1
|
ಮಾಸ್ಸಾದ ಯಾಕೆ ಎಂಬವನ ಮಗನಾದ ಅಗೂರನ ನುಡಿಗಳಿವು. ಇಥಿಯೇಲನಿಗೂ ಉಕ್ಕಾಲನಿಗೂ ಇವನು ನೀಡಿದ ಸಂದೇಶವಿದು: |
2
|
ನಾನು ಬೇರೆಯವರಿಗಿಂತ ದಡ್ಡನಾಗಿರುವೆ. ಸರ್ವಸಾಮಾನ್ಯವಾದ ಬುದ್ಧಿಯೂ ನನಗಿಲ್ಲ. |
3
|
ನಾನು ಜ್ಞಾನವನ್ನು ಕಲಿತವನಲ್ಲ; ಪರಿಶುದ್ಧನಾದ ದೇವರ ಬಗ್ಗೆಯೂ ಗೊತ್ತಿಲ್ಲ. |
4
|
ಎಂದಾದರೂ ಪರಲೋಕಕ್ಕೆ ಏರಿಹೋಗಿ ಇಳಿದು ಬಂದವನು ಯಾರು? ಗಾಳಿಯನ್ನು ತನ್ನ ಕೈಯಲ್ಲಿ ಹಿಡಿದವನು ಯಾರು? ತನ್ನ ಉಡುಪಿನಲ್ಲಿ ಸಮುದ್ರವನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಮೇರೆಗಳನ್ನು ಹಾಕಿದವನು ಯಾರು? ಈ ಕಾರ್ಯಗಳನ್ನು ಯಾವನಾದರೂ ಮಾಡಿದ್ದರೆ, ಅವನು ಯಾರು? ಅವನು ಕುಟುಂಬ ಎಲ್ಲಿದೆ? |
5
|
ದೇವರು ಹೇಳುವ ಪ್ರತಿಯೊಂದು ಮಾತೂ ನಂಬಿಕೆಗೆ ಯೋಗ್ಯವಾಗಿದೆ. ತನ್ನ ಬಳಿಗೆ ಬರುವ ಜನರಿಗೆ ದೇವರು ಆಶ್ರಯದುರ್ಗವಾಗಿದ್ದಾನೆ. |
6
|
ಆದ್ದರಿಂದ ದೇವರು ಹೇಳುವ ಸಂಗತಿಗಳಿಗೆ ಏನನ್ನೂ ಸೇರಿಸಬೇಡ. ನೀನು ಬದಲಾಯಿಸಿದರೆ, ಆತನು ನಿನ್ನನ್ನು ಶಿಕ್ಷಿಸುವನು ಮತ್ತು ನಿನ್ನನ್ನು ಸುಳ್ಳುಗಾರನೆಂದು ರುಜುವಾತು ಮಾಡುವನು. |
7
|
ಯೆಹೋವನೇ, ನಾನು ಸಾಯುವ ಮೊದಲು ನೀನು ನನಗೋಸ್ಕರ ಎರಡು ಕಾರ್ಯಗಳನ್ನು ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುವೆ. |
8
|
ಸುಳ್ಳುಹೇಳದಂತೆ ನನಗೆ ಸಹಾಯಮಾಡು. ನನ್ನನ್ನು ತುಂಬ ಐಶ್ವರ್ಯವಂತನನ್ನಾಗಿಯೂ ಮಾಡಬೇಡ; ತುಂಬ ಬಡವನನ್ನಾಗಿಯೂ ಮಾಡಬೇಡ; ಅನುದಿನಕ್ಕೆ ಬೇಕಾದವುಗಳನ್ನು ಮಾತ್ರ ಕೊಡು. |
9
|
ನನಗೆ ಹೆಚ್ಚಾಗಿದ್ದರೆ, ನಿನ್ನನ್ನೇ ತಿರಸ್ಕರಿಸಿ, “ನನಗೆ ಯೆಹೋವನ ಅಗತ್ಯವಿಲ್ಲ” ಎಂದು ಹೇಳುವೆನು. ನಾನು ಬಡವನಾಗಿದ್ದರೆ, ಕಳವುಮಾಡಿ ನಿನ್ನ ಹೆಸರಿಗೆ ಅವಮಾನ ಮಾಡುವೆನು. |
10
|
ಸೇವಕನ ಬಗ್ಗೆ ಯಜಮಾನನಿಗೆ ಚಾಡಿಹೇಳಬೇಡ. ನೀನು ಹೇಳಿದರೆ, ಅವನು ನಿನ್ನನ್ನು ಶಪಿಸುವನು; ಆ ಶಾಪದಿಂದ ನೀನು ಸಂಕಟಪಡುವೆ. |
11
|
ಕೆಲವರು ತಮ್ಮ ತಂದೆಗಳನ್ನು ಶಪಿಸುವರು. ತಮ್ಮ ತಾಯಂದಿರನ್ನು ಆಶೀರ್ವದಿಸುವುದಿಲ್ಲ. |
12
|
ಕೆಲವರು ತಮ್ಮನ್ನು ಶುದ್ಧರೆಂದು ಯೋಚಿಸುವರು. ಆದರೆ ಅವರು ತಮ್ಮ ಹೊಲಸಿನಿಂದ ಶುದ್ಧೀಕರಿಸಲ್ಪಟ್ಟಿಲ್ಲ. |
13
|
ಕೆಲವರು ಬಹಳ ದುರಾಭಿಮಾನಿಗಳಾಗಿದ್ದಾರೆ. ತಾವು ಬೇರೆಯವರಿಗಿಂತ ಎಷ್ಟೋ ಉತ್ತಮರೆಂಬುದು ಅವರ ಭಾವನೆ. |
14
|
ಖಡ್ಗಗಳಂತಿರುವ ಹಲ್ಲುಗಳನ್ನು ಹೊಂದಿರುವ ಜನರಿದ್ದಾರೆ. ಅವರ ಕೋರೆಗಳು ಕತ್ತಿಗಳಂತಿವೆ. ಅವರು ಬಡಜನರಲ್ಲಿ ಇರುವುದನ್ನೆಲ್ಲಾ ತಮ್ಮಿಂದಾದಷ್ಟು ದೋಚಿಕೊಳ್ಳಲು ತಮ್ಮ ಸಮಯವನ್ನು ಉಪಯೋಗಿಸುವರು. |
15
|
ಕೆಲವರು ರಕ್ತ ಕುಡಿಯುವ ಜಿಗಣೆಗಳಂತಿದ್ದಾರೆ. ಅವರು, “ನನಗೆ ಕೊಡು, ನನಗೆ ಕೊಡು, ನನಗೆ ಕೊಡು” ಎಂದು ಹೇಳುತ್ತಾರೆ. ಎಂದಿಗೂ ತೃಪ್ತಿಯಾಗದ ಮೂರು ಸಂಗತಿಗಳಿವೆ. ನಿಜವಾಗಿಯೂ ನಾಲ್ಕು ಸಂಗತಿಗಳು ಎಂದಿಗೂ ಸಾಕು ಎನ್ನವು: |
16
|
ಮರಣದ ಸ್ಥಳ, ಮಕ್ಕಳಿಲ್ಲದ ಹೆಂಗಸು, ಸತತವಾಗಿ ನೀರಿನ ಅಗತ್ಯವಿರುವ ಭೂಮಿ ಮತ್ತು ಆರದ ಬೆಂಕಿ! |
17
|
ತನ್ನ ತಂದೆಯನ್ನು ಗೇಲಿಮಾಡುವವನಾಗಲಿ ವೃದ್ಧ ತಾಯಿಯನ್ನು ಕಡೆಗಣಿಸುವವನಾಗಲಿ ದಂಡನೆ ಹೊಂದುವನು. ಕಾಗೆಗಳೂ ಕ್ರೂರಪಕ್ಷಿಗಳೂ ಅವನ ಕಣ್ಣುಗಳನ್ನು ತಿನ್ನುವಂತಿರುವುದು ಆ ದಂಡನೆ. |
18
|
ನನಗೆ ಅರ್ಥಮಾಡಿಕೊಳ್ಳಲು ಕಷ್ಟವಾದ ಮೂರು ಸಂಗತಿಗಳಿವೆ; ನಿಜವಾಗಿಯೂ ನಾಲ್ಕು ಸಂಗತಿಗಳನ್ನು ನಾನು ಅರ್ಥಮಾಡಿಕೊಳ್ಳಲಾರೆ: |
19
|
ಆಕಾಶದಲ್ಲಿ ಹಾರುವ ಹದ್ದಿನ ರೀತಿ, ಬಂಡೆಯ ಮೇಲೆ ಹರಿದಾಡುವ ಹಾವು, ಸಮುದ್ರದ ಮೇಲೆ ಸಂಚರಿಸುವ ಹಡಗು ಮತ್ತು ಹೆಂಗಸನ್ನು ಪ್ರೇಮಿಸುತ್ತಿರುವ ಗಂಡಸು. |
20
|
ವ್ಯಭಿಚಾರಿಣಿಯ ನಡತೆಯು ಇದೇ. ಆಕೆ ಊಟ ಮಾಡುವಳು, ಬಾಯಿ ಒರಸಿಕೊಳ್ಳುವಳು ಮತ್ತು ತಾನು ಯಾವ ತಪ್ಪನ್ನೂ ಮಾಡಿಲ್ಲವೆಂದು ಹೇಳುವಳು. |
21
|
ಭೂಮಿಯ ಮೇಲೆ ಕೇಡುಮಾಡುವ ಮೂರು ಸಂಗತಿಗಳಿವೆ; ನಿಜವಾಗಿಯೂ ನಾಲ್ಕು ಸಂಗತಿಗಳನ್ನು ಭೂಮಿಯು ತಾಳಲಾಗದು: |
22
|
ರಾಜನಾದ ಸೇವಕ, ತನಗೆ ಅಗತ್ಯವಿರುವ ಪ್ರತಿಯೊಂದನ್ನು ಪಡೆದಿರುವ ಮೂಢ, |
23
|
ಪ್ರೀತಿಯನ್ನು ಕಂಡಿಲ್ಲದಿದ್ದರೂ ಮದುವೆಯಾಗುವ ಸ್ತ್ರೀ ಮತ್ತು ತನ್ನ ಯಜಮಾನಿಯ ಸ್ಥಾನವನ್ನು ಕಸಿದುಕೊಳ್ಳುವ ಸೇವಕಿ. |
24
|
ಭೂಮಿಯ ಮೇಲೆ ನಾಲ್ಕು ಪ್ರಾಣಿಗಳಿವೆ. ಆದರೆ ಈ ಪ್ರಾಣಿಗಳು ತುಂಬ ವಿವೇಕವುಳ್ಳವುಗಳಾಗಿವೆ. |
25
|
ಇರುವೆಗಳು ಸಣ್ಣಗಿವೆ ಮತ್ತು ಬಲಹೀನವಾಗಿವೆ. ಆದರೆ ಅವು ಸುಗ್ಗೀಕಾಲದಲ್ಲಿ ತಮ್ಮ ಆಹಾರವನ್ನು ಕೂಡಿಸಿಟ್ಟುಕೊಳ್ಳುತ್ತವೆ. |
26
|
ಬೆಟ್ಟದ ಮೊಲ ಬಲಿಷ್ಠವಾದ ಪ್ರಾಣಿಯಾಗಿಲ್ಲದಿದ್ದರೂ ಅವು ಬಂಡೆಗಳಲ್ಲಿ ತಮಗೆ ಮನೆಗಳನ್ನು ಮಾಡಿಕೊಳ್ಳಬಲ್ಲವು. |
27
|
ಮಿಡತೆಗಳಿಗೆ ರಾಜನಿಲ್ಲದಿದ್ದರೂ ಅವು ಗುಂಪುಗುಂಪಾಗಿ ಹೋಗುತ್ತವೆ. |
28
|
ಹಲ್ಲಿಗಳನ್ನು ನಿಮ್ಮ ಕೈಗಳಲ್ಲಿ ಹಿಡಿದುಕೊಳ್ಳಬಹುದು. ಅವು ಅಷ್ಟು ಸಣ್ಣವು. ಆದರೆ ಅವು ರಾಜನ ಮನೆಗಳಲ್ಲಿಯೂ ವಾಸಿಸುತ್ತವೆ. |
29
|
ಮೂರು ಪ್ರಾಣಿಗಳಿವೆ: ಅವು ನಡೆಯುವಾಗ ಗಂಭೀರತೆಯು ಎದ್ದುಕಾಣುತ್ತದೆ. ನಿಜವಾಗಿಯೂ ನಾಲ್ಕು ಇವೆ: |
30
|
ಸಿಂಹವು ಎಲ್ಲಾ ಪ್ರಾಣಿಗಳಲ್ಲಿ ಅತಿ ಬಲಿಷ್ಠವಾದದ್ದು; ಅದು ಯಾವುದಕ್ಕೂ ಭಯಪಡುವುದಿಲ್ಲ. |
31
|
ಬಹು ಹೆಮ್ಮೆಯಿಂದ ನಡೆಯುವ ಬೇಟೆನಾಯಿ; ಹೋತ ಮತ್ತು ತನ್ನ ಜನರ ನಡುವೆ ಇರುವ ರಾಜ. |
32
|
ನೀನು ನಿನ್ನನ್ನು ಹೆಚ್ಚಿಸಿಕೊಂಡು ಮೂಢನಾಗಿದ್ದರೆ, ಕೆಡುಕನ್ನು ಆಲೋಚಿಸುತ್ತಿದ್ದರೆ, ಸ್ವಲ್ಪ ಯೋಚಿಸು. |
33
|
ಹಾಲನ್ನು ಕರೆಯುವವನು ಬೆಣ್ಣೆಮಾಡುವನು. ಮತ್ತೊಬ್ಬನ ಮೂಗನ್ನು ಹೊಡೆದರೆ ರಕ್ತ ಬರುವುದು. ಅಂತೆಯೇ, ನೀನು ಜನರನ್ನು ಕೋಪಗೊಳಿಸಿದರೆ, ಜಗಳವನ್ನು ಎಬ್ಬಿಸುವೆ. |
Proverbs 30:14 Kannada Language Bible Words basic statistical display
COMING SOON ...