Indian Language Bible Word Collections
Psalms 9:16
Psalms Chapters
Psalms 9 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Psalms Chapters
Psalms 9 Verses
1
|
ಯೆಹೋವನೇ, ಪೂರ್ಣಹೃದಯದಿಂದ ನಿನ್ನನ್ನು ಕೊಂಡಾಡುವೆನು. ನಿನ್ನ ಅದ್ಭುತಕಾರ್ಯಗಳನ್ನೆಲ್ಲಾ ವರ್ಣಿಸುವೆನು. |
2
|
ದೇವರೇ, ನಿನ್ನಲ್ಲಿ ನಾನು ಸಂತೋಷಿಸುತ್ತಾ ಉಲ್ಲಾಸಪಡುವೆನು. ಮಹೋನ್ನತನೇ, ನಿನ್ನ ಹೆಸರನ್ನೇ ಸಂಕೀರ್ತಿಸುವೆನು. |
3
|
ನನ್ನ ವೈರಿಗಳು ನಿನ್ನ ಎದುರಿನಿಂದ ಹಿಂತಿರುಗಿ ಓಡಿಹೋದರು. ಆದರೆ ಅವರು ಬಿದ್ದು ನಾಶವಾದರು. |
4
|
ನೀನು ನೀತಿವಂತನಾದ ನ್ಯಾಯಾಧಿಪತಿ. ಸಿಂಹಾಸನದ ಮೇಲೆ ಕುಳಿತು ನೀನು ನ್ಯಾಯತೀರಿಸುವೆ. ನೀನು ನನ್ನ ಮೊಕದ್ದಮೆಯನ್ನು ಕೇಳಿ ನನ್ನ ವಿಷಯದಲ್ಲಿ ತೀರ್ಪು ಮಾಡಿರುವೆ. |
5
|
ನೀನು ಜನಾಂಗಗಳನ್ನು ಟೀಕಿಸಿ ಆ ದುಷ್ಟರನ್ನು ನಾಶಮಾಡಿದೆ. ನೀನು ಅವರ ಹೆಸರುಗಳನ್ನು ಜೀವಿತರ ಪಟ್ಟಿಯಿಂದ ಶಾಶ್ವತವಾಗಿ ಅಳಿಸಿಹಾಕಿರುವೆ. |
6
|
ವೈರಿಗಳು ಇಲ್ಲವಾದರು. ನೀನು ಅವರ ನಗರಗಳನ್ನು ನಾಶಮಾಡಿದೆ! ಈಗ ಹಾಳಾದ ಕಟ್ಟಡಗಳು ಮಾತ್ರ ಉಳಿದಿವೆ. ದುಷ್ಟರನ್ನು ಜ್ಞಾಪಕಕ್ಕೆ ತರುವ ಯಾವುದೂ ಉಳಿದಿಲ್ಲ. |
7
|
ಯೆಹೋವನಾದರೋ ಶಾಶ್ವತವಾಗಿ ಆಳುವನು. ಆತನು ಭೂಲೋಕಕ್ಕೆ ನ್ಯಾಯದೊರಕಿಸುವುದಕ್ಕಾಗಿ ತನ್ನ ರಾಜ್ಯವನ್ನು ಬಲಗೊಳಿಸಿದ್ದಾನೆ. |
8
|
ಆತನು ಭೂನಿವಾಸಿಗಳಿಗೆಲ್ಲಾ ನ್ಯಾಯವಾಗಿ ತೀರ್ಪುಮಾಡುವನು. ಆತನು ಜನಾಂಗಗಳಿಗೆಲ್ಲಾ ಯಥಾರ್ಥವಾಗಿ ತೀರ್ಪುಮಾಡುವನು. |
9
|
ಯೆಹೋವನು ಕುಗ್ಗಿಹೋದವರಿಗೆ ಆಶ್ರಯಸ್ಥಾನವೂ ಇಕ್ಕಟ್ಟಿನಲ್ಲಿರುವವರಿಗೆ ಆಶ್ರಯದುರ್ಗವೂ ಆಗಿದ್ದಾನೆ. |
10
|
ಯೆಹೋವನೇ, ನಿನ್ನ ಹೆಸರನ್ನು ಬಲ್ಲವರು ನಿನ್ನಲ್ಲಿ ಭರವಸೆಯಿಡುವರು. ಯಾಕೆಂದರೆ ನಿನ್ನ ಸಹಾಯಕ್ಕಾಗಿ ಬರುವವರನ್ನು ನೀನು ತೊರೆದುಬಿಡುವುದಿಲ್ಲ. |
11
|
ಚೀಯೋನಿನ ನಿವಾಸಿಗಳೇ, ಯೆಹೋವನನ್ನು ಸಂಕಿರ್ತಿಸಿರಿ. ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಕಟಿಸಿರಿ. |
12
|
ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವ ಆತನು ಕುಗ್ಗಿಹೋದವರ ಮೊರೆಯನ್ನು ಮರೆಯದೆ ಅವರನ್ನು ಜ್ಞಾಪಿಸಿಕೊಂಡನು. |
13
|
“ಯೆಹೋವನೇ, ನನ್ನನ್ನು ಕನಿಕರಿಸು. ಇಗೋ, ವೈರಿಗಳು ನನಗೆ ಕೇಡುಮಾಡುತ್ತಿದ್ದಾರೆ. ‘ಮರಣ ದ್ವಾರ’ದಿಂದ ತಪ್ಪಿಸಿಕಾಪಾಡು.” |
14
|
ಆಗ ಜೆರುಸಲೇಮಿನ ದ್ವಾರಗಳ ಬಳಿಯಲ್ಲಿ ನಿನ್ನನ್ನು ಸಂಕೀರ್ತಿಸುವೆನು. ನೀನು ನನ್ನನ್ನು ರಕ್ಷಿಸಿದ್ದರಿಂದ ಹರ್ಷಿಸುವೆನು. |
15
|
ಅನ್ಯಜನಾಂಗಗಳವರು ತಾವು ತೋಡಿದ ಕುಣಿಗಳಲ್ಲಿ ತಾವೇ ಬಿದ್ದುಹೋಗುವರು; ತಾವು ಹಾಸಿದ ಬಲೆಗಳಲ್ಲಿ ತಾವೇ ಸಿಕ್ಕಿಬೀಳುವರು. |
16
|
ಯೆಹೋವನು ಅವರನ್ನು ಅವರ ಕುಯುಕ್ತಿಯಲ್ಲಿಯೇ ಸಿಕ್ಕಿಸಿದ್ದರಿಂದ ಆತನ ನೀತಿಯು ಪ್ರಖ್ಯಾತವಾಯಿತು. |
17
|
ದೇವರನ್ನು ಅಲಕ್ಷ್ಯ ಮಾಡುವ ಜನರೆಲ್ಲ ಕೆಟ್ಟವರು. ಅವರು ಮರಣದ ಸ್ಥಳಕ್ಕೆ ಹೋಗುವರು. |
18
|
ಕೆಲವೊಮ್ಮೆ, ಇಕ್ಕಟ್ಟಿನಲ್ಲಿರುವವರನ್ನು ದೇವರು ಮರೆತಿರುವಂತೆ ಕಾಣುತ್ತದೆ; ಕುಗ್ಗಿಹೋದ ಅವರಿಗೆ ನಿರೀಕ್ಷೆಯೇ ಇಲ್ಲದಂತೆ ಕಂಡರೂ ದೇವರು ಅವರನ್ನು ಮರೆತು ಬಿಡುವುದಿಲ್ಲ. |
19
|
ಯೆಹೋವನೇ, ಎದ್ದೇಳು! ಜನಾಂಗಗಳಿಗೆ ನ್ಯಾಯತೀರಿಸು. ಅವರು ಬಲಿಷ್ಠರಾಗಕೂಡದು. |
20
|
ಯೆಹೋವನೇ, ಅವರಿಗೆ ಭಯಹುಟ್ಟಿಸು; ತಾವು ಕೇವಲ ಮನುಷ್ಯರೆಂಬುದನ್ನು ಅವರು ಗ್ರಹಿಸಿಕೊಳ್ಳಲಿ. |