತಿಫಲ ಕೊಡುವನು. |
13
|
ನನ್ನ ಮಗನೇ, ಜೇನುತುಪ್ಪವನ್ನು ತಿನ್ನು, ಅದು ಒಳ್ಳೆಯದು. ಜೇನುಗೂಡಿನ ಜೇನುತುಪ್ಪ ಸಿಹಿ. |
14
|
ಅದೇರೀತಿ ಜ್ಞಾನವು ನಿನ್ನ ಆತ್ಮಕ್ಕೆ ಒಳ್ಳೆಯದು. ನೀನು ಅದನ್ನು ಕಂಡುಕೊಂಡರೆ ನಿನಗೆ ಒಳ್ಳೆಯ ಭವಿಷ್ಯವಿರುವುದು; ನಿನ್ನ ನಿರೀಕ್ಷೆ ಎಂದಿಗೂ ಕೊನೆಗೊಳ್ಳುವುದಿಲ್ಲ. |
15
|
ಒಳ್ಳೆಯವನಿಂದ ಕದ್ದುಕೊಳ್ಳುವ ಅಥವಾ ಅವನ ಮನೆಯನ್ನೇ ತೆಗೆದುಕೊಳ್ಳುವ ಕಳ್ಳನಂತೆ ಇರಬೇಡ. |
16
|
ಒಳ್ಳೆಯವನು ಏಳುಸಲ ಬಿದ್ದರೂ ಅವನು ಮತ್ತೆ ಎದ್ದು ನಿಲ್ಲುವನು. ಆದರೆ ಕೆಡುಕರು ಒಂದೇ ಆಪತ್ತಿನಿಂದ ಶಾಶ್ವತವಾಗಿ ಸೋತು ಹೋಗುವರು. |
17
|
ನಿನ್ನ ವೈರಿ ತೊಂದರೆಯಲ್ಲಿರುವಾಗ ಸಂತೋಷಪಡಬೇಡ; ಅವನು ಬೀಳುವಾಗಲೂ ಸಂತೋಷಪಡಬೇಡ. |
18
|
ಇಲ್ಲವಾದರೆ, ಯೆಹೋವನು ನಿನ್ನ ಮೇಲೆ ಕೋಪಗೊಂಡು ನಿನ್ನ ವೈರಿಯನ್ನು ದಂಡಿಸದೆ ಹೋಗಬಹುದು. |
19
|
ಕೆಡುಕರ ಬಗ್ಗೆ ಅತಿಯಾಗಿ ಬೇಸರಗೊಳ್ಳಬೇಡ, ಅವರ ಮೇಲೆ ಹೊಟ್ಟೆಕಿಚ್ಚು ಪಡಬೇಡ. |
20
|
ಆ ಕೆಡುಕರಿಗೆ ನಿರೀಕ್ಷೆಯಿಲ್ಲ. ಅವರ ಬೆಳಕು ಕತ್ತಲೆಯಾಗುವುದು. |
21
|
ಮಗನೇ, ಯೆಹೋವನನ್ನೂ ರಾಜನನ್ನೂ ಗೌರವಿಸು. ಅವರನ್ನು ವಿರೋಧಿಸುವವರ ಜೊತೆ ಸೇರಬೇಡ. |
22
|
ಯಾಕೆಂದರೆ ಅವರು ಬೇಗನೆ ನಾಶವಾಗುವರು. ದೇವರು ಮತ್ತು ರಾಜನು ತಮ್ಮ ವೈರಿಗಳಿಗೆ ಎಷ್ಟು ಕೇಡುಮಾಡಬಲ್ಲರೆಂಬುದು ನಿನಗೆ ತಿಳಿಯದು. |
23
|
ಇವು ಸಹ ಜ್ಞಾನಿಗಳ ಮಾತುಗಳು: ನ್ಯಾಯಾಧಿಪತಿ ನ್ಯಾಯವಂತನಾಗಿರಬೇಕು. ಅವನು ಕೇವಲ ಪರಿಚಯದ ನಿಮಿತ್ತ ಯಾರಿಗೂ ಸಹಾಯ ಮಾಡಕೂಡದು. |
24
|
ನ್ಯಾಯಧೀಶನು ಅಪರಾಧಿಗೆ, “ನೀನು ನಿರಪರಾಧಿ” ಎಂದು ಹೇಳಿದರೆ, ಜನರು ನ್ಯಾಯಾಧೀಶನನ್ನು ಶಪಿಸುವರು; ಜನಾಂಗಗಳು ಅವನನ್ನು ಖಂಡಿಸುವವು. |
25
|
ಆದರೆ ನ್ಯಾಯಾಧೀಶನು ಅಪರಾಧಿಯನ್ನು ದಂಡಿಸಿದರೆ, ಜನರೆಲ್ಲರೂ ಅವನನ್ನು ಮೆಚ್ಚಿಕೊಳ್ಳುವರು; ಅವನಿಗೆ ಮಹಾ ಆಶೀರ್ವಾದ ದೊರೆಯುವುದು. |
26
|
ಯಥಾರ್ಥವಾದ ಉತ್ತರ ಜನರೆಲ್ಲರನ್ನು ಸಂತೋಷಗೊಳಿಸುವುದು; ಅದು ತುಟಿಯ ಮೇಲಿನ ಮುದ್ದಿನಂತಿದೆ. |
27
|
ಹೊಲಗಳಲ್ಲಿ ಬಿತ್ತುವ ಮೊದಲು ಮನೆಯನ್ನು ಕಟ್ಟಬೇಡ. ವಾಸಕ್ಕಾಗಿ ಮನೆಯನ್ನು ಕಟ್ಟುವ ಮೊದಲೇ ನೀನು ಬೇಸಾಯ ಮಾಡಲು ಸಿದ್ಧನಾಗಿರುವಿಯೊ ಎಂಬುದನ್ನು ಖಾತರಿಪಡಿಸಿಕೊ. |
28
|
ಬೇರೊಬ್ಬನ ವಿರೋಧವಾಗಿ ಸಕಾರಣವಿಲ್ಲದೆ ಸಾಕ್ಷಿ ಹೇಳಬೇಡ, ಸುಳ್ಳನ್ನೂ ಹೇಳಬೇಡ. |
29
|
“ಅವನು ನನಗೆ ಕೇಡು ಮಾಡಿದನು. ಆದ್ದರಿಂದ ನಾನೂ ಅವನಿಗೆ ಕೇಡು ಮಾಡುವೆ. ಅವನು ಮಾಡಿದ ಕೇಡುಗಳಿಗಾಗಿ ಸೇಡು ತೀರಿಸಿಕೊಳ್ಳುವೆ” ಎಂದು ಹೇಳಬೇಡ. |
30
|
ಸೋಮಾರಿಯ ಹೊಲದ ಸಮೀಪದಲ್ಲೂ ಅಜ್ಞಾನಿಯ ದ್ರಾಕ್ಷಿತೋಟದ ಬಳಿಯಲ್ಲೂ ನಡೆದು ಹೋದೆನು. |
31
|
ಆ ಹೊಲಗಳಲ್ಲಿ ಮುಳ್ಳುಗಿಡಗಳೂ ಉಪಯೋಗವಿಲ್ಲದ ಸಸಿಗಳೂ ಬೆಳೆಯುತ್ತಿದ್ದವು. ಹೊಲಗಳ ಸುತ್ತಲೂ ಇದ್ದ ಗೋಡೆ ಒಡೆದುಹೋಗಿತ್ತು; ಕುಸಿದು ಬೀಳುತ್ತಿತ್ತು. |
32
|
ಅದನ್ನು ನೋಡಿ, ಆಲೋಚಿಸಿದೆ; ಒಂದು ಪಾಠವನ್ನು ಕಲಿತುಕೊಂಡೆ; |
33
|
ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ವಿಶ್ರಾಂತಿ, ಇನ್ನು ಸ್ವಲ್ಪ ಕೈಮುದುರಿಕೊಳ್ಳುವೆ, ಮಧ್ಯಾಹ್ನ ಇನ್ನು ಸ್ವಲ್ಪ ನಿದ್ರೆ ಮಾಡುವೆ ಎನ್ನುವೆಯಾ? |
34
|
ಇವು ನಿನ್ನನ್ನು ಬೇಗನೆ ಬಡವನನ್ನಾಗಿ ಮಾಡಿ ಬರಿದು ಮಾಡುತ್ತದೆ; ಇದ್ದಕ್ಕಿದ್ದಂತೆ ಬಂದು ಎಲ್ಲವನ್ನು ದೋಚಿಕೊಂಡು ಹೋಗುವ ಕಳ್ಳನಂತಿವೆ. |
Proverbs 24:2 Kannada Language Bible Words basic statistical display
COMING SOON ...