1
|
ನಾನು ಯೆಹೋವನಿಗೋಸ್ಕರ ತಾಳ್ಮೆಯಿಂದ ನಿರೀಕ್ಷಿಸಿದೆನು; ಆತನು ನನ್ನ ಮೊರೆಗೆ ಕಿವಿಗೊಟ್ಟು ಕೇಳಿದನು. |
2
|
ಆತನು ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು. ಆತನು ನನ್ನನ್ನು ಕೆಸರಿನ ಸ್ಥಳದಿಂದ ಮೇಲೆತ್ತಿ ಬಂಡೆಯ ಮೇಲಿರಿಸಿದನು; ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು. |
3
|
ಆತನು ನನ್ನ ಬಾಯಲ್ಲಿ ಹೊಸ ಕೀರ್ತನೆಯನ್ನು ಹುಟ್ಟಿಸಿದ್ದಾನೆ. ಅದು ನನ್ನ ದೇವರ ಸ್ತುತಿಗೀತೆ. ನನಗೆ ಸಂಭವಿಸಿದವುಗಳನ್ನು ಅನೇಕರು ನೋಡಿ ಯೆಹೋವನಲ್ಲಿ ಭರವಸವಿಟ್ಟು ಆತನನ್ನು ಆರಾಧಿಸುವರು. |
4
|
ಯಾವನು ಯೆಹೋವನಲ್ಲಿ ಭರವಸವಿಟ್ಟಿದ್ದಾನೊ ಅವನೇ ಧನ್ಯನು. ಸಹಾಯಕ್ಕಾಗಿ ವಿಗ್ರಹಗಳ ಕಡೆಗೂ ಸುಳ್ಳುದೇವರುಗಳ ಕಡೆಗೂ ತಿರುಗಿಕೊಳ್ಳದವನೇ ಭಾಗ್ಯವಂತನು. |
5
|
ಯೆಹೋವನೇ, ನನ್ನ ದೇವರೇ, ನೀನು ಅನೇಕ ಮಹತ್ಕಾರ್ಯಗಳನ್ನು ಮಾಡಿರುವೆ! ನನ್ನ ವಿಷಯದಲ್ಲಿ ನಿನಗೆ ಅತಿಶಯವಾದ ಆಲೋಚನೆಗಳಿವೆ. ಅವುಗಳನ್ನು ವಿವರಿಸಿ ಹೇಳಲು ಸಾಧ್ಯವಿಲ್ಲ; ಅವು ಅಸಂಖ್ಯಾತವಾಗಿವೆ. |
6
|
ನಾನು ಗ್ರಹಿಸಿಕೊಂಡಿದ್ದೇನಂದರೆ, ಯಜ್ಞಗಳಾಗಲಿ ಧಾನ್ಯಸಮರ್ಪಣೆಗಳಾಗಲಿ ಸರ್ವಾಂಗ ಹೋಮಗಳಾಗಲಿ ಪಾಪಪರಿಹಾರಕ ಯಜ್ಞಗಳಾಗಲಿ ನಿನಗೆ ಬೇಕಿಲ್ಲ. |
7
|
ಆದ್ದರಿಂದ ನಾನು, “ಇಗೋ, ಬರುತ್ತಿದ್ದೇನೆ. ನನ್ನ ವಿಷಯವಾಗಿ ಗ್ರಂಥದಲ್ಲಿ ಇದನ್ನು ಬರೆಯಲಾಗಿದೆ. |
8
|
ನನ್ನ ದೇವರೇ, ನಿನ್ನ ಚಿತ್ತಾನುಸಾರವಾಗಿ ಮಾಡುತ್ತೇನೆ. ನಿನ್ನ ಉಪದೇಶಗಳನ್ನು ಹೃದಯದಲ್ಲಿಟ್ಟುಕೊಂಡಿದ್ದೇನೆ” ಅಂದೆನು. |
9
|
ವಿಜಯದ ಶುಭಾವಾರ್ತೆಯನ್ನು ನಾನು ಮಹಾಸಭೆಯಲ್ಲಿ ತಿಳಿಸಿದೆನು. ಯೆಹೋವನೇ, ನಾನು ಬಾಯಿ ಮುಚ್ಚಿಕೊಂಡಿರುವುದಿಲ್ಲ, ಅದು ನಿನಗೆ ತಿಳಿದೇ ಇದೆ. |
10
|
ನಿನ್ನ ನೀತಿಕಾರ್ಯಗಳ ಕುರಿತು ನಾನು ಹೇಳಿದೆನು. ಅವುಗಳನ್ನು ನನ್ನ ಹೃದಯದಲ್ಲಿ ಬಚ್ಚಿಟ್ಟುಕೊಳ್ಳಲಿಲ್ಲ. ನಿನ್ನ ನಂಬಿಗಸ್ತಿಕೆಯನ್ನೂ ರಕ್ಷಣೆಯನ್ನೂ ನಾನು ಅವರಿಗೆ ತಿಳಿಸುವೆನು. ನಿನ್ನ ಪ್ರೀತಿಯನ್ನೂ ನಿನ್ನ ಸತ್ಯತೆಯನ್ನೂ ಮಹಾಸಭೆಯಲ್ಲಿ ಹೇಳುವೆನು. |
11
|
ಯೆಹೋವನೇ, ನಿನ್ನ ಕರುಣೆಯನ್ನು ನನಗೆ ದೂರ ಮಾಡಬೇಡ. ನಿನ್ನ ದಯೆಯೂ ನಂಬಿಗಸ್ತಿಕೆಯೂ ನನ್ನನ್ನು ಸಂರಕ್ಷಿಸಲಿ.” |
12
|
ದುಷ್ಟರು ನನ್ನನ್ನು ಸುತ್ತುಗಟ್ಟಿದ್ದಾರೆ ಅವರು ಅಸಂಖ್ಯಾತರಾಗಿದ್ದಾರೆ. ನನ್ನ ಪಾಪಗಳು ನನ್ನನ್ನು ಹಿಡಿದಿರುವುದರಿಂದ ಅವುಗಳಿಂದ ತಪ್ಪಿಸಿಕೊಳ್ಳಲಾರೆ. ನನ್ನ ತಲೆಯ ಕೂದಲುಗಳಿಗಿಂತಲೂ ನನ್ನ ಪಾಪಗಳು ಹೆಚ್ಚಾಗಿವೆ. ನಾನು ಧೈರ್ಯವನ್ನು ಕಳೆದುಕೊಂಡಿರುವೆ. |
13
|
ಯೆಹೋವನೇ, ನನ್ನನ್ನೇ ರಕ್ಷಿಸು! ಬೇಗನೆ ಬಂದು ನನ್ನನ್ನು ಕಾಪಾಡು! |
14
|
ಆ ದುಷ್ಟರು ನನ್ನನ್ನು ಕೊಲ್ಲಬೇಕೆಂದಿದ್ದಾರೆ. ಯೆಹೋವನೇ, ಅವರಿಗೆ ನಾಚಿಕೆಯನ್ನೂ ನಿರಾಶೆಯನ್ನೂ ಬರಮಾಡು. ನನಗೆ ಕೇಡುಮಾಡಬೇಕೆಂದಿರುವ ಅವರು ನಾಚಿಕೆಯಿಂದ ಓಡಿಹೋಗಲಿ! |
15
|
ನನ್ನನ್ನು ಗೇಲಿಮಾಡುವ ಆ ದುಷ್ಟರು ತಮಗಾಗುವ ಅವಮಾನದಿಂದ ಗಾಬರಿಗೊಳ್ಳಲಿ! |
16
|
ಆದರೆ ನಿನ್ನ ದರ್ಶನವನ್ನು ಬೇಡುವವರು ಉಲ್ಲಾಸದಿಂದ ಸಂತೋಷಡಲಿ. ನಿನ್ನ ರಕ್ಷಣೆಯಲ್ಲಿ ಆನಂದಿಸುವವರು, “ಯೆಹೋವನಿಗೆ ಸ್ತೋತ್ರವಾಗಲಿ” ಎಂದು ಯಾವಾಗಲೂ ಹೇಳಲಿ. |
17
|
ಒಡೆಯನೇ, ನಾನು ಕೇವಲ ಬಡವನೂ ಅಸಹಾಯಕನೂ ಆಗಿರುವೆ. ನನಗೆ ಸಹಾಯಮಾಡಿ ನನ್ನನ್ನು ರಕ್ಷಿಸು. ನನ್ನ ದೇವರೇ, ತಡಮಾಡಬೇಡ. |
Psalms 40:15 Kannada Language Bible Words basic statistical display
COMING SOON ...